Homeರಾಷ್ಟ್ರೀಯಕೋಮುಗಲಭೆಗೆ ಹುನ್ನಾರ: ತನ್ನ ಮನೆಗೆ ತಾನೇ ಬಾಂಬ್ ಎಸೆದ RSS ಅಂಗಸಂಸ್ಥೆ ಹಿಂದೂ ಮುನ್ನಣಿಯ ನಾಯಕ

ಕೋಮುಗಲಭೆಗೆ ಹುನ್ನಾರ: ತನ್ನ ಮನೆಗೆ ತಾನೇ ಬಾಂಬ್ ಎಸೆದ RSS ಅಂಗಸಂಸ್ಥೆ ಹಿಂದೂ ಮುನ್ನಣಿಯ ನಾಯಕ

- Advertisement -
- Advertisement -

ಆರೆಸ್ಸೆಸ್‌‌‌‌ನ ಅಂಗಸಂಸ್ಥೆಯಾದ ‘ಹಿಂದೂ ಮುನ್ನಣಿ’ಯ ದುಷ್ಕರ್ಮಿಯೊಬ್ಬ ಕೋಮು ಗಲಭೆ ನಡಸುವ ಉದ್ದೇಶದಿಂದ ತನ್ನ ಮನೆಗೆ ತಾನೇ ಬಾಂಬ್ ಎಸೆದು ತಮಿಳುನಾಡು ಪೊಲೀಸರಿಂದ ಬಂಧನಕ್ಕೆ ಒಳಗಾಗಿದ್ದಾನೆ. ಕೋಮು ಗಲಭೆ ನಡೆಸುವುದಕ್ಕಾಗಿ ‘ತನ್ನ ಮನೆಯ ಮೇಲೆ ಬಾಂಬ್ ದಾಳಿ’ ನಡೆದಿದೆ ಎಂದು ದುಷ್ಕರ್ಮಿಯು ಸುಳ್ಳು ದೂರು ನೀಡಿದ್ದನು.

ಘಟನೆಯು ತಮಿಳುನಾಡಿನ ಕುಂಭಕೋಣಂನಲ್ಲಿ ನವೆಂಬರ್ 21 ರ ಸೋಮವಾರ ನಡೆದಿದ್ದು, ಬಂಧನಕ್ಕೊಳಗಾದ ದುಷ್ಕರ್ಮಿಯನ್ನು ಹಿಂದೂ ಮುನ್ನಣಿ ಕುಂಭಕೋಣಂ ನಗರದ ಕಾರ್ಯದರ್ಶಿಯಾದ ಸಕ್ಕರೆಪಾಣಿ (40) ಎಂದು ಗುರುತಿಸಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಸೋಮವಾರ ಬೆಳಿಗ್ಗೆ ಅಪರಿಚಿತ ದುಷ್ಕರ್ಮಿಗಳು ತಮ್ಮ ಮನೆ ಮುಂದೆ ಪೆಟ್ರೋಲ್ ಬಾಂಬ್ ಎಸೆದಿದ್ದಾರೆ ಎಂದು ದುಷ್ಕರ್ಮಿ ಕುಂಭಕೋಣಂ ಪೂರ್ವ ಪೊಲೀಸ್ ಠಾಣೆಗೆ ಕರೆ ಮಾಡಿದ್ದನು. ಮನೆಯ ಮುಂದೆ ದೊಡ್ಡ ಶಬ್ದ ಉಂಟಾಗಿದ್ದು, ಮನೆಯ ಹೊರಗೆ ಒಡೆದ ಗಾಜಿನ ತುಂಡುಗಳು ಕಂಡುಬಂದಿವೆ ಎಂದು ದೂರಿದ್ದನು.

ಇದನ್ನೂ ಓದಿ: ಪಕ್ಷದ ಮಹಿಳಾ ನಾಯಕಿಗೆ ಅಶ್ಲೀಲ ನಿಂದನೆ, ಕೊಲೆ ಬೆದರಿಕೆ ಹಾಕಿದ ತಮಿಳುನಾಡು ಬಿಜೆಪಿ ನಾಯಕ

ಘಟನೆಯ ಬಗ್ಗೆ ತಿಳಿದ ಕುಂಭಕೋಣಂ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ರವಳಿ ಪ್ರಿಯಾ, ಸಹಾಯಕ ಪೊಲೀಸ್ ವರಿಷ್ಠಾಧಿಕಾರಿಗಳಾದ (ಎಡಿಎಸ್‌ಪಿ) ಜಯಚಂದ್ರನ್ ಮತ್ತು ಸ್ವಾಮಿನಾಥನ್ ಮತ್ತು ವಿಧಿವಿಜ್ಞಾನ ಇಲಾಖೆಯ ಸಹಾಯಕ ನಿರ್ದೇಶಕ ರಾಮಚಂದ್ರನ್ ಅವರು ಸಕ್ಕರೆಪಾಣಿ ಮನೆಗೆ ಆಗಮಿಸಿ ತನಿಖೆ ಆರಂಭಿಸಿದ್ದರು

ಇದೇ ವೇಳೆ ಉತ್ತರ ತಂಜಾವೂರಿನ ಬಿಜೆಪಿ ಅಧ್ಯಕ್ಷ ಸತೀಶ್ ಕುಮಾರ್ ಮತ್ತು ಇತರ ಹಿಂದೂ ಮುನ್ನಣಿ ಪದಾಧಿಕಾರಿಗಳು ಕೂಡಾ ಸಕ್ಕರೆಪಾಣಿ ಮನೆಗೆ ಭೇಟಿ ನೀಡಿ, ಪೊಲೀಸರೊಂದಿಗೆ ಸಂವಾದ ನಡೆಸಿದ್ದು, ತಕ್ಷಣದ ಕ್ರಮಕ್ಕೆ ಒತ್ತಾಯಿಸಿದ್ದರು.

ಆದರೆ, ತನಿಖಾಧಿಕಾರಿಗಳು ಸಕ್ಕರೆಪಾಣಿ ಮತ್ತು ಅವನ ಹೇಳಿಕೆಗಳ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದರು. ಈ ವೇಳೆ ಅವನ ಮನೆಯನ್ನೂ ಶೋಧಿಸಿದ್ದರು. ಆತನನ್ನು ಕೂಡಾ ವಿಚಾರಣೆಗೊಳಪಡಿಸಿದ ನಂತರ, ಆತನ ಮನೆಗೆ ಎಸೆದಿದ್ದ ಬಾಟಲಿಯಲ್ಲಿ ಬಳಸಲಾದ ವಿಕ್ಸ್ ಮತ್ತು ಪೊಲೀಸರು ಆತನ ಮನೆಯಿಂದ ವಶಪಡಿಸಿದ ಬಟ್ಟೆಗೆ ಹೊಂದಿಕೆಯಾಗಿರುವುದನ್ನು ಪೊಲೀಸರು ಕಂಡುಕೊಂಡಿದ್ದರು. ಈ ಮಾಹಿತಿಯನ್ನು ಬಳಸಿಕೊಂಡು ಪೊಲೀಸರು ಆತನನ್ನು ಮತ್ತೆ ವಿಚಾರಣೆಗೆ ಒಳಪಡಿಸಿದಾಗ, ಪ್ರಚಾರಕ್ಕಾಗಿ ಪೆಟ್ರೋಲ್ ಬಾಂಬ್ ದಾಳಿ ನಡೆದಿದೆ ಎಂದು ಬಿಂಬಿಸಿದ್ದಾಗಿ ಸಕ್ಕರೆರಾಣಿ ತಪ್ಪೊಪ್ಪಿಕೊಂಡಿದ್ದಾನೆ.

ಇದನ್ನೂ ಓದಿ: ಗುಜರಾತ್‌: ಬಂಡಾಯವೆದ್ದ 12 ನಾಯಕರಿಗೆ ಬಿಜೆಪಿಯಿಂದ ಗೇಟ್‌ಪಾಸ್‌

ವೈಯಕ್ತಿಕ ಭದ್ರತಾ ಅಧಿಕಾರಿ (ಪಿಎಸ್‌ಒ) ಪಡೆಯುವ ಉದ್ದೇಶವು ಈ ಬಾಂಬ್ ದಾಳಿಯಲ್ಲಿ ಇತ್ತು ಎಂದು ವರದಿಗಳು ಉಲ್ಲೇಖಿಸಿವೆ. ಜೀವ ಬೆದರಿಕೆ ಇದೆ ಎಂದು ಈ ಹಿಂದೆ ಹಲವಾರು ಮುಖಂಡರಿಗೆ ಮತ್ತು ಬಲಪಂಥೀಯ ಹಿಂದೂ ಸಂಘಟನೆಗಳ ಸದಸ್ಯರಿಗೆ ವೈಯಕ್ತಿಕ ಭದ್ರತಾ ಅಧಿಕಾರಿ (ಪಿಎಸ್‌ಒ) ಒದಗಿಸಲಾಗಿತ್ತು.

ತಪ್ಪೊಪ್ಪಿಕೊಂಡ ನಂತರ ಮೆಲಕಾವೇರಿ ಗ್ರಾಮ ಆಡಳಿತಾಧಿಕಾರಿ (ವಿಎಒ) ತಿರುಜ್ಞಾನಸಂಬಂಧಮ್ ಅವರು ಸಕ್ಕರೆಪಾಣಿ ವಿರುದ್ಧ ದೂರು ದಾಖಲಿಸಿದ್ದಾರೆ. ಇದರ ನಂತರ ಪೊಲೀಸರು ಆತನ ವಿರುದ್ಧ ಐಪಿಸಿ ಸೆಕ್ಷನ್ 436 (ಬೆಂಕಿ ಅಥವಾ ಸ್ಫೋಟಕ ವಸ್ತುವಿನಿಂದ ಕಿಡಿಗೇಡಿತನ), 53 (ಕಠಿಣ ಸೆರೆವಾಸ), 153 (ಗಲಭೆಗೆ ಪ್ರಚೋದನೆ ಉಂಟುಮಾಡುವ ಚಟುವಟಿಕೆಗಳಲ್ಲಿ ತೊಡಗಿರುವುದು), 153 ಎ (ಧಾರ್ಮಿಕ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು), 504 (ಶಾಂತಿಯನ್ನು ಉಲ್ಲಂಘಿಸುವ ಉದ್ದೇಶಪೂರ್ವಕ ಕೃತ್ಯ) ಮತ್ತು 505(2) (ಸಾರ್ವಜನಿಕ ಕಿಡಿಗೇಡಿತನವನ್ನು ಉಂಟುಮಾಡುವುದು) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದು, ಅವರನ್ನು ಬಂಧಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಎಲೆಕ್ಷನ್ ಹತ್ತಿರ ಬರುವಾಗ ಇಂತಹ ಪ್ರಚೋದೀತ ಘಟನೆಗಳು ಸರ್ವೇಸಾಮಾನ್ಯ ಅದು ನಿಗದಿತವಾಗಿ ಇಂತಹ ಸಂಘಟನೆಗಳೇ ಹೆಚ್ಚಾಗಿ ಮಾಡುವುದು ಅಂತ ಸಾಮಾನ್ಯವಾಗಿ ಗೊತ್ತಿದೆ . ಹಾಗಾಗಿ ಮೊದಲು ಮತದಾರರು ಇದನ್ನು ಅರ್ಥ ಮಾಡಿಕೊಳ್ಳುವುದು ಬಹಳ ಅವಶ್ಯಕ. ಪೊಲೀಸರು ಈ ಬಗ್ಗೆ ತನಿಖೆ ಮಾಡುತ್ತಾರೆ ಅವರಿಗೆ ಇವೆಲ್ಲ ಹೆಚ್ಚಿನ ಕೆಲಸ ಇಂಥವರ ಮೇಲೆ ಮೊದಲೇ ಪೊಲೀಸ್ ನವರು ಒಂದು ಕಣ್ಣು ಇಡುವುದೇ ಒಳ್ಳೆಯದು.

LEAVE A REPLY

Please enter your comment!
Please enter your name here

- Advertisment -

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...

‘ನನ್ನ ಮೌನವನ್ನು ಸೋಲು ಎಂದು ತಿಳಿಯಬೇಡಿ’’: ರಾಜ್ಯಸಭೆಯಲ್ಲಿ ಪದಚ್ಯುತಿಯ ನಂತರ ಎಎಪಿಗೆ ತಿರಗೇಟು ನೀಡಿದ ಸಂಸದ ರಾಘವ್ ಛಡ್ಡಾ

ರಾಜ್ಯಸಭೆಯಲ್ಲಿ ಪಕ್ಷದ ಉಪ ನಾಯಕನ ಸ್ಥಾನದಿಂದ ತೆಗೆದುಹಾಕಲ್ಪಟ್ಟ ಒಂದು ದಿನದ ನಂತರ ಆಮ್ ಆದ್ಮಿ ಪಕ್ಷದ ಸಂಸದ ರಾಘವ್ ಛಡ್ಡಾ ಅವರು ಶುಕ್ರವಾರ "ನನ್ನ ಬಾಯಿ ಮುಚ್ಚಿಸಬಹುದು, ಸೋಲಿಸಲು ಸಾಧ್ಯವಿಲ್ಲ" ಎಂದು ಹೇಳಿದ್ದಾರೆ. ಪಕ್ಷದ...

ಮಾಲ್ಡಾ ನ್ಯಾಯಾಂಗ ಅಧಿಕಾರಿಗಳ ಘೇರಾವ್ ಪ್ರಕರಣದಲ್ಲಿ 17 ಜನರ ಬಂಧನ: ತನಿಖೆಯನ್ನು ಎನ್‌ಐಎಗೆ ಹಸ್ತಾಂತರಿಸಿದ ಇಸಿ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಏಳು ನ್ಯಾಯಾಂಗ ಅಧಿಕಾರಿಗಳ ಘೇರಾವ್‌ನಲ್ಲಿ ಭಾಗಿಯಾಗಿದ್ದಕ್ಕಾಗಿ ಚುನಾವಣಾ ಅಭ್ಯರ್ಥಿ ಸೇರಿದಂತೆ ಕನಿಷ್ಠ 17 ಜನರನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ ಎಂದು...

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...