Homeಮುಖಪುಟಕಾಂಗ್ರೆಸ್‌ ಪಕ್ಷದ ಬ್ಯಾಂಕ್ ಖಾತೆಗಳ ವಿರುದ್ಧದ ಕ್ರಮಕ್ಕೆ ತಡೆ ನೀಡಲು ನಿರಾಕರಿಸಿದ ನ್ಯಾಯಮಂಡಳಿ

ಕಾಂಗ್ರೆಸ್‌ ಪಕ್ಷದ ಬ್ಯಾಂಕ್ ಖಾತೆಗಳ ವಿರುದ್ಧದ ಕ್ರಮಕ್ಕೆ ತಡೆ ನೀಡಲು ನಿರಾಕರಿಸಿದ ನ್ಯಾಯಮಂಡಳಿ

- Advertisement -
- Advertisement -

ಕಾಂಗ್ರೆಸ್‌ ಪಕ್ಷದ ಬ್ಯಾಂಕ್ ಖಾತೆಗಳನ್ನು ಮುಟ್ಟುಗೋಲು ಹಾಕಿರುವುದನ್ನು ಪ್ರಶ್ನಿಸಿ ಕಾಂಗ್ರೆಸ್ ಸಲ್ಲಿಸಿದ ಮನವಿಯನ್ನು ಆದಾಯ ತೆರಿಗೆ ಮೇಲ್ಮನವಿ ನ್ಯಾಯಮಂಡಳಿ (ಐಟಿಎಟಿ) ವಜಾಗೊಳಿಸಿದೆ.

210 ಕೋಟಿ ತೆರಿಗೆ ಬೇಡಿಕೆಯ ವಿವಾದಕ್ಕೆ ಸಂಬಂಧಿಸಿದಂತೆ ತಮ್ಮ ಬ್ಯಾಂಕ್ ಖಾತೆಗಳ ಮೇಲಿನ ನಿರ್ಬಂಧಗಳ ವಿರುದ್ಧ ತಡೆ ಕೋರಿ ಕಾಂಗ್ರೆಸ್’ ಆದಾಯ ತೆರಿಗೆ ಮೇಲ್ಮನವಿ ನ್ಯಾಯಮಂಡಳಿಗೆ’ (ಐಟಿಎಟಿ) ಸಲ್ಲಿಸಿದ ಮನವಿ  ತಿರಸ್ಕಾರಗೊಂಡಿದೆ.

2018-19ನೇ ಸಾಲಿನಲ್ಲಿ 210 ಕೋಟಿ ರೂ.ಆದಾಯ ತೆರಿಗೆ ಬಾಕಿ ಹಾಗೂ ದಂಡವನ್ನು ಪಾವತಿಸಿಲ್ಲ ಎಂದು ಕಾಂಗ್ರೆಸ್ ಪಕ್ಷದ ಕೆಲವು ಬ್ಯಾಂಕ್ ಖಾತೆಗಳಲ್ಲಿದ್ದ 115 ಕೋಟಿ ರೂ.ಗಳನ್ನು ಆದಾಯ ತೆರಿಗೆ ಇಲಾಖೆಯು ಕಳೆದ ವಾರ ಮುಟ್ಟುಗೋಲು ಹಾಕಿತ್ತು. ಕಾಂಗ್ರೆಸ್ ಪರ ಹಾಜರಾದ ಹಿರಿಯ ವಕೀಲ ವಿವೇಕ್ ಟಂಖಾ, ಆದೇಶವನ್ನು 10 ದಿನಗಳವರೆಗೆ ತಡೆಹಿಡಿಯಲು ವಿನಂತಿಸಿದ್ದಾರೆ.

ತೆರಿಗೆ ಬೇಡಿಕೆ ವಿವಾದಕ್ಕೆ ಸಂಬಂಧಿಸಿದಂತೆ ಐಟಿ ಇಲಾಖೆ ತನ್ನ ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸಿದೆ ಎಂದು ಫೆಬ್ರವರಿ 16 ರಂದು ಕಾಂಗ್ರೆಸ್ ಹೇಳಿಕೊಂಡಿತ್ತು. ಕಾಂಗ್ರೆಸ್ ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸಿರುವ ತನ್ನ ಕ್ರಮದ ಬಗ್ಗೆ ಐಟಿ ಇಲಾಖೆ ಯಾವುದೇ ಅಧಿಕೃತ ಹೇಳಿಕೆ ನೀಡದಿದ್ದರೂ, ವರ್ಷಗಳಿಂದ ಆದಾಯ ತೆರಿಗೆ ಬಾಕಿ ಪಾವತಿಸದವರ ವಿರುದ್ಧದ ಸಾಮಾನ್ಯ ಪ್ರಕ್ರಿಯೆಯಾಗಿದೆ ಮತ್ತು ಐಟಿ ಇಲಾಖೆಯು ಇಂತಹ ಪ್ರಕರಣಗಳಲ್ಲಿ ಏನು ಮಾಡಲಿದೆಯೋ ಅದನ್ನು ಮಾಡಿದೆ ಎಂದು ಆದಾಯ ತೆರಿಗೆ ಇಲಾಖೆಯ ಮೂಲಗಳು ತಿಳಿಸಿದೆ.

ಈ ಹಿಂದೆ ಕಾಂಗ್ರೆಸ್ ನಾಯಕ ಅಜಯ್ ಮಾಕನ್ ಮಾತನಾಡಿ, ಆದಾಯ ತೆರಿಗೆ ಮೇಲ್ಮನವಿ ನ್ಯಾಯಾಧೀಕರಣದಲ್ಲಿ ಅರ್ಜಿಯ ವಿಚಾರಣೆ ಬಾಕಿಯಿರುವಾಗಲೇ ಆದಾಯ ತೆರಿಗೆ ಇಲಾಖೆಯ ಕಾಂಗ್ರೆಸ್ ಪಕ್ಷದ ಮೂರು ಖಾತೆಗಳಿಂದ 65 ಕೋಟಿ ರೂ.ಗಳನ್ನು ವಿತ್ ಡ್ರಾ ಮಾಡಿದೆ ಎಂದು ಹೇಳಿಕೊಂಡಿದ್ದರು. ಬಿಜೆಪಿ ಕೇಂದ್ರೀಯ ತನಿಖಾ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಳ್ಳುತ್ತಿದೆ ಎಂದು ಆರೋಪಿಸಿದ್ದ ಕಾಂಗ್ರೆಸ್‌, ಆದಾಯ ತೆರಿಗೆ ಇಲಾಖೆಯ ನಡೆಯು ಸಂಪೂರ್ಣವಾಗಿ ರಾಜಕೀಯ ಪ್ರೇರಿತವಾಗಿದೆ ಎಂದು ಆಪಾದಿಸಿದ್ದರು.

ಯುವ ಕಾಂಗ್ರೆಸ್ ಮತ್ತು ಕಾಂಗ್ರೆಸ್ ಪಕ್ಷವು 210 ಕೋಟಿ ನೀಡುವಂತೆ ಆದಾಯ ತೆರಿಗೆ ಇಲಾಖೆ ಸೂಚಿಸಿದೆ. ನಮ್ಮ ಖಾತೆಗಳಲ್ಲಿನ ಕ್ರೌಡ್‌ಫಂಡಿಂಗ್ ಹಣವನ್ನು ಸ್ಥಗಿತಗೊಳಿಸಲಾಗಿದೆ. ಚುನಾವಣೆಗೆ ಕೇವಲ 2 ವಾರಗಳ ಮೊದಲು ಪ್ರತಿಪಕ್ಷಗಳ ಖಾತೆಗಳನ್ನು ಸ್ಥಗಿತಗೊಳಿಸಿದರೆ ಅದು ಪ್ರಜಾಪ್ರಭುತ್ವವನ್ನು ಸ್ಥಗಿತಗೊಳಿಸಿದಂತೆ ಎಂದು ಮಾಕನ್ ಹೇಳಿದ್ದರು. ಸದ್ಯ ನಮ್ಮ ಬಳಿ ಖರ್ಚು ಮಾಡಲು, ವಿದ್ಯುತ್ ಬಿಲ್ ಪಾವತಿಸಲು, ನಮ್ಮ ಉದ್ಯೋಗಿಗಳಿಗೆ ಸಂಬಳ ನೀಡಲು ಯಾವುದೇ ಹಣವಿಲ್ಲ. ಭಾರತ್ ಜೋಡೋ ನ್ಯಾಯ ಯಾತ್ರೆ ಸೇರಿದಂತೆ ಎಲ್ಲಾ ರಾಜಕೀಯ ಚಟುವಟಿಕೆಗಳ ಮೇಲೆ ಇದು ಪರಿಣಾಮ ಬೀರಿದೆ. ಬ್ಯಾಂಕ್‌ ಖಾತೆಗಳ ಮುಟ್ಟುಗೋಲು ನಿನ್ನೆಯಷ್ಟೇ ತಿಳಿದು ಬಂತು. ಒಟ್ಟು ನಾಲ್ಕು ಖಾತೆಗಳು ಬಾಧಿತವಾಗಿವೆ ಎಂದು ಪಕ್ಷದ ವಕೀಲರಾದ ವಿವೇಕ್‌ ಹೇಳಿದ್ದರು.

ಇದನ್ನು ಓದಿ: ಗಾಂಧಿನಾ..ಗೋಡ್ಸೆನಾ? ಉತ್ತರಿಸಲು ಸಮಯ ಬೇಕು ಎಂದ ಇತ್ತೀಚೆಗೆ ಬಿಜೆಪಿ ಸೇರಿದ ಮಾಜಿ ನ್ಯಾಯಾಧೀಶ!

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...