Homeಕರ್ನಾಟಕಮುಸ್ಲಿಮರನ್ನು ಕೊಲ್ಲಲು ಪ್ರಚೋದನೆ; ಕಾಳಿ ಸ್ವಾಮೀಜಿ ವಿರುದ್ಧ ಎಫ್‌ಐಆರ್‌

ಮುಸ್ಲಿಮರನ್ನು ಕೊಲ್ಲಲು ಪ್ರಚೋದನೆ; ಕಾಳಿ ಸ್ವಾಮೀಜಿ ವಿರುದ್ಧ ಎಫ್‌ಐಆರ್‌

- Advertisement -
- Advertisement -

“ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಗೃಹ ಸಚಿವ ಆರಗ ಜ್ಞಾನೇಂದ್ರ ಅವರನ್ನು ಬೇಕಾದರೆ ಕೊಲ್ಲಿ. ಒಂದು ತಲೆ ಉರುಳಿದೆ, ಇನ್ನೂ 9 ಮುಸ್ಲಿಮರ ತಲೆ ಉರುಳಬೇಕಾಗಿದೆ” ಎಂದು ಹೇಳಿಕೆ ನೀಡಿದ್ದ ಋಷಿಕುಮಾರ ಅಲಿಯಾಸ್ ಕಾಳಿ ಸ್ವಾಮೀಜಿ ವಿರುದ್ಧ ಪ್ರಕರಣ ದಾಖಲಾಗಿದೆ.

ತುಮಕೂರಿನ ತಿಲಕ್‌‌ಪಾರ್ಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ನಗರದ ಪಿಯುಸಿಎಲ್ ಮುಖಂಡರಾದ ಕೆಂಪರಾಜು ಅವರು ನೀಡಿದ ದೂರಿನ ಅನ್ವಯ ಕ್ರಮ ಜರುಗಿಸಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಶನಿವಾರ ತುಮಕೂರಿನ ಪ್ರಗತಿಪರ ವೇದಿಕೆ ಸಹ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳನ್ನು ಭೇಟಿ ಮಾಡಿ ಸ್ವಾಮೀಜಿ ವಿರುದ್ಧ ಕ್ರಮ ಕೈಗೊಳ್ಳುವಂತೆ ದೂರು ನೀಡಿದೆ. ಕೆಂಪರಾಜುರವರು ನೀಡಿದ ದೂರಿನ ಹಿನ್ನಲೆಯಲ್ಲಿ ತುಮಕೂರಿನ ತಿಲಕ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್‌ 153ಎ (ಧರ್ಮ, ಜನಾಂಗ, ಹುಟ್ಟಿದ ಸ್ಥಳ, ವಾಸಸ್ಥಳ, ಭಾಷೆ ಇತ್ಯಾದಿಗಳ ಆಧಾರದ ಮೇಲೆ ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು, ಸಾಮರಸ್ಯಕ್ಕೆ ಅಡ್ಡಿಪಡಿಸುವುದು) ಅಡಿಯಲ್ಲಿ ಎಫ್‌ಐಆರ್‌‌ ದಾಖಲಾಗಿದೆ.

“ತುಮಕೂರಿನ ಟೌನ್‌ ಹಾಲ್‌ ಮುಂದೆ ದಿನಾಂಕ 29-7-2022ರಂದು ನಡೆದ ಪ್ರತಿಭಟನೆ ವೇಳೆ ಕಾಳಿ ಸ್ವಾಮಿ ಪ್ರಚೋದನಾತ್ಮಕವಾಗಿ ಮಾತನಾಡಿದ್ದಾರೆ. ಒಂಬತ್ತು ಮುಸ್ಲಿಮರ ತಲೆ ಕಡಿಯಬೇಕು ಎಂದಿದ್ದಾರೆ. ಮುಖ್ಯಮಂತ್ರಿ ಹಾಗೂ ಗೃಹಸಚಿವರ ಹತ್ಯೆ ಮಾಡುವಂತೆ ಹೇಳಿಕೆ ನೀಡಿದ್ದಾರೆ. ತುಮಕೂರಿನ ಹಿಂದೂ ಮುಸ್ಲಿಂ ಬಾಂಧವರಲ್ಲಿ ಅಶಾಂತಿ ಉಂಟು ಮಾಡಿ ನಾಗರಿಕ ದಂಗೆಗಳು ನಡೆಯುವಂತಹ ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿ ತುಮಕೂರಿನ ಶಾಂತಿಗೆ ಧಕ್ಕೆ ತಂದಿದ್ದಾರೆ” ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಕಾಳಿ ಸ್ವಾಮೀಜಿ ಹೇಳಿದ್ದೇನು?

ಒಂದು ಸಮುದಾಯದ ವಿರುದ್ಧ ಸದಾ ದ್ವೇಷದ ಹೇಳಿಕೆಗಳನ್ನು ನೀಡುವ‍ ಕಾಳಿ ಸ್ವಾಮೀಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಗೃಹಸಚಿವ ಆರಗ ಜ್ಞಾನೇಂದ್ರ ಅವರ ಕೊಲೆಗೆ ಪ್ರಚೋದನೆ ನೀಡಿದ್ದರು.

ಅತ್ಯಂತ ಅವಹೇಳನಕಾರಿಯಾಗಿ, ಸಮುದಾಯಗಳ ನಡುವೆ ದ್ವೇಷ ಬಿತ್ತುವಂತೆ, ರಾಜ್ಯದ ಕಾನೂನು ಮತ್ತು ಸುವ್ಯವಸ್ಥೆಯನ್ನು ಅಣಕಿಸುವಂತೆ ಮಾತನಾಡಿದ್ದ ಕಾಳಿ ಸ್ವಾಮೀಜಿ, “ಇನ್ನೂ 9 ಜನ ಮುಸ್ಲಿಮರ ತಲೆ ಕಡಿಯಬೇಕು” ಎಂದು ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದರು.

ಸುರತ್ಕಲ್‌ನಲ್ಲಿ ಫಾಝಿಲ್‌ ಎಂಬ ವ್ಯಕ್ತಿಯನ್ನು ಕೊಂದಿರುವ ಕುರಿತು ಮಾತನಾಡಿದ್ದ ಕಾಳಿ ಸ್ವಾಮೀಜಿ, “ನಮ್ಮವರೇ ಏನಾದರೂ ಹೊಡೆದಿದ್ದರೆ ನಾನು ಅವರಿಗೆ ಅಭಿನಂದನೆ ಸಲ್ಲಿಸುವೆ. ಇನ್ನು ಒಬ್ಬರನ್ನೇ ಕೊಂದಿರುವುದೆಂದು ಹೇಳುತ್ತಿದ್ದೀರಿ. ಇನ್ನು 9 ತಲೆ ಬೇಕು. ಅವರವರೇ ಹೊಡೆದುಕೊಂಡು ಸತ್ತು ಹೋಗಿದ್ದರೆ ನಮ್ಮವರಿಗೆ ಇನ್ನೂ ಮನಸ್ಥಿತಿ ಗಟ್ಟಿಯಾಗಿಲ್ಲ ಎಂದಷ್ಟೇ. ತುರುಕರೇ ನಿಮ್ಮ ಒಂದೊಂದು ಕತ್ತು ತಗಿಯಲಿಲ್ಲ ಎಂದರೆ ದೇವರಾಣೆಯೂ ಸುಧಾರಿಸಿಕೊಳ್ಳುವುದಿಲ್ಲ” ಎಂದು ಹೇಳಿಕೆ ನೀಡಿದ್ದರು.

“ನೀವು ನನ್ನನ್ನು ಎತ್ತಿ. ಎಸ್‌ಡಿಪಿಐ, ಪಿಎಫ್‌ಐ ………. ನನ್ನನ್ನು ಎತ್ತಿ. ನಿಮ್ಮ ಕೈಲಾದ್ರೆ ನಳಿನ್‌ ಕುಮಾರ್‌ ಕಟೀಲ್‌ರನ್ನು ಎತ್ತಿ. ನಿಮ್ಮ ಕೈಲಾದರೆ ಬೊಮ್ಮಾಯಿ, ಹೋಮ್‌ಮಿನಿಸ್ಟರ್‌ರನ್ನು ಎತ್ತಿ….” ಎಂದಿದ್ದರು.

ಇದನ್ನೂ ಓದಿರಿ: ಮಸೀದಿ ಒಡೆಯುವ ಮಾತುಗಳು: ‘ಮುತಾಲಿಕ್‌’ ಮುಂದುವರಿದ ಭಾಗ ‘ಕಾಳಿ ಸ್ವಾಮೀಜಿ’ ಪ್ರಕರಣ

ಅತ್ಯಂತ ಕೆಟ್ಟ ಪದಗಳನ್ನು ಮುಸ್ಲಿಂ ಸಮುದಾಯದ ವಿರುದ್ಧ ಕಾಳಿ ಸ್ವಾಮೀಜಿ ಬಳಸಿದ್ದರು. “ನೀವು ನನ್ನನ್ನು ಹೊಡೆದ ತಕ್ಷಣ ಗೋದ್ರಾ ಹತ್ಯಾಕಾಂಡ ಶುರುವಾಗುತ್ತದೆ. ಗೋರಿಪಾಳ್ಯ, ಕಲಾಸಿಪಾಳ್ಯಕ್ಕೆ ನುಗ್ಗಿ ಬೆಂಕಿ ಹಚ್ಚಲಾಗುತ್ತದೆ. ನಮ್ಮ ತಾಕತ್ತು ಏನೆಂಬುದು ತೋರಿಸುತ್ತೇವೆ. ಹೊಡೆಯುವುದಾದರೆ ದೊಡ್ಡದನ್ನು ಹೊಡೆಯಿರಿ…. ಯಾವ ಶಾಂತಿ ಕಾಪಾಡಬೇಕು ಮುಖ್ಯಮಂತ್ರಿಗಳೇ…” ಎಂದು ಬಾಯಿಗೆ ಬಂದಂತೆ ಮಾತನಾಡಿರುವ ಅವರು ಮುಸ್ಲಿಮರನ್ನು ಗುಂಡಿಕ್ಕಿ ಕೊಲ್ಲಲು ಪ್ರಚೋದಿಸಿದ್ದರು.

“ಮೂರು ದಿನದೊಳಗೆ ಎನ್‌ಕೌಂಟರ್‌ ಮಾಡಿ. ಇಲ್ಲವಾದರೆ ಪಾದಯಾತ್ರೆ ಮಾಡ್ತೀವಿ. ಒಂದು ಕತ್ತಿಗೆ ಹತ್ತು ಕತ್ತು ಉದುರಿಸಬೇಕು” ಎಂದು ಹೇಳಿಕೆ ನೀಡಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...