Homeಮುಖಪುಟ"ಆದಾಯ ನಿಂತು ಹೋಗಿದೆ": ಕೇಂದ್ರ ಸಚಿವ ಸ್ಥಾನ ತೊರೆದು ನಟನೆಯಲ್ಲಿ ಮುಂದುವರಿಯುವ ಇಂಗಿತ ವ್ಯಕ್ತಪಡಿಸಿದ ಸುರೇಶ್...

“ಆದಾಯ ನಿಂತು ಹೋಗಿದೆ”: ಕೇಂದ್ರ ಸಚಿವ ಸ್ಥಾನ ತೊರೆದು ನಟನೆಯಲ್ಲಿ ಮುಂದುವರಿಯುವ ಇಂಗಿತ ವ್ಯಕ್ತಪಡಿಸಿದ ಸುರೇಶ್ ಗೋಪಿ

- Advertisement -
- Advertisement -

ಕೇಂದ್ರ ಪೆಟ್ರೋಲಿಯಂ, ನೈಸರ್ಗಿಕ ಅನಿಲ ಮತ್ತು ಪ್ರವಾಸೋದ್ಯಮ ಖಾತೆಯ ರಾಜ್ಯ ಸಚಿವ ಹಾಗೂ ಮಲಯಾಳಂ ಚಲನಚಿತ್ರ ನಟ, ಕೇರಳದಿಂದ ಆಯ್ಕೆಯಾದ ಮೊದಲ ಬಿಜೆಪಿ ಲೋಕಸಭಾ ಸಂಸದ ಸುರೇಶ್ ಗೋಪಿ ಅವರು ಪೂರ್ಣಾವಧಿ ನಟನೆಗೆ ಮರಳುವ ಬಯಕೆಯನ್ನು ವ್ಯಕ್ತಪಡಿಸಿದ್ದು, ಸಚಿವ ಸ್ಥಾನದಿಂದ ಕೆಳಗಿಳಿಯಲು ಬಯಸಿರುವುದಾಗಿ ಹೇಳಿದ್ದಾರೆ.

ಅಕ್ಟೋಬರ್ 12, ಭಾನುವಾರ ಕಣ್ಣೂರಿನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ತ್ರಿಶೂರ್ ಸಂಸದ ಸುರೇಶ್ ಗೋಪಿ, ಸಚಿವನಾಗಿ ಅಧಿಕಾರ ವಹಿಸಿಕೊಂಡ ನಂತರ ತನ್ನ ಆದಾಯ ಗಮನಾರ್ಹವಾಗಿ ಕುಸಿದಿದೆ ಮತ್ತು ತಮ್ಮ ಕುಟುಂಬವನ್ನು ಪೋಷಿಸಲು ಚಲನಚಿತ್ರ ವೃತ್ತಿಜೀವನವನ್ನು ಪುನರಾರಂಭಿಸಲು ಬಯಸುವುದಾಗಿ ತಿಳಿಸಿದ್ದಾರೆ.

“ನಾನು ನಿಜವಾಗಿಯೂ ನಟನೆಯನ್ನು ಮುಂದುವರಿಸಲು ಬಯಸುತ್ತೇನೆ. ನಾನು ಇನ್ನಷ್ಟು ಸಂಪಾದಿಸಬೇಕಾಗಿದೆ; ನನ್ನ ಆದಾಯವು ಈಗ ಸಂಪೂರ್ಣವಾಗಿ ನಿಂತುಹೋಗಿದೆ. ಲೋಕಸಭಾ ಚುನಾವಣೆಗೆ ಮೊದಲೇ ಸಚಿವ ಸ್ಥಾನದ ಜವಾಬ್ದಾರಿಗಳನ್ನು ವಹಿಸಿಕೊಳ್ಳಲು ಇಷ್ಟವಿಲ್ಲದಿರುವುದನ್ನು ತಿಳಿಸಿದ್ದೆ. ನಟನೆಯು ನನಗೆ ಆದಾಯವನ್ನು ತರುತ್ತದೆ, ಆ ಆದಾಯದಿಂದ ನನ್ನ ಕುಟುಂಬ ಮತ್ತು ಇತರ ಕೆಲವರನ್ನು ಬೆಂಬಲಿಸಲು ನಾನು ಬಯಸುತ್ತೇನೆ. ಆದರೆ ಈಗ, ನನ್ನ ಆದಾಯದ ಮೇಲೆ ಪರಿಣಾಮ ಬೀರಿದೆ” ಎಂದು ಸುರೇಶ್ ಗೋಪಿ ಹೇಳಿದ್ದಾರೆ.

2016ರ ಅಕ್ಟೋಬರ್‌ನಲ್ಲಿ ಬಿಜೆಪಿ ಸೇರಿದ ಸುರೇಶ್ ಗೋಪಿ, 2024ರಲ್ಲಿ ಕೇರಳದಿಂದ ಲೋಕಸಭೆಗೆ ಆಯ್ಕೆಯಾದ ಮೊದಲ ಬಿಜೆಪಿ ಸಂಸದ ಎನಿಸಿಕೊಂಡರು. “ಸಚಿವನಾಗಿ ನೇಮಕಗೊಂಡಿರುವುದು ಗೆಲುವನ್ನು ಗೌರವಿಸುವ ಪಕ್ಷದ ಕ್ರಮವಾಗಿದೆ. ನಾನು ಪಕ್ಷದಲ್ಲಿ ಅತ್ಯಂತ ಕಿರಿಯ ಸದಸ್ಯನಾಗಿದ್ದರೂ, ನನ್ನನ್ನು ಸಚಿವನನ್ನಾಗಿ ಮಾಡಲಾಯಿತು. ಬಹುಶಃ ಕೇರಳದಿಂದ ಮೊದಲ ಬಿಜೆಪಿ ಸಂಸದನಾಗಲು ನನಗೆ ಸಹಾಯ ಮಾಡಿದ ಜನರಿಗಾಗಿ ನನಗೆ ಸ್ಥಾನ ಕೊಟ್ಟಿರುಬಹುದು” ಎಂದು ಸುರೇಶ್ ಗೋಪಿ ತಿಳಿಸಿದ್ದಾರೆ.

ಕಾರ್ಯಕ್ರಮದಲ್ಲಿ ಸುರೇಶ್ ಗೋಪಿ ಅವರು, ಆರ್‌ಎಸ್‌ಎಸ್ ಹಿರಿಯ ನಾಯಕ ಮತ್ತು ಕೇರಳದಿಂದ ಹೊಸದಾಗಿ ನಾಮನಿರ್ದೇಶನಗೊಂಡ ರಾಜ್ಯಸಭಾ ಸಂಸದ ಸಿ ಸದಾನಂದನ ಮಾಸ್ಟರ್ ಅವರನ್ನು ಕೇಂದ್ರ ಸಚಿವರನ್ನಾಗಿ ನೇಮಿಸಬೇಕೆಂದು ಸೂಚಿಸಿದ್ದಾರೆ. “ನಾನು ನಿಜವಾಗಿ ಹೇಳುತ್ತಿದ್ದೇನೆ: ಸದಾನಂದನ ಮಾಸ್ಟರ್ ಅವರನ್ನು ನನ್ನ ಸ್ಥಾನಕ್ಕೆ ಕೇಂದ್ರ ಸಚಿವರನ್ನಾಗಿ ಮಾಡಬೇಕು. ಹಾಗೇನಾದರು ಆದರೆ ಕೇರಳದ ರಾಜಕೀಯ ಇತಿಹಾಸದಲ್ಲಿ ಹೊಸ ಅಧ್ಯಾಯ ಪ್ರಾರಂಭವಾಗಲಿದೆ ಎಂದು ನಾನು ನಂಬುತ್ತೇನೆ” ಎಂದು ಹೇಳಿದ್ದಾರೆ.

ತಾನು ಸಚಿವ ಸ್ಥಾನದ ಆಕಾಂಕ್ಷೆಯನ್ನು ಎಂದಿಗೂ ಹೊಂದಿರಲಿಲ್ಲ ಎಂದು ಸುರೇಶ್ ಗೋಪಿ ಹೇಳಿದ್ದಾರೆ. ಚುನಾವಣೆಗೆ ಒಂದು ದಿನ ಮೊದಲು, ನಾನು ಸಚಿವನಾಗಲು ಬಯಸುವುದಿಲ್ಲ ಎಂದು ವರದಿಗಾರರಿಗೆ ಹೇಳಿದ್ದೆ. ನಾನು ನನ್ನ ಸಿನಿಮಾದಲ್ಲಿ ಮುಂದುವರಿಯಲು ಬಯಸುತ್ತೇನೆ ಎಂದಿದ್ದೆ ಎಂದು ನೆನಪಿಸಿಕೊಂಡಿದ್ದಾರೆ. ಕಣ್ಣೂರಿನ ಸಿಪಿಐಎಂ ನಾಯಕರು ಸದಾನಂದನ ಮಾಸ್ಟರ್ ರಾಜ್ಯಸಭೆಗೆ ಬಡ್ತಿ ಪಡೆದ ಬಗ್ಗೆ ಆತಂಕಗೊಂಡಿದ್ದಾರೆ. ಏಕೆಂದರೆ, ಈ ನೇಮಕಾತಿ ಸಿಪಿಐಎಂ ಭದ್ರಕೋಟೆಯಲ್ಲಿ ಬಿಜೆಪಿಯ ನಿರೀಕ್ಷೆಗಳನ್ನು ಬಲಪಡಿಸಬಹುದು ಎಂಬ ಭಯ ಅವರಿಗೆ ಇದೆ ಎಂದು ಸುರೇಶ್ ಗೋಪಿ ಇದೇ ವೇಳೆ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನನ್ನ ಮನೆ ಮೇಲೆ ದಾಳಿ ಮಾಡಿ… ಹೇಗೆ ಎದುರಿಸಬೇಕೆಂದು ಗೊತ್ತಿದೆ..’; ಬಿಜೆಪಿಗೆ ಮಮತಾ ಬ್ಯಾನರ್ಜಿ ಸವಾಲು

"ತಮ್ಮ ನಿವಾಸ ಮತ್ತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ನಾಯಕರ ನಿವಾಸವನ್ನು ಗುರಿಯಾಗಿಸಿಕೊಳ್ಳುವಂತೆ" ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಬಿಜೆಪಿಗೆ ಸವಾಲು ಹಾಕಿದರು. ರಾಜ್ಯದಲ್ಲಿ, ಟಿಎಂಸಿ ನಾಯಕರ ಮೇಲಿನ ದಾಳಿಗೆ...

ಬೆಂಗಳೂರು: ವಿಶೇಷ ಪೂಜೆ ಹೆಸರಿನಲ್ಲಿ ಐಟಿ ಅಧಿಕಾರಿಗೆ 35 ಲಕ್ಷ ವಂಚನೆ: 59 ವರ್ಷದ ‘ಗಿಳಿ ಶಾಸ್ತ್ರ’ ಹೇಳುವ ವ್ಯಕ್ತಿ ಬಂಧನ

ಬೆಂಗಳೂರು: ವಿಶೇಷ ಪೂಜೆ ಮಾಡುವುದಾಗಿ ಹೇಳಿಕೊಂಡು ಆದಾಯ ತೆರಿಗೆ ಅಧಿಕಾರಿಗೆ 35 ಲಕ್ಷ ರೂಪಾಯಿ ವಂಚಿಸಿದ ಆರೋಪದ ಮೇಲೆ ತಮಿಳುನಾಡು ಮೂಲದ 59 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಥೇಣಿಯ ಶೇಖರ್...

ಬಿಹಾರ| ರಾಜ್ಯಸಭಾ ಚುನಾವಣೆ ಮತದಾನದಿಂದ ಹೊರಗುಳಿದ ನಾಲ್ವರು ಶಾಸಕರು; ಮಹಾಘಟಬಂಧನ್‌ಗೆ ಹಿನ್ನಡೆ

ಸೋಮವಾರ ಸಂಜೆ 4 ಗಂಟೆಗೆ ಮುಕ್ತಾಯಗೊಂಡ ರಾಜ್ಯಸಭಾ ಚುನಾವಣೆಯಲ್ಲಿ ನಾಲ್ವರು ಶಾಸಕರು ಮತದಾನದಿಂದ ಹೊರಗುಳಿಯುವ ಮೂಲಕ ಬಿಹಾರದ ಮಹಾಘಟಬಂಧನ್‌ಗೆ ಭಾರಿ ಹಿನ್ನಡೆಯಾಗಿದೆ. ಐದನೇ ಸ್ಥಾನಕ್ಕಾಗಿ ನಡೆಯುವ ಸ್ಪರ್ಧೆಯಲ್ಲಿ ವಿರೋಧ ಮೈತ್ರಿಕೂಟದ ನಿರೀಕ್ಷೆಗೆ ಭಾರಿ...

ರಾಜ್ಯಸಭೆಯಲ್ಲಿ LPG ಕೊರತೆ ಪ್ರಸ್ತಾಪಿಸಿದ ಮಲ್ಲಿಕಾರ್ಜುನ ಖರ್ಗೆ; ಪ್ರತಿಪಕ್ಷ ಅರಾಜಕತೆ ಸೃಷ್ಟಿಸಲು ಯತ್ನಿಸುತ್ತಿದೆ ಎಂದ ಸರ್ಕಾರ !

ನವದೆಹಲಿ: ರಾಜ್ಯಸಭೆಯಲ್ಲಿ ಸೋಮವಾರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಎಲ್‌ಪಿಜಿ ಕೊರತೆಯ ವಿಷಯವನ್ನು ಪ್ರಸ್ತಾಪಿಸಿದರು ಮತ್ತು ಅಡುಗೆ ಅನಿಲದ ಬಿಕ್ಕಟ್ಟು ಮತ್ತು ಕಾಳಸಂತೆಕೋರತನವನ್ನು ತಡೆಯಲು ಸರ್ಕಾರ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿಲ್ಲ ಎಂದು...

ಬೆಂಗಳೂರು| ಹಣ ನೀಡಲು ನಿರಾಕರಿಸಿದ ವ್ಯಕ್ತಿಯನ್ನು ಮಕ್ಕಳ ಮುಂದೆಯೇ ಥಳಿಸಿ ಕೊಂದ ಗುಂಪು

ಹಣ ನೀಡಲು ನಿರಾಕರಿಸಿದ ತಂದೆಯನ್ನು ಮಕ್ಕಳ ಮುಂದೆಯೇ ಗುಂಪೊಂದು ಥಳಿಸಿ ಕೊಂದಿರುವ ಘಟನೆ ಬೆಂಗಳೂರಿನ ವಿಲ್ಸನ್ ಗಾರ್ಡನ್‌ನಲ್ಲಿ ಭಾನುವಾರ ರಾತ್ರಿ ನಡೆದಿದೆ. ವಿಲ್ಸನ್ ಗಾರ್ಡನ್‌ನ ಬಡಾ ಮಕನ್ ರಸ್ತೆ ಬಳಿ ರಶೀದ್ ಪಾಷಾ ಎಂದು...

ಅಬಕಾರಿ ನೀತಿ ಪ್ರಕರಣದಲ್ಲಿ ಖುಲಾಸೆ ಪ್ರಶ್ನಿಸಿ ಸಿಬಿಐ ಅರ್ಜಿ; ಪ್ರತಿಕ್ರಿಯಿಸಲು ಕೇಜ್ರಿವಾಲ್-ಸಿಸೋಡಿಯಾಗೆ ಸಮಯ ನೀಡಿದ ದೆಹಲಿ ಹೈಕೋರ್ಟ್

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರ 21 ಜನರ ತಮ್ಮ ಬಿಡುಗಡೆಯನ್ನು ಪ್ರಶ್ನಿಸಿ ಸಿಬಿಐ ಅರ್ಜಿಗೆ ಪ್ರತಿಕ್ರಿಯೆಗಳನ್ನು ಸಲ್ಲಿಸಲು ದೆಹಲಿ...

ಪ್ರಶ್ನೆಗಳಿಗೆ ಉತ್ತರಿಸದ ಸಚಿವರು: ಸದನ ಮುಂದೂಡಿದ ಸ್ಪೀಕರ್ ಯು.ಟಿ ಖಾದರ್

ಶಾಸಕರು ಕೇಳುವ ಪ್ರಶ್ನೆಗಳಿಗೆ ಉತ್ತರ ಒದಗಿಸದ ಸಚಿವರು ಮತ್ತು ಅಧಿಕಾರಿಗಳ ವಿರುದ್ದ ಸೋಮವಾರ (ಮಾ.16) ತೀವ್ರ ಅಸಮಾಧಾನ ವ್ಯಕ್ತಪಡಿಸಿದ ವಿಧಾನಸಭೆಯ ಸ್ಪೀಕರ್ ಯು.ಟಿ ಖಾದರ್, ಸದನವನ್ನು ಮುಂದೂಡಿಕೆ ಮಾಡಿ ಸರ್ಕಾರಕ್ಕೆ ಬಿಸಿ ಮುಟ್ಟಿಸಿದರು. ವಿಧಾನಸಭೆಯಲ್ಲಿ...

‘ಆಪರೇಷನ್ ಸಿಂಧೂರ್’ ಕುರಿತ ಪೋಸ್ಟ್: ಪ್ರೊಫೆಸರ್ ಅಲಿ ಖಾನ್ ಮಹ್ಮದಾಬಾದ್ ವಿರುದ್ಧದ ಪ್ರಕರಣಗಳನ್ನು ಕೈಬಿಟ್ಟ ಹರಿಯಾಣ ಸರ್ಕಾರ

'ಆಪರೇಷನ್ ಸಿಂಧೂರ್' ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ಅಶೋಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಅಲಿ ಖಾನ್ ಮಹ್ಮದಾಬಾದ್ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣ ದಾಖಲಾಗಿತ್ತು. ಅವರ ವಿರುದ್ಧದ ಈ ಪ್ರಕರಣಗಳನ್ನು ಕೈಬಿಟ್ಟಿರುವುದಾಗಿ ಹರಿಯಾಣ...

ಎಲ್‌ಪಿಜಿ ಬಿಕ್ಕಟ್ಟಿನ ನಡುವೆ ಆಧಾರ್ ಮೂಲಕ ‘ಇ-ಕೆವೈಸಿ’ ಮಾಡಿಸಿಕೊಳ್ಳುವಂತೆ ಸರ್ಕಾರದ ಸೂಚನೆ

ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಬಳಸುವ 330 ಮಿಲಿಯನ್‌ಗಿಂತಲೂ ಹೆಚ್ಚು ಗ್ರಾಹಕರು ತಮ್ಮ ಎಲೆಕ್ಟ್ರಾನಿಕ್ ನೋ ಯುವರ್ ಕಸ್ಟಮರ್ (ಇ-ಕೆವೈಸಿ) ಅನ್ನು ಬಯೋಮೆಟ್ರಿಕ್ ಆಧಾರ್ ದೃಢೀಕರಣ ವ್ಯವಸ್ಥೆಯ ಮೂಲಕ ಮಾಡಿಸಿಕೊಳ್ಳಬೇಕು ಎಂದು ಸರ್ಕಾರ...

ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ, ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದ ಚು. ಆಯೋಗ

ನಿರೀಕ್ಷೆಯಂತೆ ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಚುನಾವಣಾ ಆಯೋಗ ಪಶ್ಚಿಮ ಬಂಗಾಳದಲ್ಲಿ ತನ್ನ ಆಟ ಶುರು ಮಾಡಿದೆ. ರಾಜ್ಯದ ಸರ್ಕಾದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ ಮತ್ತು ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದೆ. ಪಶ್ಚಿಮ ಬಂಗಾಳ...