Homeರಾಷ್ಟ್ರೀಯಕೋಮುಗಲಭೆಗೆ ಹುನ್ನಾರ: ತನ್ನ ಮನೆಗೆ ತಾನೇ ಬಾಂಬ್ ಎಸೆದ RSS ಅಂಗಸಂಸ್ಥೆ ಹಿಂದೂ ಮುನ್ನಣಿಯ ನಾಯಕ

ಕೋಮುಗಲಭೆಗೆ ಹುನ್ನಾರ: ತನ್ನ ಮನೆಗೆ ತಾನೇ ಬಾಂಬ್ ಎಸೆದ RSS ಅಂಗಸಂಸ್ಥೆ ಹಿಂದೂ ಮುನ್ನಣಿಯ ನಾಯಕ

- Advertisement -
- Advertisement -

ಆರೆಸ್ಸೆಸ್‌‌‌‌ನ ಅಂಗಸಂಸ್ಥೆಯಾದ ‘ಹಿಂದೂ ಮುನ್ನಣಿ’ಯ ದುಷ್ಕರ್ಮಿಯೊಬ್ಬ ಕೋಮು ಗಲಭೆ ನಡಸುವ ಉದ್ದೇಶದಿಂದ ತನ್ನ ಮನೆಗೆ ತಾನೇ ಬಾಂಬ್ ಎಸೆದು ತಮಿಳುನಾಡು ಪೊಲೀಸರಿಂದ ಬಂಧನಕ್ಕೆ ಒಳಗಾಗಿದ್ದಾನೆ. ಕೋಮು ಗಲಭೆ ನಡೆಸುವುದಕ್ಕಾಗಿ ‘ತನ್ನ ಮನೆಯ ಮೇಲೆ ಬಾಂಬ್ ದಾಳಿ’ ನಡೆದಿದೆ ಎಂದು ದುಷ್ಕರ್ಮಿಯು ಸುಳ್ಳು ದೂರು ನೀಡಿದ್ದನು.

ಘಟನೆಯು ತಮಿಳುನಾಡಿನ ಕುಂಭಕೋಣಂನಲ್ಲಿ ನವೆಂಬರ್ 21 ರ ಸೋಮವಾರ ನಡೆದಿದ್ದು, ಬಂಧನಕ್ಕೊಳಗಾದ ದುಷ್ಕರ್ಮಿಯನ್ನು ಹಿಂದೂ ಮುನ್ನಣಿ ಕುಂಭಕೋಣಂ ನಗರದ ಕಾರ್ಯದರ್ಶಿಯಾದ ಸಕ್ಕರೆಪಾಣಿ (40) ಎಂದು ಗುರುತಿಸಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಸೋಮವಾರ ಬೆಳಿಗ್ಗೆ ಅಪರಿಚಿತ ದುಷ್ಕರ್ಮಿಗಳು ತಮ್ಮ ಮನೆ ಮುಂದೆ ಪೆಟ್ರೋಲ್ ಬಾಂಬ್ ಎಸೆದಿದ್ದಾರೆ ಎಂದು ದುಷ್ಕರ್ಮಿ ಕುಂಭಕೋಣಂ ಪೂರ್ವ ಪೊಲೀಸ್ ಠಾಣೆಗೆ ಕರೆ ಮಾಡಿದ್ದನು. ಮನೆಯ ಮುಂದೆ ದೊಡ್ಡ ಶಬ್ದ ಉಂಟಾಗಿದ್ದು, ಮನೆಯ ಹೊರಗೆ ಒಡೆದ ಗಾಜಿನ ತುಂಡುಗಳು ಕಂಡುಬಂದಿವೆ ಎಂದು ದೂರಿದ್ದನು.

ಇದನ್ನೂ ಓದಿ: ಪಕ್ಷದ ಮಹಿಳಾ ನಾಯಕಿಗೆ ಅಶ್ಲೀಲ ನಿಂದನೆ, ಕೊಲೆ ಬೆದರಿಕೆ ಹಾಕಿದ ತಮಿಳುನಾಡು ಬಿಜೆಪಿ ನಾಯಕ

ಘಟನೆಯ ಬಗ್ಗೆ ತಿಳಿದ ಕುಂಭಕೋಣಂ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ರವಳಿ ಪ್ರಿಯಾ, ಸಹಾಯಕ ಪೊಲೀಸ್ ವರಿಷ್ಠಾಧಿಕಾರಿಗಳಾದ (ಎಡಿಎಸ್‌ಪಿ) ಜಯಚಂದ್ರನ್ ಮತ್ತು ಸ್ವಾಮಿನಾಥನ್ ಮತ್ತು ವಿಧಿವಿಜ್ಞಾನ ಇಲಾಖೆಯ ಸಹಾಯಕ ನಿರ್ದೇಶಕ ರಾಮಚಂದ್ರನ್ ಅವರು ಸಕ್ಕರೆಪಾಣಿ ಮನೆಗೆ ಆಗಮಿಸಿ ತನಿಖೆ ಆರಂಭಿಸಿದ್ದರು

ಇದೇ ವೇಳೆ ಉತ್ತರ ತಂಜಾವೂರಿನ ಬಿಜೆಪಿ ಅಧ್ಯಕ್ಷ ಸತೀಶ್ ಕುಮಾರ್ ಮತ್ತು ಇತರ ಹಿಂದೂ ಮುನ್ನಣಿ ಪದಾಧಿಕಾರಿಗಳು ಕೂಡಾ ಸಕ್ಕರೆಪಾಣಿ ಮನೆಗೆ ಭೇಟಿ ನೀಡಿ, ಪೊಲೀಸರೊಂದಿಗೆ ಸಂವಾದ ನಡೆಸಿದ್ದು, ತಕ್ಷಣದ ಕ್ರಮಕ್ಕೆ ಒತ್ತಾಯಿಸಿದ್ದರು.

ಆದರೆ, ತನಿಖಾಧಿಕಾರಿಗಳು ಸಕ್ಕರೆಪಾಣಿ ಮತ್ತು ಅವನ ಹೇಳಿಕೆಗಳ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದರು. ಈ ವೇಳೆ ಅವನ ಮನೆಯನ್ನೂ ಶೋಧಿಸಿದ್ದರು. ಆತನನ್ನು ಕೂಡಾ ವಿಚಾರಣೆಗೊಳಪಡಿಸಿದ ನಂತರ, ಆತನ ಮನೆಗೆ ಎಸೆದಿದ್ದ ಬಾಟಲಿಯಲ್ಲಿ ಬಳಸಲಾದ ವಿಕ್ಸ್ ಮತ್ತು ಪೊಲೀಸರು ಆತನ ಮನೆಯಿಂದ ವಶಪಡಿಸಿದ ಬಟ್ಟೆಗೆ ಹೊಂದಿಕೆಯಾಗಿರುವುದನ್ನು ಪೊಲೀಸರು ಕಂಡುಕೊಂಡಿದ್ದರು. ಈ ಮಾಹಿತಿಯನ್ನು ಬಳಸಿಕೊಂಡು ಪೊಲೀಸರು ಆತನನ್ನು ಮತ್ತೆ ವಿಚಾರಣೆಗೆ ಒಳಪಡಿಸಿದಾಗ, ಪ್ರಚಾರಕ್ಕಾಗಿ ಪೆಟ್ರೋಲ್ ಬಾಂಬ್ ದಾಳಿ ನಡೆದಿದೆ ಎಂದು ಬಿಂಬಿಸಿದ್ದಾಗಿ ಸಕ್ಕರೆರಾಣಿ ತಪ್ಪೊಪ್ಪಿಕೊಂಡಿದ್ದಾನೆ.

ಇದನ್ನೂ ಓದಿ: ಗುಜರಾತ್‌: ಬಂಡಾಯವೆದ್ದ 12 ನಾಯಕರಿಗೆ ಬಿಜೆಪಿಯಿಂದ ಗೇಟ್‌ಪಾಸ್‌

ವೈಯಕ್ತಿಕ ಭದ್ರತಾ ಅಧಿಕಾರಿ (ಪಿಎಸ್‌ಒ) ಪಡೆಯುವ ಉದ್ದೇಶವು ಈ ಬಾಂಬ್ ದಾಳಿಯಲ್ಲಿ ಇತ್ತು ಎಂದು ವರದಿಗಳು ಉಲ್ಲೇಖಿಸಿವೆ. ಜೀವ ಬೆದರಿಕೆ ಇದೆ ಎಂದು ಈ ಹಿಂದೆ ಹಲವಾರು ಮುಖಂಡರಿಗೆ ಮತ್ತು ಬಲಪಂಥೀಯ ಹಿಂದೂ ಸಂಘಟನೆಗಳ ಸದಸ್ಯರಿಗೆ ವೈಯಕ್ತಿಕ ಭದ್ರತಾ ಅಧಿಕಾರಿ (ಪಿಎಸ್‌ಒ) ಒದಗಿಸಲಾಗಿತ್ತು.

ತಪ್ಪೊಪ್ಪಿಕೊಂಡ ನಂತರ ಮೆಲಕಾವೇರಿ ಗ್ರಾಮ ಆಡಳಿತಾಧಿಕಾರಿ (ವಿಎಒ) ತಿರುಜ್ಞಾನಸಂಬಂಧಮ್ ಅವರು ಸಕ್ಕರೆಪಾಣಿ ವಿರುದ್ಧ ದೂರು ದಾಖಲಿಸಿದ್ದಾರೆ. ಇದರ ನಂತರ ಪೊಲೀಸರು ಆತನ ವಿರುದ್ಧ ಐಪಿಸಿ ಸೆಕ್ಷನ್ 436 (ಬೆಂಕಿ ಅಥವಾ ಸ್ಫೋಟಕ ವಸ್ತುವಿನಿಂದ ಕಿಡಿಗೇಡಿತನ), 53 (ಕಠಿಣ ಸೆರೆವಾಸ), 153 (ಗಲಭೆಗೆ ಪ್ರಚೋದನೆ ಉಂಟುಮಾಡುವ ಚಟುವಟಿಕೆಗಳಲ್ಲಿ ತೊಡಗಿರುವುದು), 153 ಎ (ಧಾರ್ಮಿಕ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು), 504 (ಶಾಂತಿಯನ್ನು ಉಲ್ಲಂಘಿಸುವ ಉದ್ದೇಶಪೂರ್ವಕ ಕೃತ್ಯ) ಮತ್ತು 505(2) (ಸಾರ್ವಜನಿಕ ಕಿಡಿಗೇಡಿತನವನ್ನು ಉಂಟುಮಾಡುವುದು) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದು, ಅವರನ್ನು ಬಂಧಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಎಲೆಕ್ಷನ್ ಹತ್ತಿರ ಬರುವಾಗ ಇಂತಹ ಪ್ರಚೋದೀತ ಘಟನೆಗಳು ಸರ್ವೇಸಾಮಾನ್ಯ ಅದು ನಿಗದಿತವಾಗಿ ಇಂತಹ ಸಂಘಟನೆಗಳೇ ಹೆಚ್ಚಾಗಿ ಮಾಡುವುದು ಅಂತ ಸಾಮಾನ್ಯವಾಗಿ ಗೊತ್ತಿದೆ . ಹಾಗಾಗಿ ಮೊದಲು ಮತದಾರರು ಇದನ್ನು ಅರ್ಥ ಮಾಡಿಕೊಳ್ಳುವುದು ಬಹಳ ಅವಶ್ಯಕ. ಪೊಲೀಸರು ಈ ಬಗ್ಗೆ ತನಿಖೆ ಮಾಡುತ್ತಾರೆ ಅವರಿಗೆ ಇವೆಲ್ಲ ಹೆಚ್ಚಿನ ಕೆಲಸ ಇಂಥವರ ಮೇಲೆ ಮೊದಲೇ ಪೊಲೀಸ್ ನವರು ಒಂದು ಕಣ್ಣು ಇಡುವುದೇ ಒಳ್ಳೆಯದು.

LEAVE A REPLY

Please enter your comment!
Please enter your name here

- Advertisment -

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...

ದಾವಣಗೆರೆ ಉಪ ಚುನಾವಣೆ ಅಡ್ಡ ಪರಿಣಾಮ: ಮುಸ್ಲಿಮ್ ಮುಖಂಡರ ಮೇಲೆ ಖರ್ಗೆ-ಡಿಕೆಶಿ ಶಿಸ್ತು ಪ್ರಹಾರ ಕಾಂಗ್ರೆಸ್‌ನ ಆತ್ಮಹತ್ಯಾತ್ಮಕ ರಾಜಕಾರಣ!!

ದಾವಣಗೆರೆ ದಕ್ಷಿಣ ಉಪ ಚುನಾವಣೆ ರಾಜ್ಯದ ಆಡಳಿತಾರೂಢ ಕಾಂಗ್ರೆಸ್‌ನ ಗದ್ದುಗೆ ಗುದ್ದಾಟಕ್ಕೆ ರೋಚಕ ಆಯಾಮ ನೀಡಿಬಿಟ್ಟಿದೆ. ಅಹಿಂದ ಸಮುದಾಯವೇ ಬಹುಜನರಾಗಿರುವ ದಾವಣಗೆರೆ ದಕ್ಷಿಣ ಅಸೆಂಬ್ಲಿ ಕ್ಷೇತ್ರದಲ್ಲಿ ಕಾಂಗ್ರೆಸ್ ನ್ಯಾಯವಾಗಿ ಆ ವರ್ಗದ ಅರ್ಹರೊಬ್ಬರಿಗೆ...

ನೀಟ್ ವಿವಾದ: ಪ್ರಶ್ನೆ ಪತ್ರಿಕೆ ಸೋರಿಕೆ ಜೊತೆಗೆ ಹೆಚ್ಚುತ್ತಿರುವ ವಿದ್ಯಾರ್ಥಿಗಳ ಆತ್ಮಹತ್ಯೆ

ರಾಜಸ್ಥಾನದಲ್ಲಿ ನಡೆದ ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ (ಸಿಬಿಐ) ತನಿಖೆ ವೇಗ ಪಡೆದುಕೊಂಡಿದೆ. ದೇಶದಾದ್ಯಂತ ಹಲವು ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ...

ಎಸ್‌ಐಆರ್‌ನಲ್ಲಿ ಮತದಾನದ ಹಕ್ಕು ಹೋಯ್ತು..ಈಗ ಸರ್ಕಾರಿ ಸೌಲಭ್ಯದ ಸರದಿ..ಮುಂದೆ ನಾಗರಿಕತ್ವ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುವುದು ಚುನಾವಣಾ ಆಯೋಗ ಭಾರತದ ಕೋಟ್ಯಾಂತರ ನಾಗರಿಕ ಅಮೂಲ್ಯವಾದ ಮತದಾನದ ಹಕ್ಕನ್ನು ಕಿತ್ತುಕೊಂಡ ಒಂದು ವ್ಯವಸ್ಥಿತ ಸಂಚು ಎನ್ನಬಹುದು. ಬಿಹಾರ, ಪಶ್ಚಿಮ ಬಂಗಾಳ, ತಮಿಳುನಾಡು,...

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...