Homeಚಳವಳಿವಿವಾದಾತ್ಮಕ ಮಸೂದೆ ವಿರುದ್ಧ ನಿಲ್ಲದ ರೈತರ ಪ್ರತಿಭಟನೆ: ಜೈ ಕಿಸಾನ್ ಆಂದೋಲನ

ವಿವಾದಾತ್ಮಕ ಮಸೂದೆ ವಿರುದ್ಧ ನಿಲ್ಲದ ರೈತರ ಪ್ರತಿಭಟನೆ: ಜೈ ಕಿಸಾನ್ ಆಂದೋಲನ

ಇಂದಿನ ಪ್ರತಿಭಟನೆಯಲ್ಲಿ ರೈತರು ಹರಿಯಾಣದ ಉಪಮುಖ್ಯಮಂತ್ರಿ ಡಿ.ಎಂ.ದುಶ್ಯಂತ್ ಚೌಟಾಲ ಮತ್ತು ವಿದ್ಯುಚ್ಚಕ್ತಿ ಸಚಿವರಾದ ರಂಜಿತ್ ಚೌಟಾಲ ಅವರ ನಿವಾಸಗಳಿಗೆ ಮುತ್ತಿಗೆ ಹಾಕಲಿದ್ದಾರೆ.

- Advertisement -
- Advertisement -

ವಿವಾದಾತ್ಮಕ ರೈತವಿರೋಧಿ ಮಸೂದೆಗಳನ್ನು ವಿರೋಧಿಸಿ ಕಳೆದ ಒಂದು ತಿಂಗಳಿನಿಂದ ಇಡೀ ದೇಶದಾದ್ಯಂತ ರೈತರು ಪ್ರತಿಭಟನೆ ನಡೆಸುತ್ತಿದ್ದು, ಇಂದು ಸ್ವರಾಜ್ ಇಂಡಿಯಾ ಪಕ್ಷ ಮತ್ತು ಹಲವು ರೈತರ ಸಂಘಟನೆಗಳ ವತಿಯಿಂದ ಹಮ್ಮಿಕೊಂಡಿರುವ “ಜೈ ಕಿಸಾನ್ ಆಂದೋಲನ್” ಭಾಗವಾಗಿ ಸಾವಿರಾರು ರೈತರು ಹರಿಯಾಣದ ಸಿರ್ಸಾ ಮೈದಾನದಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.

ಇಂದಿನ ಪ್ರತಿಭಟನೆಯಲ್ಲಿ ರೈತರು ಹರಿಯಾಣದ ಉಪಮುಖ್ಯಮಂತ್ರಿ ಡಿ.ಎಂ.ದುಶ್ಯಂತ್ ಚೌಟಾಲ ಮತ್ತು ವಿದ್ಯುಚ್ಚಕ್ತಿ ಸಚಿವರಾದ ರಂಜಿತ್ ಚೌಟಾಲ ಅವರ ನಿವಾಸಗಳಿಗೆ ಮುತ್ತಿಗೆ ಹಾಕಲಿದ್ದಾರೆ.

ಇದನ್ನೂ ಓದಿ: ಕೃಷಿ ಮಸೂದೆಗಳ ವಿರುದ್ಧ ರಾಹುಲ್ ಗಾಂಧಿ ನೇತೃತ್ವದಲ್ಲಿ ಟ್ರ್ಯಾಕ್ಟರ್‌ ರ್‍ಯಾಲಿ

ಪ್ರಮುಖ ಪಕ್ಷವಾದ ಸ್ವರಾಜ್ ಇಂಡಿಯಾ ಪಕ್ಷ ಮತ್ತು ಅದರ ಮುಖಂಡರಾದ ಯೋಗೇಂದ್ರ ಯಾದವ್ ಅವರ ಮುಂದಾಳತ್ವದಲ್ಲಿ ಸಿರ್ಸಾದ ದಸರಾ ಮೈದಾನದಲ್ಲಿ ಸಾವಿರಾರು ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಕುರಿತು ಸ್ವರಾಜ್ ಅಭಿಯಾನ ಟ್ವೀಟ್ ಮಾಡಿದ್ದು, “ನೀವು ರೈತರನ್ನು ಪ್ರೀತಿಸುತ್ತೀರಾ ಅಥವಾ ನಿಮ್ಮ ಕುರ್ಚಿಯನ್ನು ಪ್ರೀತಿಸುತ್ತೀರಾ? ನೀವು ರೈತಸ್ನೇಹಿಯೋ ಅಥವಾ ಕುರ್ಚಿಯ ಬಗ್ಗೆ ದುರಾಸೆಯಿದೆಯೋ? ಈ ದೇಶದ ರೈತರು ಪ್ರಶ್ನೆಗಳನ್ನು ಕೇಳಲು ಬರುತ್ತಿದ್ದಾರೆ” ಎಂದು ಆಕ್ರೋಶ ವ್ಯಕ್ತಪಡಿಸಲಾಗಿದೆ.

ಇದನ್ನೂ ಓದಿ: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಈ ಕರಾಳ ಕಾಯ್ದೆಗಳನ್ನು ತೆಗೆದುಹಾಕುತ್ತದೆ: ರಾಹುಲ್ ಗಾಂಧಿ

ರಮಣ್‌ದೀಪ್ ಸಿಂಗ್ ರೈತರ ಪ್ರತಿಭಟನೆಯ ವೀಡಿಯೋವೊಂದನ್ನು ಟ್ವೀಟ್ ಮಾಡಿದ್ದು, “ಕೋವಿಡ್-19 ಮತ್ತು ಸುಗ್ಗಿಯ ಸಮಯದಲ್ಲಿ ರೈತರು ಸಮುದ್ರದಂತೆ ಸೇರಿ ಸಿರ್ಸಾದ ದಸರಾ ಮೈದಾನದಲ್ಲಿ ರೈತ ವಿರೋಧಿ ಮಸೂದೆಗಳ ವಿರುದ್ಧ ಪ್ರತಿಭಟಿಸುತ್ತಿದ್ದಾರೆ. ಇಂದು ರೈತರು ಹರಿಯಾಣದ ಉಪಮುಖ್ಯಮಂತ್ರಿ ಮತ್ತು ವಿದ್ಯಚ್ಚಕ್ತಿ ಸಚಿವರ ನಿವಾಸಗಳಿಗೆ ಮುತ್ತಿಗೆ ಹಾಕಲಿದ್ದಾರೆ” ಎಂದು ಬರದುಕೊಂಡಿದ್ದಾರೆ.

ಕೃಷಿ ಮಸೂದೆಗಳ ವಿರುದ್ಧದ ತಮ್ಮ ಹೋರಾಟವನ್ನು ಇನ್ನಷ್ಟು ತೀವ್ರಗೊಳಿಸಲು ಪಂಜಾಬ್‌ನಲ್ಲಿರುವ ಬಿಜೆಪಿ ನಾಯಕರ ಮನೆ, ಕಛೇರಿ, ಮಾಲ್‌ಗಳಿಗೆ ಅಕ್ಟೋಬರ್ 2 ರಂದು ರೈತರು ಮುತ್ತಿಗೆ ಹಾಕಿದ್ದರು. ಈ ಹೋರಾಟಕ್ಕೆ ರಾಹುಲ್ ಗಾಂಧಿ ಬೆಂಬಲ ನೀಡಿದ್ದರು.

ಇದನ್ನೂ ಓದಿ: ಕೃಷಿ ಮಸೂದೆಗಳ ವಿರುದ್ಧ ದೇಶಾದ್ಯಂತ ”ಅನ್ನದಾತ’ರ ಪ್ರತಿಭಟನೆ

ಅಕ್ಟೋಬರ್ 1 ರಿಂದ ರಾಜ್ಯದಲ್ಲಿ ಪ್ರಾರಂಭವಾಗಿದ್ದ ಅನಿರ್ದಿಷ್ಟ ರೈಲ್ ರೊಕೊದಲ್ಲಿ ಪಂಜಾಬಿನ ಸುಮಾರು 12,000 ಕ್ಕೂ ಹೆಚ್ಚು ರೈತರು ರೈಲು ಹಳಿಗಳ ಮೇಲೆ ಕುಳಿತು ಪ್ರತಿಭಟಿಸಿದ್ದರು. ಜೊತೆಗೆ ಅಕ್ಟೋಬರ್ 4 ರಿಂದ 6 ರವರೆಗೆ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಪಂಜಾಬ್ ಮತ್ತು ಹರಿಯಾಣದಲ್ಲಿ ಟ್ರ್ಯಾಕ್ಟರ್ ರ್‍ಯಾಲಿಗೆ ಚಾಲನೆ ನಿಡಿದ್ದರು.

ಕಳೆದ ವಾರ ದೇಶಾದ್ಯಂತ ರೈತರು, ರೈತ ಸಂಘಟನೆಗಳು, ವಿರೋಧ ಪಕ್ಷಗಳು, ಕಾರ್ಮಿಕ ಸಂಘಟನೆಗಳು ಈ ಕೃಷಿ ಮಸೂದೆಗಳ ವಿರುದ್ಧ ಭಾರತ್ ಬಂದ್ ನಡೆಸಿ ಮಸೂದೆಗಳನ್ನು ವಾಪಸ್ ಪಡೆಯಲು ಒತ್ತಾಯಿಸಿದ್ದವು. ಇದರ ನಡುವೆ ಕೆಂದ್ರ ಸರ್ಕಾರದ ಸಚಿವರಾದ ಹರ್ಸಿಮ್ರತ್ ಕೌರ್ ತಮ್ಮ ಸಚಿವ ಸ್ಥಾನಕ್ಕೆ ರಾಜಿನಾಮೆ ನೀಡಿ ಕೇಂದ್ರ ಸರ್ಕಾರದ ಈ ಮಸೂದೆಗಳನ್ನು ವಿರೋಧಿಸಿದ್ದರು.

ಇದನ್ನೂ ಓದಿ: ದೇಶದ ಆರ್ಥಿಕ ಬಿಕ್ಕಟ್ಟು ನಿಜವೇ? ಹೇಗೆ?

ಕರ್ನಾಟಕದಲ್ಲಿ ಕಳೆದ ತಿಂಗಳಿನಿಂದ ವಿಧಾನ ಸಭಾ ಅಧಿವೇಶನ ಆರಂಭವಾಗಿದ್ದಾಗ, ರಾಜ್ಯದಲ್ಲಿ ಭೂ ಸುಧಾರಣಾ ಕಾನೂನುಗಳನ್ನು ಸುಗ್ರೀವಾಜ್ಞೆ ಹೊರಡಿಸಿ ಜಾರಿಗೆ ತಂದಿರುವುದನ್ನು ವಿರೋಧಿಸಿ ರೈತ, ದಲಿತ ಮತ್ತು ಕಾರ್ಮಿಕ ಸಂಘಟನೆಗಳು ಸೇರಿ ಐಕ್ಯ ಹೊರಾಟವನ್ನು ನಡೆಸಿದ್ದವು. ಸೆ.28 ರಂದು ಕರ್ನಾಟಕ ಬಂದ್ ಮಾಡಲಾಗಿತ್ತು. ರಾಜ್ಯದಲ್ಲಿ ತಿದ್ದುಪಡಿ ತಂದಿರುವ ಭೂಸುಧಾರಣಾ ಕಾಯ್ದೆಗಳನ್ನು ಹಿಂಪಡೆಯದಿದ್ದರೆ, ಮುಂದಿನ ದಿನಗಳಲ್ಲಿ ತೀವ್ರವಾದ ಹೋರಾಟವನ್ನು ಕೈಗೊಳ್ಳಲಾಗುವುದು ಎಂದು ಸಂಘಟನೆಗಳು ಎಚ್ಚರಿಕೆ ನೀಡಿವೆ.

“ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಈ ವಿವಾದಾತ್ಮಕ ಕೃಷಿ ಕಾಯ್ದೆಗಳನ್ನು ತೆಗೆದುಹಾಕುತ್ತದೆ. ಕನಿಷ್ಠ ಬೆಂಬಲ ಬೆಲೆ, ಆಹಾರ ಸಂಗ್ರಹಣೆ ಮತ್ತು ಸಗಟು ವ್ಯಾಪಾರಗಳು ದೇಶದ ಮೂರು ಸ್ತಂಭಗಳಿದ್ದಂತೆ. ಪ್ರಧಾನಿ ನರೇಂದ್ರ ಮೋದಿ ಈ ವ್ಯವಸ್ಥೆಯನ್ನು ನಾಶಪಡಿಸುತ್ತಿದ್ದಾರೆ” ಎಂದು ಪಂಜಾಬ್ ರೈತರು ನಡೆಸುತ್ತಿರುವ 3 ದಿನಗಳ ಟ್ರ್ಯಾಕ್ಟರ್‌ ರ್‍ಯಾಲಿಯನ್ನು ಉದ್ಘಾಟಿಸಿದ ರಾಹುಲ್ ಗಾಂಧಿ ಹೇಳಿದ್ದರು.


ಇದನ್ನೂ ಓದಿ: ಕೃಷಿ ಮಸೂದೆಗಳು ಹೇಳುವುದೇನು..?: ವಿರೋಧಕ್ಕೆ ಕಾರಣಗಳೇನು..?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇನ್‌ಸ್ಟಾಮಾರ್ಟ್‌ನಲ್ಲಿ ಸಿಗಲಿದೆ ಎಲ್‌ಪಿಜಿ ಸಿಲಿಂಡರ್: ಬೆಂಗಳೂರಿನಲ್ಲಿ ಹೊಸ ಸೇವೆ ಆರಂಭ!

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರಿನ ಗ್ರಾಹಕರು ಇನ್ನು ಮುಂದೆ ಪ್ರಮುಖ ಕ್ವಿಕ್ ಕಾಮರ್ಸ್ ಸಂಸ್ಥೆಯಾದ 'ಇನ್‌ಸ್ಟಾಮಾರ್ಟ್' (Instamart) ಆ್ಯಪ್ ಮೂಲಕವೇ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳನ್ನು ಬುಕ್ ಮಾಡಬಹುದು. ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್...

ಬಿಡದಿ ರೈತರ ಹೋರಾಟಕ್ಕೆ ಜಯ: ಬಲವಂತವಾಗಿ ಒಬ್ಬೇ ಒಬ್ಬ ರೈತರ ಜಮೀನನ್ನೂ ಪಡೆಯಲ್ಲ ಸಿಎಂ ಡಿ.ಕೆ.ಶಿವಕುಮಾರ್

"ಬಿಡದಿ ಸ್ಮಾರ್ಟ್ ಸಿಟಿ/ಟೌನ್ ಶಿಪ್ ಯೋಜನೆಯ ಹೆಸರಿನಲ್ಲಿ ಬಲವಂತವಾಗಿ ಒಬ್ಬೇ ಒಬ್ಬ ರೈತರ ಅಥವಾ ರೈತ ಮಹಿಳೆಯರ ಜಮೀನನ್ನು ನಮ್ಮ ಸರ್ಕಾರ ಭೂಸ್ವಾಧೀನ ಮಾಡಿಕೊಳ್ಳುವುದಿಲ್ಲ," ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಬಿಡದಿ ಟೌನ್‌ಶಿಪ್...

ಪಶ್ಚಿಮ ಬಂಗಾಳ: TMC ಬಂಡಾಯ ನಾಯಕ ರಿತಬ್ರತ ಬ್ಯಾನರ್ಜಿಗೆ ವಿಪಕ್ಷ ಸ್ಥಾನ ನೀಡಿದ್ದಕ್ಕೆ ನ್ಯಾಯಾಧೀಶರ ತೀವ್ರ ಆಕ್ಷೇಪ

ತೃಣಮೂಲ ಕಾಂಗ್ರೆಸ್‌ನ ಬಂಡಾಯ ಬಣದ ಮುಖ್ಯಸ್ಥ ರಿತಬ್ರತ ಬ್ಯಾನರ್ಜಿ ಅವರನ್ನು ಪಶ್ಚಿಮ ಬಂಗಾಳದ ವಿಧಾನಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ನೇಮಕ ಮಾಡುವಲ್ಲಿ ಸ್ಪೀಕರ್ ರತೀಂದ್ರ ಬೋಸ್ ತೋರಿರುವ "ತರಾತುರಿ"ಯನ್ನು ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಮೂರ್ತಿ...

ಎರಡು ವರ್ಷಗಳಲ್ಲಿ 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ; ಇವರಲ್ಲಿ 193 ಮಂದಿ ವಿದೇಶಿಯರೆಂದು ಘೋಷಿತರು: ಅಸ್ಸಾಂ ಸರ್ಕಾರ

ಗುವಾಹಟಿ: ಕಳೆದ ಎರಡು ವರ್ಷಗಳ ಅವಧಿಯಲ್ಲಿ ಗಡೀಪಾರು, ಗಡಿಯಿಂದ ಆಚೆಗೆ ತಳ್ಳುವಿಕೆ (ಪುಶ್‌ಬ್ಯಾಕ್) ಅಥವಾ ಉಚ್ಚಾಟನೆ ಪ್ರಕ್ರಿಯೆಯ ಮೂಲಕ ಒಟ್ಟು 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ ಎಂದು ಅಸ್ಸಾಂ ಸರ್ಕಾರ ರಾಜ್ಯ ವಿಧಾನಸಭೆಗೆ...

17 ದಿನ, 9 ಕೆಜಿ ತೂಕ ಇಳಿಕೆ, ಸೋನಮ್ ವಾಂಗ್‌ಚುಕ್ ಆರೋಗ್ಯ ಸ್ಥಿತಿ ಗಂಭೀರ: ಉಪವಾಸ ಕೈಬಿಡುವಂತೆ ಅಖಿಲೇಶ್-ಕೇಜ್ರಿವಾಲ್ ಮನವಿ

ದೇಶದ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಸರಣಿ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಭ್ರಷ್ಟಾಚಾರವನ್ನು ವಿರೋಧಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಖ್ಯಾತ ಪರಿಸರ ಕಾರ್ಯಕರ್ತ ಸೋನಮ್...

ಎನ್‌ಸಿಪಿಯ ಎರಡೂ ಬಣಗಳಲ್ಲೂ ಬಿರುಸಿನ ಬೆಳವಣಿಗೆ : ಬಿಜೆಪಿ ತೆಕ್ಕೆಗೆ ಮತ್ತೊಂದು ಪಕ್ಷ?

ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿಯ (ಎನ್‌ಸಿಪಿ) ಎರಡೂ ಬಣಗಳ ಮುಖ್ಯ ನಾಯಕರು ಮಂಗಳವಾರ (ಜು.14) ರಾತ್ರಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಈ ಸಭೆಯು ಶರದ್ ಪವಾರ್ ಅವರ...

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...

ಮಾನವೀಯತೆ ಮರೆತ ಪಂಚಾಯಿತಿ: 3 ವರ್ಷದ ಮಗುವಿನ ಮೇಲಿನ ಅತ್ಯಾಚಾರ ಪ್ರಕರಣ ಮುಚ್ಚಿಹಾಕಲು 1 ಲಕ್ಷ ರೂ.ದಂಡ, ಆ ಹಣದಲ್ಲೇ ಮದ್ಯದ ಪಾರ್ಟಿ!

ರಾಂಚಿ: ಜಾರ್ಖಂಡ್‌ನ ಗುಮ್ಲಾ ಜಿಲ್ಲೆಯ ಘಾಗ್ರಾ ಪೊಲೀಸ್ ಠಾಣಾ ವ್ಯಾಪ್ತಿಯ ಪಾಲ್ಮಾ ಗ್ರಾಮದಲ್ಲಿ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ವಿಕೃತ ಘಟನೆಯೊಂದು ಬೆಳಕಿಗೆ ಬಂದಿದೆ. ಮೂರು ವರ್ಷದ ಮಗುವಿನ ಮೇಲೆ ನಡೆದ ಭೀಕರ...

ಪೆಟ್ರೋಲ್ – ಎಥೆನಾಲ್ ಕುರಿತ ಮಾಹಿತಿ ಒದಗಿಸುವಂತೆ ತೈಲ ಸಚಿವಾಲಯಕ್ಕೆ ಕೇಂದ್ರ ಮಾಹಿತಿ ಆಯೋಗ ಆದೇಶ

ಪೆಟ್ರೋಲ್ ಉತ್ಪಾದನೆ ಮತ್ತು ಆಮದು, ಎಥೆನಾಲ್ ಸಂಗ್ರಹಣೆ, ಮಿಶ್ರಣ ಮತ್ತು ಪೆಟ್ರೋಲಿಯಂ ವಲಯದ ಲಾಭದ ಕುರಿತ ಹಿಂದಿನ ಡೇಟಾವನ್ನು ಬಹಿರಂಗಪಡಿಸುವಂತೆ ತೈಲ ಸಚಿವಾಲಯದ ಯೋಜನಾ ವಿಭಾಗವಾದ ಪೆಟ್ರೋಲಿಯಂ ಯೋಜನೆ ಮತ್ತು ವಿಶ್ಲೇಷಣಾ ಕೋಶ...