Homeಮುಖಪುಟ"ಆದಾಯ ನಿಂತು ಹೋಗಿದೆ": ಕೇಂದ್ರ ಸಚಿವ ಸ್ಥಾನ ತೊರೆದು ನಟನೆಯಲ್ಲಿ ಮುಂದುವರಿಯುವ ಇಂಗಿತ ವ್ಯಕ್ತಪಡಿಸಿದ ಸುರೇಶ್...

“ಆದಾಯ ನಿಂತು ಹೋಗಿದೆ”: ಕೇಂದ್ರ ಸಚಿವ ಸ್ಥಾನ ತೊರೆದು ನಟನೆಯಲ್ಲಿ ಮುಂದುವರಿಯುವ ಇಂಗಿತ ವ್ಯಕ್ತಪಡಿಸಿದ ಸುರೇಶ್ ಗೋಪಿ

- Advertisement -
- Advertisement -

ಕೇಂದ್ರ ಪೆಟ್ರೋಲಿಯಂ, ನೈಸರ್ಗಿಕ ಅನಿಲ ಮತ್ತು ಪ್ರವಾಸೋದ್ಯಮ ಖಾತೆಯ ರಾಜ್ಯ ಸಚಿವ ಹಾಗೂ ಮಲಯಾಳಂ ಚಲನಚಿತ್ರ ನಟ, ಕೇರಳದಿಂದ ಆಯ್ಕೆಯಾದ ಮೊದಲ ಬಿಜೆಪಿ ಲೋಕಸಭಾ ಸಂಸದ ಸುರೇಶ್ ಗೋಪಿ ಅವರು ಪೂರ್ಣಾವಧಿ ನಟನೆಗೆ ಮರಳುವ ಬಯಕೆಯನ್ನು ವ್ಯಕ್ತಪಡಿಸಿದ್ದು, ಸಚಿವ ಸ್ಥಾನದಿಂದ ಕೆಳಗಿಳಿಯಲು ಬಯಸಿರುವುದಾಗಿ ಹೇಳಿದ್ದಾರೆ.

ಅಕ್ಟೋಬರ್ 12, ಭಾನುವಾರ ಕಣ್ಣೂರಿನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ತ್ರಿಶೂರ್ ಸಂಸದ ಸುರೇಶ್ ಗೋಪಿ, ಸಚಿವನಾಗಿ ಅಧಿಕಾರ ವಹಿಸಿಕೊಂಡ ನಂತರ ತನ್ನ ಆದಾಯ ಗಮನಾರ್ಹವಾಗಿ ಕುಸಿದಿದೆ ಮತ್ತು ತಮ್ಮ ಕುಟುಂಬವನ್ನು ಪೋಷಿಸಲು ಚಲನಚಿತ್ರ ವೃತ್ತಿಜೀವನವನ್ನು ಪುನರಾರಂಭಿಸಲು ಬಯಸುವುದಾಗಿ ತಿಳಿಸಿದ್ದಾರೆ.

“ನಾನು ನಿಜವಾಗಿಯೂ ನಟನೆಯನ್ನು ಮುಂದುವರಿಸಲು ಬಯಸುತ್ತೇನೆ. ನಾನು ಇನ್ನಷ್ಟು ಸಂಪಾದಿಸಬೇಕಾಗಿದೆ; ನನ್ನ ಆದಾಯವು ಈಗ ಸಂಪೂರ್ಣವಾಗಿ ನಿಂತುಹೋಗಿದೆ. ಲೋಕಸಭಾ ಚುನಾವಣೆಗೆ ಮೊದಲೇ ಸಚಿವ ಸ್ಥಾನದ ಜವಾಬ್ದಾರಿಗಳನ್ನು ವಹಿಸಿಕೊಳ್ಳಲು ಇಷ್ಟವಿಲ್ಲದಿರುವುದನ್ನು ತಿಳಿಸಿದ್ದೆ. ನಟನೆಯು ನನಗೆ ಆದಾಯವನ್ನು ತರುತ್ತದೆ, ಆ ಆದಾಯದಿಂದ ನನ್ನ ಕುಟುಂಬ ಮತ್ತು ಇತರ ಕೆಲವರನ್ನು ಬೆಂಬಲಿಸಲು ನಾನು ಬಯಸುತ್ತೇನೆ. ಆದರೆ ಈಗ, ನನ್ನ ಆದಾಯದ ಮೇಲೆ ಪರಿಣಾಮ ಬೀರಿದೆ” ಎಂದು ಸುರೇಶ್ ಗೋಪಿ ಹೇಳಿದ್ದಾರೆ.

2016ರ ಅಕ್ಟೋಬರ್‌ನಲ್ಲಿ ಬಿಜೆಪಿ ಸೇರಿದ ಸುರೇಶ್ ಗೋಪಿ, 2024ರಲ್ಲಿ ಕೇರಳದಿಂದ ಲೋಕಸಭೆಗೆ ಆಯ್ಕೆಯಾದ ಮೊದಲ ಬಿಜೆಪಿ ಸಂಸದ ಎನಿಸಿಕೊಂಡರು. “ಸಚಿವನಾಗಿ ನೇಮಕಗೊಂಡಿರುವುದು ಗೆಲುವನ್ನು ಗೌರವಿಸುವ ಪಕ್ಷದ ಕ್ರಮವಾಗಿದೆ. ನಾನು ಪಕ್ಷದಲ್ಲಿ ಅತ್ಯಂತ ಕಿರಿಯ ಸದಸ್ಯನಾಗಿದ್ದರೂ, ನನ್ನನ್ನು ಸಚಿವನನ್ನಾಗಿ ಮಾಡಲಾಯಿತು. ಬಹುಶಃ ಕೇರಳದಿಂದ ಮೊದಲ ಬಿಜೆಪಿ ಸಂಸದನಾಗಲು ನನಗೆ ಸಹಾಯ ಮಾಡಿದ ಜನರಿಗಾಗಿ ನನಗೆ ಸ್ಥಾನ ಕೊಟ್ಟಿರುಬಹುದು” ಎಂದು ಸುರೇಶ್ ಗೋಪಿ ತಿಳಿಸಿದ್ದಾರೆ.

ಕಾರ್ಯಕ್ರಮದಲ್ಲಿ ಸುರೇಶ್ ಗೋಪಿ ಅವರು, ಆರ್‌ಎಸ್‌ಎಸ್ ಹಿರಿಯ ನಾಯಕ ಮತ್ತು ಕೇರಳದಿಂದ ಹೊಸದಾಗಿ ನಾಮನಿರ್ದೇಶನಗೊಂಡ ರಾಜ್ಯಸಭಾ ಸಂಸದ ಸಿ ಸದಾನಂದನ ಮಾಸ್ಟರ್ ಅವರನ್ನು ಕೇಂದ್ರ ಸಚಿವರನ್ನಾಗಿ ನೇಮಿಸಬೇಕೆಂದು ಸೂಚಿಸಿದ್ದಾರೆ. “ನಾನು ನಿಜವಾಗಿ ಹೇಳುತ್ತಿದ್ದೇನೆ: ಸದಾನಂದನ ಮಾಸ್ಟರ್ ಅವರನ್ನು ನನ್ನ ಸ್ಥಾನಕ್ಕೆ ಕೇಂದ್ರ ಸಚಿವರನ್ನಾಗಿ ಮಾಡಬೇಕು. ಹಾಗೇನಾದರು ಆದರೆ ಕೇರಳದ ರಾಜಕೀಯ ಇತಿಹಾಸದಲ್ಲಿ ಹೊಸ ಅಧ್ಯಾಯ ಪ್ರಾರಂಭವಾಗಲಿದೆ ಎಂದು ನಾನು ನಂಬುತ್ತೇನೆ” ಎಂದು ಹೇಳಿದ್ದಾರೆ.

ತಾನು ಸಚಿವ ಸ್ಥಾನದ ಆಕಾಂಕ್ಷೆಯನ್ನು ಎಂದಿಗೂ ಹೊಂದಿರಲಿಲ್ಲ ಎಂದು ಸುರೇಶ್ ಗೋಪಿ ಹೇಳಿದ್ದಾರೆ. ಚುನಾವಣೆಗೆ ಒಂದು ದಿನ ಮೊದಲು, ನಾನು ಸಚಿವನಾಗಲು ಬಯಸುವುದಿಲ್ಲ ಎಂದು ವರದಿಗಾರರಿಗೆ ಹೇಳಿದ್ದೆ. ನಾನು ನನ್ನ ಸಿನಿಮಾದಲ್ಲಿ ಮುಂದುವರಿಯಲು ಬಯಸುತ್ತೇನೆ ಎಂದಿದ್ದೆ ಎಂದು ನೆನಪಿಸಿಕೊಂಡಿದ್ದಾರೆ. ಕಣ್ಣೂರಿನ ಸಿಪಿಐಎಂ ನಾಯಕರು ಸದಾನಂದನ ಮಾಸ್ಟರ್ ರಾಜ್ಯಸಭೆಗೆ ಬಡ್ತಿ ಪಡೆದ ಬಗ್ಗೆ ಆತಂಕಗೊಂಡಿದ್ದಾರೆ. ಏಕೆಂದರೆ, ಈ ನೇಮಕಾತಿ ಸಿಪಿಐಎಂ ಭದ್ರಕೋಟೆಯಲ್ಲಿ ಬಿಜೆಪಿಯ ನಿರೀಕ್ಷೆಗಳನ್ನು ಬಲಪಡಿಸಬಹುದು ಎಂಬ ಭಯ ಅವರಿಗೆ ಇದೆ ಎಂದು ಸುರೇಶ್ ಗೋಪಿ ಇದೇ ವೇಳೆ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...

‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ...

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ : ಬಿಜೆಪಿಯ ಸೀಟ್ ಚೋರಿ?

ರಾಜ್ಯಸಭಾ ಚುನಾವಣೆಗೆ ಮಧ್ಯಪ್ರದೇಶದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿರುವುದು ದೇಶದಲ್ಲಿ ದೊಡ್ಡ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಕಾಂಗ್ರೆಸ್ ಈ ವಿಚಾರವನ್ನು ಬಹಳ ಗಂಭೀರವಾಗಿ ಪರಿಗಣಿಸಿ ಬುಧವಾರ (ಜೂ. 10)...