Homeಮುಖಪುಟಕ್ರಿಶ್ಚಿಯನ್ನರ ಮೇಲೆ ದಾಳಿಗಳು ಹೆಚ್ಚಳ: ಯುಸಿಎಫ್ ಕಳವಳ

ಕ್ರಿಶ್ಚಿಯನ್ನರ ಮೇಲೆ ದಾಳಿಗಳು ಹೆಚ್ಚಳ: ಯುಸಿಎಫ್ ಕಳವಳ

- Advertisement -
- Advertisement -

ನವದೆಹಲಿ: ಕೇಂದ್ರ ಮತ್ತು ಹಲವಾರು ರಾಜ್ಯಗಳಲ್ಲಿ ಆಡಳಿತಾರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ)ದ ಸರ್ಕಾರವು ಪ್ರತಿಪಾದಿಸುತ್ತಿರುವ ಬಹುಸಂಖ್ಯಾತ ಮನೋಧರ್ಮವು ದೇಶದ ಅಲ್ಪಸಂಖ್ಯಾತರ ಮೇಲೆ, ವಿಶೇಷವಾಗಿ ಮುಸ್ಲಿಮರು ಮತ್ತು ಕ್ರಿಶ್ಚಿಯನ್ನರ ಮೇಲೆ ದಾಳಿಗಳನ್ನು ಹೆಚ್ಚಿಸಿದೆ ಎಂದು ಯುನೈಟೆಡ್ ಕ್ರಿಶ್ಚಿಯನ್ ಫೋರಮ್ (ಯುಸಿಎಫ್) ಕಳವಳ ವ್ಯಕ್ತಪಡಿಸಿದೆ.

ಬಿಜೆಪಿಯ ಹಿಂದೂ ರಾಷ್ಟ್ರೀಯತೆ ಮತ್ತು ಸರ್ಕಾರದ ನಿರಾಸಕ್ತಿಯ ಕಾರಣದಿಂದ ದೇಶದಲ್ಲಿ ವರದಿಯಾದ ಅಲ್ಪಸಂಖ್ಯಾತರ ಮೇಲಿನ ಹಿಂಸಾಚಾರ ಪ್ರಕರಣಗಳಲ್ಲಿ ಗಮನಾರ್ಹ ಏರಿಕೆಯಾಗಿದ್ದು, ಅವರ ಜೀವನ ಮತ್ತು ಗೌರವದ ಮೇಲೆ ಭಾರಿ ಹಾನಿಯನ್ನುಂಟುಮಾಡಿದೆ ಎಂದು ಅದು ಹೇಳಿದೆ.

ಕ್ರಿಶ್ಚಿಯನ್ ವಿಷಯಗಳ ಮೇಲೆ ಕೇಂದ್ರೀಕರಿಸಿದ ನವದೆಹಲಿ ಮೂಲದ ನಾಗರಿಕ ಸಮಾಜ ಸಂಘಟನೆಯಾದ ಯುನೈಟೆಡ್ ಕ್ರಿಶ್ಚಿಯನ್ ಫೋರಮ್ ಬಿಡುಗಡೆ ಮಾಡಿದ ಇತ್ತೀಚಿನ ಅಂಕಿಅಂಶಗಳು, 2024ರಲ್ಲಿ ಕ್ರಿಶ್ಚಿಯನ್ನರ ವಿರುದ್ಧ 834 ಹಿಂಸಾಚಾರ ಘಟನೆಗಳು ನಡೆದಿವೆ ಎಂದು ಹೇಳಿದೆ. ಇದು 2023ರಲ್ಲಿ ಸಂಭವಿಸಿದ 734 ಘಟನೆಗಳಿಗಿಂತ 100 ಹೆಚ್ಚಾಗಿದೆ ಎಂದು ಅದು ತಿಳಿಸಿದೆ.

ಇತ್ತೀಚಿನ ಹೇಳಿಕೆಯಲ್ಲಿ, ಕ್ರಿಶ್ಚಿಯನ್ನರ ವಿರುದ್ಧ ಹೆಚ್ಚುತ್ತಿರುವ ಹಿಂಸಾಚಾರದ ಘಟನೆಗಳ ಬಗ್ಗೆ ಯುಸಿಎಫ್ ಕಳವಳ ವ್ಯಕ್ತಪಡಿಸಿದೆ. ಅತ್ಯಂತ ಕಳವಳಕಾರಿ ವಿಷಯವೆಂದರೆ ದೇಶದಲ್ಲಿ ಪ್ರತಿದಿನ ಎರಡಕ್ಕಿಂತ ಹೆಚ್ಚು ಕ್ರೈಸ್ತರು ತಮ್ಮ ಧರ್ಮವನ್ನು ಆಚರಿಸುವುದಕ್ಕಾಗಿ ಗುರಿಯಾಗುತ್ತಿದ್ದಾರೆ ಎಂದು ಅದು ಹೇಳಿದೆ.

ಈ ಘಟನೆಗಳು ಹಲವು ರೂಪಗಳನ್ನು ತೆಗೆದುಕೊಳ್ಳುತ್ತಿದೆ. ಅವುಗಳಲ್ಲಿ ಚರ್ಚ್‌ಗಳು ಅಥವಾ ಪ್ರಾರ್ಥನಾ ಸಭೆಗಳ ಮೇಲಿನ ದಾಳಿಗಳು, ತಮ್ಮ ನಂಬಿಕೆಯನ್ನು ಪಾಲಿಸುವವರ ಮೇಲೆ ಕಿರುಕುಳ, ಸಮುದಾಯಕ್ಕೆ ಸಂಬಂಧಿಸಿದ ಸಂಪನ್ಮೂಲಗಳ ಮೇಲಿನ ಬಹಿಷ್ಕಾರಗಳು ಮತ್ತು ನಿರ್ಬಂಧಗಳು, ಸುಳ್ಳು ಆರೋಪಗಳು ಮತ್ತು ಕ್ರಿಮಿನಲ್ ಪ್ರಕರಣಗಳು, ವಿಶೇಷವಾಗಿ ಬಲವಂತದ ಮತಾಂತರಕ್ಕೆ ಸಂಬಂಧಿಸಿದ ಪ್ರಕರಣಗಳು ಸೇರಿವೆ ಎಂದು ಹೇಳಿಕೆಯಲ್ಲಿ ಉಲ್ಲೇಖಿಸಲಾಗಿದೆ.

ಹಲವಾರು ಬಿಜೆಪಿ ಆಡಳಿತದ ರಾಜ್ಯಗಳಲ್ಲಿ ಧಾರ್ಮಿಕ ಮತಾಂತರದ ವಿರುದ್ಧದ ವಿವಾದಾತ್ಮಕ ಮತ್ತು ಕಠಿಣ ಕಾನೂನುಗಳು ಹಿಂದುತ್ವ ಕಾರ್ಯಕರ್ತರಿಗೆ ಮತ್ತು ಅಲ್ಲಿನ ಸರಕಾರಗಳಿಗೆ ಅಲ್ಪಸಂಖ್ಯಾತರ ಮೇಲೆ ಕಠಿಣ ಕ್ರಮ ಕೈಗೊಳ್ಳಲು ಅಸ್ತ್ರವನ್ನು ಒದಗಿಸಿವೆ. 2014ರಲ್ಲಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಅಂತಹ ಘಟನೆಗಳು ವೇಗವಾಗಿ ಹೆಚ್ಚಿವೆ ಎಂದು ಅದು ತಿಳಿಸಿದೆ.

2024ರಲ್ಲಿ ಉತ್ತರಪ್ರದೇಶದಲ್ಲಿ ಕ್ರಿಶ್ಚಿಯನ್ನರ ವಿರುದ್ಧ ಅತಿ ಹೆಚ್ಚು ಘಟನೆಗಳು (209) ದಾಖಲಾಗಿವೆ. ನಂತರ ಛತ್ತೀಸ್‌ಗಢ (165)ದಲ್ಲಿ ದಾಖಲಾಗಿವೆ. ಪೊಲೀಸರಿಗೆ ದೂರು ನೀಡಿದ ನಂತರವೂ ಈ ಹಲವು ಘಟನೆಗಳಲ್ಲಿ ಎಫ್‌ಐಆರ್‌ಗಳು ದಾಖಲಾಗಿಲ್ಲ ಎಂದು ಮಾನವ ಹಕ್ಕುಗಳ ಕಾರ್ಯಕರ್ತರು ಹೇಳುತ್ತಾರೆ.

ಇದಲ್ಲದೆ, ಪೊಲೀಸರು ವಿಷಯವನ್ನು ತಿರುಚಲು ಮತ್ತು ಬಲಿಪಶುಗಳ ವಿರುದ್ಧವೇ ಸುಳ್ಳು ಆರೋಪಗಳನ್ನು ದಾಖಲಿಸುವ ಮೂಲಕ ಅಪರಾಧಿಗಳನ್ನು ಬೆಂಬಲಿಸಲು ಪ್ರಯತ್ನಿಸುತ್ತಾರೆ ಎಂದು ಬಲಿಬಶು ಕ್ರಿಶ್ಚಿಯನ್ನರು ದೂರುತ್ತಾರೆ ಮತ್ತು ಇದರಿಂದಾಗಿ ಇವರು ಪೊಲೀಸರನ್ನು ಸಂಪರ್ಕಿಸಲು ಹೆದರುತ್ತಾರೆ ಎಂದು ಯುಸಿಎಫ್ ಹೇಳಿಕೆ ತಿಳಿಸಿದೆ.

ಹೆಚ್ಚಿನ ಎಫ್‌ಐಆರ್‌ಗಳು ಬಲಿಪಶುಗಳ ವಿರುದ್ಧ ದಾಖಲಾಗುತ್ತವೆ. ಅಪರಾಧಿಗಳ ವಿರುದ್ಧ ಪ್ರಕರಣ ದಾಖಲಿಸಿದರೆ, ದಾಳಿಕೋರರು ಹೆಚ್ಚು ಆಕ್ರಮಣಕಾರಿಗಳಾಗಬಹುದು ಮತ್ತು ತಮ್ಮ ಜೀವಕ್ಕೆ ಹೆಚ್ಚಿನ ಅಪಾಯವಿದೆ ಎಂದು ಪೊಲೀಸರು ಸಂತ್ರಸ್ತರಿಗೆ ಹೆದರಿಸುತ್ತಾರೆ ಎಂದು ಯುಸಿಎಫ್ ಹೇಳಿದೆ.

ಡಿಸೆಂಬರ್ 2024ರಲ್ಲಿ ದಾಖಲಾದ 73 ಘಟನೆಗಳಲ್ಲಿ 25 ಬಲಿಪಶುಗಳು ಪರಿಶಿಷ್ಟ ಪಂಗಡದವರು ಮತ್ತು 14 ಮಂದಿ ದಲಿತರು ಆಗಿದ್ದಾರೆ. ಈ ಘಟನೆಗಳಲ್ಲಿ ಒಂಬತ್ತು ಘಟನೆಗಳು ಮಹಿಳೆಯರನ್ನು ಒಳಗೊಂಡಿವೆ.  ಡಿಸೆಂಬರ್ 31ರಂದು, 400 ಕ್ಕೂ ಹೆಚ್ಚು ಹಿರಿಯ ಕ್ರಿಶ್ಚಿಯನ್ ನಾಯಕರು ಮತ್ತು 30 ಚರ್ಚ್ ಗುಂಪುಗಳ ನಿಯೋಗವು ಸಮುದಾಯದ ವಿರುದ್ಧ ಹೆಚ್ಚುತ್ತಿರುವ ಹಿಂಸಾಚಾರದ ಸಮಸ್ಯೆಯನ್ನು ಪರಿಹರಿಸಲು ರಾಷ್ಟ್ರಪತಿ ದ್ರೌಪದಿ ಮುರ್ಮು ಮತ್ತು ಪ್ರಧಾನಿ ನರೇಂದ್ರ ಮೋದಿಯವರಿಗೆ ಮನವಿ ಮಾಡಿತು ಎಂದು ಯುಸಿಎಫ್ ತಿಳಿಸಿದೆ.

ಕ್ರಿಸ್‌ಮಸ್ ಸಮಯದಲ್ಲಿ ಇಂತಹ ಹಲವಾರು ಪ್ರಕರಣಗಳು ದಾಖಲಾಗಿರುವುದು ನಂತರ ನಮ್ಮ ಗಮನಕ್ಕೆ ಬಂದಿತು. ಡಿಸೆಂಬರ್ 23, 2024 ರಂದು ಭಾರತದ ಕ್ಯಾಥೋಲಿಕ್ ಬಿಷಪ್‌ಗಳ ಸಮ್ಮೇಳನ ಆಯೋಜಿಸಿದ್ದ ಕ್ರಿಸ್‌ಮಸ್ ಆಚರಣೆಯಲ್ಲಿ ಪ್ರಧಾನಿ ಮೋದಿ ಭಾಗವಹಿಸಿದ್ದರು. ಅಲ್ಲಿ ಮಾತನಾಡುತ್ತಾ ಅವರು ಕ್ರಿಶ್ಚಿಯನ್ನರ ವಿರುದ್ಧದ ಹಿಂಸಾಚಾರವನ್ನು ಉಲ್ಲೇಖಿಸಿದರು ಆದರೆ ಜರ್ಮನಿಯಲ್ಲಿನ ಕ್ರಿಸ್‌ಮಸ್ ಮಾರುಕಟ್ಟೆ ದಾಳಿ ಮತ್ತು ಶ್ರೀಲಂಕಾದಲ್ಲಿ 2019ರ ಈಸ್ಟರ್ ಬಾಂಬ್ ದಾಳಿಯಂತಹ ಪ್ರಪಂಚದ ಇತರ ಭಾಗಗಳಲ್ಲಿ ನಡೆದ ದಾಳಿಗಳನ್ನು ಮಾತ್ರ ಅವರು ಖಂಡಿಸಿದರು ಎಂದು ಅದು ಹೇಳಿದೆ.

ಪ್ರಮುಖ ಪತ್ರಕರ್ತ ಮತ್ತು ಮಾನವ ಹಕ್ಕುಗಳ ಕಾರ್ಯಕರ್ತ ಜಾನ್ ದಯಾಳ್ ಅವರು ಭಾಷಣವು ಮೋದಿಯ ದ್ವಂದ್ವತೆಯನ್ನು ಬಹಿರಂಗಪಡಿಸಿದೆ ಎಂದು ಹೇಳಿದರು. “ಹಿಂಸಾಚಾರದ ಘಟನೆಗಳ ಬಗ್ಗೆ ಪ್ರಧಾನಿ ತಮ್ಮ ನೋವನ್ನು ವ್ಯಕ್ತಪಡಿಸಿದ ನಂತರ, 2024ರಲ್ಲಿ ದೇಶದಲ್ಲಿ ದಿನನಿತ್ಯ ನಡೆದ ಎರಡು ದ್ವೇಷ ಹಿಂಸಾಚಾರದ ಘಟನೆಗಳಲ್ಲಿ ಒಂದನ್ನು ಸಹ ಉಲ್ಲೇಖಿಸಲಿಲ್ಲ. ಬದಲಾಗಿ, ಅವರು ಜರ್ಮನ್ ದಾಳಿಯನ್ನು ಉದಾಹರಣೆಯಾಗಿ ಉಲ್ಲೇಖಿಸಿದರು. ಇದು ದ್ವಂದ್ವತೆ ಮತ್ತು ಇದು ಹಿಂದೂ ಉಗ್ರಗಾಮಿಗಳಿಗೆ ಪ್ರೋತ್ಸಾಹ ನೀಡುತ್ತದೆ” ಎಂದು ಅವರು ಹೇಳಿದರು.

ಮಹಿಳೆಯರು ಗರ್ಭ ಧರಿಸುವಂತೆ ಮಾಡಿದರೆ ರೂ. 10 ಲಕ್ಷ: ಹೊಸ ಸೈಬರ್ ವಂಚನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...