Homeಮುಖಪುಟಯೋಗೇಂದ್ರ ಯಾದವ್ ಸೇರಿ 20 ರೈತ ಮುಖಂಡರಿಗೆ ನೋಟಿಸ್ ನೀಡಿದ ದೆಹಲಿ ಪೊಲೀಸ್

ಯೋಗೇಂದ್ರ ಯಾದವ್ ಸೇರಿ 20 ರೈತ ಮುಖಂಡರಿಗೆ ನೋಟಿಸ್ ನೀಡಿದ ದೆಹಲಿ ಪೊಲೀಸ್

ಟ್ರಾಕ್ಟರ್‌‌ ರ್‍ಯಾಲಿಯಲ್ಲಿ ಭಾಗವಹಿಸಿದ ರೈತ ಗುಂಪೊಂದು ಪೊಲೀಸರೊಂದಿಗೆ ಘರ್ಷಣೆಗೆ ಇಳಿದಿದ್ದು, ಬ್ಯಾರಿಕೇಡ್‌ಗಳನ್ನು ಮುರಿದು ಕೆಂಪು ಕೋಟೆಗೆ ನುಗ್ಗಿ ದಾಂಧಲೆ ಸೃಷ್ಟಿಸಿದ್ದರು. ಪೊಲೀಸರು ಕೂಡಾ ಅಶ್ರುವಾಯು ಸಿಡಿಸಿ, ಲಾಠಿ ಚಾರ್ಜ್ ಮಾಡಿದ್ದರು.

- Advertisement -
- Advertisement -

ಗಣರಾಜ್ಯೋತ್ಸವದ ದಿನದಂದು ನಡೆದ ರೈತರ ಟ್ರ್ಯಾಕ್ಟರ್ ರ್‍ಯಾಲಿಯಲ್ಲಿನ ಅಹಿತಕರ ಘಟನೆಗೆ ಸಂಬಂಧಿಸಿದಂತೆ ಯೋಗೇಂದ್ರ ಯಾದವ್ ಸೇರಿದಂತೆ ಸುಮಾರು 20 ರೈತ ಮುಖಂಡರಿಗೆ ದೆಹಲಿ ಪೊಲೀಸ್ ನೋಟಿಸ್ ನೀಡಿದೆ.

ಈ ಕುರಿತು ಎಎನ್‌ಐ ಟ್ವೀಟ್ ಮಾಡಿದ್ದು, “ಯೋಗೇಂದ್ರ ಯಾದವ್, ಬಲ್‌ದೇವ್ ಸಂಗ್ ಸಿರ್ಸಾ, ಬಲ್‌ಬೀರ್ ಎಸ್ ರಾಜೇವಾಲ್ ಸೇರಿದಂತೆ 20 ರೈತ ಮುಖಂಡರಿಗೆ ದೆಹಲಿ ಪೊಲೀಸರು ನೋಟಿಸ್ ನೀಡಿದ್ದಾರೆ. ಪೊಲೀಸರೊಂದಿಗೆ ಮಾಡಿಕೊಂಡಿದ್ದ ಒಪ್ಪಂದವನ್ನು ಉಲ್ಲಂಘಿಸಿದ್ದಕ್ಕಾಗಿ 3 ದಿನಗಳೊಳಗೆ ಪ್ರತಿಕ್ರಿಯಿಸುವಂತೆ ನೋಟಿಸ್ ನೀಡಲಾಗಿದೆ” ಎಂದು ವರದಿಯಾಗಿದೆ.

ಇದನ್ನೂ ಓದಿ: ರೈತ ಹೋರಾಟವನ್ನು ದಿಕ್ಕುತಪ್ಪಿಸಲು ತನ್ನ ಕುತಂತ್ರ ಬಳಸಿದ ಬಿಜೆಪಿ!?

ಇದನ್ನೂ ಓದಿ: ಆಘಾತಕಾರಿ ಸುದ್ದಿ: ಕೆಂಪುಕೋಟೆಯ ಮುತ್ತಿಗೆ, ಸಿಖ್ ಧ್ವಜಾರೋಹಣಕ್ಕೆ ಕಾರಣ ಬಿಜೆಪಿ ಕಾರ್ಯಕರ್ತ ದೀಪ್ ಸಿಧು

ಮಂಗಳವಾರ ದೆಹಲಿಯ ರೈತ ಗಣರಾಜ್ಯೋತ್ಸವದಲ್ಲಿ ನಡೆದ ಗದ್ದಲದಲ್ಲಿ ಸಾರ್ವಜನಿಕ ಆಸ್ತಿ-ಪಾಸ್ತಿ ಹಾನಿ ಮತ್ತು ಪೊಲೀಸ್ ಸಿಬ್ಬಂದಿಯ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ದೆಹಲಿ ಪೊಲೀಸರು ಸುಮಾರು 200 ಪ್ರತಿಭಟನಾಕಾರರನ್ನು ಬಂಧಿಸಿದ್ದಾರೆ. ಸರಿಯಾದ ಪರಿಶೀಲನೆ ನಡೆಸಿದ ನಂತರ ಬಂಧನಗಳನ್ನು ಮಾಡುತ್ತಿದ್ದೇವೆ ಮತ್ತು ಈವರೆಗೆ 22 ಎಫ್‌ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ರೈತ ಹೋರಾಟದ ಮುಂಚೂಣಿಯಲ್ಲಿರುವ, ದರ್ಶನ್ ಪಾಲ್, ರಾಜೀಂದರ್‌ ಸಿಂಗ್, ಬಲ್‌‌ಬೀರ್‌ ಸಿಂಗ್ ರಾಜೇವಾಲ್, ಬೂಟಾ ಸಿಂಗ್ ಬುರ್ಜ್‌ಗಿಲ್, ಜೋಗೀಂದರ್‌ ಸಿಂಗ್‌, ರಾಕೇಶ್ ಟಿಕಾಯತ್‌, ಯೋಗೇಂದ್ರ ಯಾದವ್ ಸೇರಿದಂತೆ ಹತ್ತು ರೈತ ಮುಖಂಡರ ಹೆಸರನ್ನು ನಮೂದಿಸಿ ದೆಹಲಿ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ. ಕೆಂಪು ಕೋಟೆಯಲ್ಲಿ ಧ್ವಜ ಹಾರಿಸುವಾಗ ಅಲ್ಲೇ ಇದ್ದ ದೀಪ್ ಸಿಧು ಮೇಲೆಯೂ ಎಫ್‌ಐಆರ್‌ ದಾಖಲಾಗಿದೆ ಎಂಬುದು ತಿಳಿದುಬಂದಿದೆ.

ಘಟನೆಯಲ್ಲಿ 300 ಪೊಲೀಸರು ಗಾಯಗೊಂಡಿದ್ದಾರೆ, ಸಂಘರ್ಷದಲ್ಲಿ ಭಾಗಿಯಾಗಿರುವ ರೈತರನ್ನು ಗುರುತಿಸಲು ಅನೇಕ ವೀಡಿಯೊಗಳು ಮತ್ತು ಸಿಸಿಟಿವಿ ದೃಶ್ಯಾವಳಿಗಳನ್ನು ಸ್ಕ್ಯಾನ್ ಮಾಡಲಾಗುತ್ತಿದೆ. ಅಪರಾಧಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ಅಧಿಕಾರಿಗಳು ಹೇಳಿದ್ದಾಗಿ ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಇದನ್ನೂ ಓದಿ: ಸುಳ್ಳು ಸುದ್ದಿ ಹರಡಿದ ಮಾಧ್ಯಮಗಳು: ಕೆಂಪುಕೋಟೆಯಲ್ಲಿ ಭಾರತದ ತ್ರಿವರ್ಣ ಧ್ವಜವನ್ನು ಕೆಳಗಿಳಿಸಲಾಗಿಲ್ಲ

ಟ್ರಾಕ್ಟರ್‌‌ ರ್‍ಯಾಲಿಯಲ್ಲಿ ಭಾಗವಹಿಸಿದ ರೈತ ಗುಂಪೊಂದು ಪೊಲೀಸರೊಂದಿಗೆ ಘರ್ಷಣೆಗೆ ಇಳಿದಿದ್ದು, ಬ್ಯಾರಿಕೇಡ್‌ಗಳನ್ನು ಮುರಿದು ಕೆಂಪು ಕೋಟೆಗೆ ನುಗ್ಗಿ ದಾಂಧಲೆ ಸೃಷ್ಟಿಸಿದ್ದರು. ಪೊಲೀಸರು ಕೂಡಾ ಅಶ್ರುವಾಯು ಸಿಡಿಸಿ, ಲಾಠಿ ಚಾರ್ಜ್ ಮಾಡಿದ್ದರು.

ಘಟನೆಯ ಬಗ್ಗೆ ವಿಚಾರಣೆ ನಡೆಸಲು, ನಿವೃತ್ತ ಸುಪ್ರೀಂ ಕೋರ್ಟ್ ನ್ಯಾಯಾಧೀಶರ ನೇತೃತ್ವದಲ್ಲಿ ಸಮಿತಿಯೊಂದನ್ನು ರಚಿಸುವಂತೆ ಕೋರಿ ಬುಧವಾರ ಸುಪ್ರೀಂ ಕೋರ್ಟ್‌ನಲ್ಲಿ ಮನವಿ ಸಲ್ಲಿಕೆಯಾಗಿದೆ. ಹಿಂಸಾಚಾರಕ್ಕೆ ಕಾರಣವಾದ ವ್ಯಕ್ತಿಗಳು ಹಾಗೂ ಸಂಸ್ಥೆಗಳ ವಿರುದ್ಧ ಎಫ್‌ಐಆರ್ ಮಾಡುವಂತೆ ಸಂಬಂಧಪಟ್ಟ ಪ್ರಾಧಿಕಾರಕ್ಕೆ ನಿರ್ದೇಶನ ಮಾಡುವಂತೆ ಮನವಿಯಲ್ಲಿ ಕೋರಲಾಗಿದೆ.

ಕೇಂದ್ರದ ಕಾನೂನಿನ ವಿರುದ್ದ ದೆಹಲಿಯ ಗಡಿಗಳಲ್ಲಿ ಎರಡು ತಿಂಗಳಿನಿಂದ ಶಾಂತಿಯುತ ಪ್ರತಿಭಟನೆ ನಡೆಯುತ್ತಿದ್ದರು. ಕೇಂದ್ರ ಸರ್ಕಾರ ರೈತರೊಂದಿಗೆ ಇರುವರೆಗೂ 11 ಸುತ್ತಿನ ಮಾತುಕತೆ ನಡೆಸಿದೆ. ಆದರೆ ಇವೆಲ್ಲವೂ ಮುರಿದು ಬಿದ್ದಿದೆ.


ಇದನ್ನೂ ಓದಿ: ದೆಹಲಿಯಲ್ಲಿ ಪರಸ್ಪರ ಗುಲಾಬಿ ವಿನಿಮಯ, ಒಟ್ಟಿಗೆ ಊಟ ಮಾಡಿದ ರೈತರು ಮತ್ತು ಪೊಲೀಸರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...