Homeಚಳವಳಿವಿವಾದಾತ್ಮಕ ಮಸೂದೆ ವಿರುದ್ಧ ನಿಲ್ಲದ ರೈತರ ಪ್ರತಿಭಟನೆ: ಜೈ ಕಿಸಾನ್ ಆಂದೋಲನ

ವಿವಾದಾತ್ಮಕ ಮಸೂದೆ ವಿರುದ್ಧ ನಿಲ್ಲದ ರೈತರ ಪ್ರತಿಭಟನೆ: ಜೈ ಕಿಸಾನ್ ಆಂದೋಲನ

ಇಂದಿನ ಪ್ರತಿಭಟನೆಯಲ್ಲಿ ರೈತರು ಹರಿಯಾಣದ ಉಪಮುಖ್ಯಮಂತ್ರಿ ಡಿ.ಎಂ.ದುಶ್ಯಂತ್ ಚೌಟಾಲ ಮತ್ತು ವಿದ್ಯುಚ್ಚಕ್ತಿ ಸಚಿವರಾದ ರಂಜಿತ್ ಚೌಟಾಲ ಅವರ ನಿವಾಸಗಳಿಗೆ ಮುತ್ತಿಗೆ ಹಾಕಲಿದ್ದಾರೆ.

- Advertisement -
- Advertisement -

ವಿವಾದಾತ್ಮಕ ರೈತವಿರೋಧಿ ಮಸೂದೆಗಳನ್ನು ವಿರೋಧಿಸಿ ಕಳೆದ ಒಂದು ತಿಂಗಳಿನಿಂದ ಇಡೀ ದೇಶದಾದ್ಯಂತ ರೈತರು ಪ್ರತಿಭಟನೆ ನಡೆಸುತ್ತಿದ್ದು, ಇಂದು ಸ್ವರಾಜ್ ಇಂಡಿಯಾ ಪಕ್ಷ ಮತ್ತು ಹಲವು ರೈತರ ಸಂಘಟನೆಗಳ ವತಿಯಿಂದ ಹಮ್ಮಿಕೊಂಡಿರುವ “ಜೈ ಕಿಸಾನ್ ಆಂದೋಲನ್” ಭಾಗವಾಗಿ ಸಾವಿರಾರು ರೈತರು ಹರಿಯಾಣದ ಸಿರ್ಸಾ ಮೈದಾನದಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.

ಇಂದಿನ ಪ್ರತಿಭಟನೆಯಲ್ಲಿ ರೈತರು ಹರಿಯಾಣದ ಉಪಮುಖ್ಯಮಂತ್ರಿ ಡಿ.ಎಂ.ದುಶ್ಯಂತ್ ಚೌಟಾಲ ಮತ್ತು ವಿದ್ಯುಚ್ಚಕ್ತಿ ಸಚಿವರಾದ ರಂಜಿತ್ ಚೌಟಾಲ ಅವರ ನಿವಾಸಗಳಿಗೆ ಮುತ್ತಿಗೆ ಹಾಕಲಿದ್ದಾರೆ.

ಇದನ್ನೂ ಓದಿ: ಕೃಷಿ ಮಸೂದೆಗಳ ವಿರುದ್ಧ ರಾಹುಲ್ ಗಾಂಧಿ ನೇತೃತ್ವದಲ್ಲಿ ಟ್ರ್ಯಾಕ್ಟರ್‌ ರ್‍ಯಾಲಿ

ಪ್ರಮುಖ ಪಕ್ಷವಾದ ಸ್ವರಾಜ್ ಇಂಡಿಯಾ ಪಕ್ಷ ಮತ್ತು ಅದರ ಮುಖಂಡರಾದ ಯೋಗೇಂದ್ರ ಯಾದವ್ ಅವರ ಮುಂದಾಳತ್ವದಲ್ಲಿ ಸಿರ್ಸಾದ ದಸರಾ ಮೈದಾನದಲ್ಲಿ ಸಾವಿರಾರು ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಕುರಿತು ಸ್ವರಾಜ್ ಅಭಿಯಾನ ಟ್ವೀಟ್ ಮಾಡಿದ್ದು, “ನೀವು ರೈತರನ್ನು ಪ್ರೀತಿಸುತ್ತೀರಾ ಅಥವಾ ನಿಮ್ಮ ಕುರ್ಚಿಯನ್ನು ಪ್ರೀತಿಸುತ್ತೀರಾ? ನೀವು ರೈತಸ್ನೇಹಿಯೋ ಅಥವಾ ಕುರ್ಚಿಯ ಬಗ್ಗೆ ದುರಾಸೆಯಿದೆಯೋ? ಈ ದೇಶದ ರೈತರು ಪ್ರಶ್ನೆಗಳನ್ನು ಕೇಳಲು ಬರುತ್ತಿದ್ದಾರೆ” ಎಂದು ಆಕ್ರೋಶ ವ್ಯಕ್ತಪಡಿಸಲಾಗಿದೆ.

ಇದನ್ನೂ ಓದಿ: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಈ ಕರಾಳ ಕಾಯ್ದೆಗಳನ್ನು ತೆಗೆದುಹಾಕುತ್ತದೆ: ರಾಹುಲ್ ಗಾಂಧಿ

ರಮಣ್‌ದೀಪ್ ಸಿಂಗ್ ರೈತರ ಪ್ರತಿಭಟನೆಯ ವೀಡಿಯೋವೊಂದನ್ನು ಟ್ವೀಟ್ ಮಾಡಿದ್ದು, “ಕೋವಿಡ್-19 ಮತ್ತು ಸುಗ್ಗಿಯ ಸಮಯದಲ್ಲಿ ರೈತರು ಸಮುದ್ರದಂತೆ ಸೇರಿ ಸಿರ್ಸಾದ ದಸರಾ ಮೈದಾನದಲ್ಲಿ ರೈತ ವಿರೋಧಿ ಮಸೂದೆಗಳ ವಿರುದ್ಧ ಪ್ರತಿಭಟಿಸುತ್ತಿದ್ದಾರೆ. ಇಂದು ರೈತರು ಹರಿಯಾಣದ ಉಪಮುಖ್ಯಮಂತ್ರಿ ಮತ್ತು ವಿದ್ಯಚ್ಚಕ್ತಿ ಸಚಿವರ ನಿವಾಸಗಳಿಗೆ ಮುತ್ತಿಗೆ ಹಾಕಲಿದ್ದಾರೆ” ಎಂದು ಬರದುಕೊಂಡಿದ್ದಾರೆ.

ಕೃಷಿ ಮಸೂದೆಗಳ ವಿರುದ್ಧದ ತಮ್ಮ ಹೋರಾಟವನ್ನು ಇನ್ನಷ್ಟು ತೀವ್ರಗೊಳಿಸಲು ಪಂಜಾಬ್‌ನಲ್ಲಿರುವ ಬಿಜೆಪಿ ನಾಯಕರ ಮನೆ, ಕಛೇರಿ, ಮಾಲ್‌ಗಳಿಗೆ ಅಕ್ಟೋಬರ್ 2 ರಂದು ರೈತರು ಮುತ್ತಿಗೆ ಹಾಕಿದ್ದರು. ಈ ಹೋರಾಟಕ್ಕೆ ರಾಹುಲ್ ಗಾಂಧಿ ಬೆಂಬಲ ನೀಡಿದ್ದರು.

ಇದನ್ನೂ ಓದಿ: ಕೃಷಿ ಮಸೂದೆಗಳ ವಿರುದ್ಧ ದೇಶಾದ್ಯಂತ ”ಅನ್ನದಾತ’ರ ಪ್ರತಿಭಟನೆ

ಅಕ್ಟೋಬರ್ 1 ರಿಂದ ರಾಜ್ಯದಲ್ಲಿ ಪ್ರಾರಂಭವಾಗಿದ್ದ ಅನಿರ್ದಿಷ್ಟ ರೈಲ್ ರೊಕೊದಲ್ಲಿ ಪಂಜಾಬಿನ ಸುಮಾರು 12,000 ಕ್ಕೂ ಹೆಚ್ಚು ರೈತರು ರೈಲು ಹಳಿಗಳ ಮೇಲೆ ಕುಳಿತು ಪ್ರತಿಭಟಿಸಿದ್ದರು. ಜೊತೆಗೆ ಅಕ್ಟೋಬರ್ 4 ರಿಂದ 6 ರವರೆಗೆ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಪಂಜಾಬ್ ಮತ್ತು ಹರಿಯಾಣದಲ್ಲಿ ಟ್ರ್ಯಾಕ್ಟರ್ ರ್‍ಯಾಲಿಗೆ ಚಾಲನೆ ನಿಡಿದ್ದರು.

ಕಳೆದ ವಾರ ದೇಶಾದ್ಯಂತ ರೈತರು, ರೈತ ಸಂಘಟನೆಗಳು, ವಿರೋಧ ಪಕ್ಷಗಳು, ಕಾರ್ಮಿಕ ಸಂಘಟನೆಗಳು ಈ ಕೃಷಿ ಮಸೂದೆಗಳ ವಿರುದ್ಧ ಭಾರತ್ ಬಂದ್ ನಡೆಸಿ ಮಸೂದೆಗಳನ್ನು ವಾಪಸ್ ಪಡೆಯಲು ಒತ್ತಾಯಿಸಿದ್ದವು. ಇದರ ನಡುವೆ ಕೆಂದ್ರ ಸರ್ಕಾರದ ಸಚಿವರಾದ ಹರ್ಸಿಮ್ರತ್ ಕೌರ್ ತಮ್ಮ ಸಚಿವ ಸ್ಥಾನಕ್ಕೆ ರಾಜಿನಾಮೆ ನೀಡಿ ಕೇಂದ್ರ ಸರ್ಕಾರದ ಈ ಮಸೂದೆಗಳನ್ನು ವಿರೋಧಿಸಿದ್ದರು.

ಇದನ್ನೂ ಓದಿ: ದೇಶದ ಆರ್ಥಿಕ ಬಿಕ್ಕಟ್ಟು ನಿಜವೇ? ಹೇಗೆ?

ಕರ್ನಾಟಕದಲ್ಲಿ ಕಳೆದ ತಿಂಗಳಿನಿಂದ ವಿಧಾನ ಸಭಾ ಅಧಿವೇಶನ ಆರಂಭವಾಗಿದ್ದಾಗ, ರಾಜ್ಯದಲ್ಲಿ ಭೂ ಸುಧಾರಣಾ ಕಾನೂನುಗಳನ್ನು ಸುಗ್ರೀವಾಜ್ಞೆ ಹೊರಡಿಸಿ ಜಾರಿಗೆ ತಂದಿರುವುದನ್ನು ವಿರೋಧಿಸಿ ರೈತ, ದಲಿತ ಮತ್ತು ಕಾರ್ಮಿಕ ಸಂಘಟನೆಗಳು ಸೇರಿ ಐಕ್ಯ ಹೊರಾಟವನ್ನು ನಡೆಸಿದ್ದವು. ಸೆ.28 ರಂದು ಕರ್ನಾಟಕ ಬಂದ್ ಮಾಡಲಾಗಿತ್ತು. ರಾಜ್ಯದಲ್ಲಿ ತಿದ್ದುಪಡಿ ತಂದಿರುವ ಭೂಸುಧಾರಣಾ ಕಾಯ್ದೆಗಳನ್ನು ಹಿಂಪಡೆಯದಿದ್ದರೆ, ಮುಂದಿನ ದಿನಗಳಲ್ಲಿ ತೀವ್ರವಾದ ಹೋರಾಟವನ್ನು ಕೈಗೊಳ್ಳಲಾಗುವುದು ಎಂದು ಸಂಘಟನೆಗಳು ಎಚ್ಚರಿಕೆ ನೀಡಿವೆ.

“ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಈ ವಿವಾದಾತ್ಮಕ ಕೃಷಿ ಕಾಯ್ದೆಗಳನ್ನು ತೆಗೆದುಹಾಕುತ್ತದೆ. ಕನಿಷ್ಠ ಬೆಂಬಲ ಬೆಲೆ, ಆಹಾರ ಸಂಗ್ರಹಣೆ ಮತ್ತು ಸಗಟು ವ್ಯಾಪಾರಗಳು ದೇಶದ ಮೂರು ಸ್ತಂಭಗಳಿದ್ದಂತೆ. ಪ್ರಧಾನಿ ನರೇಂದ್ರ ಮೋದಿ ಈ ವ್ಯವಸ್ಥೆಯನ್ನು ನಾಶಪಡಿಸುತ್ತಿದ್ದಾರೆ” ಎಂದು ಪಂಜಾಬ್ ರೈತರು ನಡೆಸುತ್ತಿರುವ 3 ದಿನಗಳ ಟ್ರ್ಯಾಕ್ಟರ್‌ ರ್‍ಯಾಲಿಯನ್ನು ಉದ್ಘಾಟಿಸಿದ ರಾಹುಲ್ ಗಾಂಧಿ ಹೇಳಿದ್ದರು.


ಇದನ್ನೂ ಓದಿ: ಕೃಷಿ ಮಸೂದೆಗಳು ಹೇಳುವುದೇನು..?: ವಿರೋಧಕ್ಕೆ ಕಾರಣಗಳೇನು..?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...