Homeಮುಖಪುಟಕ್ರಿಶ್ಚಿಯನ್ನರ ಮೇಲೆ ದಾಳಿಗಳು ಹೆಚ್ಚಳ: ಯುಸಿಎಫ್ ಕಳವಳ

ಕ್ರಿಶ್ಚಿಯನ್ನರ ಮೇಲೆ ದಾಳಿಗಳು ಹೆಚ್ಚಳ: ಯುಸಿಎಫ್ ಕಳವಳ

- Advertisement -
- Advertisement -

ನವದೆಹಲಿ: ಕೇಂದ್ರ ಮತ್ತು ಹಲವಾರು ರಾಜ್ಯಗಳಲ್ಲಿ ಆಡಳಿತಾರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ)ದ ಸರ್ಕಾರವು ಪ್ರತಿಪಾದಿಸುತ್ತಿರುವ ಬಹುಸಂಖ್ಯಾತ ಮನೋಧರ್ಮವು ದೇಶದ ಅಲ್ಪಸಂಖ್ಯಾತರ ಮೇಲೆ, ವಿಶೇಷವಾಗಿ ಮುಸ್ಲಿಮರು ಮತ್ತು ಕ್ರಿಶ್ಚಿಯನ್ನರ ಮೇಲೆ ದಾಳಿಗಳನ್ನು ಹೆಚ್ಚಿಸಿದೆ ಎಂದು ಯುನೈಟೆಡ್ ಕ್ರಿಶ್ಚಿಯನ್ ಫೋರಮ್ (ಯುಸಿಎಫ್) ಕಳವಳ ವ್ಯಕ್ತಪಡಿಸಿದೆ.

ಬಿಜೆಪಿಯ ಹಿಂದೂ ರಾಷ್ಟ್ರೀಯತೆ ಮತ್ತು ಸರ್ಕಾರದ ನಿರಾಸಕ್ತಿಯ ಕಾರಣದಿಂದ ದೇಶದಲ್ಲಿ ವರದಿಯಾದ ಅಲ್ಪಸಂಖ್ಯಾತರ ಮೇಲಿನ ಹಿಂಸಾಚಾರ ಪ್ರಕರಣಗಳಲ್ಲಿ ಗಮನಾರ್ಹ ಏರಿಕೆಯಾಗಿದ್ದು, ಅವರ ಜೀವನ ಮತ್ತು ಗೌರವದ ಮೇಲೆ ಭಾರಿ ಹಾನಿಯನ್ನುಂಟುಮಾಡಿದೆ ಎಂದು ಅದು ಹೇಳಿದೆ.

ಕ್ರಿಶ್ಚಿಯನ್ ವಿಷಯಗಳ ಮೇಲೆ ಕೇಂದ್ರೀಕರಿಸಿದ ನವದೆಹಲಿ ಮೂಲದ ನಾಗರಿಕ ಸಮಾಜ ಸಂಘಟನೆಯಾದ ಯುನೈಟೆಡ್ ಕ್ರಿಶ್ಚಿಯನ್ ಫೋರಮ್ ಬಿಡುಗಡೆ ಮಾಡಿದ ಇತ್ತೀಚಿನ ಅಂಕಿಅಂಶಗಳು, 2024ರಲ್ಲಿ ಕ್ರಿಶ್ಚಿಯನ್ನರ ವಿರುದ್ಧ 834 ಹಿಂಸಾಚಾರ ಘಟನೆಗಳು ನಡೆದಿವೆ ಎಂದು ಹೇಳಿದೆ. ಇದು 2023ರಲ್ಲಿ ಸಂಭವಿಸಿದ 734 ಘಟನೆಗಳಿಗಿಂತ 100 ಹೆಚ್ಚಾಗಿದೆ ಎಂದು ಅದು ತಿಳಿಸಿದೆ.

ಇತ್ತೀಚಿನ ಹೇಳಿಕೆಯಲ್ಲಿ, ಕ್ರಿಶ್ಚಿಯನ್ನರ ವಿರುದ್ಧ ಹೆಚ್ಚುತ್ತಿರುವ ಹಿಂಸಾಚಾರದ ಘಟನೆಗಳ ಬಗ್ಗೆ ಯುಸಿಎಫ್ ಕಳವಳ ವ್ಯಕ್ತಪಡಿಸಿದೆ. ಅತ್ಯಂತ ಕಳವಳಕಾರಿ ವಿಷಯವೆಂದರೆ ದೇಶದಲ್ಲಿ ಪ್ರತಿದಿನ ಎರಡಕ್ಕಿಂತ ಹೆಚ್ಚು ಕ್ರೈಸ್ತರು ತಮ್ಮ ಧರ್ಮವನ್ನು ಆಚರಿಸುವುದಕ್ಕಾಗಿ ಗುರಿಯಾಗುತ್ತಿದ್ದಾರೆ ಎಂದು ಅದು ಹೇಳಿದೆ.

ಈ ಘಟನೆಗಳು ಹಲವು ರೂಪಗಳನ್ನು ತೆಗೆದುಕೊಳ್ಳುತ್ತಿದೆ. ಅವುಗಳಲ್ಲಿ ಚರ್ಚ್‌ಗಳು ಅಥವಾ ಪ್ರಾರ್ಥನಾ ಸಭೆಗಳ ಮೇಲಿನ ದಾಳಿಗಳು, ತಮ್ಮ ನಂಬಿಕೆಯನ್ನು ಪಾಲಿಸುವವರ ಮೇಲೆ ಕಿರುಕುಳ, ಸಮುದಾಯಕ್ಕೆ ಸಂಬಂಧಿಸಿದ ಸಂಪನ್ಮೂಲಗಳ ಮೇಲಿನ ಬಹಿಷ್ಕಾರಗಳು ಮತ್ತು ನಿರ್ಬಂಧಗಳು, ಸುಳ್ಳು ಆರೋಪಗಳು ಮತ್ತು ಕ್ರಿಮಿನಲ್ ಪ್ರಕರಣಗಳು, ವಿಶೇಷವಾಗಿ ಬಲವಂತದ ಮತಾಂತರಕ್ಕೆ ಸಂಬಂಧಿಸಿದ ಪ್ರಕರಣಗಳು ಸೇರಿವೆ ಎಂದು ಹೇಳಿಕೆಯಲ್ಲಿ ಉಲ್ಲೇಖಿಸಲಾಗಿದೆ.

ಹಲವಾರು ಬಿಜೆಪಿ ಆಡಳಿತದ ರಾಜ್ಯಗಳಲ್ಲಿ ಧಾರ್ಮಿಕ ಮತಾಂತರದ ವಿರುದ್ಧದ ವಿವಾದಾತ್ಮಕ ಮತ್ತು ಕಠಿಣ ಕಾನೂನುಗಳು ಹಿಂದುತ್ವ ಕಾರ್ಯಕರ್ತರಿಗೆ ಮತ್ತು ಅಲ್ಲಿನ ಸರಕಾರಗಳಿಗೆ ಅಲ್ಪಸಂಖ್ಯಾತರ ಮೇಲೆ ಕಠಿಣ ಕ್ರಮ ಕೈಗೊಳ್ಳಲು ಅಸ್ತ್ರವನ್ನು ಒದಗಿಸಿವೆ. 2014ರಲ್ಲಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಅಂತಹ ಘಟನೆಗಳು ವೇಗವಾಗಿ ಹೆಚ್ಚಿವೆ ಎಂದು ಅದು ತಿಳಿಸಿದೆ.

2024ರಲ್ಲಿ ಉತ್ತರಪ್ರದೇಶದಲ್ಲಿ ಕ್ರಿಶ್ಚಿಯನ್ನರ ವಿರುದ್ಧ ಅತಿ ಹೆಚ್ಚು ಘಟನೆಗಳು (209) ದಾಖಲಾಗಿವೆ. ನಂತರ ಛತ್ತೀಸ್‌ಗಢ (165)ದಲ್ಲಿ ದಾಖಲಾಗಿವೆ. ಪೊಲೀಸರಿಗೆ ದೂರು ನೀಡಿದ ನಂತರವೂ ಈ ಹಲವು ಘಟನೆಗಳಲ್ಲಿ ಎಫ್‌ಐಆರ್‌ಗಳು ದಾಖಲಾಗಿಲ್ಲ ಎಂದು ಮಾನವ ಹಕ್ಕುಗಳ ಕಾರ್ಯಕರ್ತರು ಹೇಳುತ್ತಾರೆ.

ಇದಲ್ಲದೆ, ಪೊಲೀಸರು ವಿಷಯವನ್ನು ತಿರುಚಲು ಮತ್ತು ಬಲಿಪಶುಗಳ ವಿರುದ್ಧವೇ ಸುಳ್ಳು ಆರೋಪಗಳನ್ನು ದಾಖಲಿಸುವ ಮೂಲಕ ಅಪರಾಧಿಗಳನ್ನು ಬೆಂಬಲಿಸಲು ಪ್ರಯತ್ನಿಸುತ್ತಾರೆ ಎಂದು ಬಲಿಬಶು ಕ್ರಿಶ್ಚಿಯನ್ನರು ದೂರುತ್ತಾರೆ ಮತ್ತು ಇದರಿಂದಾಗಿ ಇವರು ಪೊಲೀಸರನ್ನು ಸಂಪರ್ಕಿಸಲು ಹೆದರುತ್ತಾರೆ ಎಂದು ಯುಸಿಎಫ್ ಹೇಳಿಕೆ ತಿಳಿಸಿದೆ.

ಹೆಚ್ಚಿನ ಎಫ್‌ಐಆರ್‌ಗಳು ಬಲಿಪಶುಗಳ ವಿರುದ್ಧ ದಾಖಲಾಗುತ್ತವೆ. ಅಪರಾಧಿಗಳ ವಿರುದ್ಧ ಪ್ರಕರಣ ದಾಖಲಿಸಿದರೆ, ದಾಳಿಕೋರರು ಹೆಚ್ಚು ಆಕ್ರಮಣಕಾರಿಗಳಾಗಬಹುದು ಮತ್ತು ತಮ್ಮ ಜೀವಕ್ಕೆ ಹೆಚ್ಚಿನ ಅಪಾಯವಿದೆ ಎಂದು ಪೊಲೀಸರು ಸಂತ್ರಸ್ತರಿಗೆ ಹೆದರಿಸುತ್ತಾರೆ ಎಂದು ಯುಸಿಎಫ್ ಹೇಳಿದೆ.

ಡಿಸೆಂಬರ್ 2024ರಲ್ಲಿ ದಾಖಲಾದ 73 ಘಟನೆಗಳಲ್ಲಿ 25 ಬಲಿಪಶುಗಳು ಪರಿಶಿಷ್ಟ ಪಂಗಡದವರು ಮತ್ತು 14 ಮಂದಿ ದಲಿತರು ಆಗಿದ್ದಾರೆ. ಈ ಘಟನೆಗಳಲ್ಲಿ ಒಂಬತ್ತು ಘಟನೆಗಳು ಮಹಿಳೆಯರನ್ನು ಒಳಗೊಂಡಿವೆ.  ಡಿಸೆಂಬರ್ 31ರಂದು, 400 ಕ್ಕೂ ಹೆಚ್ಚು ಹಿರಿಯ ಕ್ರಿಶ್ಚಿಯನ್ ನಾಯಕರು ಮತ್ತು 30 ಚರ್ಚ್ ಗುಂಪುಗಳ ನಿಯೋಗವು ಸಮುದಾಯದ ವಿರುದ್ಧ ಹೆಚ್ಚುತ್ತಿರುವ ಹಿಂಸಾಚಾರದ ಸಮಸ್ಯೆಯನ್ನು ಪರಿಹರಿಸಲು ರಾಷ್ಟ್ರಪತಿ ದ್ರೌಪದಿ ಮುರ್ಮು ಮತ್ತು ಪ್ರಧಾನಿ ನರೇಂದ್ರ ಮೋದಿಯವರಿಗೆ ಮನವಿ ಮಾಡಿತು ಎಂದು ಯುಸಿಎಫ್ ತಿಳಿಸಿದೆ.

ಕ್ರಿಸ್‌ಮಸ್ ಸಮಯದಲ್ಲಿ ಇಂತಹ ಹಲವಾರು ಪ್ರಕರಣಗಳು ದಾಖಲಾಗಿರುವುದು ನಂತರ ನಮ್ಮ ಗಮನಕ್ಕೆ ಬಂದಿತು. ಡಿಸೆಂಬರ್ 23, 2024 ರಂದು ಭಾರತದ ಕ್ಯಾಥೋಲಿಕ್ ಬಿಷಪ್‌ಗಳ ಸಮ್ಮೇಳನ ಆಯೋಜಿಸಿದ್ದ ಕ್ರಿಸ್‌ಮಸ್ ಆಚರಣೆಯಲ್ಲಿ ಪ್ರಧಾನಿ ಮೋದಿ ಭಾಗವಹಿಸಿದ್ದರು. ಅಲ್ಲಿ ಮಾತನಾಡುತ್ತಾ ಅವರು ಕ್ರಿಶ್ಚಿಯನ್ನರ ವಿರುದ್ಧದ ಹಿಂಸಾಚಾರವನ್ನು ಉಲ್ಲೇಖಿಸಿದರು ಆದರೆ ಜರ್ಮನಿಯಲ್ಲಿನ ಕ್ರಿಸ್‌ಮಸ್ ಮಾರುಕಟ್ಟೆ ದಾಳಿ ಮತ್ತು ಶ್ರೀಲಂಕಾದಲ್ಲಿ 2019ರ ಈಸ್ಟರ್ ಬಾಂಬ್ ದಾಳಿಯಂತಹ ಪ್ರಪಂಚದ ಇತರ ಭಾಗಗಳಲ್ಲಿ ನಡೆದ ದಾಳಿಗಳನ್ನು ಮಾತ್ರ ಅವರು ಖಂಡಿಸಿದರು ಎಂದು ಅದು ಹೇಳಿದೆ.

ಪ್ರಮುಖ ಪತ್ರಕರ್ತ ಮತ್ತು ಮಾನವ ಹಕ್ಕುಗಳ ಕಾರ್ಯಕರ್ತ ಜಾನ್ ದಯಾಳ್ ಅವರು ಭಾಷಣವು ಮೋದಿಯ ದ್ವಂದ್ವತೆಯನ್ನು ಬಹಿರಂಗಪಡಿಸಿದೆ ಎಂದು ಹೇಳಿದರು. “ಹಿಂಸಾಚಾರದ ಘಟನೆಗಳ ಬಗ್ಗೆ ಪ್ರಧಾನಿ ತಮ್ಮ ನೋವನ್ನು ವ್ಯಕ್ತಪಡಿಸಿದ ನಂತರ, 2024ರಲ್ಲಿ ದೇಶದಲ್ಲಿ ದಿನನಿತ್ಯ ನಡೆದ ಎರಡು ದ್ವೇಷ ಹಿಂಸಾಚಾರದ ಘಟನೆಗಳಲ್ಲಿ ಒಂದನ್ನು ಸಹ ಉಲ್ಲೇಖಿಸಲಿಲ್ಲ. ಬದಲಾಗಿ, ಅವರು ಜರ್ಮನ್ ದಾಳಿಯನ್ನು ಉದಾಹರಣೆಯಾಗಿ ಉಲ್ಲೇಖಿಸಿದರು. ಇದು ದ್ವಂದ್ವತೆ ಮತ್ತು ಇದು ಹಿಂದೂ ಉಗ್ರಗಾಮಿಗಳಿಗೆ ಪ್ರೋತ್ಸಾಹ ನೀಡುತ್ತದೆ” ಎಂದು ಅವರು ಹೇಳಿದರು.

ಮಹಿಳೆಯರು ಗರ್ಭ ಧರಿಸುವಂತೆ ಮಾಡಿದರೆ ರೂ. 10 ಲಕ್ಷ: ಹೊಸ ಸೈಬರ್ ವಂಚನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿದ್ಯುತ್ ಖಾಸಗೀಕರಣ ವಿರುದ್ದದ ಹೋರಾಟಕ್ಕೆ ಗೆಲುವು: ಅರ್ಜಿ ಹಿಂಪಡೆದ ಟಾಟಾ ಪವರ್ ಕಂಪನಿ

ರಾಜ್ಯದಲ್ಲಿ ವಿದ್ಯುತ್ ಕ್ಷೇತ್ರದಲ್ಲಿ ಖಾಸಗೀಕರಣದ ಹೆಜ್ಜೆ ಇಡಲು ಮುಂದಾಗಿದ್ದ ಟಾಟಾ ಪವರ್ ಕಂಪನಿಗೆ ಭಾರಿ ಹಿನ್ನಡೆಯಾಗಿದೆ. ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗದ (KERC) ಮುಂದೆ ರಾಜ್ಯದ 19 ಕಂದಾಯ ಜಿಲ್ಲೆಗಳಿಗೆ ಸಂಬಂಧಿಸಿದಂತೆ ತಾನು...

SIR: ಮತದಾರರ ಮನೆಗೆ ಹೋಗದೆ ಕಚೇರಿಯಲ್ಲೇ ಕುಳಿತು ಫಾರ್ಮ್ ವಿತರಣೆ ಆರೋಪ, BLO ಗಳಿಗೆ ಎಚ್ಚರಿಕೆ ನೀಡಿದ ಆಯೋಗ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಂದ ವ್ಯಾಪಕ ದೂರುಗಳು ಕೇಳಿಬಂದ ಬೆನ್ನಲ್ಲೇ, ರಾಜ್ಯ ಚುನಾವಣಾ ಆಯೋಗವು ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಮತದಾರರ ಮನೆ-ಮನೆಗೆ ಭೇಟಿ...

ಅಳುವ ಕಂದಮ್ಮಗಳನ್ನು ವಾಷಿಂಗ್ ಮೆಷಿನ್‌ನಲ್ಲಿ ಕೂಡಿಹಾಕ್ತಿದ್ದ ಇಬ್ಬರು ಕೇರ್‌ಟೇಕರ್ ಅರೆಸ್ಟ್

ಸಿಲಿಕಾನ್ ಸಿಟಿಯ ಬ್ರೂಕ್‌ಫೀಲ್ಡ್‌ನಲ್ಲಿರುವ ಪ್ರಮುಖ ಐಟಿ ಸಂಸ್ಥೆ 'ಕ್ಯಾಪ್‌ಜೆಮಿನಿ' ಕ್ಯಾಂಪಸ್‌ನ ಡೇ-ಕೇರ್ ಸೆಂಟರ್‌ನಲ್ಲಿ ಪುಟ್ಟ ಕಂದಮ್ಮಗಳನ್ನು ಬಾತ್‌ರೂಮ್ ಹಾಗೂ ವಾಷಿಂಗ್ ಮೆಷಿನ್‌ಗಳಲ್ಲಿ ಕೂಡಿಹಾಕಿ ವಿಕೃತಿ ಮೆರೆದಿದ್ದ ಪ್ರಕರಣದಲ್ಲಿ ಪೊಲೀಸರು ಭರ್ಜರಿ ಬೇಟೆಯಾಡಿದ್ದಾರೆ. ಪ್ರಕರಣದ...

“ನಾಗರಿಕರು ಸರ್ಕಾರದ ಗುಲಾಮರಲ್ಲ”: ಸಿಎಎ, ಜ್ಞಾನವಾಪಿ ವಿರೋಧಿ ಪ್ರತಿಭಟನೆ ಸಂಬಂಧ ಎಸ್‌ಡಿಪಿಐ ನಾಯಕನ ಗಡಿಪಾರು ಪ್ರಶ್ನಿಸಿದ ಬಾಂಬೆ ಹೈಕೋರ್ಟ್

“ದೇಶದ ನಾಗರಿಕರು ಸರ್ಕಾರದ ಗುಲಾಮರಲ್ಲ. ಕೇವಲ ಸರ್ಕಾರದ ನಿರ್ಧಾರಗಳನ್ನು ವಿರೋಧಿಸುವುದು ಅಥವಾ ಆಡಳಿತ ವ್ಯವಸ್ಥೆಯ ವಿರುದ್ಧ ಘೋಷಣೆಗಳನ್ನು ಕೂಗುವುದು ಒಬ್ಬ ನಾಗರಿಕನನ್ನು ಗಡಿಪಾರು ಮಾಡಲು ಕಾನೂನಾತ್ಮಕ ಕಾರಣವಾಗಲಾರದು,” ಎಂದು ಬಾಂಬೆ ಹೈಕೋರ್ಟ್‌ ಐತಿಹಾಸಿಕ...

ಗೌರಿಯಕ್ಕ, ಸುರೇಶ್ ಭಟ್ರ ಬಗ್ಗೆ ತಿಳಿಯಲು ಎಕ್ಸ್ ಆರೆಸ್ಸೆಸ್‌ನವರ ಪ್ರಮಾಣ ಪತ್ರ ಬೇಕಿಲ್ಲ

ಕರ್ನಾಟಕ ಕೋಮು ಸೌಹಾರ್ದ ವೇದಿಕೆಯಲ್ಲಿ ನಮ್ಮ ಒಡನಾಡಿಯಾಗಿದ್ದ ಎ‌ಐಸಿಸಿ ಕಾರ್ಯದರ್ಶಿಯೂ ಆಗಿರುವ ಪಿ.ವಿ.ಮೋಹನ್‌ರಿಗೆ ವಿಧಾನ ಪರಿಷತ್ ಸದಸ್ಯತ್ವ ಸಿಕ್ಕಿದ್ದು ಸಹಜವಾಗಿಯೇ ನಮಗೆ ಖುಷಿಯಾಗಿತ್ತು. ಈ ನಿಟ್ಟಿನಲ್ಲಿ ಮಂಗಳೂರಿನ ವುಡ್‌ಲ್ಯಾಂಡ್ಸ್ ಹೋಟೆಲಲ್ಲಿ ಕೋಮು ಸೌಹಾರ್ದ...

ಡ್ರಗ್ಸ್ ಮುಕ್ತ ಕರ್ನಾಟಕ ನಮ್ಮ ಗುರಿ: ‘ಆಪರೇಷನ್ RISE’ ಮತ್ತು ‘ಬೇಡ BRO’ ಅಭಿಯಾನಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಕರೆ

ಬೆಂಗಳೂರು: ಮಾದಕ ದ್ರವ್ಯ ಮುಕ್ತ ಕರ್ನಾಟಕವನ್ನು ನಿರ್ಮಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದ್ದು, ಮಾದಕ ವ್ಯಸನದ ವಿರುದ್ಧ ಯುವಜನತೆ ಮತ್ತು ಸಾರ್ವಜನಿಕರು ಕೈಜೋಡಿಸಬೇಕು ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ...

ಬೆಂಗಳೂರಿನ 3 ಪ್ರಮುಖ ಮಾರ್ಗಗಳಲ್ಲಿ ಟೋಲ್ ದರ ಭಾರಿ ಹೆಚ್ಚಳ: ಇಂದಿನಿಂದಲೇ ಜಾರಿ 

ಬೆಂಗಳೂರು: ಸಿಲಿಕಾನ್ ಸಿಟಿಯ ವಾಹನ ಸವಾರರಿಗೆ ಜುಲೈ ಒಂದರಿಂದಲೇ ಅನ್ವಯವಾಗುವಂತೆ ಬೆಲೆ ಏರಿಕೆಯ ಭಾರಿ ಬಿಸಿ ತಟ್ಟಿದೆ. ಬೆಂಗಳೂರಿನ ಪ್ರಮುಖ ಸಂಪರ್ಕ ರಸ್ತೆಗಳಾದ ನೈಸ್ ರಸ್ತೆ (NICE Road), ಎಲೆಕ್ಟ್ರಾನಿಕ್ಸ್ ಸಿಟಿ ಎಲಿವೇಟೆಡ್...

ಕೊಪ್ಪಳದ ಬೋಚನಹಳ್ಳಿಯಲ್ಲಿ ದಲಿತರ ಮೇಲೆ ಹಲ್ಲೆ: ದೂರು-ಪ್ರತಿದೂರು; ಹೋರಾಟಕ್ಕೆ ಸಂಘಟನೆಗಳ ನಿರ್ಧಾರ

ಮೊಹರಂ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ದಲಿತರ ಮನೆಗಳಿಗೆ ನುಗ್ಗಿ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಕೊಪ್ಪಳ ತಾಲೂಕಿನ ಅಳವಂಡಿ ಬಳಿಯ ಬೋಚನಹಳ್ಳಿ ಗ್ರಾಮದಲ್ಲಿ ನಡೆದಿದೆ. ಜೂನ್ 25ರಂದು ಗ್ರಾಮದಲ್ಲಿ ಮೊಹರಂ ಮೆರವಣಿಗೆ...

ಎನ್ಯೂಮರೇಷನ್ ಫಾರಂ ಭರ್ತಿ ಮಾಡುವ ಮೂಲಕ SIR ಗೆ ಚಾಲನೆ ನೀಡಿದ ಸಿಎಂ ಡಿ.ಕೆ ಶಿವಕುಮಾರ್

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇಂದು (ಜೂನ್ 30) ಮಂಗಳವಾರ ತಮ್ಮ ಸದಾಶಿವನಗರ ನಿವಾಸದಲ್ಲಿ ದಾಖಲಾತಿ ನಮೂನೆಯನ್ನು ಭರ್ತಿ ಮಾಡಿ ಸಲ್ಲಿಸುವ ಮೂಲಕ ಮತದಾರರ ಪಟ್ಟಿಯ 'ವಿಶೇಷ ತೀವ್ರ ಪರಿಷ್ಕರಣೆ' (SIR) ಅಭಿಯಾನಕ್ಕೆ ಅಧಿಕೃತವಾಗಿ...

‘ಆಪರೇಷನ್ ಸಿಂಧೂರ್‌’ ಕುರಿತು ಸಂಸತ್ತಿಗೆ ಸುಳ್ಳು ಮಾಹಿತಿ: ರಾಜನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್‌ನಿಂದ ಹಕ್ಕುಚ್ಯುತಿ ನೋಟಿಸ್

ಕೇಂದ್ರ ರಕ್ಷಣಾ ಸಚಿವ ರಾಜ್‌ನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್ ಪಕ್ಷ ಲೋಕಸಭೆಯಲ್ಲಿ ಹಕ್ಕುಚ್ಯುತಿ ನೋಟಿಸ್ ನೀಡಿದೆ. ಕಾಂಗ್ರೆಸ್ ಸಂಸದ ಕೆ. ಸಿ. ವೇಣುಗೋಪಾಲ್ ಅವರು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ಈ ಕುರಿತು ಪತ್ರ ಬರೆದಿದ್ದು,...