Homeಕರ್ನಾಟಕಗಲಭೆಗೆ ಪ್ರಚೋದನೆ: ಪಬ್ಲಿಕ್ ಟಿವಿ ರಂಗನಾಥ್‌ ವಿರುದ್ಧ ಜಾಮೀನು ರಹಿತ ಕೇಸ್‌ ದಾಖಲಿಸುವಂತೆ ಕೋರ್ಟ್‌ ಸೂಚನೆ

ಗಲಭೆಗೆ ಪ್ರಚೋದನೆ: ಪಬ್ಲಿಕ್ ಟಿವಿ ರಂಗನಾಥ್‌ ವಿರುದ್ಧ ಜಾಮೀನು ರಹಿತ ಕೇಸ್‌ ದಾಖಲಿಸುವಂತೆ ಕೋರ್ಟ್‌ ಸೂಚನೆ

- Advertisement -
- Advertisement -

ಹಿಜಾಬ್‌ ವಿಚಾರದ ಕಾರ್ಯಕ್ರಮವನ್ನು ನಿರೂಪಣೆ ಮಾಡುತ್ತಿರುವಾಗ ‘ಭಾರತವು ಹಿಂದೂ ಧರ್ಮದ ಆಧಾರಲ್ಲಿ ನಿರ್ಮಾಣವಾಗಿದೆ’ ಎಂದು ಹೇಳಿದ್ದ ಪಬ್ಲಿಕ್ ಟಿವಿಯ ಮುಖ್ಯಸ್ಥ ಎಚ್.ಆರ್. ರಂಗನಾಥ್ ಹಾಗೂ ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಜಾಮೀನು ರಹಿತ ಪ್ರಕರಣ ದಾಖಲಿಸುವಂತೆ ನ್ಯಾಯಾಲಯವು ಪೊಲೀಸರಿಗೆ ಸೂಚಿಸಿದೆ.

ಪಬ್ಲಿಕ್ ಟಿವಿ ಫೆಬ್ರವರಿ 3ರಂದು ‘ವಿದ್ಯಾದೇಗುಲದಲ್ಲಿ ಧರ್ಮ ಯುದ್ಧ, ಬಿಗ್ ಬುಲೆಟಿನ್’ ಎಂಬ ಶಿರ್ಷಿಕೆಯ ಕಾರ್ಯಕ್ರಮದಲ್ಲಿ ಎಚ್.ಆರ್. ರಂಗನಾಥ್ ಹಾಗೂ ಅರುಣ್ ಬಡಿಗರ್ ಅವರು ಮತನಾಡುತ್ತಾ, ‘ಇದು ಭಾರತ. ಭಾರತ ಸೃಷ್ಟಿಯಾಗಿದ್ದು ಹಿಂದೂ ರಾಷ್ಟ್ರದ ಆಧಾರದಲ್ಲಿ’ ಎಂದು ಹೇಳಿಕೆ ನೀಡಿ ವಿವಾದ ಸೃಷ್ಟಿಸಿದ್ದರು.

ಇದನ್ನೂ ಓದಿ: ಕರ್ನಾಟಕ ವಿಧಾನಸಭಾ ಕ್ಷೇತ್ರಗಳ ಸಮೀಕ್ಷೆ; ಕಾರವಾರ-ಅಂಕೋಲಾ: ಹಾಲಕ್ಕಿಗಳ ಸೀಮೆಯಲ್ಲಿ ಹಣದವರ ಕಾರುಬಾರು!

ಈ ಹೇಳಿಕೆಯನ್ನು ವಿರೋಧಿಸಿ ಹಲವಾರು ಜನರು ಆಕ್ರೋಶ ವ್ಯಕ್ತಪಡಿಸಿದ್ದರು. ವಿವಾದಾತ್ಮಕ ಹೇಳಿಕೆ ಮೂಲಕ ನಿರೂಪಕರಿಬ್ಬರು ಮುಸ್ಲಿಮರ ಭಾವನೆಗಳಿಗೆ ಧಕ್ಕೆ ಮಾಡಿದ್ದು, ದೇಶದ ಸಮಗ್ರತೆಯ ವಿರುದ್ಧ ಪೂರ್ವಗ್ರಹ ಪೀಡಿತ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಲಾಗಿತ್ತು.

ಈ ವಿವಾದಾತ್ಮಕ ಹೇಳಿಕೆಯ ವಿರುದ್ಧ ಬಂದೇನವಾಜ್ ಗೋಗಿ ಅವರು ಶಹಾಪುರದ ಹೆಚ್ಚುವರಿ ನ್ಯಾಯಿಕ ದಂಡಾಧಿಕಾರಿಗಳ ನ್ಯಾಯಾಲಯದಲ್ಲಿ ಖಾಸಗಿ ದೂರು ಸಲ್ಲಿಸಿದ್ದರು.

ಅವರ ದೂರನ್ನು ಪರಿಗಣಿಸಿದ ನ್ಯಾಯಾಲಯವು ಪಬ್ಲಿಕ್ ಟಿವಿಯ ಎಚ್‌.ಆರ್‌. ರಂಗನಾಥ್ ಮತ್ತು ನಿರೂಪಕ ಅರುಣ್ ಬಡಿಗೇರ ವಿರುದ್ಧ ಗೋಗಿ ಪೊಲೀಸ್ ಠಾಣೆಯಲ್ಲಿ ಕಲಂ 153(ಬಿ), 505(1)(ಬಿ)(ಸಿ) ಮತ್ತು 505(2) ಐಪಿಸಿ ಅಡಿಯಲ್ಲಿ ಎಫ್‌ಐಆರ್ ದಾಖಲಿಸಲು ನಿರ್ದೇಶನ ನೀಡಿದೆ.

ಇದನ್ನೂ ಓದಿ: ವಿಜಯಪುರ: 12 ವರ್ಷದ ಬಾಲಕನನ್ನು ಬೆತ್ತಲೆಗೊಳಿಸಿ ಚಿತ್ರ ಹಿಂಸೆ; ಇನ್ನೂ ‘ಪೋಕ್ಸೋ’ ದಾಖಲಿಸದ ಪೊಲೀಸರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

12 COMMENTS

  1. ನಮ್ಮ ಇಂಡಿಯಾ ದೇಶವು ಧರ್ಮನಿರಪೇಕ್ಷ ರಾಷ್ಟ್ರವೋ ಅಥವಾ ಧರ್ಮಾಧಾರಿತ ರಾಷ್ಟ್ರವೋ ಎಂದು ತಿಳಿದು ಮಾತನಾಡಿ ಮಿಸ್ಟರ್ ರಾಜು ಅವರೇ.

  2. ಇವರು ಕೇವಲ ಮುಸ್ಲಿಮರ ಭಾವನೆಗಳಿಗೆ ದಕ್ಕೆ ಉಂಟುಮಾಡಿದ್ದಲ್ಲ, ಜೊತೆಗೆ ಬೌದ್ಧರು, ಸಿಖ್ಖರು ಕ್ರಿಶ್ಚಿಯನ್ ಮುಂತಾದ ಇತರೆ ಧರ್ಮದವರ ಭಾವನೆಗಳಿಗೂ ದಕ್ಕೆಯುಂಟು ಮಾಡಿದ್ದಾರೆ

  3. ರಂಗಣ್ಣ ಬಡಿಗೇರ್ ನಿಉಒ 2 ಕಳ್ಳ ನನ್ ಮಕಳು ಬಿಜೆಪಿ.ಆರ್ಎಸ್ಎಸ್ ಅವರ ಹಥಿರಾ ಯನ್ಜಲು ಕಾಸು ಯಷ್ಟು ತಗೊನ್ದ್ರಿರಾ ನಿಮಗೆ ಬಾಹ್ದ್ ಖವಾ ಅಂತಾರೆ ನಮ್ಮ ಉತ್ತರ ಕರ್ನಾಟಕದಲ್ಲಿ ಇದರ ಅರ್ಥ ತಲ್ಯೆ ಹಿಡುಕ ಸುಲ್ಯೆ ಮಕಳು ನೀವು

  4. H. R. Eliruvudalli nange thappenu kansthilla. Gottidda paniditharu Hindusthana andre yenu antha heli ?
    Yella darmagaligintha poorvika vada darmave Hindhu. a panditharu 😌

  5. ಇದು ಹಿಂದೂ ಧರ್ಮದ ಆಧಾರದ ಮೇಲೆಯೇ ಆಗಿರೋದು ಇದು 100/ ನಿಜ ಕಳ್ಳ ನನ್ನ ಮಕ್ಕಳು 1947 ಪಾಕೀಸ್ತಾನ ಅಂತ ಬೇರೆ ಅದರಲ್ಲ ಈಗಾ ಕೇಳುವ ಹಕ್ಕು ಹೇಗೆ ಬರುತ್ತೆ example ನಿಮ್ಮ ಮನೆಯಲ್ಲಿ ಇಬ್ಬರು ಅನ್ನ ಅವರು ಬೇರೆ ಯಾಗಿ ಆಸ್ತಿ ಎಲ್ಲ ಹಕ್ಕುಗಳನ್ನು ಬೇರೆ ಬೇರೆ ಯಾಗಿದೆ ಏನು ತಮ್ಮನ ಮಕ್ಕಳು ಅಂತ ಮನೇಲೇ ಜಾಗ ನೀಡಿದರೆ ಈಗಾ ಮತ್ತೆ ನಂಗೆ ಹಕ್ಕು ಬೇಕು ಅಂದ್ರೆ adu ಹೇಗೆ ಆಗುತ್ತೆ ಇದು ಸರಿ ಇಲ್ಲ

  6. ಚಾ ಶಿ ಜಯಕುಮಾರ್ ಕೃಷ್ಣರಾಜಪೇಟೆ ಮಂಡ್ಯ ಜಿಲ್ಲೆ

LEAVE A REPLY

Please enter your comment!
Please enter your name here

- Advertisment -

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...

ಮುಂಬೈ| ಬುರ್ಖಾ ಧರಿಸಿ ಲೋಕಲ್‌ ಟ್ರೈನ್‌ನ ಮಹಿಳಾ ಬೋಗಿಯಲ್ಲಿ ಪ್ರಯಾಣಿಸಿದ ವ್ಯಕ್ತಿ ಬಂಧನ

ಮುಂಬೈನ ಉಪನಗರ ರೈಲಿನ ಮಹಿಳಾ ಬೋಗಿಯಲ್ಲಿ ಬುರ್ಖಾ ಧರಿಸಿ ಪ್ರಯಾಣಿಸುತ್ತಿದ್ದ ಆರೋಪದ ಮೇಲೆ ನಾಸಿಕ್‌ನ 57 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ. ಈ ಘಟನೆ ಫೆಬ್ರವರಿ 6 ರಂದು ಘಾಟ್ಕೋಪರ್...

ಎಪ್‌ಸ್ಟೀನ್‌ ಫೈಲ್ಸ್ ಜನಾಕ್ರೋಶ : ಎಐ ಶೃಂಗಸಭೆಯಿಂದ ದೂರ ಉಳಿದ ಬಿಲ್‌ ಗೇಟ್ಸ್‌

ಎಪ್‌ಸ್ಟೀನ್‌ ಫೈಲ್ಸ್‌ ಮುಂದಿಟ್ಟುಕೊಂಡು ಜನರು ತೀವ್ರ ವಿರೋಧ ವ್ಯಕ್ತಪಡಿಸಿದ ಬೆನ್ನಲ್ಲೇ, 'ಇಂಡಿಯಾ ಎಐ ಇಂಪ್ಯಾಕ್ಟ್ ಶೃಂಗಸಭೆ'ಯಿಂದ ಮೈಕ್ರೋಸಾಫ್ಟ್‌ ಸಹ-ಸಂಸ್ಥಾಪಕ ಬಿಲ್ ಗೇಟ್ಸ್ ದೂರ ಉಳಿದಿದ್ದಾರೆ. ಈ ಕುರಿತು ಗೇಟ್ಸ್ ಫೌಂಡೇಶನ್ ಇಂಡಿಯಾ ಗುರುವಾರ...

ಬೆಂಗಳೂರಿನಲ್ಲಿ ರಂಜಾನ್ ಆಹಾರ ಮೇಳ ನಡೆಸದಂತೆ ಹೋಟೆಲ್‌ಗಳಿಗೆ ಎಚ್ಚರಿಕೆ

ಬೆಂಗಳೂರು: ಫ್ರೇಸರ್ ಟೌನ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿನ ಎಂಎಂ ರಸ್ತೆಯಲ್ಲಿ ರಂಜಾನ್ ಆಹಾರ ಮೇಳ ನಡೆಸದಂತೆ ಹೋಟೆಲ್ ಮಾಲೀಕರಿಗೆ ಸ್ಥಳೀಯ ನಿವಾಸಿಗಳು ಎಚ್ಚರಿಕೆ ನೀಡಿದ್ದಾರೆ. ರಂಜಾನ್ ಆಹಾರ ಮೇಳದಿಂದ ಸಂಚಾರ ದಟ್ಟಣೆ. ಅವ್ಯವಸ್ಥೆಯ ಜೊತೆಗೆ...

‘ದಿ ಕೇರಳ ಸ್ಟೋರಿ-2’ ಚಲನಚಿತ್ರ ಜಾತ್ಯತೀತತೆಗೆ ಬೆದರಿಕೆ: ಮುಖ್ಯಮಂತ್ರಿ ಪಿಣರಾಯಿ ವಿಜಯನ್

'ದಿ ಕೇರಳ ಸ್ಟೋರಿ' ಚಿತ್ರದ ಎರಡನೇ ಭಾಗ ಬಿಡುಗಡೆಯಾಗುತ್ತಿರುವ ಬಗ್ಗೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕಳವಳ ವ್ಯಕ್ತಪಡಿಸಿದ್ದು, ಇದರ ಮೊದಲ ಭಾಗವು "ರಾಜ್ಯದ ವಿರುದ್ಧ ದ್ವೇಷವನ್ನು ಹರಡುವ ಮತ್ತು ನಮ್ಮ ಜಾತ್ಯತೀತ...

ಬಿಜೆಪಿ ಸೇರಲು ಸಿದ್ದರಾದ ಭೂಪೇನ್ ಬೋರಾ : ಪ್ರಿಯಾಂಕಾ, ಡಿಕೆಶಿ ಸೇರಿದಂತೆ ‘ಕೈ ಟ್ರಬಲ್ ಶೂಟರ್‌ಗಳು’ ಅಸ್ಸಾಂಗೆ ದೌಡು

ರಾಜ್ಯ ಕಾಂಗ್ರೆಸ್‌ ಘಟಕದ ಮಾಜಿ ಅಧ್ಯಕ್ಷ ಭೂಪೇನ್ ಬೋರಾ ಬಿಜೆಪಿಗೆ ಹಾರಲು ಸಿದ್ದರಾಗಿರುವ ನಡುವೆ ಪ್ರಿಯಾಂಕಾ ಗಾಂಧಿ, ಡಿ.ಕೆ ಶಿವಕುಮಾರ್ ಸೇರಿದಂತೆ ಕಾಂಗ್ರೆಸ್‌ನ ಟ್ರಬಲ್ ಶೂಟರ್‌ಗಳ ತಂಡ ಅಸ್ಸಾಂಗೆ ದೌಡಾಯಿಸಿದೆ. ಅಸ್ಸಾಂ ಕಾಂಗ್ರೆಸ್ ಅಭ್ಯರ್ಥಿಗಳ...

ಸರ್ಕಾರದ ಭರವಸೆಗೆ ಮಣಿಯದ ಸಾರಿಗೆ ಸಿಬ್ಬಂದಿ : ಮುಷ್ಕರ ಮುಂದುವರಿಸಲು ನಿರ್ಧಾರ

ಹಿಂಬಾಕಿ ಪಾವತಿ, ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ರಾಜ್ಯದ ನಾಲ್ಕು ಸಾರಿಗೆ ನಿಗಮಗಳಾದ ಕೆಎಸ್‌ಆರ್‌ಟಿಸಿ, ಕೆಕೆಆರ್‌ಟಿಸಿ, ಎನ್‌ಡಬ್ಲ್ಯುಕೆಆರ್‌ಟಿಸಿ ಹಾಗೂ ಬಿಎಂಟಿಸಿಯ ನೌಕರರು ಇಂದು (ಫೆ.19) ಮುಷ್ಕರಕ್ಕೆ ಕರೆ ಕೊಟ್ಟಿದ್ದಾರೆ. ನೌಕರರ ಪ್ರತಿಭಟನೆ...

ಬೆಂಗಳೂರಿನ ಅಪಾರ್ಟ್‌ಮೆಂಟ್‌ನಲ್ಲಿ ಪತ್ನಿಯ ಕತ್ತು ಹಿಸುಕಿ ಕೊಂದ ನಿವೃತ್ತ ಇಸ್ರೋ ಉದ್ಯೋಗಿ ಬಂಧನ

ಬೆಂಗಳೂರು: ಆಘಾತಕಾರಿ ಘಟನೆಯೊಂದರಲ್ಲಿ, 72 ವರ್ಷದ ನಿವೃತ್ತ ಇಸ್ರೋ ಉದ್ಯೋಗಿಯೊಬ್ಬರು ವೈಟ್‌ಫೀಲ್ಡ್ ವಿಭಾಗದ ಆವಲಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ತಮ್ಮ ಅಪಾರ್ಟ್‌ಮೆಂಟ್‌ನಲ್ಲಿ ಬುಧವಾರ ಪತ್ನಿಯನ್ನು ಕತ್ತು ಹಿಸುಕಿ ಕೊಂದಿರುವುದಾಗಿ ವರದಿಯಾಗಿದೆ.  ಬೊಮ್ಮನಹಳ್ಳಿಯ ಅಪಾರ್ಟ್‌ಮೆಂಟ್‌ನಲ್ಲಿ ಬೆಳಿಗ್ಗೆ...