Homeರಾಷ್ಟ್ರೀಯಕೋಮುಗಲಭೆಗೆ ಹುನ್ನಾರ: ತನ್ನ ಮನೆಗೆ ತಾನೇ ಬಾಂಬ್ ಎಸೆದ RSS ಅಂಗಸಂಸ್ಥೆ ಹಿಂದೂ ಮುನ್ನಣಿಯ ನಾಯಕ

ಕೋಮುಗಲಭೆಗೆ ಹುನ್ನಾರ: ತನ್ನ ಮನೆಗೆ ತಾನೇ ಬಾಂಬ್ ಎಸೆದ RSS ಅಂಗಸಂಸ್ಥೆ ಹಿಂದೂ ಮುನ್ನಣಿಯ ನಾಯಕ

- Advertisement -
- Advertisement -

ಆರೆಸ್ಸೆಸ್‌‌‌‌ನ ಅಂಗಸಂಸ್ಥೆಯಾದ ‘ಹಿಂದೂ ಮುನ್ನಣಿ’ಯ ದುಷ್ಕರ್ಮಿಯೊಬ್ಬ ಕೋಮು ಗಲಭೆ ನಡಸುವ ಉದ್ದೇಶದಿಂದ ತನ್ನ ಮನೆಗೆ ತಾನೇ ಬಾಂಬ್ ಎಸೆದು ತಮಿಳುನಾಡು ಪೊಲೀಸರಿಂದ ಬಂಧನಕ್ಕೆ ಒಳಗಾಗಿದ್ದಾನೆ. ಕೋಮು ಗಲಭೆ ನಡೆಸುವುದಕ್ಕಾಗಿ ‘ತನ್ನ ಮನೆಯ ಮೇಲೆ ಬಾಂಬ್ ದಾಳಿ’ ನಡೆದಿದೆ ಎಂದು ದುಷ್ಕರ್ಮಿಯು ಸುಳ್ಳು ದೂರು ನೀಡಿದ್ದನು.

ಘಟನೆಯು ತಮಿಳುನಾಡಿನ ಕುಂಭಕೋಣಂನಲ್ಲಿ ನವೆಂಬರ್ 21 ರ ಸೋಮವಾರ ನಡೆದಿದ್ದು, ಬಂಧನಕ್ಕೊಳಗಾದ ದುಷ್ಕರ್ಮಿಯನ್ನು ಹಿಂದೂ ಮುನ್ನಣಿ ಕುಂಭಕೋಣಂ ನಗರದ ಕಾರ್ಯದರ್ಶಿಯಾದ ಸಕ್ಕರೆಪಾಣಿ (40) ಎಂದು ಗುರುತಿಸಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಸೋಮವಾರ ಬೆಳಿಗ್ಗೆ ಅಪರಿಚಿತ ದುಷ್ಕರ್ಮಿಗಳು ತಮ್ಮ ಮನೆ ಮುಂದೆ ಪೆಟ್ರೋಲ್ ಬಾಂಬ್ ಎಸೆದಿದ್ದಾರೆ ಎಂದು ದುಷ್ಕರ್ಮಿ ಕುಂಭಕೋಣಂ ಪೂರ್ವ ಪೊಲೀಸ್ ಠಾಣೆಗೆ ಕರೆ ಮಾಡಿದ್ದನು. ಮನೆಯ ಮುಂದೆ ದೊಡ್ಡ ಶಬ್ದ ಉಂಟಾಗಿದ್ದು, ಮನೆಯ ಹೊರಗೆ ಒಡೆದ ಗಾಜಿನ ತುಂಡುಗಳು ಕಂಡುಬಂದಿವೆ ಎಂದು ದೂರಿದ್ದನು.

ಇದನ್ನೂ ಓದಿ: ಪಕ್ಷದ ಮಹಿಳಾ ನಾಯಕಿಗೆ ಅಶ್ಲೀಲ ನಿಂದನೆ, ಕೊಲೆ ಬೆದರಿಕೆ ಹಾಕಿದ ತಮಿಳುನಾಡು ಬಿಜೆಪಿ ನಾಯಕ

ಘಟನೆಯ ಬಗ್ಗೆ ತಿಳಿದ ಕುಂಭಕೋಣಂ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ರವಳಿ ಪ್ರಿಯಾ, ಸಹಾಯಕ ಪೊಲೀಸ್ ವರಿಷ್ಠಾಧಿಕಾರಿಗಳಾದ (ಎಡಿಎಸ್‌ಪಿ) ಜಯಚಂದ್ರನ್ ಮತ್ತು ಸ್ವಾಮಿನಾಥನ್ ಮತ್ತು ವಿಧಿವಿಜ್ಞಾನ ಇಲಾಖೆಯ ಸಹಾಯಕ ನಿರ್ದೇಶಕ ರಾಮಚಂದ್ರನ್ ಅವರು ಸಕ್ಕರೆಪಾಣಿ ಮನೆಗೆ ಆಗಮಿಸಿ ತನಿಖೆ ಆರಂಭಿಸಿದ್ದರು

ಇದೇ ವೇಳೆ ಉತ್ತರ ತಂಜಾವೂರಿನ ಬಿಜೆಪಿ ಅಧ್ಯಕ್ಷ ಸತೀಶ್ ಕುಮಾರ್ ಮತ್ತು ಇತರ ಹಿಂದೂ ಮುನ್ನಣಿ ಪದಾಧಿಕಾರಿಗಳು ಕೂಡಾ ಸಕ್ಕರೆಪಾಣಿ ಮನೆಗೆ ಭೇಟಿ ನೀಡಿ, ಪೊಲೀಸರೊಂದಿಗೆ ಸಂವಾದ ನಡೆಸಿದ್ದು, ತಕ್ಷಣದ ಕ್ರಮಕ್ಕೆ ಒತ್ತಾಯಿಸಿದ್ದರು.

ಆದರೆ, ತನಿಖಾಧಿಕಾರಿಗಳು ಸಕ್ಕರೆಪಾಣಿ ಮತ್ತು ಅವನ ಹೇಳಿಕೆಗಳ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದರು. ಈ ವೇಳೆ ಅವನ ಮನೆಯನ್ನೂ ಶೋಧಿಸಿದ್ದರು. ಆತನನ್ನು ಕೂಡಾ ವಿಚಾರಣೆಗೊಳಪಡಿಸಿದ ನಂತರ, ಆತನ ಮನೆಗೆ ಎಸೆದಿದ್ದ ಬಾಟಲಿಯಲ್ಲಿ ಬಳಸಲಾದ ವಿಕ್ಸ್ ಮತ್ತು ಪೊಲೀಸರು ಆತನ ಮನೆಯಿಂದ ವಶಪಡಿಸಿದ ಬಟ್ಟೆಗೆ ಹೊಂದಿಕೆಯಾಗಿರುವುದನ್ನು ಪೊಲೀಸರು ಕಂಡುಕೊಂಡಿದ್ದರು. ಈ ಮಾಹಿತಿಯನ್ನು ಬಳಸಿಕೊಂಡು ಪೊಲೀಸರು ಆತನನ್ನು ಮತ್ತೆ ವಿಚಾರಣೆಗೆ ಒಳಪಡಿಸಿದಾಗ, ಪ್ರಚಾರಕ್ಕಾಗಿ ಪೆಟ್ರೋಲ್ ಬಾಂಬ್ ದಾಳಿ ನಡೆದಿದೆ ಎಂದು ಬಿಂಬಿಸಿದ್ದಾಗಿ ಸಕ್ಕರೆರಾಣಿ ತಪ್ಪೊಪ್ಪಿಕೊಂಡಿದ್ದಾನೆ.

ಇದನ್ನೂ ಓದಿ: ಗುಜರಾತ್‌: ಬಂಡಾಯವೆದ್ದ 12 ನಾಯಕರಿಗೆ ಬಿಜೆಪಿಯಿಂದ ಗೇಟ್‌ಪಾಸ್‌

ವೈಯಕ್ತಿಕ ಭದ್ರತಾ ಅಧಿಕಾರಿ (ಪಿಎಸ್‌ಒ) ಪಡೆಯುವ ಉದ್ದೇಶವು ಈ ಬಾಂಬ್ ದಾಳಿಯಲ್ಲಿ ಇತ್ತು ಎಂದು ವರದಿಗಳು ಉಲ್ಲೇಖಿಸಿವೆ. ಜೀವ ಬೆದರಿಕೆ ಇದೆ ಎಂದು ಈ ಹಿಂದೆ ಹಲವಾರು ಮುಖಂಡರಿಗೆ ಮತ್ತು ಬಲಪಂಥೀಯ ಹಿಂದೂ ಸಂಘಟನೆಗಳ ಸದಸ್ಯರಿಗೆ ವೈಯಕ್ತಿಕ ಭದ್ರತಾ ಅಧಿಕಾರಿ (ಪಿಎಸ್‌ಒ) ಒದಗಿಸಲಾಗಿತ್ತು.

ತಪ್ಪೊಪ್ಪಿಕೊಂಡ ನಂತರ ಮೆಲಕಾವೇರಿ ಗ್ರಾಮ ಆಡಳಿತಾಧಿಕಾರಿ (ವಿಎಒ) ತಿರುಜ್ಞಾನಸಂಬಂಧಮ್ ಅವರು ಸಕ್ಕರೆಪಾಣಿ ವಿರುದ್ಧ ದೂರು ದಾಖಲಿಸಿದ್ದಾರೆ. ಇದರ ನಂತರ ಪೊಲೀಸರು ಆತನ ವಿರುದ್ಧ ಐಪಿಸಿ ಸೆಕ್ಷನ್ 436 (ಬೆಂಕಿ ಅಥವಾ ಸ್ಫೋಟಕ ವಸ್ತುವಿನಿಂದ ಕಿಡಿಗೇಡಿತನ), 53 (ಕಠಿಣ ಸೆರೆವಾಸ), 153 (ಗಲಭೆಗೆ ಪ್ರಚೋದನೆ ಉಂಟುಮಾಡುವ ಚಟುವಟಿಕೆಗಳಲ್ಲಿ ತೊಡಗಿರುವುದು), 153 ಎ (ಧಾರ್ಮಿಕ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು), 504 (ಶಾಂತಿಯನ್ನು ಉಲ್ಲಂಘಿಸುವ ಉದ್ದೇಶಪೂರ್ವಕ ಕೃತ್ಯ) ಮತ್ತು 505(2) (ಸಾರ್ವಜನಿಕ ಕಿಡಿಗೇಡಿತನವನ್ನು ಉಂಟುಮಾಡುವುದು) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದು, ಅವರನ್ನು ಬಂಧಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಎಲೆಕ್ಷನ್ ಹತ್ತಿರ ಬರುವಾಗ ಇಂತಹ ಪ್ರಚೋದೀತ ಘಟನೆಗಳು ಸರ್ವೇಸಾಮಾನ್ಯ ಅದು ನಿಗದಿತವಾಗಿ ಇಂತಹ ಸಂಘಟನೆಗಳೇ ಹೆಚ್ಚಾಗಿ ಮಾಡುವುದು ಅಂತ ಸಾಮಾನ್ಯವಾಗಿ ಗೊತ್ತಿದೆ . ಹಾಗಾಗಿ ಮೊದಲು ಮತದಾರರು ಇದನ್ನು ಅರ್ಥ ಮಾಡಿಕೊಳ್ಳುವುದು ಬಹಳ ಅವಶ್ಯಕ. ಪೊಲೀಸರು ಈ ಬಗ್ಗೆ ತನಿಖೆ ಮಾಡುತ್ತಾರೆ ಅವರಿಗೆ ಇವೆಲ್ಲ ಹೆಚ್ಚಿನ ಕೆಲಸ ಇಂಥವರ ಮೇಲೆ ಮೊದಲೇ ಪೊಲೀಸ್ ನವರು ಒಂದು ಕಣ್ಣು ಇಡುವುದೇ ಒಳ್ಳೆಯದು.

LEAVE A REPLY

Please enter your comment!
Please enter your name here

- Advertisment -

ಪೆಂಗ್ವಿನ್ ಇಂಡಿಯಾ ಹಿಂದೆ ಸರಿದ ನಂತರ ಸೋನಿಯಾ ಗಾಂಧಿ ಅವರ ಆತ್ಮಚರಿತ್ರೆ ‘ಬಿಲಾಂಗಿಂಗ್’ ಅನ್ನು ಪ್ರಕಟಿಸಲಿರುವ ‘ಹಾರ್ಪರ್‌ಕಾಲಿನ್ಸ್’ 

ನವದೆಹಲಿ: ಕಾಂಗ್ರೆಸ್‌ನ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಚರಿತ್ರೆ ‘ಬಿಲಾಂಗಿಂಗ್: ಎ ಜರ್ನಿ ಆಫ್ ಲವ್’ ಇದೀಗ ಭಾರತದಲ್ಲಿ ಹಾರ್ಪರ್‌ಕಾಲಿನ್ಸ್ ಇಂಡಿಯಾ ಮೂಲಕ ಪ್ರಕಟವಾಗಲಿದೆ. ಪೆಂಗ್ವಿನ್ ರ‍್ಯಾಂಡಮ್ ಹೌಸ್ ಇಂಡಿಯಾ...

ಜೈಲಿನಲ್ಲಿ ಕಂಬಿ ಎಣಿಸುತ್ತಿರುವ 25 ಕ್ರಿಮಿನಲ್‌ಗಳು, ದೆಹಲಿಯ ಜಂತರ್-ಮಂತರ್‌ಗೆ ಬರುಲು ಹೇಗೆ ಸಾಧ? ತನಿಖಾ ವರದಿಯಲ್ಲಿ ಬಯಲಾಯ್ತು ಪೊಲೀಸರ ಕುತಂತ್ರ

ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ವಿರೋಧಿ ಪ್ರತಿಭಟನೆ ವೇಳೆ ದೆಹಲಿ ಪೊಲೀಸರು ಬಳಸಿದ್ದ ‘ಅಟೋಮೇಟೆಡ್ ಫೇಶಿಯಲ್ ರೆಕಗ್ನಿಷನ್ ಸಿಸ್ಟಮ್’ (AFRS - ಮುಖಚರ್ಯೆ ಗುರುತಿಸುವ ತಂತ್ರಜ್ಞಾನ) ಗಂಭೀರ...

ಪಶ್ಚಿಮ ಬಂಗಾಳ: ವರ್ಷದಲ್ಲಿ 1,000 ಆರ್‌ಎಸ್‌ಎಸ್‌ ಶಾಲೆ: ಶಿಕ್ಷಣ ವ್ಯವಸ್ಥೆಯನ್ನೇ ‘ರಾಷ್ಟ್ರೀಯತಾವಾದಿ’ಗೊಳಿಸುವುದಾಗಿ ಘೋಷಿಸಿದ ಸುವೇಂದು ಅಧಿಕಾರಿ

ಕೋಲ್ಕತ್ತಾ: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಶೈಕ್ಷಣಿಕ ವಿಭಾಗವಾಗಿರುವ ವಿದ್ಯಾ ಭಾರತಿಯ ಶಾಲೆಗಳ ಸಂಖ್ಯೆಯನ್ನು ಪಶ್ಚಿಮ ಬಂಗಾಳದಲ್ಲಿ ಭಾರಿ ಪ್ರಮಾಣದಲ್ಲಿ ಹೆಚ್ಚಿಸುವುದಾಗಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಘೋಷಿಸಿದ್ದಾರೆ. ರಾಜ್ಯದ ಪ್ರತಿಯೊಂದು ಜಿಲ್ಲೆ, ಪುರಸಭೆ...

SIR ನ್ಯಾಯಸಮ್ಮತವಾಗಿಲ್ಲ ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ಆತಂಕ

ಭಾರತೀಯ ಚುನಾವಣಾ ಆಯೋಗವು (ಇಸಿಐ) ದೇಶಾದ್ಯಂತ ಕೈಗೊಂಡಿರುವ ಮತದಾರರ ಪಟ್ಟಿಯ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯು ಶಾಸನಾತ್ಮಕವಾಗಿ ಕಾನೂನುಬದ್ಧವಾಗಿದ್ದರೂ, ನೈತಿಕವಾಗಿ ನ್ಯಾಯಸಮ್ಮತವಾಗಿಲ್ಲ ಎಂದು ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ತೀವ್ರ...

ಜಂತರ್ ಮಂತರ್ ಹಲ್ಲೆ: ‘ತಲೆಬುರುಡೆ ಒಡೆದೆ, ಜೈಲಿಗೆ ಹೋಗಲಿಲ್ಲ; ಕಪಿಲ್ ಮಿಶ್ರಾ ನನ್ನ ಅಣ್ಣ’: ಬಿಜೆಪಿ ಬೆಂಬಲದ ಬಗ್ಗೆ ದಾಳಿ ಆರೋಪಿ ಬಹಿರಂಗ ಹೇಳಿಕೆ

ನವದೆಹಲಿ: ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆಯ ವೇಳೆ ಪ್ರತಿಭಟನಾಕಾರಿಯ ತಂದೆಯ ಮೇಲೆ ನಡೆದ ಹಲ್ಲೆ ಪ್ರಕರಣ ಇದೀಗ ರಾಜಕೀಯ ವಿವಾದದ ಕೇಂದ್ರವಾಗಿದೆ. ಪ್ರಕರಣದ ಆರೋಪಿಯಾಗಿರುವ ಸ್ವತಃ ಬಲಪಂಥೀಯ ಹಾಗೂ ಹಿಂದೂತ್ವ ಕಾರ್ಯಕರ್ತ...

ದೆಹಲಿ: ‘ಖಾನ್’ ಎಂಬ ಹೆಸರಿನ ಕಾರಣಕ್ಕೆ ಪತ್ರಕರ್ತೆಯರ ಮೇಲೆ ಹಲ್ಲೆ ಆರೋಪ, FIR ದಾಖಲಿಸುವಂತೆ ಸಾಕೇತ್ ಠಾಣೆಯಲ್ಲಿ ಧರಣಿ

ದೆಹಲಿಯ ಸಾಕೇತ್ ಮ್ಯಾಕ್ಸ್ ಆಸ್ಪತ್ರೆಯ ಹೊಸ ವಿಭಾಗದ ಉದ್ಘಾಟನಾ ಕಾರ್ಯಕ್ರಮದ ವರದಿಗೆ ತೆರಳಿದ್ದ '4PM ನ್ಯೂಸ್ ನೆಟ್‌ವರ್ಕ್'ನ ಮುಸ್ಲಿಂ ಮಹಿಳಾ ಪತ್ರಕರ್ತೆಯರಾದ ಶಾಹೀನ್ ಖಾನ್ ಮತ್ತು ನಫೀಸಾ ಖಾನ್ ಅವರ ಮೇಲೆ ದಿಲ್ಲಿ...

ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದ್ದಕ್ಕೆ ದೆಹಲಿ ಪೊಲೀಸರಿಂದ ಬಂಧನ-ಹಲ್ಲೆ: ಇಬ್ಬರು ಪತ್ರಕರ್ತೆಯರ ಆರೋಪ

ಸುದ್ದಿ ಮಾಡುತ್ತಿದ್ದಾಗ ದಕ್ಷಿಣ ದೆಹಲಿಯಲ್ಲಿ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮನ್ನು ವಶಕ್ಕೆ ಪಡೆದು ಥಳಿಸಿದ್ದಾರೆ ಎಂದು ಇಬ್ಬರು ಮುಸ್ಲಿಂ ಸ್ವತಂತ್ರ ಮಹಿಳಾ ಪತ್ರಕರ್ತೆಯರು ಆರೋಪಿಸಿದ್ದಾರೆ. '4 ಪಿಎಮ್ ನ್ಯೂಸ್ ನೆಟ್‌ವರ್ಕ್' (4 PM News...

ತ್ರಿಪುರಾ: ‘ದನ ಕಳ್ಳ’ ಎಂದು, ಖರೀದಿಸಿದ ದನಗಳೊಂದಿಗೆ ಹಿಂತಿರುಗುತ್ತಿದ್ದ ಮುಸ್ಲಿಂ ವ್ಯಾಪಾರಿ ಮೇಲೆ ಗುಂಪು ಹಲ್ಲೆ: 46 ವರ್ಷದ ಜಲೀಲುರ್ ರೆಹಮಾನ್ ಸಾವು

ಅಗರ್ತಲಾ: ಖರೀದಿಸಿದ ಎರಡು ದನಗಳನ್ನು ತೆಗೆದುಕೊಂಡು ಹೋಗುತ್ತಿದ್ದ ಮುಸ್ಲಿಂ ದನ ವ್ಯಾಪಾರಿಯೊಬ್ಬರನ್ನು ‘ದನ ಕಳ್ಳ’ ಎಂದು ಆರೋಪಿಸಿ ಗುಂಪೊಂದು ಥಳಿಸಿದ ಪರಿಣಾಮ ಅವರು ಮೃತಪಟ್ಟಿರುವ ಘಟನೆ ತ್ರಿಪುರಾದ ಕಲ್ಯಾಣಪುರ ಪೊಲೀಸ್ ಠಾಣೆ ವ್ಯಾಪ್ತಿಯ...

ಪ್ರಶ್ನಿಸುವವರನ್ನು ‘ದಿಮಾಗಿ ನಕ್ಸಲ್’ ಎಂದು ಕರೆಯುವುದು ಸೂಕ್ಷ್ಮತೆಯಿಲ್ಲದ ನಡವಳಿಕೆ: ಗೀತಾಂಜಲಿ ಅಂಗಮೋ

ಪ್ರಶ್ನೆ ಕೇಳುವ ವ್ಯಕ್ತಿಯನ್ನು ‘ದಿಮಾಗಿ ನಕ್ಸಲ್’ (ಬುದ್ಧಿಜೀವಿ ನಕ್ಸಲರು) ಎಂದು ಕರೆಯುವುದು ಅತ್ಯಂತ ಸೂಕ್ಷ್ಮತೆಯಿಲ್ಲದ ರೀತಿಯಾಗಿದೆ ಎಂದು ಪ್ರಸಿದ್ಧ ಹವಾಮಾನ ಕಾರ್ಯಕರ್ತ ಮತ್ತು ಶಿಕ್ಷಣ ತಜ್ಞ ಸೋನಂ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ...

ಬಸವರಾಜ ಕನ್ನಾಳೆ ಸಿಂಡಿಕೇಟ್ ಸದಸ್ಯತ್ವ ರದ್ದಾಗುತ್ತಾ? ರಾಜಭವನದ ಮೌನಕ್ಕೆ ಮೂಡಿದ ಅನುಮಾನ

ತುಮಕೂರು ವಿಶ್ವವಿದ್ಯಾಲಯದ ರಾಜ್ಯಪಾಲರ ನಾಮನಿರ್ದೇಶಿತ ಸಿಂಡಿಕೇಟ್ ಸದಸ್ಯ ಬಸವರಾಜ ಕನ್ನಾಳೆ ಬಂಧನದ ಬೆನ್ನಲ್ಲೇ, ತನಿಖಾ ಸಂಸ್ಥೆಗಳು ತಮ್ಮ ಕಾರ್ಯಾಚರಣೆಯನ್ನು ತೀವ್ರಗೊಳಿಸಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ವಿವಿಯ ಪ್ರಭಾರ ಕುಲಪತಿ ಪ್ರೊ. ನಾಗಭೂಷಣ ಅವರಿಂದ...