Homeಮುಖಪುಟಕಾಂಗ್ರೆಸ್‌ ಪಕ್ಷದ ಬ್ಯಾಂಕ್ ಖಾತೆಗಳ ವಿರುದ್ಧದ ಕ್ರಮಕ್ಕೆ ತಡೆ ನೀಡಲು ನಿರಾಕರಿಸಿದ ನ್ಯಾಯಮಂಡಳಿ

ಕಾಂಗ್ರೆಸ್‌ ಪಕ್ಷದ ಬ್ಯಾಂಕ್ ಖಾತೆಗಳ ವಿರುದ್ಧದ ಕ್ರಮಕ್ಕೆ ತಡೆ ನೀಡಲು ನಿರಾಕರಿಸಿದ ನ್ಯಾಯಮಂಡಳಿ

- Advertisement -
- Advertisement -

ಕಾಂಗ್ರೆಸ್‌ ಪಕ್ಷದ ಬ್ಯಾಂಕ್ ಖಾತೆಗಳನ್ನು ಮುಟ್ಟುಗೋಲು ಹಾಕಿರುವುದನ್ನು ಪ್ರಶ್ನಿಸಿ ಕಾಂಗ್ರೆಸ್ ಸಲ್ಲಿಸಿದ ಮನವಿಯನ್ನು ಆದಾಯ ತೆರಿಗೆ ಮೇಲ್ಮನವಿ ನ್ಯಾಯಮಂಡಳಿ (ಐಟಿಎಟಿ) ವಜಾಗೊಳಿಸಿದೆ.

210 ಕೋಟಿ ತೆರಿಗೆ ಬೇಡಿಕೆಯ ವಿವಾದಕ್ಕೆ ಸಂಬಂಧಿಸಿದಂತೆ ತಮ್ಮ ಬ್ಯಾಂಕ್ ಖಾತೆಗಳ ಮೇಲಿನ ನಿರ್ಬಂಧಗಳ ವಿರುದ್ಧ ತಡೆ ಕೋರಿ ಕಾಂಗ್ರೆಸ್’ ಆದಾಯ ತೆರಿಗೆ ಮೇಲ್ಮನವಿ ನ್ಯಾಯಮಂಡಳಿಗೆ’ (ಐಟಿಎಟಿ) ಸಲ್ಲಿಸಿದ ಮನವಿ  ತಿರಸ್ಕಾರಗೊಂಡಿದೆ.

2018-19ನೇ ಸಾಲಿನಲ್ಲಿ 210 ಕೋಟಿ ರೂ.ಆದಾಯ ತೆರಿಗೆ ಬಾಕಿ ಹಾಗೂ ದಂಡವನ್ನು ಪಾವತಿಸಿಲ್ಲ ಎಂದು ಕಾಂಗ್ರೆಸ್ ಪಕ್ಷದ ಕೆಲವು ಬ್ಯಾಂಕ್ ಖಾತೆಗಳಲ್ಲಿದ್ದ 115 ಕೋಟಿ ರೂ.ಗಳನ್ನು ಆದಾಯ ತೆರಿಗೆ ಇಲಾಖೆಯು ಕಳೆದ ವಾರ ಮುಟ್ಟುಗೋಲು ಹಾಕಿತ್ತು. ಕಾಂಗ್ರೆಸ್ ಪರ ಹಾಜರಾದ ಹಿರಿಯ ವಕೀಲ ವಿವೇಕ್ ಟಂಖಾ, ಆದೇಶವನ್ನು 10 ದಿನಗಳವರೆಗೆ ತಡೆಹಿಡಿಯಲು ವಿನಂತಿಸಿದ್ದಾರೆ.

ತೆರಿಗೆ ಬೇಡಿಕೆ ವಿವಾದಕ್ಕೆ ಸಂಬಂಧಿಸಿದಂತೆ ಐಟಿ ಇಲಾಖೆ ತನ್ನ ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸಿದೆ ಎಂದು ಫೆಬ್ರವರಿ 16 ರಂದು ಕಾಂಗ್ರೆಸ್ ಹೇಳಿಕೊಂಡಿತ್ತು. ಕಾಂಗ್ರೆಸ್ ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸಿರುವ ತನ್ನ ಕ್ರಮದ ಬಗ್ಗೆ ಐಟಿ ಇಲಾಖೆ ಯಾವುದೇ ಅಧಿಕೃತ ಹೇಳಿಕೆ ನೀಡದಿದ್ದರೂ, ವರ್ಷಗಳಿಂದ ಆದಾಯ ತೆರಿಗೆ ಬಾಕಿ ಪಾವತಿಸದವರ ವಿರುದ್ಧದ ಸಾಮಾನ್ಯ ಪ್ರಕ್ರಿಯೆಯಾಗಿದೆ ಮತ್ತು ಐಟಿ ಇಲಾಖೆಯು ಇಂತಹ ಪ್ರಕರಣಗಳಲ್ಲಿ ಏನು ಮಾಡಲಿದೆಯೋ ಅದನ್ನು ಮಾಡಿದೆ ಎಂದು ಆದಾಯ ತೆರಿಗೆ ಇಲಾಖೆಯ ಮೂಲಗಳು ತಿಳಿಸಿದೆ.

ಈ ಹಿಂದೆ ಕಾಂಗ್ರೆಸ್ ನಾಯಕ ಅಜಯ್ ಮಾಕನ್ ಮಾತನಾಡಿ, ಆದಾಯ ತೆರಿಗೆ ಮೇಲ್ಮನವಿ ನ್ಯಾಯಾಧೀಕರಣದಲ್ಲಿ ಅರ್ಜಿಯ ವಿಚಾರಣೆ ಬಾಕಿಯಿರುವಾಗಲೇ ಆದಾಯ ತೆರಿಗೆ ಇಲಾಖೆಯ ಕಾಂಗ್ರೆಸ್ ಪಕ್ಷದ ಮೂರು ಖಾತೆಗಳಿಂದ 65 ಕೋಟಿ ರೂ.ಗಳನ್ನು ವಿತ್ ಡ್ರಾ ಮಾಡಿದೆ ಎಂದು ಹೇಳಿಕೊಂಡಿದ್ದರು. ಬಿಜೆಪಿ ಕೇಂದ್ರೀಯ ತನಿಖಾ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಳ್ಳುತ್ತಿದೆ ಎಂದು ಆರೋಪಿಸಿದ್ದ ಕಾಂಗ್ರೆಸ್‌, ಆದಾಯ ತೆರಿಗೆ ಇಲಾಖೆಯ ನಡೆಯು ಸಂಪೂರ್ಣವಾಗಿ ರಾಜಕೀಯ ಪ್ರೇರಿತವಾಗಿದೆ ಎಂದು ಆಪಾದಿಸಿದ್ದರು.

ಯುವ ಕಾಂಗ್ರೆಸ್ ಮತ್ತು ಕಾಂಗ್ರೆಸ್ ಪಕ್ಷವು 210 ಕೋಟಿ ನೀಡುವಂತೆ ಆದಾಯ ತೆರಿಗೆ ಇಲಾಖೆ ಸೂಚಿಸಿದೆ. ನಮ್ಮ ಖಾತೆಗಳಲ್ಲಿನ ಕ್ರೌಡ್‌ಫಂಡಿಂಗ್ ಹಣವನ್ನು ಸ್ಥಗಿತಗೊಳಿಸಲಾಗಿದೆ. ಚುನಾವಣೆಗೆ ಕೇವಲ 2 ವಾರಗಳ ಮೊದಲು ಪ್ರತಿಪಕ್ಷಗಳ ಖಾತೆಗಳನ್ನು ಸ್ಥಗಿತಗೊಳಿಸಿದರೆ ಅದು ಪ್ರಜಾಪ್ರಭುತ್ವವನ್ನು ಸ್ಥಗಿತಗೊಳಿಸಿದಂತೆ ಎಂದು ಮಾಕನ್ ಹೇಳಿದ್ದರು. ಸದ್ಯ ನಮ್ಮ ಬಳಿ ಖರ್ಚು ಮಾಡಲು, ವಿದ್ಯುತ್ ಬಿಲ್ ಪಾವತಿಸಲು, ನಮ್ಮ ಉದ್ಯೋಗಿಗಳಿಗೆ ಸಂಬಳ ನೀಡಲು ಯಾವುದೇ ಹಣವಿಲ್ಲ. ಭಾರತ್ ಜೋಡೋ ನ್ಯಾಯ ಯಾತ್ರೆ ಸೇರಿದಂತೆ ಎಲ್ಲಾ ರಾಜಕೀಯ ಚಟುವಟಿಕೆಗಳ ಮೇಲೆ ಇದು ಪರಿಣಾಮ ಬೀರಿದೆ. ಬ್ಯಾಂಕ್‌ ಖಾತೆಗಳ ಮುಟ್ಟುಗೋಲು ನಿನ್ನೆಯಷ್ಟೇ ತಿಳಿದು ಬಂತು. ಒಟ್ಟು ನಾಲ್ಕು ಖಾತೆಗಳು ಬಾಧಿತವಾಗಿವೆ ಎಂದು ಪಕ್ಷದ ವಕೀಲರಾದ ವಿವೇಕ್‌ ಹೇಳಿದ್ದರು.

ಇದನ್ನು ಓದಿ: ಗಾಂಧಿನಾ..ಗೋಡ್ಸೆನಾ? ಉತ್ತರಿಸಲು ಸಮಯ ಬೇಕು ಎಂದ ಇತ್ತೀಚೆಗೆ ಬಿಜೆಪಿ ಸೇರಿದ ಮಾಜಿ ನ್ಯಾಯಾಧೀಶ!

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...

ಬಾಕಿ ಇರುವ ಕ್ರಿಮಿನಲ್ ಪ್ರಕರಣಗಳ ಹಿಂಪಡೆಯುವಿಕೆ ಪರಿಶೀಲನೆ: ಪ್ರಿಯಾಂಕ್ ಖರ್ಗೆ ನೇತೃತ್ವದಲ್ಲಿ ಸಂಪುಟ ಉಪಸಮಿತಿ ರಚನೆ

ರಾಜ್ಯದ ವಿವಿಧ ನ್ಯಾಯಾಲಯಗಳಲ್ಲಿ ವಿಚಾರಣೆಗೆ ಬಾಕಿ ಇರುವ ಕ್ರಿಮಿನಲ್ ಪ್ರಕರಣಗಳನ್ನು ಪರಿಶೀಲಿಸಿ, ಅವುಗಳನ್ನು ಹಿಂಪಡೆಯುವ ಕುರಿತು ಸರ್ಕಾರಕ್ಕೆ ಶಿಫಾರಸು ಮಾಡಲು ಕರ್ನಾಟಕ ಸರ್ಕಾರವು ಆರು ಮಂದಿ ಸಚಿವರನ್ನೊಳಗೊಂಡ ಸಂಪುಟ ಉಪಸಮಿತಿಯನ್ನು ರಚಿಸಿದೆ. ಸರ್ಕಾರದ ಅಧಿಕೃತ...

ಉದ್ಯಾನವನ ನುಂಗುವ ಕಾಯ್ದೆ ತಿದ್ದುಪಡಿ : ಸರ್ಕಾರದ ವಿರುದ್ಧ ಸಿಡಿದೆದ್ದ ಬೆಂಗಳೂರಿಗರು

ಕರ್ನಾಟಕ ವಿಧಾನಮಂಡಲವು ಸರ್ಕಾರಿ ಉದ್ಯಾನವನಗಳು ಮತ್ತು ತೋಟಗಳ ಕೆಲವು ಭಾಗಗಳನ್ನು ಸಾರ್ವಜನಿಕ ಮೂಲಸೌಕರ್ಯ ಯೋಜನೆಗಳಿಗಾಗಿ ಬಳಸಲು ಅನುಮತಿಸುವ ಕಾಯ್ದೆ ತಿದ್ದುಪಡಿಯನ್ನು ಅಂಗೀಕರಿಸಿದ ನಂತರ, ಬೆಂಗಳೂರಿನ ಉದ್ಯಾನವನಗಳು ಹೊಸ ರಾಜಕೀಯ ಮತ್ತು ಪರಿಸರ ವಿವಾದದ...

ನೇಪಾಳ–ಟಿಬೆಟ್ ಭೀಕರ ಪ್ರವಾಹ: ನೇಪಾಳದಲ್ಲಿ 734 ಸಾವು, 2,498 ಮಂದಿ ನಾಪತ್ತೆ; ಒಟ್ಟು ಸಾವಿನ ಸಂಖ್ಯೆ 750ಕ್ಕೆ ಏರಿಕೆ!

ನೇಪಾಳ–ಚೀನಾ ಗಡಿ ಪ್ರದೇಶದಲ್ಲಿ ಹಿಮನದಿ ಕುಸಿತದಿಂದ ಉಂಟಾದ ಭೀಕರ ಪ್ರವಾಹ ಮತ್ತು ಅವಶೇಷ ಪ್ರವಾಹದಲ್ಲಿ ನೇಪಾಳದಲ್ಲಿ ಇದುವರೆಗೆ 734 ಮಂದಿ ಮೃತಪಟ್ಟಿದ್ದು, 2,498 ಮಂದಿ ನಾಪತ್ತೆಯಾಗಿದ್ದಾರೆ. ಚೀನಾದ ಟಿಬೆಟ್ ಪ್ರದೇಶದಲ್ಲಿ 16 ಮಂದಿ...

“ಇಂತಹ ಸೌಹಾರ್ದತೆಯ ಮಾತುಗಳನ್ನು ಅಮೆರಿಕಾದಲ್ಲಲ್ಲ, ಭಾರತಕ್ಕೆ ಬಂದು ಇಲ್ಲಿನ ಜನರಿಗೆ ಹೇಳಿ!” – ಭಾಗವತ್‌ಗೆ ವಿರೋಧ ಪಕ್ಷಗಳ ಸವಾಲು

ನ್ಯೂಯಾರ್ಕ್/ಮುಂಬೈ: ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಸರಸಂಘಚಾಲಕ ಮೋಹನ್ ಭಾಗವತ್ ಅವರು ಅಮೆರಿಕಾದ ನ್ಯೂಯಾರ್ಕ್‌ನಲ್ಲಿ ನೀಡಿರುವ ಸೌಹಾರ್ದತೆಯ ಹೇಳಿಕೆ ಈಗ ಭಾರತೀಯ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸಿದೆ. ವಿದೇಶಿ ಮಣ್ಣಿನಲ್ಲಿ ಮುಸ್ಲಿಂ ಸಮುದಾಯದ ಪರವಾಗಿ...

ಸ್ವದೇಶದಲ್ಲಿ ಹಿಂದೂ ರಾಷ್ಟ್ರ, ವಿದೇಶದಲ್ಲಿ ಒಳಗೊಳ್ಳುವಿಕೆ ಮಂತ್ರ : ಆರ್‌ಎಸ್‌ಎಸ್‌ ದ್ವಂದ್ವ ನಿಲುವು ಪ್ರಶ್ನಿಸಿದ ಪ್ರಿಯಾಂಕ್ ಖರ್ಗೆ

"ಭಾರತದಲ್ಲಿ ಮುಸ್ಲಿಮರು ಇರಬಾರದು ಎನ್ನುವವನು ಹಿಂದೂ ಅಲ್ಲ" ಎಂದು ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗವತ್ ಅಮೆರಿದಲ್ಲಿ ನೀಡಿರುವ ಹೇಳಿಕೆಯ ಸುತ್ತ ಭಾರೀ ಚರ್ಚೆಗಳು ನಡೆಯುತ್ತಿವೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿರುವ...

ಮಹಾರಾಷ್ಟ್ರ | ಬುಡಕಟ್ಟು ವಿದ್ಯಾರ್ಥಿಗಳ ಹೋರಾಟಕ್ಕೆ ಜಯ : ಎಲ್ಲಾ ಬೇಡಿಕೆಗಳ ಈಡೇರಿಕೆಗೆ ಒಪ್ಪಿದ ಸರ್ಕಾರ

ಮಹಾರಾಷ್ಟ್ರದಲ್ಲಿ ಸರ್ಕಾರಿ ಉದ್ಯೋಗಗಳಲ್ಲಿ ಪರಿಶಿಷ್ಟ ಪಂಗಡದ (ಎಸ್‌ಟಿ) ಅಭ್ಯರ್ಥಿಗಳಿಗೆ ಆದ್ಯತೆ ಹಾಗೂ ವಸತಿ ಶಾಲೆಗಳ ಮೂಲಸೌಕರ್ಯ ಸುಧಾರಣೆಗೆ ಆಗ್ರಹಿಸಿ ಕಳೆದ 16 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಬುಡಕಟ್ಟು ವಿದ್ಯಾರ್ಥಿಗಳ ಸುದೀರ್ಘ ಹೋರಾಟಕ್ಕೆ...

ಖರ್ಗೆ ಭಾಷಣ ಸ್ಥಳದ ‘ಶುದ್ಧೀಕರಣ’: ಬಿಜೆಪಿ-RSS, ಸಂಘ ಪರಿವಾರದ ವಿಷಪೂರಿತ ಮನಸ್ಥಿತಿ ಮಾಜಿ ಸಿಎಂ ಸಿದ್ದರಾಮಯ್ಯ

ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಮಾವೇಶದಲ್ಲಿ ಪಾಲ್ಗೊಂಡ ಬಳಿಕ, ಬಲಪಂಥೀಯ ಸಂಘಟನೆಯೊಂದು ಆ ಮೈದಾನದಲ್ಲಿ 'ಶುದ್ಧೀಕರಣ' ಕೈಗೊಂಡಿರುವುದಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಆಕ್ರೋಶ...

ಸೋನಿಯಾ ಗಾಂಧಿ ಆತ್ಮಕಥೆ ವಿವಾದ | ಮೋದಿ, ಆರ್‌ಎಸ್‌ಎಸ್, ಚೀನಾ ನುಸುಳುವಿಕೆ ಕುರಿತ ಭಾಗಗಳನ್ನು ತೆಗೆದುಹಾಕಲು ಪೆಂಗ್ವಿನ್ ಇಂಡಿಯಾ ಕೋರಿತ್ತು : ಕಾಂಗ್ರೆಸ್ ಆರೋಪ

ಪ್ರಧಾನಿ ನರೇಂದ್ರ ಮೋದಿ, ಆರ್‌ಎಸ್‌ಎಸ್ ಮತ್ತು ಅವರ ಅಧಿಕಾರಾವಧಿಯಲ್ಲಿ ನಡೆದ ಭಾರತೀಯ ಭೂಪ್ರದೇಶದ ಮೇಲಿನ ಚೀನಾದ ಆಕ್ರಮಣದ ನಿರ್ವಹಣೆಗೆ ಸಂಬಂಧಿಸಿದ ಭಾಗಗಳನ್ನು ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ "ಬೆಲಾಂಗಿಂಗ್: ಎ ಜರ್ನಿ...