Homeಮುಖಪುಟನಿಲ್ಲದ ರೈತ ಹೋರಾಟ: 100 ಪತ್ರಿಕಾಗೋಷ್ಟಿ, 700 ಸಭೆಗಳ ಮೂಲಕ ಪ್ರಚಾರಕ್ಕೆ ಹೊರಟ ಬಿಜೆಪಿ!

ನಿಲ್ಲದ ರೈತ ಹೋರಾಟ: 100 ಪತ್ರಿಕಾಗೋಷ್ಟಿ, 700 ಸಭೆಗಳ ಮೂಲಕ ಪ್ರಚಾರಕ್ಕೆ ಹೊರಟ ಬಿಜೆಪಿ!

ಕಳೆದ 16 ದಿನಗಳಿಂದ ರಾಷ್ಟ್ರ ರಾಜಧಾನಿಯ ಗಡಿಗಳಲ್ಲಿ ಆಂದೋಲನ ನಡೆಸುತ್ತಿರುವ ರೈತರು ಡಿಸೆಂಬರ್ 14 ರಂದು ರಾಷ್ಟ್ರವ್ಯಾಪಿ ಪ್ರತಿಭಟನೆಗೆ ಕರೆ ನೀಡಿದ್ದು, ಡಿಸೆಂಬರ್ 12 ರೊಳಗೆ ದೆಹಲಿ-ಜೈಪುರ ರಾಷ್ಟ್ರೀಯ ಹೆದ್ದಾರಿಯನ್ನು ನಿರ್ಬಂಧಿಸುವುದಾಗಿ ಎಚ್ಚರಿಸಿದ್ದಾರೆ.

- Advertisement -
- Advertisement -

ದೆಹಲಿಯಲ್ಲಿ ಕೃಷಿ ಕಾನೂನುಗಳ ವಿರುದ್ದ ರೈತರ ಪ್ರತಿಭಟನೆ ಮುಂದುವರೆಯುತ್ತಿರುವ ಮಧ್ಯೆಯೆ ಕೇಂದ್ರ ಸರ್ಕಾರ ತಾನು ಪರಿಚಯಿಸಿದ ಹೊಸ ಕಾನೂನಿನ ಸಮರ್ಥನೆಗೆ ಇಳಿದಿದ್ದು, ದೇಶದಾದ್ಯಂತ ಕಾನೂನುಗಳ ಪರ ಬೃಹತ್ ಪ್ರಚಾರಾಂದೋಲನದ‌ ಅಭಿಯಾನ ಯೋಜಿಸಿದೆ. ಮುಂದಿನ ಕೆಲವು ದಿನಗಳಲ್ಲಿ ಬಿಜೆಪಿಯು ದೇಶಾದ್ಯಂತ 100 ಪತ್ರಿಕಾಗೋಷ್ಟಿಗಳು ಮತ್ತು 700 ರೈತರ ಸಭೆಗಳನ್ನು ಯೋಜಿಸಲಾಗಿದೆ ಎಂದು ಪಕ್ಷದ ಮೂಲಗಳನ್ನು ಉಲ್ಲೇಖಿಸಿ ಎನ್‌ಡಿಟಿವಿ ವರದಿ ಮಾಡಿದೆ.

ರೈತರ ಪ್ರತಿಭಟನೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಸಂದರ್ಭದಲ್ಲಿ ದೇಶ-ವಿದೇಶಗಳಿಂದ ಅದಕ್ಕೆ ಬೆಂಬಲ ಹರಿದುಬರುತ್ತಿದೆ. ಅದೇ ರೀತಿಯಲ್ಲಿ ಕೇಂದ್ರ ಸರ್ಕಾರದ ಮೇಲೆ ಟೀಕೆಗಳು ವ್ಯಕ್ತವಾಗುತ್ತಿವೆ. ಹಾಗಾಗಿ ಕೇಂದ್ರ ಸರ್ಕಾರ ತನ್ನ ಕಾಯ್ದೆಗಳನ್ನು ಸಮರ್ಥಿಸಿಕೊಳ್ಳಲು ಆಡಳಿತ ಯಂತ್ರಾಗವನ್ನೇ ಕಣಕ್ಕಿಳಿಸುವ ಯೋಜನೆಯಲ್ಲಿದೆ.

ಅಭಿಯಾನದ ಸಂವಹನದಲ್ಲಿ ಕ್ಯಾಬಿನೆಟ್ ಮಂತ್ರಿಗಳು ಪಾಲ್ಗೊಳ್ಳಲಿದ್ದು, ಕೃಷಿ ಕಾನೂನುಗಳ ಬಗ್ಗೆ ರೈತರು ಎತ್ತುವ ಸಮಸ್ಯೆಗಳನ್ನು ಬಗೆಹರಿಸಲು ಸರ್ಕಾರ ತೆಗೆದುಕೊಂಡ ಕ್ರಮಗಳ ಬಗ್ಗೆ ಈ ಸಮಯದಲ್ಲಿ ತಿಳಿಸಲಾಗುತ್ತದೆ, ಜೊತೆಗೆ ಕೃಷಿ ಕಾನೂನುಗಳ ಬಗ್ಗೆ ಜನರು ಹೊಂದಿರುವ ಪ್ರಶ್ನೆಗಳು ಮತ್ತು ಕಳವಳಗಳನ್ನು ಬಿಜೆಪಿ ಪರಿಹರಿಸಲಿದೆ ಎನ್ನಲಾಗಿದೆ.

ಇದನ್ನೂ ಓದಿ: ರೈತರಿಗೆ ಬೆಂಬಲ: ‘#WeUnitedForFarmers’ ಟ್ರೆಂಡಿಂಗ್ – ಪ್ರತಿತಂತ್ರ ಹೂಡುತ್ತಿರುವ ಬಿಜೆಪಿ!

ಈ ನಡುವೆ ರೈತ ಸಂಘಟನೆ ಕಾನೂನಿನ ವಿರುದ್ದ ಸುಪ್ರೀಂಕೋರ್ಟ್ ಕದ ತಟ್ಟಿದೆ. ಎರಡು ದಿನಗಳ ಹಿಂದೆ ಕೇಂದ್ರ ಸರ್ಕಾರದ ಹೊಸ ಪ್ರಸ್ತಾಪವನ್ನು ರೈತ ಮುಖಂಡರು “ಹೊಸದೇನೂ ಇಲ್ಲ” ಎಂದು ತಿರಸ್ಕರಿಸಿದ್ದರು. ಕೃಷಿಯನ್ನು ಕಾರ್ಪೊರೇಟ್ ಉದ್ದಿಮೆಗಳನ್ನಾಗಿಸುವ ಈ ಕಾನೂನುಗಳ ವಿರುದ್ದ ತಮ್ಮ ಪ್ರತಿಭಟನೆ ಮುಂದುವರೆಸಲಿದ್ದೇವೆ ಎಂದು ಹೇಳಿದ್ದಾರೆ.

ಕಳೆದ 16 ದಿನಗಳಿಂದ ರಾಷ್ಟ್ರ ರಾಜಧಾನಿಯ ಗಡಿಗಳಲ್ಲಿ ಆಂದೋಲನ ನಡೆಸುತ್ತಿರುವ ರೈತರು ಡಿಸೆಂಬರ್ 14 ರಂದು ರಾಷ್ಟ್ರವ್ಯಾಪಿ ಪ್ರತಿಭಟನೆಗೆ ಕರೆ ನೀಡಿದ್ದು, ಡಿಸೆಂಬರ್ 12 ರೊಳಗೆ ದೆಹಲಿ-ಜೈಪುರ ರಾಷ್ಟ್ರೀಯ ಹೆದ್ದಾರಿಯನ್ನು ನಿರ್ಬಂಧಿಸುವುದಾಗಿ ಎಚ್ಚರಿಸಿದ್ದಾರೆ.

ಪ್ರತಿಭಟನೆ ಪ್ರಾರಂಭವಾದಾಗಿನಿಂದ ಇದುವರೆಗೂ ಕನಿಷ್ಠ ಐದು ಸಾವುಗಳು ವರದಿಯಾಗಿವೆ ಎಂದು ಎನ್‌ಡಿಟಿವಿ ಹೇಳಿದೆ.

ಇದನ್ನೂ ಓದಿ: ಕೃಷಿ ಕಾಯ್ದೆಗಳ ವಿರುದ್ದ ಸುಪ್ರೀಂಕೋರ್ಟ್ ಮೆಟ್ಟಿಲೇರಿದ ರೈತ ಸಂಘಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...