Homeಕರ್ನಾಟಕಮುಸ್ಲಿಮರನ್ನು ಕೊಲ್ಲಲು ಪ್ರಚೋದನೆ; ಕಾಳಿ ಸ್ವಾಮೀಜಿ ವಿರುದ್ಧ ಎಫ್‌ಐಆರ್‌

ಮುಸ್ಲಿಮರನ್ನು ಕೊಲ್ಲಲು ಪ್ರಚೋದನೆ; ಕಾಳಿ ಸ್ವಾಮೀಜಿ ವಿರುದ್ಧ ಎಫ್‌ಐಆರ್‌

- Advertisement -
- Advertisement -

“ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಗೃಹ ಸಚಿವ ಆರಗ ಜ್ಞಾನೇಂದ್ರ ಅವರನ್ನು ಬೇಕಾದರೆ ಕೊಲ್ಲಿ. ಒಂದು ತಲೆ ಉರುಳಿದೆ, ಇನ್ನೂ 9 ಮುಸ್ಲಿಮರ ತಲೆ ಉರುಳಬೇಕಾಗಿದೆ” ಎಂದು ಹೇಳಿಕೆ ನೀಡಿದ್ದ ಋಷಿಕುಮಾರ ಅಲಿಯಾಸ್ ಕಾಳಿ ಸ್ವಾಮೀಜಿ ವಿರುದ್ಧ ಪ್ರಕರಣ ದಾಖಲಾಗಿದೆ.

ತುಮಕೂರಿನ ತಿಲಕ್‌‌ಪಾರ್ಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ನಗರದ ಪಿಯುಸಿಎಲ್ ಮುಖಂಡರಾದ ಕೆಂಪರಾಜು ಅವರು ನೀಡಿದ ದೂರಿನ ಅನ್ವಯ ಕ್ರಮ ಜರುಗಿಸಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಶನಿವಾರ ತುಮಕೂರಿನ ಪ್ರಗತಿಪರ ವೇದಿಕೆ ಸಹ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳನ್ನು ಭೇಟಿ ಮಾಡಿ ಸ್ವಾಮೀಜಿ ವಿರುದ್ಧ ಕ್ರಮ ಕೈಗೊಳ್ಳುವಂತೆ ದೂರು ನೀಡಿದೆ. ಕೆಂಪರಾಜುರವರು ನೀಡಿದ ದೂರಿನ ಹಿನ್ನಲೆಯಲ್ಲಿ ತುಮಕೂರಿನ ತಿಲಕ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್‌ 153ಎ (ಧರ್ಮ, ಜನಾಂಗ, ಹುಟ್ಟಿದ ಸ್ಥಳ, ವಾಸಸ್ಥಳ, ಭಾಷೆ ಇತ್ಯಾದಿಗಳ ಆಧಾರದ ಮೇಲೆ ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು, ಸಾಮರಸ್ಯಕ್ಕೆ ಅಡ್ಡಿಪಡಿಸುವುದು) ಅಡಿಯಲ್ಲಿ ಎಫ್‌ಐಆರ್‌‌ ದಾಖಲಾಗಿದೆ.

“ತುಮಕೂರಿನ ಟೌನ್‌ ಹಾಲ್‌ ಮುಂದೆ ದಿನಾಂಕ 29-7-2022ರಂದು ನಡೆದ ಪ್ರತಿಭಟನೆ ವೇಳೆ ಕಾಳಿ ಸ್ವಾಮಿ ಪ್ರಚೋದನಾತ್ಮಕವಾಗಿ ಮಾತನಾಡಿದ್ದಾರೆ. ಒಂಬತ್ತು ಮುಸ್ಲಿಮರ ತಲೆ ಕಡಿಯಬೇಕು ಎಂದಿದ್ದಾರೆ. ಮುಖ್ಯಮಂತ್ರಿ ಹಾಗೂ ಗೃಹಸಚಿವರ ಹತ್ಯೆ ಮಾಡುವಂತೆ ಹೇಳಿಕೆ ನೀಡಿದ್ದಾರೆ. ತುಮಕೂರಿನ ಹಿಂದೂ ಮುಸ್ಲಿಂ ಬಾಂಧವರಲ್ಲಿ ಅಶಾಂತಿ ಉಂಟು ಮಾಡಿ ನಾಗರಿಕ ದಂಗೆಗಳು ನಡೆಯುವಂತಹ ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿ ತುಮಕೂರಿನ ಶಾಂತಿಗೆ ಧಕ್ಕೆ ತಂದಿದ್ದಾರೆ” ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಕಾಳಿ ಸ್ವಾಮೀಜಿ ಹೇಳಿದ್ದೇನು?

ಒಂದು ಸಮುದಾಯದ ವಿರುದ್ಧ ಸದಾ ದ್ವೇಷದ ಹೇಳಿಕೆಗಳನ್ನು ನೀಡುವ‍ ಕಾಳಿ ಸ್ವಾಮೀಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಗೃಹಸಚಿವ ಆರಗ ಜ್ಞಾನೇಂದ್ರ ಅವರ ಕೊಲೆಗೆ ಪ್ರಚೋದನೆ ನೀಡಿದ್ದರು.

ಅತ್ಯಂತ ಅವಹೇಳನಕಾರಿಯಾಗಿ, ಸಮುದಾಯಗಳ ನಡುವೆ ದ್ವೇಷ ಬಿತ್ತುವಂತೆ, ರಾಜ್ಯದ ಕಾನೂನು ಮತ್ತು ಸುವ್ಯವಸ್ಥೆಯನ್ನು ಅಣಕಿಸುವಂತೆ ಮಾತನಾಡಿದ್ದ ಕಾಳಿ ಸ್ವಾಮೀಜಿ, “ಇನ್ನೂ 9 ಜನ ಮುಸ್ಲಿಮರ ತಲೆ ಕಡಿಯಬೇಕು” ಎಂದು ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದರು.

ಸುರತ್ಕಲ್‌ನಲ್ಲಿ ಫಾಝಿಲ್‌ ಎಂಬ ವ್ಯಕ್ತಿಯನ್ನು ಕೊಂದಿರುವ ಕುರಿತು ಮಾತನಾಡಿದ್ದ ಕಾಳಿ ಸ್ವಾಮೀಜಿ, “ನಮ್ಮವರೇ ಏನಾದರೂ ಹೊಡೆದಿದ್ದರೆ ನಾನು ಅವರಿಗೆ ಅಭಿನಂದನೆ ಸಲ್ಲಿಸುವೆ. ಇನ್ನು ಒಬ್ಬರನ್ನೇ ಕೊಂದಿರುವುದೆಂದು ಹೇಳುತ್ತಿದ್ದೀರಿ. ಇನ್ನು 9 ತಲೆ ಬೇಕು. ಅವರವರೇ ಹೊಡೆದುಕೊಂಡು ಸತ್ತು ಹೋಗಿದ್ದರೆ ನಮ್ಮವರಿಗೆ ಇನ್ನೂ ಮನಸ್ಥಿತಿ ಗಟ್ಟಿಯಾಗಿಲ್ಲ ಎಂದಷ್ಟೇ. ತುರುಕರೇ ನಿಮ್ಮ ಒಂದೊಂದು ಕತ್ತು ತಗಿಯಲಿಲ್ಲ ಎಂದರೆ ದೇವರಾಣೆಯೂ ಸುಧಾರಿಸಿಕೊಳ್ಳುವುದಿಲ್ಲ” ಎಂದು ಹೇಳಿಕೆ ನೀಡಿದ್ದರು.

“ನೀವು ನನ್ನನ್ನು ಎತ್ತಿ. ಎಸ್‌ಡಿಪಿಐ, ಪಿಎಫ್‌ಐ ………. ನನ್ನನ್ನು ಎತ್ತಿ. ನಿಮ್ಮ ಕೈಲಾದ್ರೆ ನಳಿನ್‌ ಕುಮಾರ್‌ ಕಟೀಲ್‌ರನ್ನು ಎತ್ತಿ. ನಿಮ್ಮ ಕೈಲಾದರೆ ಬೊಮ್ಮಾಯಿ, ಹೋಮ್‌ಮಿನಿಸ್ಟರ್‌ರನ್ನು ಎತ್ತಿ….” ಎಂದಿದ್ದರು.

ಇದನ್ನೂ ಓದಿರಿ: ಮಸೀದಿ ಒಡೆಯುವ ಮಾತುಗಳು: ‘ಮುತಾಲಿಕ್‌’ ಮುಂದುವರಿದ ಭಾಗ ‘ಕಾಳಿ ಸ್ವಾಮೀಜಿ’ ಪ್ರಕರಣ

ಅತ್ಯಂತ ಕೆಟ್ಟ ಪದಗಳನ್ನು ಮುಸ್ಲಿಂ ಸಮುದಾಯದ ವಿರುದ್ಧ ಕಾಳಿ ಸ್ವಾಮೀಜಿ ಬಳಸಿದ್ದರು. “ನೀವು ನನ್ನನ್ನು ಹೊಡೆದ ತಕ್ಷಣ ಗೋದ್ರಾ ಹತ್ಯಾಕಾಂಡ ಶುರುವಾಗುತ್ತದೆ. ಗೋರಿಪಾಳ್ಯ, ಕಲಾಸಿಪಾಳ್ಯಕ್ಕೆ ನುಗ್ಗಿ ಬೆಂಕಿ ಹಚ್ಚಲಾಗುತ್ತದೆ. ನಮ್ಮ ತಾಕತ್ತು ಏನೆಂಬುದು ತೋರಿಸುತ್ತೇವೆ. ಹೊಡೆಯುವುದಾದರೆ ದೊಡ್ಡದನ್ನು ಹೊಡೆಯಿರಿ…. ಯಾವ ಶಾಂತಿ ಕಾಪಾಡಬೇಕು ಮುಖ್ಯಮಂತ್ರಿಗಳೇ…” ಎಂದು ಬಾಯಿಗೆ ಬಂದಂತೆ ಮಾತನಾಡಿರುವ ಅವರು ಮುಸ್ಲಿಮರನ್ನು ಗುಂಡಿಕ್ಕಿ ಕೊಲ್ಲಲು ಪ್ರಚೋದಿಸಿದ್ದರು.

“ಮೂರು ದಿನದೊಳಗೆ ಎನ್‌ಕೌಂಟರ್‌ ಮಾಡಿ. ಇಲ್ಲವಾದರೆ ಪಾದಯಾತ್ರೆ ಮಾಡ್ತೀವಿ. ಒಂದು ಕತ್ತಿಗೆ ಹತ್ತು ಕತ್ತು ಉದುರಿಸಬೇಕು” ಎಂದು ಹೇಳಿಕೆ ನೀಡಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...