Homeಮುಖಪುಟ"ಆದಾಯ ನಿಂತು ಹೋಗಿದೆ": ಕೇಂದ್ರ ಸಚಿವ ಸ್ಥಾನ ತೊರೆದು ನಟನೆಯಲ್ಲಿ ಮುಂದುವರಿಯುವ ಇಂಗಿತ ವ್ಯಕ್ತಪಡಿಸಿದ ಸುರೇಶ್...

“ಆದಾಯ ನಿಂತು ಹೋಗಿದೆ”: ಕೇಂದ್ರ ಸಚಿವ ಸ್ಥಾನ ತೊರೆದು ನಟನೆಯಲ್ಲಿ ಮುಂದುವರಿಯುವ ಇಂಗಿತ ವ್ಯಕ್ತಪಡಿಸಿದ ಸುರೇಶ್ ಗೋಪಿ

- Advertisement -
- Advertisement -

ಕೇಂದ್ರ ಪೆಟ್ರೋಲಿಯಂ, ನೈಸರ್ಗಿಕ ಅನಿಲ ಮತ್ತು ಪ್ರವಾಸೋದ್ಯಮ ಖಾತೆಯ ರಾಜ್ಯ ಸಚಿವ ಹಾಗೂ ಮಲಯಾಳಂ ಚಲನಚಿತ್ರ ನಟ, ಕೇರಳದಿಂದ ಆಯ್ಕೆಯಾದ ಮೊದಲ ಬಿಜೆಪಿ ಲೋಕಸಭಾ ಸಂಸದ ಸುರೇಶ್ ಗೋಪಿ ಅವರು ಪೂರ್ಣಾವಧಿ ನಟನೆಗೆ ಮರಳುವ ಬಯಕೆಯನ್ನು ವ್ಯಕ್ತಪಡಿಸಿದ್ದು, ಸಚಿವ ಸ್ಥಾನದಿಂದ ಕೆಳಗಿಳಿಯಲು ಬಯಸಿರುವುದಾಗಿ ಹೇಳಿದ್ದಾರೆ.

ಅಕ್ಟೋಬರ್ 12, ಭಾನುವಾರ ಕಣ್ಣೂರಿನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ತ್ರಿಶೂರ್ ಸಂಸದ ಸುರೇಶ್ ಗೋಪಿ, ಸಚಿವನಾಗಿ ಅಧಿಕಾರ ವಹಿಸಿಕೊಂಡ ನಂತರ ತನ್ನ ಆದಾಯ ಗಮನಾರ್ಹವಾಗಿ ಕುಸಿದಿದೆ ಮತ್ತು ತಮ್ಮ ಕುಟುಂಬವನ್ನು ಪೋಷಿಸಲು ಚಲನಚಿತ್ರ ವೃತ್ತಿಜೀವನವನ್ನು ಪುನರಾರಂಭಿಸಲು ಬಯಸುವುದಾಗಿ ತಿಳಿಸಿದ್ದಾರೆ.

“ನಾನು ನಿಜವಾಗಿಯೂ ನಟನೆಯನ್ನು ಮುಂದುವರಿಸಲು ಬಯಸುತ್ತೇನೆ. ನಾನು ಇನ್ನಷ್ಟು ಸಂಪಾದಿಸಬೇಕಾಗಿದೆ; ನನ್ನ ಆದಾಯವು ಈಗ ಸಂಪೂರ್ಣವಾಗಿ ನಿಂತುಹೋಗಿದೆ. ಲೋಕಸಭಾ ಚುನಾವಣೆಗೆ ಮೊದಲೇ ಸಚಿವ ಸ್ಥಾನದ ಜವಾಬ್ದಾರಿಗಳನ್ನು ವಹಿಸಿಕೊಳ್ಳಲು ಇಷ್ಟವಿಲ್ಲದಿರುವುದನ್ನು ತಿಳಿಸಿದ್ದೆ. ನಟನೆಯು ನನಗೆ ಆದಾಯವನ್ನು ತರುತ್ತದೆ, ಆ ಆದಾಯದಿಂದ ನನ್ನ ಕುಟುಂಬ ಮತ್ತು ಇತರ ಕೆಲವರನ್ನು ಬೆಂಬಲಿಸಲು ನಾನು ಬಯಸುತ್ತೇನೆ. ಆದರೆ ಈಗ, ನನ್ನ ಆದಾಯದ ಮೇಲೆ ಪರಿಣಾಮ ಬೀರಿದೆ” ಎಂದು ಸುರೇಶ್ ಗೋಪಿ ಹೇಳಿದ್ದಾರೆ.

2016ರ ಅಕ್ಟೋಬರ್‌ನಲ್ಲಿ ಬಿಜೆಪಿ ಸೇರಿದ ಸುರೇಶ್ ಗೋಪಿ, 2024ರಲ್ಲಿ ಕೇರಳದಿಂದ ಲೋಕಸಭೆಗೆ ಆಯ್ಕೆಯಾದ ಮೊದಲ ಬಿಜೆಪಿ ಸಂಸದ ಎನಿಸಿಕೊಂಡರು. “ಸಚಿವನಾಗಿ ನೇಮಕಗೊಂಡಿರುವುದು ಗೆಲುವನ್ನು ಗೌರವಿಸುವ ಪಕ್ಷದ ಕ್ರಮವಾಗಿದೆ. ನಾನು ಪಕ್ಷದಲ್ಲಿ ಅತ್ಯಂತ ಕಿರಿಯ ಸದಸ್ಯನಾಗಿದ್ದರೂ, ನನ್ನನ್ನು ಸಚಿವನನ್ನಾಗಿ ಮಾಡಲಾಯಿತು. ಬಹುಶಃ ಕೇರಳದಿಂದ ಮೊದಲ ಬಿಜೆಪಿ ಸಂಸದನಾಗಲು ನನಗೆ ಸಹಾಯ ಮಾಡಿದ ಜನರಿಗಾಗಿ ನನಗೆ ಸ್ಥಾನ ಕೊಟ್ಟಿರುಬಹುದು” ಎಂದು ಸುರೇಶ್ ಗೋಪಿ ತಿಳಿಸಿದ್ದಾರೆ.

ಕಾರ್ಯಕ್ರಮದಲ್ಲಿ ಸುರೇಶ್ ಗೋಪಿ ಅವರು, ಆರ್‌ಎಸ್‌ಎಸ್ ಹಿರಿಯ ನಾಯಕ ಮತ್ತು ಕೇರಳದಿಂದ ಹೊಸದಾಗಿ ನಾಮನಿರ್ದೇಶನಗೊಂಡ ರಾಜ್ಯಸಭಾ ಸಂಸದ ಸಿ ಸದಾನಂದನ ಮಾಸ್ಟರ್ ಅವರನ್ನು ಕೇಂದ್ರ ಸಚಿವರನ್ನಾಗಿ ನೇಮಿಸಬೇಕೆಂದು ಸೂಚಿಸಿದ್ದಾರೆ. “ನಾನು ನಿಜವಾಗಿ ಹೇಳುತ್ತಿದ್ದೇನೆ: ಸದಾನಂದನ ಮಾಸ್ಟರ್ ಅವರನ್ನು ನನ್ನ ಸ್ಥಾನಕ್ಕೆ ಕೇಂದ್ರ ಸಚಿವರನ್ನಾಗಿ ಮಾಡಬೇಕು. ಹಾಗೇನಾದರು ಆದರೆ ಕೇರಳದ ರಾಜಕೀಯ ಇತಿಹಾಸದಲ್ಲಿ ಹೊಸ ಅಧ್ಯಾಯ ಪ್ರಾರಂಭವಾಗಲಿದೆ ಎಂದು ನಾನು ನಂಬುತ್ತೇನೆ” ಎಂದು ಹೇಳಿದ್ದಾರೆ.

ತಾನು ಸಚಿವ ಸ್ಥಾನದ ಆಕಾಂಕ್ಷೆಯನ್ನು ಎಂದಿಗೂ ಹೊಂದಿರಲಿಲ್ಲ ಎಂದು ಸುರೇಶ್ ಗೋಪಿ ಹೇಳಿದ್ದಾರೆ. ಚುನಾವಣೆಗೆ ಒಂದು ದಿನ ಮೊದಲು, ನಾನು ಸಚಿವನಾಗಲು ಬಯಸುವುದಿಲ್ಲ ಎಂದು ವರದಿಗಾರರಿಗೆ ಹೇಳಿದ್ದೆ. ನಾನು ನನ್ನ ಸಿನಿಮಾದಲ್ಲಿ ಮುಂದುವರಿಯಲು ಬಯಸುತ್ತೇನೆ ಎಂದಿದ್ದೆ ಎಂದು ನೆನಪಿಸಿಕೊಂಡಿದ್ದಾರೆ. ಕಣ್ಣೂರಿನ ಸಿಪಿಐಎಂ ನಾಯಕರು ಸದಾನಂದನ ಮಾಸ್ಟರ್ ರಾಜ್ಯಸಭೆಗೆ ಬಡ್ತಿ ಪಡೆದ ಬಗ್ಗೆ ಆತಂಕಗೊಂಡಿದ್ದಾರೆ. ಏಕೆಂದರೆ, ಈ ನೇಮಕಾತಿ ಸಿಪಿಐಎಂ ಭದ್ರಕೋಟೆಯಲ್ಲಿ ಬಿಜೆಪಿಯ ನಿರೀಕ್ಷೆಗಳನ್ನು ಬಲಪಡಿಸಬಹುದು ಎಂಬ ಭಯ ಅವರಿಗೆ ಇದೆ ಎಂದು ಸುರೇಶ್ ಗೋಪಿ ಇದೇ ವೇಳೆ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...