Homeರಾಷ್ಟ್ರೀಯಕೋಮುಗಲಭೆಗೆ ಹುನ್ನಾರ: ತನ್ನ ಮನೆಗೆ ತಾನೇ ಬಾಂಬ್ ಎಸೆದ RSS ಅಂಗಸಂಸ್ಥೆ ಹಿಂದೂ ಮುನ್ನಣಿಯ ನಾಯಕ

ಕೋಮುಗಲಭೆಗೆ ಹುನ್ನಾರ: ತನ್ನ ಮನೆಗೆ ತಾನೇ ಬಾಂಬ್ ಎಸೆದ RSS ಅಂಗಸಂಸ್ಥೆ ಹಿಂದೂ ಮುನ್ನಣಿಯ ನಾಯಕ

- Advertisement -
- Advertisement -

ಆರೆಸ್ಸೆಸ್‌‌‌‌ನ ಅಂಗಸಂಸ್ಥೆಯಾದ ‘ಹಿಂದೂ ಮುನ್ನಣಿ’ಯ ದುಷ್ಕರ್ಮಿಯೊಬ್ಬ ಕೋಮು ಗಲಭೆ ನಡಸುವ ಉದ್ದೇಶದಿಂದ ತನ್ನ ಮನೆಗೆ ತಾನೇ ಬಾಂಬ್ ಎಸೆದು ತಮಿಳುನಾಡು ಪೊಲೀಸರಿಂದ ಬಂಧನಕ್ಕೆ ಒಳಗಾಗಿದ್ದಾನೆ. ಕೋಮು ಗಲಭೆ ನಡೆಸುವುದಕ್ಕಾಗಿ ‘ತನ್ನ ಮನೆಯ ಮೇಲೆ ಬಾಂಬ್ ದಾಳಿ’ ನಡೆದಿದೆ ಎಂದು ದುಷ್ಕರ್ಮಿಯು ಸುಳ್ಳು ದೂರು ನೀಡಿದ್ದನು.

ಘಟನೆಯು ತಮಿಳುನಾಡಿನ ಕುಂಭಕೋಣಂನಲ್ಲಿ ನವೆಂಬರ್ 21 ರ ಸೋಮವಾರ ನಡೆದಿದ್ದು, ಬಂಧನಕ್ಕೊಳಗಾದ ದುಷ್ಕರ್ಮಿಯನ್ನು ಹಿಂದೂ ಮುನ್ನಣಿ ಕುಂಭಕೋಣಂ ನಗರದ ಕಾರ್ಯದರ್ಶಿಯಾದ ಸಕ್ಕರೆಪಾಣಿ (40) ಎಂದು ಗುರುತಿಸಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಸೋಮವಾರ ಬೆಳಿಗ್ಗೆ ಅಪರಿಚಿತ ದುಷ್ಕರ್ಮಿಗಳು ತಮ್ಮ ಮನೆ ಮುಂದೆ ಪೆಟ್ರೋಲ್ ಬಾಂಬ್ ಎಸೆದಿದ್ದಾರೆ ಎಂದು ದುಷ್ಕರ್ಮಿ ಕುಂಭಕೋಣಂ ಪೂರ್ವ ಪೊಲೀಸ್ ಠಾಣೆಗೆ ಕರೆ ಮಾಡಿದ್ದನು. ಮನೆಯ ಮುಂದೆ ದೊಡ್ಡ ಶಬ್ದ ಉಂಟಾಗಿದ್ದು, ಮನೆಯ ಹೊರಗೆ ಒಡೆದ ಗಾಜಿನ ತುಂಡುಗಳು ಕಂಡುಬಂದಿವೆ ಎಂದು ದೂರಿದ್ದನು.

ಇದನ್ನೂ ಓದಿ: ಪಕ್ಷದ ಮಹಿಳಾ ನಾಯಕಿಗೆ ಅಶ್ಲೀಲ ನಿಂದನೆ, ಕೊಲೆ ಬೆದರಿಕೆ ಹಾಕಿದ ತಮಿಳುನಾಡು ಬಿಜೆಪಿ ನಾಯಕ

ಘಟನೆಯ ಬಗ್ಗೆ ತಿಳಿದ ಕುಂಭಕೋಣಂ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ರವಳಿ ಪ್ರಿಯಾ, ಸಹಾಯಕ ಪೊಲೀಸ್ ವರಿಷ್ಠಾಧಿಕಾರಿಗಳಾದ (ಎಡಿಎಸ್‌ಪಿ) ಜಯಚಂದ್ರನ್ ಮತ್ತು ಸ್ವಾಮಿನಾಥನ್ ಮತ್ತು ವಿಧಿವಿಜ್ಞಾನ ಇಲಾಖೆಯ ಸಹಾಯಕ ನಿರ್ದೇಶಕ ರಾಮಚಂದ್ರನ್ ಅವರು ಸಕ್ಕರೆಪಾಣಿ ಮನೆಗೆ ಆಗಮಿಸಿ ತನಿಖೆ ಆರಂಭಿಸಿದ್ದರು

ಇದೇ ವೇಳೆ ಉತ್ತರ ತಂಜಾವೂರಿನ ಬಿಜೆಪಿ ಅಧ್ಯಕ್ಷ ಸತೀಶ್ ಕುಮಾರ್ ಮತ್ತು ಇತರ ಹಿಂದೂ ಮುನ್ನಣಿ ಪದಾಧಿಕಾರಿಗಳು ಕೂಡಾ ಸಕ್ಕರೆಪಾಣಿ ಮನೆಗೆ ಭೇಟಿ ನೀಡಿ, ಪೊಲೀಸರೊಂದಿಗೆ ಸಂವಾದ ನಡೆಸಿದ್ದು, ತಕ್ಷಣದ ಕ್ರಮಕ್ಕೆ ಒತ್ತಾಯಿಸಿದ್ದರು.

ಆದರೆ, ತನಿಖಾಧಿಕಾರಿಗಳು ಸಕ್ಕರೆಪಾಣಿ ಮತ್ತು ಅವನ ಹೇಳಿಕೆಗಳ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದರು. ಈ ವೇಳೆ ಅವನ ಮನೆಯನ್ನೂ ಶೋಧಿಸಿದ್ದರು. ಆತನನ್ನು ಕೂಡಾ ವಿಚಾರಣೆಗೊಳಪಡಿಸಿದ ನಂತರ, ಆತನ ಮನೆಗೆ ಎಸೆದಿದ್ದ ಬಾಟಲಿಯಲ್ಲಿ ಬಳಸಲಾದ ವಿಕ್ಸ್ ಮತ್ತು ಪೊಲೀಸರು ಆತನ ಮನೆಯಿಂದ ವಶಪಡಿಸಿದ ಬಟ್ಟೆಗೆ ಹೊಂದಿಕೆಯಾಗಿರುವುದನ್ನು ಪೊಲೀಸರು ಕಂಡುಕೊಂಡಿದ್ದರು. ಈ ಮಾಹಿತಿಯನ್ನು ಬಳಸಿಕೊಂಡು ಪೊಲೀಸರು ಆತನನ್ನು ಮತ್ತೆ ವಿಚಾರಣೆಗೆ ಒಳಪಡಿಸಿದಾಗ, ಪ್ರಚಾರಕ್ಕಾಗಿ ಪೆಟ್ರೋಲ್ ಬಾಂಬ್ ದಾಳಿ ನಡೆದಿದೆ ಎಂದು ಬಿಂಬಿಸಿದ್ದಾಗಿ ಸಕ್ಕರೆರಾಣಿ ತಪ್ಪೊಪ್ಪಿಕೊಂಡಿದ್ದಾನೆ.

ಇದನ್ನೂ ಓದಿ: ಗುಜರಾತ್‌: ಬಂಡಾಯವೆದ್ದ 12 ನಾಯಕರಿಗೆ ಬಿಜೆಪಿಯಿಂದ ಗೇಟ್‌ಪಾಸ್‌

ವೈಯಕ್ತಿಕ ಭದ್ರತಾ ಅಧಿಕಾರಿ (ಪಿಎಸ್‌ಒ) ಪಡೆಯುವ ಉದ್ದೇಶವು ಈ ಬಾಂಬ್ ದಾಳಿಯಲ್ಲಿ ಇತ್ತು ಎಂದು ವರದಿಗಳು ಉಲ್ಲೇಖಿಸಿವೆ. ಜೀವ ಬೆದರಿಕೆ ಇದೆ ಎಂದು ಈ ಹಿಂದೆ ಹಲವಾರು ಮುಖಂಡರಿಗೆ ಮತ್ತು ಬಲಪಂಥೀಯ ಹಿಂದೂ ಸಂಘಟನೆಗಳ ಸದಸ್ಯರಿಗೆ ವೈಯಕ್ತಿಕ ಭದ್ರತಾ ಅಧಿಕಾರಿ (ಪಿಎಸ್‌ಒ) ಒದಗಿಸಲಾಗಿತ್ತು.

ತಪ್ಪೊಪ್ಪಿಕೊಂಡ ನಂತರ ಮೆಲಕಾವೇರಿ ಗ್ರಾಮ ಆಡಳಿತಾಧಿಕಾರಿ (ವಿಎಒ) ತಿರುಜ್ಞಾನಸಂಬಂಧಮ್ ಅವರು ಸಕ್ಕರೆಪಾಣಿ ವಿರುದ್ಧ ದೂರು ದಾಖಲಿಸಿದ್ದಾರೆ. ಇದರ ನಂತರ ಪೊಲೀಸರು ಆತನ ವಿರುದ್ಧ ಐಪಿಸಿ ಸೆಕ್ಷನ್ 436 (ಬೆಂಕಿ ಅಥವಾ ಸ್ಫೋಟಕ ವಸ್ತುವಿನಿಂದ ಕಿಡಿಗೇಡಿತನ), 53 (ಕಠಿಣ ಸೆರೆವಾಸ), 153 (ಗಲಭೆಗೆ ಪ್ರಚೋದನೆ ಉಂಟುಮಾಡುವ ಚಟುವಟಿಕೆಗಳಲ್ಲಿ ತೊಡಗಿರುವುದು), 153 ಎ (ಧಾರ್ಮಿಕ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು), 504 (ಶಾಂತಿಯನ್ನು ಉಲ್ಲಂಘಿಸುವ ಉದ್ದೇಶಪೂರ್ವಕ ಕೃತ್ಯ) ಮತ್ತು 505(2) (ಸಾರ್ವಜನಿಕ ಕಿಡಿಗೇಡಿತನವನ್ನು ಉಂಟುಮಾಡುವುದು) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದು, ಅವರನ್ನು ಬಂಧಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಎಲೆಕ್ಷನ್ ಹತ್ತಿರ ಬರುವಾಗ ಇಂತಹ ಪ್ರಚೋದೀತ ಘಟನೆಗಳು ಸರ್ವೇಸಾಮಾನ್ಯ ಅದು ನಿಗದಿತವಾಗಿ ಇಂತಹ ಸಂಘಟನೆಗಳೇ ಹೆಚ್ಚಾಗಿ ಮಾಡುವುದು ಅಂತ ಸಾಮಾನ್ಯವಾಗಿ ಗೊತ್ತಿದೆ . ಹಾಗಾಗಿ ಮೊದಲು ಮತದಾರರು ಇದನ್ನು ಅರ್ಥ ಮಾಡಿಕೊಳ್ಳುವುದು ಬಹಳ ಅವಶ್ಯಕ. ಪೊಲೀಸರು ಈ ಬಗ್ಗೆ ತನಿಖೆ ಮಾಡುತ್ತಾರೆ ಅವರಿಗೆ ಇವೆಲ್ಲ ಹೆಚ್ಚಿನ ಕೆಲಸ ಇಂಥವರ ಮೇಲೆ ಮೊದಲೇ ಪೊಲೀಸ್ ನವರು ಒಂದು ಕಣ್ಣು ಇಡುವುದೇ ಒಳ್ಳೆಯದು.

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...