Homeಮುಖಪುಟ"ಆದಾಯ ನಿಂತು ಹೋಗಿದೆ": ಕೇಂದ್ರ ಸಚಿವ ಸ್ಥಾನ ತೊರೆದು ನಟನೆಯಲ್ಲಿ ಮುಂದುವರಿಯುವ ಇಂಗಿತ ವ್ಯಕ್ತಪಡಿಸಿದ ಸುರೇಶ್...

“ಆದಾಯ ನಿಂತು ಹೋಗಿದೆ”: ಕೇಂದ್ರ ಸಚಿವ ಸ್ಥಾನ ತೊರೆದು ನಟನೆಯಲ್ಲಿ ಮುಂದುವರಿಯುವ ಇಂಗಿತ ವ್ಯಕ್ತಪಡಿಸಿದ ಸುರೇಶ್ ಗೋಪಿ

- Advertisement -
- Advertisement -

ಕೇಂದ್ರ ಪೆಟ್ರೋಲಿಯಂ, ನೈಸರ್ಗಿಕ ಅನಿಲ ಮತ್ತು ಪ್ರವಾಸೋದ್ಯಮ ಖಾತೆಯ ರಾಜ್ಯ ಸಚಿವ ಹಾಗೂ ಮಲಯಾಳಂ ಚಲನಚಿತ್ರ ನಟ, ಕೇರಳದಿಂದ ಆಯ್ಕೆಯಾದ ಮೊದಲ ಬಿಜೆಪಿ ಲೋಕಸಭಾ ಸಂಸದ ಸುರೇಶ್ ಗೋಪಿ ಅವರು ಪೂರ್ಣಾವಧಿ ನಟನೆಗೆ ಮರಳುವ ಬಯಕೆಯನ್ನು ವ್ಯಕ್ತಪಡಿಸಿದ್ದು, ಸಚಿವ ಸ್ಥಾನದಿಂದ ಕೆಳಗಿಳಿಯಲು ಬಯಸಿರುವುದಾಗಿ ಹೇಳಿದ್ದಾರೆ.

ಅಕ್ಟೋಬರ್ 12, ಭಾನುವಾರ ಕಣ್ಣೂರಿನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ತ್ರಿಶೂರ್ ಸಂಸದ ಸುರೇಶ್ ಗೋಪಿ, ಸಚಿವನಾಗಿ ಅಧಿಕಾರ ವಹಿಸಿಕೊಂಡ ನಂತರ ತನ್ನ ಆದಾಯ ಗಮನಾರ್ಹವಾಗಿ ಕುಸಿದಿದೆ ಮತ್ತು ತಮ್ಮ ಕುಟುಂಬವನ್ನು ಪೋಷಿಸಲು ಚಲನಚಿತ್ರ ವೃತ್ತಿಜೀವನವನ್ನು ಪುನರಾರಂಭಿಸಲು ಬಯಸುವುದಾಗಿ ತಿಳಿಸಿದ್ದಾರೆ.

“ನಾನು ನಿಜವಾಗಿಯೂ ನಟನೆಯನ್ನು ಮುಂದುವರಿಸಲು ಬಯಸುತ್ತೇನೆ. ನಾನು ಇನ್ನಷ್ಟು ಸಂಪಾದಿಸಬೇಕಾಗಿದೆ; ನನ್ನ ಆದಾಯವು ಈಗ ಸಂಪೂರ್ಣವಾಗಿ ನಿಂತುಹೋಗಿದೆ. ಲೋಕಸಭಾ ಚುನಾವಣೆಗೆ ಮೊದಲೇ ಸಚಿವ ಸ್ಥಾನದ ಜವಾಬ್ದಾರಿಗಳನ್ನು ವಹಿಸಿಕೊಳ್ಳಲು ಇಷ್ಟವಿಲ್ಲದಿರುವುದನ್ನು ತಿಳಿಸಿದ್ದೆ. ನಟನೆಯು ನನಗೆ ಆದಾಯವನ್ನು ತರುತ್ತದೆ, ಆ ಆದಾಯದಿಂದ ನನ್ನ ಕುಟುಂಬ ಮತ್ತು ಇತರ ಕೆಲವರನ್ನು ಬೆಂಬಲಿಸಲು ನಾನು ಬಯಸುತ್ತೇನೆ. ಆದರೆ ಈಗ, ನನ್ನ ಆದಾಯದ ಮೇಲೆ ಪರಿಣಾಮ ಬೀರಿದೆ” ಎಂದು ಸುರೇಶ್ ಗೋಪಿ ಹೇಳಿದ್ದಾರೆ.

2016ರ ಅಕ್ಟೋಬರ್‌ನಲ್ಲಿ ಬಿಜೆಪಿ ಸೇರಿದ ಸುರೇಶ್ ಗೋಪಿ, 2024ರಲ್ಲಿ ಕೇರಳದಿಂದ ಲೋಕಸಭೆಗೆ ಆಯ್ಕೆಯಾದ ಮೊದಲ ಬಿಜೆಪಿ ಸಂಸದ ಎನಿಸಿಕೊಂಡರು. “ಸಚಿವನಾಗಿ ನೇಮಕಗೊಂಡಿರುವುದು ಗೆಲುವನ್ನು ಗೌರವಿಸುವ ಪಕ್ಷದ ಕ್ರಮವಾಗಿದೆ. ನಾನು ಪಕ್ಷದಲ್ಲಿ ಅತ್ಯಂತ ಕಿರಿಯ ಸದಸ್ಯನಾಗಿದ್ದರೂ, ನನ್ನನ್ನು ಸಚಿವನನ್ನಾಗಿ ಮಾಡಲಾಯಿತು. ಬಹುಶಃ ಕೇರಳದಿಂದ ಮೊದಲ ಬಿಜೆಪಿ ಸಂಸದನಾಗಲು ನನಗೆ ಸಹಾಯ ಮಾಡಿದ ಜನರಿಗಾಗಿ ನನಗೆ ಸ್ಥಾನ ಕೊಟ್ಟಿರುಬಹುದು” ಎಂದು ಸುರೇಶ್ ಗೋಪಿ ತಿಳಿಸಿದ್ದಾರೆ.

ಕಾರ್ಯಕ್ರಮದಲ್ಲಿ ಸುರೇಶ್ ಗೋಪಿ ಅವರು, ಆರ್‌ಎಸ್‌ಎಸ್ ಹಿರಿಯ ನಾಯಕ ಮತ್ತು ಕೇರಳದಿಂದ ಹೊಸದಾಗಿ ನಾಮನಿರ್ದೇಶನಗೊಂಡ ರಾಜ್ಯಸಭಾ ಸಂಸದ ಸಿ ಸದಾನಂದನ ಮಾಸ್ಟರ್ ಅವರನ್ನು ಕೇಂದ್ರ ಸಚಿವರನ್ನಾಗಿ ನೇಮಿಸಬೇಕೆಂದು ಸೂಚಿಸಿದ್ದಾರೆ. “ನಾನು ನಿಜವಾಗಿ ಹೇಳುತ್ತಿದ್ದೇನೆ: ಸದಾನಂದನ ಮಾಸ್ಟರ್ ಅವರನ್ನು ನನ್ನ ಸ್ಥಾನಕ್ಕೆ ಕೇಂದ್ರ ಸಚಿವರನ್ನಾಗಿ ಮಾಡಬೇಕು. ಹಾಗೇನಾದರು ಆದರೆ ಕೇರಳದ ರಾಜಕೀಯ ಇತಿಹಾಸದಲ್ಲಿ ಹೊಸ ಅಧ್ಯಾಯ ಪ್ರಾರಂಭವಾಗಲಿದೆ ಎಂದು ನಾನು ನಂಬುತ್ತೇನೆ” ಎಂದು ಹೇಳಿದ್ದಾರೆ.

ತಾನು ಸಚಿವ ಸ್ಥಾನದ ಆಕಾಂಕ್ಷೆಯನ್ನು ಎಂದಿಗೂ ಹೊಂದಿರಲಿಲ್ಲ ಎಂದು ಸುರೇಶ್ ಗೋಪಿ ಹೇಳಿದ್ದಾರೆ. ಚುನಾವಣೆಗೆ ಒಂದು ದಿನ ಮೊದಲು, ನಾನು ಸಚಿವನಾಗಲು ಬಯಸುವುದಿಲ್ಲ ಎಂದು ವರದಿಗಾರರಿಗೆ ಹೇಳಿದ್ದೆ. ನಾನು ನನ್ನ ಸಿನಿಮಾದಲ್ಲಿ ಮುಂದುವರಿಯಲು ಬಯಸುತ್ತೇನೆ ಎಂದಿದ್ದೆ ಎಂದು ನೆನಪಿಸಿಕೊಂಡಿದ್ದಾರೆ. ಕಣ್ಣೂರಿನ ಸಿಪಿಐಎಂ ನಾಯಕರು ಸದಾನಂದನ ಮಾಸ್ಟರ್ ರಾಜ್ಯಸಭೆಗೆ ಬಡ್ತಿ ಪಡೆದ ಬಗ್ಗೆ ಆತಂಕಗೊಂಡಿದ್ದಾರೆ. ಏಕೆಂದರೆ, ಈ ನೇಮಕಾತಿ ಸಿಪಿಐಎಂ ಭದ್ರಕೋಟೆಯಲ್ಲಿ ಬಿಜೆಪಿಯ ನಿರೀಕ್ಷೆಗಳನ್ನು ಬಲಪಡಿಸಬಹುದು ಎಂಬ ಭಯ ಅವರಿಗೆ ಇದೆ ಎಂದು ಸುರೇಶ್ ಗೋಪಿ ಇದೇ ವೇಳೆ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...