Homeಮುಖಪುಟಕ್ರಿಶ್ಚಿಯನ್ನರ ಮೇಲೆ ದಾಳಿಗಳು ಹೆಚ್ಚಳ: ಯುಸಿಎಫ್ ಕಳವಳ

ಕ್ರಿಶ್ಚಿಯನ್ನರ ಮೇಲೆ ದಾಳಿಗಳು ಹೆಚ್ಚಳ: ಯುಸಿಎಫ್ ಕಳವಳ

- Advertisement -
- Advertisement -

ನವದೆಹಲಿ: ಕೇಂದ್ರ ಮತ್ತು ಹಲವಾರು ರಾಜ್ಯಗಳಲ್ಲಿ ಆಡಳಿತಾರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ)ದ ಸರ್ಕಾರವು ಪ್ರತಿಪಾದಿಸುತ್ತಿರುವ ಬಹುಸಂಖ್ಯಾತ ಮನೋಧರ್ಮವು ದೇಶದ ಅಲ್ಪಸಂಖ್ಯಾತರ ಮೇಲೆ, ವಿಶೇಷವಾಗಿ ಮುಸ್ಲಿಮರು ಮತ್ತು ಕ್ರಿಶ್ಚಿಯನ್ನರ ಮೇಲೆ ದಾಳಿಗಳನ್ನು ಹೆಚ್ಚಿಸಿದೆ ಎಂದು ಯುನೈಟೆಡ್ ಕ್ರಿಶ್ಚಿಯನ್ ಫೋರಮ್ (ಯುಸಿಎಫ್) ಕಳವಳ ವ್ಯಕ್ತಪಡಿಸಿದೆ.

ಬಿಜೆಪಿಯ ಹಿಂದೂ ರಾಷ್ಟ್ರೀಯತೆ ಮತ್ತು ಸರ್ಕಾರದ ನಿರಾಸಕ್ತಿಯ ಕಾರಣದಿಂದ ದೇಶದಲ್ಲಿ ವರದಿಯಾದ ಅಲ್ಪಸಂಖ್ಯಾತರ ಮೇಲಿನ ಹಿಂಸಾಚಾರ ಪ್ರಕರಣಗಳಲ್ಲಿ ಗಮನಾರ್ಹ ಏರಿಕೆಯಾಗಿದ್ದು, ಅವರ ಜೀವನ ಮತ್ತು ಗೌರವದ ಮೇಲೆ ಭಾರಿ ಹಾನಿಯನ್ನುಂಟುಮಾಡಿದೆ ಎಂದು ಅದು ಹೇಳಿದೆ.

ಕ್ರಿಶ್ಚಿಯನ್ ವಿಷಯಗಳ ಮೇಲೆ ಕೇಂದ್ರೀಕರಿಸಿದ ನವದೆಹಲಿ ಮೂಲದ ನಾಗರಿಕ ಸಮಾಜ ಸಂಘಟನೆಯಾದ ಯುನೈಟೆಡ್ ಕ್ರಿಶ್ಚಿಯನ್ ಫೋರಮ್ ಬಿಡುಗಡೆ ಮಾಡಿದ ಇತ್ತೀಚಿನ ಅಂಕಿಅಂಶಗಳು, 2024ರಲ್ಲಿ ಕ್ರಿಶ್ಚಿಯನ್ನರ ವಿರುದ್ಧ 834 ಹಿಂಸಾಚಾರ ಘಟನೆಗಳು ನಡೆದಿವೆ ಎಂದು ಹೇಳಿದೆ. ಇದು 2023ರಲ್ಲಿ ಸಂಭವಿಸಿದ 734 ಘಟನೆಗಳಿಗಿಂತ 100 ಹೆಚ್ಚಾಗಿದೆ ಎಂದು ಅದು ತಿಳಿಸಿದೆ.

ಇತ್ತೀಚಿನ ಹೇಳಿಕೆಯಲ್ಲಿ, ಕ್ರಿಶ್ಚಿಯನ್ನರ ವಿರುದ್ಧ ಹೆಚ್ಚುತ್ತಿರುವ ಹಿಂಸಾಚಾರದ ಘಟನೆಗಳ ಬಗ್ಗೆ ಯುಸಿಎಫ್ ಕಳವಳ ವ್ಯಕ್ತಪಡಿಸಿದೆ. ಅತ್ಯಂತ ಕಳವಳಕಾರಿ ವಿಷಯವೆಂದರೆ ದೇಶದಲ್ಲಿ ಪ್ರತಿದಿನ ಎರಡಕ್ಕಿಂತ ಹೆಚ್ಚು ಕ್ರೈಸ್ತರು ತಮ್ಮ ಧರ್ಮವನ್ನು ಆಚರಿಸುವುದಕ್ಕಾಗಿ ಗುರಿಯಾಗುತ್ತಿದ್ದಾರೆ ಎಂದು ಅದು ಹೇಳಿದೆ.

ಈ ಘಟನೆಗಳು ಹಲವು ರೂಪಗಳನ್ನು ತೆಗೆದುಕೊಳ್ಳುತ್ತಿದೆ. ಅವುಗಳಲ್ಲಿ ಚರ್ಚ್‌ಗಳು ಅಥವಾ ಪ್ರಾರ್ಥನಾ ಸಭೆಗಳ ಮೇಲಿನ ದಾಳಿಗಳು, ತಮ್ಮ ನಂಬಿಕೆಯನ್ನು ಪಾಲಿಸುವವರ ಮೇಲೆ ಕಿರುಕುಳ, ಸಮುದಾಯಕ್ಕೆ ಸಂಬಂಧಿಸಿದ ಸಂಪನ್ಮೂಲಗಳ ಮೇಲಿನ ಬಹಿಷ್ಕಾರಗಳು ಮತ್ತು ನಿರ್ಬಂಧಗಳು, ಸುಳ್ಳು ಆರೋಪಗಳು ಮತ್ತು ಕ್ರಿಮಿನಲ್ ಪ್ರಕರಣಗಳು, ವಿಶೇಷವಾಗಿ ಬಲವಂತದ ಮತಾಂತರಕ್ಕೆ ಸಂಬಂಧಿಸಿದ ಪ್ರಕರಣಗಳು ಸೇರಿವೆ ಎಂದು ಹೇಳಿಕೆಯಲ್ಲಿ ಉಲ್ಲೇಖಿಸಲಾಗಿದೆ.

ಹಲವಾರು ಬಿಜೆಪಿ ಆಡಳಿತದ ರಾಜ್ಯಗಳಲ್ಲಿ ಧಾರ್ಮಿಕ ಮತಾಂತರದ ವಿರುದ್ಧದ ವಿವಾದಾತ್ಮಕ ಮತ್ತು ಕಠಿಣ ಕಾನೂನುಗಳು ಹಿಂದುತ್ವ ಕಾರ್ಯಕರ್ತರಿಗೆ ಮತ್ತು ಅಲ್ಲಿನ ಸರಕಾರಗಳಿಗೆ ಅಲ್ಪಸಂಖ್ಯಾತರ ಮೇಲೆ ಕಠಿಣ ಕ್ರಮ ಕೈಗೊಳ್ಳಲು ಅಸ್ತ್ರವನ್ನು ಒದಗಿಸಿವೆ. 2014ರಲ್ಲಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಅಂತಹ ಘಟನೆಗಳು ವೇಗವಾಗಿ ಹೆಚ್ಚಿವೆ ಎಂದು ಅದು ತಿಳಿಸಿದೆ.

2024ರಲ್ಲಿ ಉತ್ತರಪ್ರದೇಶದಲ್ಲಿ ಕ್ರಿಶ್ಚಿಯನ್ನರ ವಿರುದ್ಧ ಅತಿ ಹೆಚ್ಚು ಘಟನೆಗಳು (209) ದಾಖಲಾಗಿವೆ. ನಂತರ ಛತ್ತೀಸ್‌ಗಢ (165)ದಲ್ಲಿ ದಾಖಲಾಗಿವೆ. ಪೊಲೀಸರಿಗೆ ದೂರು ನೀಡಿದ ನಂತರವೂ ಈ ಹಲವು ಘಟನೆಗಳಲ್ಲಿ ಎಫ್‌ಐಆರ್‌ಗಳು ದಾಖಲಾಗಿಲ್ಲ ಎಂದು ಮಾನವ ಹಕ್ಕುಗಳ ಕಾರ್ಯಕರ್ತರು ಹೇಳುತ್ತಾರೆ.

ಇದಲ್ಲದೆ, ಪೊಲೀಸರು ವಿಷಯವನ್ನು ತಿರುಚಲು ಮತ್ತು ಬಲಿಪಶುಗಳ ವಿರುದ್ಧವೇ ಸುಳ್ಳು ಆರೋಪಗಳನ್ನು ದಾಖಲಿಸುವ ಮೂಲಕ ಅಪರಾಧಿಗಳನ್ನು ಬೆಂಬಲಿಸಲು ಪ್ರಯತ್ನಿಸುತ್ತಾರೆ ಎಂದು ಬಲಿಬಶು ಕ್ರಿಶ್ಚಿಯನ್ನರು ದೂರುತ್ತಾರೆ ಮತ್ತು ಇದರಿಂದಾಗಿ ಇವರು ಪೊಲೀಸರನ್ನು ಸಂಪರ್ಕಿಸಲು ಹೆದರುತ್ತಾರೆ ಎಂದು ಯುಸಿಎಫ್ ಹೇಳಿಕೆ ತಿಳಿಸಿದೆ.

ಹೆಚ್ಚಿನ ಎಫ್‌ಐಆರ್‌ಗಳು ಬಲಿಪಶುಗಳ ವಿರುದ್ಧ ದಾಖಲಾಗುತ್ತವೆ. ಅಪರಾಧಿಗಳ ವಿರುದ್ಧ ಪ್ರಕರಣ ದಾಖಲಿಸಿದರೆ, ದಾಳಿಕೋರರು ಹೆಚ್ಚು ಆಕ್ರಮಣಕಾರಿಗಳಾಗಬಹುದು ಮತ್ತು ತಮ್ಮ ಜೀವಕ್ಕೆ ಹೆಚ್ಚಿನ ಅಪಾಯವಿದೆ ಎಂದು ಪೊಲೀಸರು ಸಂತ್ರಸ್ತರಿಗೆ ಹೆದರಿಸುತ್ತಾರೆ ಎಂದು ಯುಸಿಎಫ್ ಹೇಳಿದೆ.

ಡಿಸೆಂಬರ್ 2024ರಲ್ಲಿ ದಾಖಲಾದ 73 ಘಟನೆಗಳಲ್ಲಿ 25 ಬಲಿಪಶುಗಳು ಪರಿಶಿಷ್ಟ ಪಂಗಡದವರು ಮತ್ತು 14 ಮಂದಿ ದಲಿತರು ಆಗಿದ್ದಾರೆ. ಈ ಘಟನೆಗಳಲ್ಲಿ ಒಂಬತ್ತು ಘಟನೆಗಳು ಮಹಿಳೆಯರನ್ನು ಒಳಗೊಂಡಿವೆ.  ಡಿಸೆಂಬರ್ 31ರಂದು, 400 ಕ್ಕೂ ಹೆಚ್ಚು ಹಿರಿಯ ಕ್ರಿಶ್ಚಿಯನ್ ನಾಯಕರು ಮತ್ತು 30 ಚರ್ಚ್ ಗುಂಪುಗಳ ನಿಯೋಗವು ಸಮುದಾಯದ ವಿರುದ್ಧ ಹೆಚ್ಚುತ್ತಿರುವ ಹಿಂಸಾಚಾರದ ಸಮಸ್ಯೆಯನ್ನು ಪರಿಹರಿಸಲು ರಾಷ್ಟ್ರಪತಿ ದ್ರೌಪದಿ ಮುರ್ಮು ಮತ್ತು ಪ್ರಧಾನಿ ನರೇಂದ್ರ ಮೋದಿಯವರಿಗೆ ಮನವಿ ಮಾಡಿತು ಎಂದು ಯುಸಿಎಫ್ ತಿಳಿಸಿದೆ.

ಕ್ರಿಸ್‌ಮಸ್ ಸಮಯದಲ್ಲಿ ಇಂತಹ ಹಲವಾರು ಪ್ರಕರಣಗಳು ದಾಖಲಾಗಿರುವುದು ನಂತರ ನಮ್ಮ ಗಮನಕ್ಕೆ ಬಂದಿತು. ಡಿಸೆಂಬರ್ 23, 2024 ರಂದು ಭಾರತದ ಕ್ಯಾಥೋಲಿಕ್ ಬಿಷಪ್‌ಗಳ ಸಮ್ಮೇಳನ ಆಯೋಜಿಸಿದ್ದ ಕ್ರಿಸ್‌ಮಸ್ ಆಚರಣೆಯಲ್ಲಿ ಪ್ರಧಾನಿ ಮೋದಿ ಭಾಗವಹಿಸಿದ್ದರು. ಅಲ್ಲಿ ಮಾತನಾಡುತ್ತಾ ಅವರು ಕ್ರಿಶ್ಚಿಯನ್ನರ ವಿರುದ್ಧದ ಹಿಂಸಾಚಾರವನ್ನು ಉಲ್ಲೇಖಿಸಿದರು ಆದರೆ ಜರ್ಮನಿಯಲ್ಲಿನ ಕ್ರಿಸ್‌ಮಸ್ ಮಾರುಕಟ್ಟೆ ದಾಳಿ ಮತ್ತು ಶ್ರೀಲಂಕಾದಲ್ಲಿ 2019ರ ಈಸ್ಟರ್ ಬಾಂಬ್ ದಾಳಿಯಂತಹ ಪ್ರಪಂಚದ ಇತರ ಭಾಗಗಳಲ್ಲಿ ನಡೆದ ದಾಳಿಗಳನ್ನು ಮಾತ್ರ ಅವರು ಖಂಡಿಸಿದರು ಎಂದು ಅದು ಹೇಳಿದೆ.

ಪ್ರಮುಖ ಪತ್ರಕರ್ತ ಮತ್ತು ಮಾನವ ಹಕ್ಕುಗಳ ಕಾರ್ಯಕರ್ತ ಜಾನ್ ದಯಾಳ್ ಅವರು ಭಾಷಣವು ಮೋದಿಯ ದ್ವಂದ್ವತೆಯನ್ನು ಬಹಿರಂಗಪಡಿಸಿದೆ ಎಂದು ಹೇಳಿದರು. “ಹಿಂಸಾಚಾರದ ಘಟನೆಗಳ ಬಗ್ಗೆ ಪ್ರಧಾನಿ ತಮ್ಮ ನೋವನ್ನು ವ್ಯಕ್ತಪಡಿಸಿದ ನಂತರ, 2024ರಲ್ಲಿ ದೇಶದಲ್ಲಿ ದಿನನಿತ್ಯ ನಡೆದ ಎರಡು ದ್ವೇಷ ಹಿಂಸಾಚಾರದ ಘಟನೆಗಳಲ್ಲಿ ಒಂದನ್ನು ಸಹ ಉಲ್ಲೇಖಿಸಲಿಲ್ಲ. ಬದಲಾಗಿ, ಅವರು ಜರ್ಮನ್ ದಾಳಿಯನ್ನು ಉದಾಹರಣೆಯಾಗಿ ಉಲ್ಲೇಖಿಸಿದರು. ಇದು ದ್ವಂದ್ವತೆ ಮತ್ತು ಇದು ಹಿಂದೂ ಉಗ್ರಗಾಮಿಗಳಿಗೆ ಪ್ರೋತ್ಸಾಹ ನೀಡುತ್ತದೆ” ಎಂದು ಅವರು ಹೇಳಿದರು.

ಮಹಿಳೆಯರು ಗರ್ಭ ಧರಿಸುವಂತೆ ಮಾಡಿದರೆ ರೂ. 10 ಲಕ್ಷ: ಹೊಸ ಸೈಬರ್ ವಂಚನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ವಕ್ಷೇತ್ರ ತಿರುವನಂತಪುರದಲ್ಲಿ ಬಿಜೆಪಿ ಭರ್ಜರಿ ಗೆಲುವು : ‘ಪ್ರಜಾಪ್ರಭುತ್ವದ ಸೌಂದರ್ಯ’ ಎಂದ ಕಾಂಗ್ರೆಸ್ ಸಂಸದ ಶಶಿ ತರೂರ್

ಕೇರಳದ ಸ್ಥಳೀಯ ಸಂಸ್ಥೆ ಚುನಾವಣೆಯ ಫಲಿತಾಂಶ ಇಂದು (ಡಿ.13) ಪ್ರಕಟಗೊಂಡಿದ್ದು, ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ 45 ವರ್ಷಗಳ ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್‌...

ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ : ಯುಡಿಎಫ್‌ ಸ್ಪಷ್ಟ ಮೇಲುಗೈ

ಇಂದು (2025 ಡಿಸೆಂಬರ್ 13, ಶನಿವಾರ) ಪ್ರಕಟಗೊಂಡ ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶದಲ್ಲಿ ವಿರೋಧ ಪಕ್ಷಗಳ ಒಕ್ಕೂಟವಾದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಸ್ಪಷ್ಟ ಮೇಲುಗೈ ಸಾಧಿಸಿದೆ. ಈ ಮೂಲಕ ರಾಜ್ಯ...

ಕೋಲ್ಕತ್ತಾ ಮೆಸ್ಸಿ ಕಾರ್ಯಕ್ರಮದಲ್ಲಿ ಗಲಾಟೆ | ಕ್ಷಮೆ ಯಾಚಿಸಿದ ಸಿಎಂ ಮಮತಾ ಬ್ಯಾನರ್ಜಿ, ತನಿಖೆಗೆ ಸಮಿತಿ ರಚನೆ; ಆಯೋಜಕನ ಬಂಧನ

ಫುಟ್ಬಾಲ್ ತಾರೆ ಲಿಯೋನೆಲ್ ಮೆಸ್ಸಿ ಭೇಟಿಯ ವೇಳೆ ಶನಿವಾರ (ಡಿಸೆಂಬರ್ 13) ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಉಂಟಾದ ಗಲಾಟೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕ್ಷಮೆಯಾಚಿಸಿದ್ದು, ನಿವೃತ್ತ ನ್ಯಾಯಮೂರ್ತಿ...

ಮೆಸ್ಸಿ ನೋಡಲು 25 ಸಾವಿರ ರೂ. ಪಾವತಿಸಿದವರಿಗೆ ನಿರಾಶೆ; ಕೋಪಗೊಂಡ ಅಭಿಮಾನಿಗಳಿಂದ ಕ್ರೀಡಾಂಗಣದಲ್ಲಿ ದಾಂಧಲೆ

ಶನಿವಾರ ನಡೆದ ಲಿಯೋನೆಲ್ ಮೆಸ್ಸಿ ಅವರ ಬಹು ನಿರೀಕ್ಷಿತ "ಗೋಟ್ ಇಂಡಿಯಾ ಟೂರ್" ಕೋಲ್ಕತ್ತಾದಲ್ಲಿ ಅಸ್ತವ್ಯಸ್ತವಾಯಿತು. ಯುವ ಭಾರತಿ ಕ್ರಿರಂಗನ್‌ನಲ್ಲಿ ರೊಚ್ಚಿಗೆದ್ದ ಅಭಿಮಾನಿಗಳ ದಾಂಧಲೆಯಿಂದ ಕ್ರೀಡಾಂಗಣ ಅವ್ಯವಸ್ಥೆಗೆ ಒಳಗಾಯಿತು. ಸಾವಿರಾರು ಅಭಿಮಾನಿಗಳು ಅರ್ಜೆಂಟೀನಾದ...

ಡ್ರಗ್‌ ಪೆಡ್ಲರ್‌ಗಳ ಮನೆ ಒಡೆದು ಹಾಕುವ ಹೇಳಿಕೆ : ಪರಮೇಶ್ವರ್ ಮಾತಿಗೆ ಆತಂಕ ವ್ಯಕ್ತಪಡಿಸಿದ ಕಾಂಗ್ರೆಸ್ ಹಿರಿಯ ನಾಯಕ ಚಿದಂಬರಂ

"ಡ್ರಗ್‌ ಪೆಡ್ಲರ್‌ಗಳ ಬಾಡಿಗೆ ಮನೆಗಳನ್ನು ಒಡೆದು ಹಾಕುವ ಹಂತಕ್ಕೆ ಹೋಗಿದ್ದೇವೆ" ಎಂಬ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಆತಂಕ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ...

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ: ಶಶಿ ತರೂರ್ ಕ್ಷೇತ್ರ ತಿರುವನಂತಪುರಂನಲ್ಲಿ ಬಿಜೆಪಿ ಮುನ್ನಡೆ

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ, ವಿಶೇಷವಾಗಿ ತಿರುವನಂತಪುರಂನಲ್ಲಿ ಭಾರತೀಯ ಜನತಾ ಪಕ್ಷದ ಸಾಧನೆಯನ್ನು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಶನಿವಾರ ಅಭಿನಂದಿಸಿದ್ದಾರೆ. ಜನರ ತೀರ್ಪನ್ನು ಗೌರವಿಸಬೇಕು ಎಂದು ಹೇಳಿದ್ದಾರೆ. ಎಕ್ಸ್‌ನಲ್ಲಿ ದೀರ್ಘ...

ಆಳಂದ ಮತಗಳ್ಳತನ | ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಸೇರಿ 7 ಮಂದಿ ವಿರುದ್ಧ ಎಸ್‌ಐಟಿ ಚಾರ್ಜ್‌ಶೀಟ್‌

ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತಗಳ್ಳತನ (ಚುನಾವಣಾ ಆಕ್ರಮ) ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದು, ಆಳಂದದ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್...

ಉತ್ತರ ಪ್ರದೇಶ| ಗಸ್ತು ವಾಹನ ಹಳ್ಳಕ್ಕೆ ಉರುಳಿಸಿದ ಪಾನಮತ್ತ ಪೊಲೀಸರು; ಕ್ರೇನ್ ಚಾಲಕನ ಮೇಲೆ ಹಲ್ಲೆ

ಶುಕ್ರವಾರ (ಡಿಸೆಂಬರ್ 12) ರಾತ್ರಿ ಪೊಲೀಸರೊಬ್ಬರು ಕಾರಿನ ನಿಯಂತ್ರಣ ಕಳೆದುಕೊಂಡ ಬಳಿಕ '112' ಪೊಲೀಸ್ ಪ್ರತಿಕ್ರಿಯೆ ವಾಹನ (ಪಿಆರ್‌ವಿ) ಹಳ್ಳಕ್ಕೆ ಉರುಳಿದೆ. ವರದಿಗಳ ಪ್ರಕಾರ, ಘಟನೆಯ ಸಮಯದಲ್ಲಿ ಪೊಲೀಸರು ಪಾನಮತ್ತರಾಗಿದ್ದರು. ಕಾರ್ ಕಂದಕಕ್ಕೆ...

ಲಿಯೋನೆಲ್ ಮೆಸ್ಸಿ ಇಂಡಿಯಾ ಪ್ರವಾಸ; ಅಭೂತಪೂರ್ವ ಸ್ವಾಗತ ಕೋರಿದ ಕೋಲ್ಕತ್ತಾ ಅಭಿಮಾನಿಗಳು

ಇಂಡಿಯಾ ಪ್ರವಾಸ ಪ್ರಾರಂಭಿಸಿರುವ ಅರ್ಜೆಂಟೀನಾದ ಪುಟ್‌ಬಾಲ್‌ ತಾರೆ ಲಿಯೋನೆಲ್ ಮೆಸ್ಸಿ ಕೋಲ್ಕತ್ತಾಗೆ ಬಂದಿಳಿದಿದ್ದಾರೆ. ಶನಿವಾರ ಬೆಳಗಿನ ಜಾವ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಸಾವಿರಾರು ಅಭಿಮಾನಿಗಳಿಂದ ಅವರಿಗೆ ಅಭೂತಪೂರ್ವ ಸ್ವಾಗತ ಕೋರಿದರು. ಅರ್ಜೆಂಟೀನಾದ ಸೂಪರ್‌ಸ್ಟಾರ್ ದುಬೈ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ಆರು ಅಪರಾಧಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಮಲಯಾಳಂ ಮೂಲದ ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ (2017ರ ಪ್ರಕರಣ) ಆರು ಅಪರಾಧಿಗಳಿಗೆ ಇಪ್ಪತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಶುಕ್ರವಾರ (ಡಿಸೆಂಬರ್ 12) ಕೇರಳ ನ್ಯಾಯಾಲಯ ಆದೇಶಿಸಿದೆ. ಡಿಸೆಂಬರ್...