Homeಮುಖಪುಟ"ಆದಾಯ ನಿಂತು ಹೋಗಿದೆ": ಕೇಂದ್ರ ಸಚಿವ ಸ್ಥಾನ ತೊರೆದು ನಟನೆಯಲ್ಲಿ ಮುಂದುವರಿಯುವ ಇಂಗಿತ ವ್ಯಕ್ತಪಡಿಸಿದ ಸುರೇಶ್...

“ಆದಾಯ ನಿಂತು ಹೋಗಿದೆ”: ಕೇಂದ್ರ ಸಚಿವ ಸ್ಥಾನ ತೊರೆದು ನಟನೆಯಲ್ಲಿ ಮುಂದುವರಿಯುವ ಇಂಗಿತ ವ್ಯಕ್ತಪಡಿಸಿದ ಸುರೇಶ್ ಗೋಪಿ

- Advertisement -
- Advertisement -

ಕೇಂದ್ರ ಪೆಟ್ರೋಲಿಯಂ, ನೈಸರ್ಗಿಕ ಅನಿಲ ಮತ್ತು ಪ್ರವಾಸೋದ್ಯಮ ಖಾತೆಯ ರಾಜ್ಯ ಸಚಿವ ಹಾಗೂ ಮಲಯಾಳಂ ಚಲನಚಿತ್ರ ನಟ, ಕೇರಳದಿಂದ ಆಯ್ಕೆಯಾದ ಮೊದಲ ಬಿಜೆಪಿ ಲೋಕಸಭಾ ಸಂಸದ ಸುರೇಶ್ ಗೋಪಿ ಅವರು ಪೂರ್ಣಾವಧಿ ನಟನೆಗೆ ಮರಳುವ ಬಯಕೆಯನ್ನು ವ್ಯಕ್ತಪಡಿಸಿದ್ದು, ಸಚಿವ ಸ್ಥಾನದಿಂದ ಕೆಳಗಿಳಿಯಲು ಬಯಸಿರುವುದಾಗಿ ಹೇಳಿದ್ದಾರೆ.

ಅಕ್ಟೋಬರ್ 12, ಭಾನುವಾರ ಕಣ್ಣೂರಿನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ತ್ರಿಶೂರ್ ಸಂಸದ ಸುರೇಶ್ ಗೋಪಿ, ಸಚಿವನಾಗಿ ಅಧಿಕಾರ ವಹಿಸಿಕೊಂಡ ನಂತರ ತನ್ನ ಆದಾಯ ಗಮನಾರ್ಹವಾಗಿ ಕುಸಿದಿದೆ ಮತ್ತು ತಮ್ಮ ಕುಟುಂಬವನ್ನು ಪೋಷಿಸಲು ಚಲನಚಿತ್ರ ವೃತ್ತಿಜೀವನವನ್ನು ಪುನರಾರಂಭಿಸಲು ಬಯಸುವುದಾಗಿ ತಿಳಿಸಿದ್ದಾರೆ.

“ನಾನು ನಿಜವಾಗಿಯೂ ನಟನೆಯನ್ನು ಮುಂದುವರಿಸಲು ಬಯಸುತ್ತೇನೆ. ನಾನು ಇನ್ನಷ್ಟು ಸಂಪಾದಿಸಬೇಕಾಗಿದೆ; ನನ್ನ ಆದಾಯವು ಈಗ ಸಂಪೂರ್ಣವಾಗಿ ನಿಂತುಹೋಗಿದೆ. ಲೋಕಸಭಾ ಚುನಾವಣೆಗೆ ಮೊದಲೇ ಸಚಿವ ಸ್ಥಾನದ ಜವಾಬ್ದಾರಿಗಳನ್ನು ವಹಿಸಿಕೊಳ್ಳಲು ಇಷ್ಟವಿಲ್ಲದಿರುವುದನ್ನು ತಿಳಿಸಿದ್ದೆ. ನಟನೆಯು ನನಗೆ ಆದಾಯವನ್ನು ತರುತ್ತದೆ, ಆ ಆದಾಯದಿಂದ ನನ್ನ ಕುಟುಂಬ ಮತ್ತು ಇತರ ಕೆಲವರನ್ನು ಬೆಂಬಲಿಸಲು ನಾನು ಬಯಸುತ್ತೇನೆ. ಆದರೆ ಈಗ, ನನ್ನ ಆದಾಯದ ಮೇಲೆ ಪರಿಣಾಮ ಬೀರಿದೆ” ಎಂದು ಸುರೇಶ್ ಗೋಪಿ ಹೇಳಿದ್ದಾರೆ.

2016ರ ಅಕ್ಟೋಬರ್‌ನಲ್ಲಿ ಬಿಜೆಪಿ ಸೇರಿದ ಸುರೇಶ್ ಗೋಪಿ, 2024ರಲ್ಲಿ ಕೇರಳದಿಂದ ಲೋಕಸಭೆಗೆ ಆಯ್ಕೆಯಾದ ಮೊದಲ ಬಿಜೆಪಿ ಸಂಸದ ಎನಿಸಿಕೊಂಡರು. “ಸಚಿವನಾಗಿ ನೇಮಕಗೊಂಡಿರುವುದು ಗೆಲುವನ್ನು ಗೌರವಿಸುವ ಪಕ್ಷದ ಕ್ರಮವಾಗಿದೆ. ನಾನು ಪಕ್ಷದಲ್ಲಿ ಅತ್ಯಂತ ಕಿರಿಯ ಸದಸ್ಯನಾಗಿದ್ದರೂ, ನನ್ನನ್ನು ಸಚಿವನನ್ನಾಗಿ ಮಾಡಲಾಯಿತು. ಬಹುಶಃ ಕೇರಳದಿಂದ ಮೊದಲ ಬಿಜೆಪಿ ಸಂಸದನಾಗಲು ನನಗೆ ಸಹಾಯ ಮಾಡಿದ ಜನರಿಗಾಗಿ ನನಗೆ ಸ್ಥಾನ ಕೊಟ್ಟಿರುಬಹುದು” ಎಂದು ಸುರೇಶ್ ಗೋಪಿ ತಿಳಿಸಿದ್ದಾರೆ.

ಕಾರ್ಯಕ್ರಮದಲ್ಲಿ ಸುರೇಶ್ ಗೋಪಿ ಅವರು, ಆರ್‌ಎಸ್‌ಎಸ್ ಹಿರಿಯ ನಾಯಕ ಮತ್ತು ಕೇರಳದಿಂದ ಹೊಸದಾಗಿ ನಾಮನಿರ್ದೇಶನಗೊಂಡ ರಾಜ್ಯಸಭಾ ಸಂಸದ ಸಿ ಸದಾನಂದನ ಮಾಸ್ಟರ್ ಅವರನ್ನು ಕೇಂದ್ರ ಸಚಿವರನ್ನಾಗಿ ನೇಮಿಸಬೇಕೆಂದು ಸೂಚಿಸಿದ್ದಾರೆ. “ನಾನು ನಿಜವಾಗಿ ಹೇಳುತ್ತಿದ್ದೇನೆ: ಸದಾನಂದನ ಮಾಸ್ಟರ್ ಅವರನ್ನು ನನ್ನ ಸ್ಥಾನಕ್ಕೆ ಕೇಂದ್ರ ಸಚಿವರನ್ನಾಗಿ ಮಾಡಬೇಕು. ಹಾಗೇನಾದರು ಆದರೆ ಕೇರಳದ ರಾಜಕೀಯ ಇತಿಹಾಸದಲ್ಲಿ ಹೊಸ ಅಧ್ಯಾಯ ಪ್ರಾರಂಭವಾಗಲಿದೆ ಎಂದು ನಾನು ನಂಬುತ್ತೇನೆ” ಎಂದು ಹೇಳಿದ್ದಾರೆ.

ತಾನು ಸಚಿವ ಸ್ಥಾನದ ಆಕಾಂಕ್ಷೆಯನ್ನು ಎಂದಿಗೂ ಹೊಂದಿರಲಿಲ್ಲ ಎಂದು ಸುರೇಶ್ ಗೋಪಿ ಹೇಳಿದ್ದಾರೆ. ಚುನಾವಣೆಗೆ ಒಂದು ದಿನ ಮೊದಲು, ನಾನು ಸಚಿವನಾಗಲು ಬಯಸುವುದಿಲ್ಲ ಎಂದು ವರದಿಗಾರರಿಗೆ ಹೇಳಿದ್ದೆ. ನಾನು ನನ್ನ ಸಿನಿಮಾದಲ್ಲಿ ಮುಂದುವರಿಯಲು ಬಯಸುತ್ತೇನೆ ಎಂದಿದ್ದೆ ಎಂದು ನೆನಪಿಸಿಕೊಂಡಿದ್ದಾರೆ. ಕಣ್ಣೂರಿನ ಸಿಪಿಐಎಂ ನಾಯಕರು ಸದಾನಂದನ ಮಾಸ್ಟರ್ ರಾಜ್ಯಸಭೆಗೆ ಬಡ್ತಿ ಪಡೆದ ಬಗ್ಗೆ ಆತಂಕಗೊಂಡಿದ್ದಾರೆ. ಏಕೆಂದರೆ, ಈ ನೇಮಕಾತಿ ಸಿಪಿಐಎಂ ಭದ್ರಕೋಟೆಯಲ್ಲಿ ಬಿಜೆಪಿಯ ನಿರೀಕ್ಷೆಗಳನ್ನು ಬಲಪಡಿಸಬಹುದು ಎಂಬ ಭಯ ಅವರಿಗೆ ಇದೆ ಎಂದು ಸುರೇಶ್ ಗೋಪಿ ಇದೇ ವೇಳೆ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಬಳಿಕ ಒಡಿಶಾದ ಕರಡು ಮತದಾರರ ಪಟ್ಟಿ ಪ್ರಕಟ : 20 ಲಕ್ಷ ಹೆಸರುಗಳು ಡಿಲೀಟ್

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಗಣತಿ ಹಂತದ ಬಳಿಕ ಚುನಾವಣಾ ಆಯೋಗ ಭಾನುವಾರ (ಜು.5) ಒಡಿಶಾದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ 20 ಲಕ್ಷಕ್ಕೂ ಹೆಚ್ಚು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...

SIR: ಟಾರ್ಗೆಟ್ ಮತ್ತು ಒತ್ತಡದ ಕೆಲಸದಿಂದ ಮೂವರು ಸಿಬ್ಬಂದಿ ಸಾವು

ಕರ್ನಾಟಕದಲ್ಲಿ ನಡೆಯುತ್ತಿರುವ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯು ಕೆಳಹಂತದ ನೌಕರರ ಪಾಲಿಗೆ ಮರಣಶಾಸನವಾಗುತ್ತಿದೆಯೇ ಎಂಬ ಗಂಭೀರ ಪ್ರಶ್ನೆಯೊಂದು ಎದ್ದಿದೆ. ಅಧಿಕಾರಿಗಳು ನೀಡುತ್ತಿರುವ ಅತಿಯಾದ ಒತ್ತಡ ಮತ್ತು ಟಾರ್ಗೆಟ್ ಬೆನ್ನತ್ತುವ ಧಾವಂತದಿಂದಾಗಿ...

ಖಮೇನಿ ಅಂತ್ಯಕ್ರಿಯೆ ವೇಳೆ ಟ್ರಂಪ್ ಉದ್ಧಟತನದ ಹೇಳಿಕೆ: “ಇತಿಹಾಸ, ಗೌರವವಿಲ್ಲದ ದೇಶ ಅಮೆರಿಕ” ಎಂದು ಇರಾನ್ ತೀಕ್ಷ್ಣ ತಿರುಗೇಟು

ಟೆಹ್ರಾನ್: ಇರಾನ್‌ನ ಮಾಜಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ನಿಧನದ ನಂತರ ಜಾಗತಿಕ ರಾಜತಾಂತ್ರಿಕ ವಲಯದಲ್ಲಿ ಭಾರೀ ವಾಕ್ಸಮರ ಉಂಟಾಗಿದೆ. ಖಮೇನಿ ಅವರ ಅಂತ್ಯಕ್ರಿಯೆಯ ಸಂದರ್ಭದಲ್ಲಿ ಒಟ್ಟುಗೂಡಿರುವ ಇರಾನ್‌ನ ಇಡೀ...

ಮ್ಯಾಚ್ ಮಧ್ಯೆ ಕಾಂಡೊಮ್ ಜಾಹೀರಾತು: ಬಿಸಿಸಿಐ ವಿರುದ್ಧ ಕಿಡಿಕಾರಿದ ಮಾಜಿ ಕ್ರಿಕೆಟಿಗ, TMC ಸಂಸದ ಕೀರ್ತಿ ಆಜಾದ್

ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫರ್ಡ್‌ನಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ20 ಅಂತರರಾಷ್ಟ್ರೀಯ ಪಂದ್ಯದ ನೇರ ಪ್ರಸಾರದ ವೇಳೆ ಕಾಂಡೊಮ್ ಜಾಹೀರಾತುಗಳನ್ನು ಪ್ರಸಾರ ಮಾಡಿದ್ದನ್ನು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಮತ್ತು ಮಾಜಿ...

ಒಂದೇ ಒಂದು ಇಟ್ಟಿಗೆ ಇಟ್ಟಿಲ್ಲ : ಕಳೆದ ಆರು ವರ್ಷಗಳಿಂದ ಕಾಗದದ ಮೇಲೆಯೇ ಕಾರ್ಯ ನಿರ್ವಹಿಸುತ್ತಿರುವ 100 ಹಾಸಿಗೆಗಳ ಆಸ್ಪತ್ರೆ!

ಮಧ್ಯ ಪ್ರದೇಶದ ಇಂದೋರ್‌ನ ಖಜರಾನಾದಲ್ಲಿ ಮಂಜೂರಾದ 100 ಹಾಸಿಗೆಗಳ ಸಿವಿಲ್ ಆಸ್ಪತ್ರೆಯು ಕಳೆದ 6 ವರ್ಷಗಳಿಂದ ಕೇವಲ ಕಾಗದದ ಮೇಲಷ್ಟೇ (ದಾಖಲೆಗಳಲ್ಲಿ) ಅಸ್ತಿತ್ವದಲ್ಲಿರುವುದು ವರದಿಯಾಗಿದೆ. ಈ ವಿಲಕ್ಷಣ ಮತ್ತು ಆಘಾತಕಾರಿ ಆಡಳಿತಾತ್ಮಕ ವೈಫಲ್ಯದ ಪ್ರಕರಣವು...

ವೋಟ್‌ಯಿಂದ ಹಿಡಿದು ಮಂದಿರದ ಚಂದಾದವರೆಗೆ ಬಿಜೆಪಿಯದ್ದು ಬರೀ ‘ಚೋರಿ’ ಎಂದ ಕಾಂಗ್ರೆಸ್

ಅಯೋಧ್ಯೆಯ ರಾಮ ಮಂದಿರದಲ್ಲಿ ನಡೆದಿದೆ ಎನ್ನಲಾದ ದೇಣಿಗೆ ದುರುಪಯೋಗದ ವಿಚಾರವಾಗಿ ಭಾನುವಾರ ಕಾಂಗ್ರೆಸ್ ಪಕ್ಷವು ಬಿಜೆಪಿ-ಆರ್‌ಎಸ್‌ಎಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ. ಇದು ಅವರದೇ ಆದ ಇಕೋ ಸಿಸ್ಟಮ್‌ನ ದೊಡ್ಡ "ಹಗರಣ"ವಾಗಿದ್ದು, ಈ...

ಮುಸ್ಲಿಮರನ್ನು ಮಾದಕ ದ್ರವ್ಯ, ಭಯೋತ್ಪಾದನೆಗೆ ಲಿಂಕ್ ಮಾಡಿ ಪೋಸ್ಟ್: ಕೇರಳ ಹಿಂದೂ ಐಕ್ಯ ವೇದಿಕೆ ಮುಖ್ಯಸ್ಥ ಆರ್‌ವಿ ಬಾಬು ವಿರುದ್ಧ ಪ್ರಕರಣ ದಾಖಲು

ಕೊಚ್ಚಿ: ಮುಸ್ಲಿಂ ಸಮುದಾಯ ಮತ್ತು ಅದರ ಧಾರ್ಮಿಕ ಮುಖಂಡರನ್ನು ಗುರಿಯಾಗಿಸಿಕೊಂಡು ಸಾಮಾಜಿಕ ಮಾಧ್ಯಮದಲ್ಲಿ ಆಕ್ಷೇಪಾರ್ಹ ಹಾಗೂ ಕೋಮು ಪ್ರಚೋದನಾತ್ಮಕ ಪೋಸ್ಟ್ ಹಂಚಿಕೊಂಡಿದ್ದಕ್ಕಾಗಿ ಕೇರಳದ ಹಿಂದೂ ಐಕ್ಯ ವೇದಿಕೆಯ ರಾಜ್ಯ ಅಧ್ಯಕ್ಷ ಆರ್.ವಿ. ಬಾಬು...

ಇರಾನ್ ಜನರು ಅವರನ್ನು ದ್ವೇಷಿಸುತ್ತಾರೆ ಅಂದುಕೊಂಡಿದ್ದೆ: ಖಮೇನಿ ಅಂತ್ಯಕ್ರಿಯೆಯ ಜನಸಾಗರ ನೋಡಿ ಶಾಕ್ ಆದ ಟ್ರಂಪ್

ಇರಾನ್‌ನ ಮಾಜಿ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಅಂತ್ಯಕ್ರಿಯೆಯಲ್ಲಿ ಲಕ್ಷಾಂತರ ಜನರು ಭಾಗವಹಿಸಿ ಕಣ್ಣೀರು ಹಾಕುತ್ತಿರುವುದನ್ನು ನೋಡಿ ತಮಗೆ ತೀವ್ರ ಆಘಾತವಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ....

‘ನಿಮ್ಮ ಮೌನ ಯುವಜನರನ್ನು ಕೇವಲ ಕೀಟಗಳಂತೆ ನೋಡುತ್ತೀರಿ ಎಂಬುದಕ್ಕೆ ಒಪ್ಪಿಗೆಯಾಗಿದೆ’: ಮೋದಿಗೆ ಬಹಿರಂಗ ಪತ್ರ ಬರೆದ ಸಿಜೆಪಿ

"ಈ ದೇಶದ ಯುವಜನರನ್ನು ನೀವು ಕೇವಲ ನಿರ್ಲಕ್ಷಿಸಬೇಕಾದ ಕೀಟಗಳಂತೆ ನೋಡುತ್ತಿದ್ದೀರಾ?" ಎಂದು ಪ್ರಶ್ನಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಪ್ರಧಾನಿ ನರೇಂದ್ರ ಮೋದಿ ಅವರಿಗೆ ಶನಿವಾರ (ಜುಲೈ 4) ಬಹಿರಂಗ ಪತ್ರ ಬರೆದಿದೆ. ದೇಶದ...

ಮಮತಾ ಬ್ಯಾನರ್ಜಿಗೆ ಬಿಗ್ ಶಾಕ್: ನೇಮಕಗೊಂಡ ತಿಂಗಳಲ್ಲೇ ಟಿಎಂಸಿ ರಾಜ್ಯಾಧ್ಯಕ್ಷೆ ಚಂದ್ರಿಮಾ ಭಟ್ಟಾಚಾರ್ಯ ರಾಜೀನಾಮೆ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಹೀನಾಯ ಸೋಲಿನ ಹಿನ್ನೆಲೆಯಲ್ಲಿ, ಅತ್ಯಂತ ನಿರ್ಣಾಯಕವಾದ ಸಾಂಸ್ಥಿಕ ಜವಾಬ್ದಾರಿಗೆ ನೇಮಕಗೊಂಡ ಕೇವಲ ಒಂದು ತಿಂಗಳ ಒಳಗಾಗಿಯೇ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ರಾಜ್ಯ ಘಟಕದ ಅಧ್ಯಕ್ಷೆ ಚಂದ್ರಿಮಾ...