Homeಮುಖಪುಟಯೋಗೇಂದ್ರ ಯಾದವ್ ಸೇರಿ 20 ರೈತ ಮುಖಂಡರಿಗೆ ನೋಟಿಸ್ ನೀಡಿದ ದೆಹಲಿ ಪೊಲೀಸ್

ಯೋಗೇಂದ್ರ ಯಾದವ್ ಸೇರಿ 20 ರೈತ ಮುಖಂಡರಿಗೆ ನೋಟಿಸ್ ನೀಡಿದ ದೆಹಲಿ ಪೊಲೀಸ್

ಟ್ರಾಕ್ಟರ್‌‌ ರ್‍ಯಾಲಿಯಲ್ಲಿ ಭಾಗವಹಿಸಿದ ರೈತ ಗುಂಪೊಂದು ಪೊಲೀಸರೊಂದಿಗೆ ಘರ್ಷಣೆಗೆ ಇಳಿದಿದ್ದು, ಬ್ಯಾರಿಕೇಡ್‌ಗಳನ್ನು ಮುರಿದು ಕೆಂಪು ಕೋಟೆಗೆ ನುಗ್ಗಿ ದಾಂಧಲೆ ಸೃಷ್ಟಿಸಿದ್ದರು. ಪೊಲೀಸರು ಕೂಡಾ ಅಶ್ರುವಾಯು ಸಿಡಿಸಿ, ಲಾಠಿ ಚಾರ್ಜ್ ಮಾಡಿದ್ದರು.

- Advertisement -
- Advertisement -

ಗಣರಾಜ್ಯೋತ್ಸವದ ದಿನದಂದು ನಡೆದ ರೈತರ ಟ್ರ್ಯಾಕ್ಟರ್ ರ್‍ಯಾಲಿಯಲ್ಲಿನ ಅಹಿತಕರ ಘಟನೆಗೆ ಸಂಬಂಧಿಸಿದಂತೆ ಯೋಗೇಂದ್ರ ಯಾದವ್ ಸೇರಿದಂತೆ ಸುಮಾರು 20 ರೈತ ಮುಖಂಡರಿಗೆ ದೆಹಲಿ ಪೊಲೀಸ್ ನೋಟಿಸ್ ನೀಡಿದೆ.

ಈ ಕುರಿತು ಎಎನ್‌ಐ ಟ್ವೀಟ್ ಮಾಡಿದ್ದು, “ಯೋಗೇಂದ್ರ ಯಾದವ್, ಬಲ್‌ದೇವ್ ಸಂಗ್ ಸಿರ್ಸಾ, ಬಲ್‌ಬೀರ್ ಎಸ್ ರಾಜೇವಾಲ್ ಸೇರಿದಂತೆ 20 ರೈತ ಮುಖಂಡರಿಗೆ ದೆಹಲಿ ಪೊಲೀಸರು ನೋಟಿಸ್ ನೀಡಿದ್ದಾರೆ. ಪೊಲೀಸರೊಂದಿಗೆ ಮಾಡಿಕೊಂಡಿದ್ದ ಒಪ್ಪಂದವನ್ನು ಉಲ್ಲಂಘಿಸಿದ್ದಕ್ಕಾಗಿ 3 ದಿನಗಳೊಳಗೆ ಪ್ರತಿಕ್ರಿಯಿಸುವಂತೆ ನೋಟಿಸ್ ನೀಡಲಾಗಿದೆ” ಎಂದು ವರದಿಯಾಗಿದೆ.

ಇದನ್ನೂ ಓದಿ: ರೈತ ಹೋರಾಟವನ್ನು ದಿಕ್ಕುತಪ್ಪಿಸಲು ತನ್ನ ಕುತಂತ್ರ ಬಳಸಿದ ಬಿಜೆಪಿ!?

ಇದನ್ನೂ ಓದಿ: ಆಘಾತಕಾರಿ ಸುದ್ದಿ: ಕೆಂಪುಕೋಟೆಯ ಮುತ್ತಿಗೆ, ಸಿಖ್ ಧ್ವಜಾರೋಹಣಕ್ಕೆ ಕಾರಣ ಬಿಜೆಪಿ ಕಾರ್ಯಕರ್ತ ದೀಪ್ ಸಿಧು

ಮಂಗಳವಾರ ದೆಹಲಿಯ ರೈತ ಗಣರಾಜ್ಯೋತ್ಸವದಲ್ಲಿ ನಡೆದ ಗದ್ದಲದಲ್ಲಿ ಸಾರ್ವಜನಿಕ ಆಸ್ತಿ-ಪಾಸ್ತಿ ಹಾನಿ ಮತ್ತು ಪೊಲೀಸ್ ಸಿಬ್ಬಂದಿಯ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ದೆಹಲಿ ಪೊಲೀಸರು ಸುಮಾರು 200 ಪ್ರತಿಭಟನಾಕಾರರನ್ನು ಬಂಧಿಸಿದ್ದಾರೆ. ಸರಿಯಾದ ಪರಿಶೀಲನೆ ನಡೆಸಿದ ನಂತರ ಬಂಧನಗಳನ್ನು ಮಾಡುತ್ತಿದ್ದೇವೆ ಮತ್ತು ಈವರೆಗೆ 22 ಎಫ್‌ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ರೈತ ಹೋರಾಟದ ಮುಂಚೂಣಿಯಲ್ಲಿರುವ, ದರ್ಶನ್ ಪಾಲ್, ರಾಜೀಂದರ್‌ ಸಿಂಗ್, ಬಲ್‌‌ಬೀರ್‌ ಸಿಂಗ್ ರಾಜೇವಾಲ್, ಬೂಟಾ ಸಿಂಗ್ ಬುರ್ಜ್‌ಗಿಲ್, ಜೋಗೀಂದರ್‌ ಸಿಂಗ್‌, ರಾಕೇಶ್ ಟಿಕಾಯತ್‌, ಯೋಗೇಂದ್ರ ಯಾದವ್ ಸೇರಿದಂತೆ ಹತ್ತು ರೈತ ಮುಖಂಡರ ಹೆಸರನ್ನು ನಮೂದಿಸಿ ದೆಹಲಿ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ. ಕೆಂಪು ಕೋಟೆಯಲ್ಲಿ ಧ್ವಜ ಹಾರಿಸುವಾಗ ಅಲ್ಲೇ ಇದ್ದ ದೀಪ್ ಸಿಧು ಮೇಲೆಯೂ ಎಫ್‌ಐಆರ್‌ ದಾಖಲಾಗಿದೆ ಎಂಬುದು ತಿಳಿದುಬಂದಿದೆ.

ಘಟನೆಯಲ್ಲಿ 300 ಪೊಲೀಸರು ಗಾಯಗೊಂಡಿದ್ದಾರೆ, ಸಂಘರ್ಷದಲ್ಲಿ ಭಾಗಿಯಾಗಿರುವ ರೈತರನ್ನು ಗುರುತಿಸಲು ಅನೇಕ ವೀಡಿಯೊಗಳು ಮತ್ತು ಸಿಸಿಟಿವಿ ದೃಶ್ಯಾವಳಿಗಳನ್ನು ಸ್ಕ್ಯಾನ್ ಮಾಡಲಾಗುತ್ತಿದೆ. ಅಪರಾಧಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ಅಧಿಕಾರಿಗಳು ಹೇಳಿದ್ದಾಗಿ ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಇದನ್ನೂ ಓದಿ: ಸುಳ್ಳು ಸುದ್ದಿ ಹರಡಿದ ಮಾಧ್ಯಮಗಳು: ಕೆಂಪುಕೋಟೆಯಲ್ಲಿ ಭಾರತದ ತ್ರಿವರ್ಣ ಧ್ವಜವನ್ನು ಕೆಳಗಿಳಿಸಲಾಗಿಲ್ಲ

ಟ್ರಾಕ್ಟರ್‌‌ ರ್‍ಯಾಲಿಯಲ್ಲಿ ಭಾಗವಹಿಸಿದ ರೈತ ಗುಂಪೊಂದು ಪೊಲೀಸರೊಂದಿಗೆ ಘರ್ಷಣೆಗೆ ಇಳಿದಿದ್ದು, ಬ್ಯಾರಿಕೇಡ್‌ಗಳನ್ನು ಮುರಿದು ಕೆಂಪು ಕೋಟೆಗೆ ನುಗ್ಗಿ ದಾಂಧಲೆ ಸೃಷ್ಟಿಸಿದ್ದರು. ಪೊಲೀಸರು ಕೂಡಾ ಅಶ್ರುವಾಯು ಸಿಡಿಸಿ, ಲಾಠಿ ಚಾರ್ಜ್ ಮಾಡಿದ್ದರು.

ಘಟನೆಯ ಬಗ್ಗೆ ವಿಚಾರಣೆ ನಡೆಸಲು, ನಿವೃತ್ತ ಸುಪ್ರೀಂ ಕೋರ್ಟ್ ನ್ಯಾಯಾಧೀಶರ ನೇತೃತ್ವದಲ್ಲಿ ಸಮಿತಿಯೊಂದನ್ನು ರಚಿಸುವಂತೆ ಕೋರಿ ಬುಧವಾರ ಸುಪ್ರೀಂ ಕೋರ್ಟ್‌ನಲ್ಲಿ ಮನವಿ ಸಲ್ಲಿಕೆಯಾಗಿದೆ. ಹಿಂಸಾಚಾರಕ್ಕೆ ಕಾರಣವಾದ ವ್ಯಕ್ತಿಗಳು ಹಾಗೂ ಸಂಸ್ಥೆಗಳ ವಿರುದ್ಧ ಎಫ್‌ಐಆರ್ ಮಾಡುವಂತೆ ಸಂಬಂಧಪಟ್ಟ ಪ್ರಾಧಿಕಾರಕ್ಕೆ ನಿರ್ದೇಶನ ಮಾಡುವಂತೆ ಮನವಿಯಲ್ಲಿ ಕೋರಲಾಗಿದೆ.

ಕೇಂದ್ರದ ಕಾನೂನಿನ ವಿರುದ್ದ ದೆಹಲಿಯ ಗಡಿಗಳಲ್ಲಿ ಎರಡು ತಿಂಗಳಿನಿಂದ ಶಾಂತಿಯುತ ಪ್ರತಿಭಟನೆ ನಡೆಯುತ್ತಿದ್ದರು. ಕೇಂದ್ರ ಸರ್ಕಾರ ರೈತರೊಂದಿಗೆ ಇರುವರೆಗೂ 11 ಸುತ್ತಿನ ಮಾತುಕತೆ ನಡೆಸಿದೆ. ಆದರೆ ಇವೆಲ್ಲವೂ ಮುರಿದು ಬಿದ್ದಿದೆ.


ಇದನ್ನೂ ಓದಿ: ದೆಹಲಿಯಲ್ಲಿ ಪರಸ್ಪರ ಗುಲಾಬಿ ವಿನಿಮಯ, ಒಟ್ಟಿಗೆ ಊಟ ಮಾಡಿದ ರೈತರು ಮತ್ತು ಪೊಲೀಸರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...