Homeರಾಷ್ಟ್ರೀಯಕೋಮುಗಲಭೆಗೆ ಹುನ್ನಾರ: ತನ್ನ ಮನೆಗೆ ತಾನೇ ಬಾಂಬ್ ಎಸೆದ RSS ಅಂಗಸಂಸ್ಥೆ ಹಿಂದೂ ಮುನ್ನಣಿಯ ನಾಯಕ

ಕೋಮುಗಲಭೆಗೆ ಹುನ್ನಾರ: ತನ್ನ ಮನೆಗೆ ತಾನೇ ಬಾಂಬ್ ಎಸೆದ RSS ಅಂಗಸಂಸ್ಥೆ ಹಿಂದೂ ಮುನ್ನಣಿಯ ನಾಯಕ

- Advertisement -
- Advertisement -

ಆರೆಸ್ಸೆಸ್‌‌‌‌ನ ಅಂಗಸಂಸ್ಥೆಯಾದ ‘ಹಿಂದೂ ಮುನ್ನಣಿ’ಯ ದುಷ್ಕರ್ಮಿಯೊಬ್ಬ ಕೋಮು ಗಲಭೆ ನಡಸುವ ಉದ್ದೇಶದಿಂದ ತನ್ನ ಮನೆಗೆ ತಾನೇ ಬಾಂಬ್ ಎಸೆದು ತಮಿಳುನಾಡು ಪೊಲೀಸರಿಂದ ಬಂಧನಕ್ಕೆ ಒಳಗಾಗಿದ್ದಾನೆ. ಕೋಮು ಗಲಭೆ ನಡೆಸುವುದಕ್ಕಾಗಿ ‘ತನ್ನ ಮನೆಯ ಮೇಲೆ ಬಾಂಬ್ ದಾಳಿ’ ನಡೆದಿದೆ ಎಂದು ದುಷ್ಕರ್ಮಿಯು ಸುಳ್ಳು ದೂರು ನೀಡಿದ್ದನು.

ಘಟನೆಯು ತಮಿಳುನಾಡಿನ ಕುಂಭಕೋಣಂನಲ್ಲಿ ನವೆಂಬರ್ 21 ರ ಸೋಮವಾರ ನಡೆದಿದ್ದು, ಬಂಧನಕ್ಕೊಳಗಾದ ದುಷ್ಕರ್ಮಿಯನ್ನು ಹಿಂದೂ ಮುನ್ನಣಿ ಕುಂಭಕೋಣಂ ನಗರದ ಕಾರ್ಯದರ್ಶಿಯಾದ ಸಕ್ಕರೆಪಾಣಿ (40) ಎಂದು ಗುರುತಿಸಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಸೋಮವಾರ ಬೆಳಿಗ್ಗೆ ಅಪರಿಚಿತ ದುಷ್ಕರ್ಮಿಗಳು ತಮ್ಮ ಮನೆ ಮುಂದೆ ಪೆಟ್ರೋಲ್ ಬಾಂಬ್ ಎಸೆದಿದ್ದಾರೆ ಎಂದು ದುಷ್ಕರ್ಮಿ ಕುಂಭಕೋಣಂ ಪೂರ್ವ ಪೊಲೀಸ್ ಠಾಣೆಗೆ ಕರೆ ಮಾಡಿದ್ದನು. ಮನೆಯ ಮುಂದೆ ದೊಡ್ಡ ಶಬ್ದ ಉಂಟಾಗಿದ್ದು, ಮನೆಯ ಹೊರಗೆ ಒಡೆದ ಗಾಜಿನ ತುಂಡುಗಳು ಕಂಡುಬಂದಿವೆ ಎಂದು ದೂರಿದ್ದನು.

ಇದನ್ನೂ ಓದಿ: ಪಕ್ಷದ ಮಹಿಳಾ ನಾಯಕಿಗೆ ಅಶ್ಲೀಲ ನಿಂದನೆ, ಕೊಲೆ ಬೆದರಿಕೆ ಹಾಕಿದ ತಮಿಳುನಾಡು ಬಿಜೆಪಿ ನಾಯಕ

ಘಟನೆಯ ಬಗ್ಗೆ ತಿಳಿದ ಕುಂಭಕೋಣಂ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ರವಳಿ ಪ್ರಿಯಾ, ಸಹಾಯಕ ಪೊಲೀಸ್ ವರಿಷ್ಠಾಧಿಕಾರಿಗಳಾದ (ಎಡಿಎಸ್‌ಪಿ) ಜಯಚಂದ್ರನ್ ಮತ್ತು ಸ್ವಾಮಿನಾಥನ್ ಮತ್ತು ವಿಧಿವಿಜ್ಞಾನ ಇಲಾಖೆಯ ಸಹಾಯಕ ನಿರ್ದೇಶಕ ರಾಮಚಂದ್ರನ್ ಅವರು ಸಕ್ಕರೆಪಾಣಿ ಮನೆಗೆ ಆಗಮಿಸಿ ತನಿಖೆ ಆರಂಭಿಸಿದ್ದರು

ಇದೇ ವೇಳೆ ಉತ್ತರ ತಂಜಾವೂರಿನ ಬಿಜೆಪಿ ಅಧ್ಯಕ್ಷ ಸತೀಶ್ ಕುಮಾರ್ ಮತ್ತು ಇತರ ಹಿಂದೂ ಮುನ್ನಣಿ ಪದಾಧಿಕಾರಿಗಳು ಕೂಡಾ ಸಕ್ಕರೆಪಾಣಿ ಮನೆಗೆ ಭೇಟಿ ನೀಡಿ, ಪೊಲೀಸರೊಂದಿಗೆ ಸಂವಾದ ನಡೆಸಿದ್ದು, ತಕ್ಷಣದ ಕ್ರಮಕ್ಕೆ ಒತ್ತಾಯಿಸಿದ್ದರು.

ಆದರೆ, ತನಿಖಾಧಿಕಾರಿಗಳು ಸಕ್ಕರೆಪಾಣಿ ಮತ್ತು ಅವನ ಹೇಳಿಕೆಗಳ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದರು. ಈ ವೇಳೆ ಅವನ ಮನೆಯನ್ನೂ ಶೋಧಿಸಿದ್ದರು. ಆತನನ್ನು ಕೂಡಾ ವಿಚಾರಣೆಗೊಳಪಡಿಸಿದ ನಂತರ, ಆತನ ಮನೆಗೆ ಎಸೆದಿದ್ದ ಬಾಟಲಿಯಲ್ಲಿ ಬಳಸಲಾದ ವಿಕ್ಸ್ ಮತ್ತು ಪೊಲೀಸರು ಆತನ ಮನೆಯಿಂದ ವಶಪಡಿಸಿದ ಬಟ್ಟೆಗೆ ಹೊಂದಿಕೆಯಾಗಿರುವುದನ್ನು ಪೊಲೀಸರು ಕಂಡುಕೊಂಡಿದ್ದರು. ಈ ಮಾಹಿತಿಯನ್ನು ಬಳಸಿಕೊಂಡು ಪೊಲೀಸರು ಆತನನ್ನು ಮತ್ತೆ ವಿಚಾರಣೆಗೆ ಒಳಪಡಿಸಿದಾಗ, ಪ್ರಚಾರಕ್ಕಾಗಿ ಪೆಟ್ರೋಲ್ ಬಾಂಬ್ ದಾಳಿ ನಡೆದಿದೆ ಎಂದು ಬಿಂಬಿಸಿದ್ದಾಗಿ ಸಕ್ಕರೆರಾಣಿ ತಪ್ಪೊಪ್ಪಿಕೊಂಡಿದ್ದಾನೆ.

ಇದನ್ನೂ ಓದಿ: ಗುಜರಾತ್‌: ಬಂಡಾಯವೆದ್ದ 12 ನಾಯಕರಿಗೆ ಬಿಜೆಪಿಯಿಂದ ಗೇಟ್‌ಪಾಸ್‌

ವೈಯಕ್ತಿಕ ಭದ್ರತಾ ಅಧಿಕಾರಿ (ಪಿಎಸ್‌ಒ) ಪಡೆಯುವ ಉದ್ದೇಶವು ಈ ಬಾಂಬ್ ದಾಳಿಯಲ್ಲಿ ಇತ್ತು ಎಂದು ವರದಿಗಳು ಉಲ್ಲೇಖಿಸಿವೆ. ಜೀವ ಬೆದರಿಕೆ ಇದೆ ಎಂದು ಈ ಹಿಂದೆ ಹಲವಾರು ಮುಖಂಡರಿಗೆ ಮತ್ತು ಬಲಪಂಥೀಯ ಹಿಂದೂ ಸಂಘಟನೆಗಳ ಸದಸ್ಯರಿಗೆ ವೈಯಕ್ತಿಕ ಭದ್ರತಾ ಅಧಿಕಾರಿ (ಪಿಎಸ್‌ಒ) ಒದಗಿಸಲಾಗಿತ್ತು.

ತಪ್ಪೊಪ್ಪಿಕೊಂಡ ನಂತರ ಮೆಲಕಾವೇರಿ ಗ್ರಾಮ ಆಡಳಿತಾಧಿಕಾರಿ (ವಿಎಒ) ತಿರುಜ್ಞಾನಸಂಬಂಧಮ್ ಅವರು ಸಕ್ಕರೆಪಾಣಿ ವಿರುದ್ಧ ದೂರು ದಾಖಲಿಸಿದ್ದಾರೆ. ಇದರ ನಂತರ ಪೊಲೀಸರು ಆತನ ವಿರುದ್ಧ ಐಪಿಸಿ ಸೆಕ್ಷನ್ 436 (ಬೆಂಕಿ ಅಥವಾ ಸ್ಫೋಟಕ ವಸ್ತುವಿನಿಂದ ಕಿಡಿಗೇಡಿತನ), 53 (ಕಠಿಣ ಸೆರೆವಾಸ), 153 (ಗಲಭೆಗೆ ಪ್ರಚೋದನೆ ಉಂಟುಮಾಡುವ ಚಟುವಟಿಕೆಗಳಲ್ಲಿ ತೊಡಗಿರುವುದು), 153 ಎ (ಧಾರ್ಮಿಕ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು), 504 (ಶಾಂತಿಯನ್ನು ಉಲ್ಲಂಘಿಸುವ ಉದ್ದೇಶಪೂರ್ವಕ ಕೃತ್ಯ) ಮತ್ತು 505(2) (ಸಾರ್ವಜನಿಕ ಕಿಡಿಗೇಡಿತನವನ್ನು ಉಂಟುಮಾಡುವುದು) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದು, ಅವರನ್ನು ಬಂಧಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಎಲೆಕ್ಷನ್ ಹತ್ತಿರ ಬರುವಾಗ ಇಂತಹ ಪ್ರಚೋದೀತ ಘಟನೆಗಳು ಸರ್ವೇಸಾಮಾನ್ಯ ಅದು ನಿಗದಿತವಾಗಿ ಇಂತಹ ಸಂಘಟನೆಗಳೇ ಹೆಚ್ಚಾಗಿ ಮಾಡುವುದು ಅಂತ ಸಾಮಾನ್ಯವಾಗಿ ಗೊತ್ತಿದೆ . ಹಾಗಾಗಿ ಮೊದಲು ಮತದಾರರು ಇದನ್ನು ಅರ್ಥ ಮಾಡಿಕೊಳ್ಳುವುದು ಬಹಳ ಅವಶ್ಯಕ. ಪೊಲೀಸರು ಈ ಬಗ್ಗೆ ತನಿಖೆ ಮಾಡುತ್ತಾರೆ ಅವರಿಗೆ ಇವೆಲ್ಲ ಹೆಚ್ಚಿನ ಕೆಲಸ ಇಂಥವರ ಮೇಲೆ ಮೊದಲೇ ಪೊಲೀಸ್ ನವರು ಒಂದು ಕಣ್ಣು ಇಡುವುದೇ ಒಳ್ಳೆಯದು.

LEAVE A REPLY

Please enter your comment!
Please enter your name here

- Advertisment -

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...

ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಜಾರಿಯ ಜೊತೆಯಲ್ಲೆ ಸುಪ್ರೀಂ ಕೋರ್ಟ್‌ಗೆ ಹೋಗಲು ಕರ್ನಾಟಕ ಸಜ್ಜು

ಕೇಂದ್ರ ಸರ್ಕಾರದ ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ‘ವಿಕಸಿತ ಭಾರತ-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ)’ (VB-G RAM G) ಕಾಯ್ದೆಯ ಹಲವು ನಿಯಮಗಳಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರೂ...

ಉತ್ತರ ಪ್ರದೇಶ: ಮದುವೆ ರಿಸೆಪ್ಷನ್‌ನಲ್ಲಿ ಗೋಮಾಂಸ ಬಡಿಸಿದ ಆರೋಪ; ವರನ ತಂದೆ ಸೇರಿ ಏಳು ಮಂದಿ ಬಂಧನ, ಮಂಟಪ ಸೀಲ್

ಶಾಮ್ಲಿ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯ ಕೈರಾನಾ ಪಟ್ಟಣದಲ್ಲಿ ನಡೆದ ಮದುವೆ ಆರತಕ್ಷತೆ (ವಲೀಮಾ) ಸಮಾರಂಭವೊಂದು ಈಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಸಮಾರಂಭದಲ್ಲಿ ಅತಿಥಿಗಳಿಗೆ ಗೋಮಾಂಸವನ್ನು ಬೇಯಿಸಿ ಬಡಿಸಲಾಗಿದೆ ಎಂಬ...

ರಾಮ ಮಂದಿರ ದೇಣಿಗೆ ವಿವಾದ: ಎಫ್‌ಐಆರ್ ದಾಖಲಿಸಿ ತ್ವರಿತ ನ್ಯಾಯಾಲಯದ ವಿಚಾರಣೆಗೆ ವಿಶ್ವ ಹಿಂದೂ ಪರಿಷತ್ ಆಗ್ರಹ

ರಾಮ ದೇಣಿಗೆ ವಿವಾದ ದುರುಪಯೋಗ ಕುರಿತು ಎಸ್‌ಐಟಿ ತನ್ನ ಪ್ರಾಥಮಿಕ ವರದಿಯನ್ನು ಸಲ್ಲಿಸಿದ ಕೂಡಲೇ, ಬಲಪಂಥೀಯ ಹಿಂದುತ್ವ ಸಂಘಟನೆ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸಬೇಕೆಂದು ಒತ್ತಾಯಿಸಿದೆ. ವಿಎಚ್‌ಪಿ ಅಂತರರಾಷ್ಟ್ರೀಯ...

ಪಾಸ್‌ಪೋರ್ಟ್ ಪೌರತ್ವದ ದಾಖಲೆಯಲ್ಲ: ವಿದೇಶಾಂಗ ಸಚಿವಾಲಯ

ಪಾಸ್‌ಪೋರ್ಟ್ ಒಂದು ಪ್ರಯಾಣದ ದಾಖಲೆಯಾಗಿದೆಯೇ ಹೊರತು, ಪೌರತ್ವದ ದಾಖಲೆಯಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ (ಎಂಇಎ) ಅಧಿಕಾರಿಗಳು ಬುಧವಾರ (ಜೂನ್ 24) ತಿಳಿಸಿದ್ದಾರೆ. ಈ ಮೂಲಕ ಅವರು ಭಾರತೀಯ ಪೌರತ್ವವನ್ನು ಖಚಿತವಾಗಿ ಸಾಬೀತುಪಡಿಸುವ...

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...

2023ರಿಂದ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನ್ ಮಕ್ಕಳನ್ನು ಹತ್ಯೆಗೈದ ಇಸ್ರೇಲ್; ಉದ್ದೇಶಪೂರ್ವಕ ‘ನರಮೇಧ’ ಎಂದ ವರದಿ

ಪ್ಯಾಲೆಸ್ತೀನ್ ಮಕ್ಕಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ಹತ್ಯೆ ಮಾಡುವ ಮೂಲಕ ಇಸ್ರೇಲ್‌ ಸೇನೆ ನರಮೇಧ ನಡೆಸಿದೆ ಎಂದು ವಿಶ್ವಸಂಸ್ಥೆಯ ಸ್ವತಂತ್ರ ಅಂತಾರಾಷ್ಟ್ರೀಯ ವಿಚಾರಣಾ ಆಯೋಗ ಮಂಗಳವಾರ (ಜೂ.23) ತಿಳಿಸಿದೆ. ಇಸ್ರೇಲ್ ಪಡೆಗಳು ಅಕ್ಟೋಬರ್ 2023ರಿಂದ ಈವರೆಗೆ...

ಮೀಸಲಾತಿ ರದ್ದುಗೊಳಿಸಲು ಬಿಜೆಪಿ ಮೂರನೇ ಎರಡರಷ್ಟು ಬಹುಮತ ಬಯಸುತ್ತಿದೆ: ಜೈರಾಮ್‌ ರಮೇಶ್‌

ಲೋಕಸಭೆಯಲ್ಲಿ ಬಿಜೆಪಿ ಮೂರನೇ ಎರಡರಷ್ಟು ಬಹುಮತಕ್ಕಾಗಿ ಶ್ರಮಿಸುತ್ತಿದೆ. ಏಕೆಂದರೆ, ಮೀಸಲಾತಿಯನ್ನು ಕೊನೆಗೊಳಿಸಲು ಸಂವಿಧಾನವನ್ನು ತಿದ್ದುಪಡಿ ಮಾಡುವುದು ಅದರ ನಿಜವಾದ ಮತ್ತು ಅಂತಿಮ ಗುರಿಯಾಗಿದೆ ಎಂದು ಕಾಂಗ್ರೆಸ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್...