Homeಮುಖಪುಟಬಿಗ್ ಶಾಕ್: ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲೆಂಡರ್‌ ದರ 266 ರೂ ಹೆಚ್ಚಳ

ಬಿಗ್ ಶಾಕ್: ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲೆಂಡರ್‌ ದರ 266 ರೂ ಹೆಚ್ಚಳ

ದೆಹಲಿಯಲ್ಲಿ ವಾಣಿಜ್ಯ ಬಳಕೆಯ ಗ್ಯಾಸ್ ಸಿಲಿಂಡರ್ ಬೆಲೆ 2000 ರೂ ದಾಟಿದೆ...

- Advertisement -
- Advertisement -

ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್‌ ದರ ಇಂದಿನಿಂದ 266 ರೂ ಹೆಚ್ಚಳವಾಗಿದೆ. ದೆಹಲಿಯಲ್ಲಿ 1734 ರೂಗೆ ಮಾರಾಟವಾಗುತ್ತಿದ್ದ ವಾಣಿಜ್ಯ ಉದ್ದೇಶಿತ ಬಳಕೆಯ 19 ಕೆ.ಜಿ. ಸಿಲಿಂಡರ್‌ ಬೆಲೆಯು 2000.50 ರೂ ಆಗಿದೆ.

ಮುಂಬೈನಲ್ಲಿ 1683ರೂ ಇದ್ದ ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆ 1950ರೂ ತಲುಪಿದೆ. ಕೋಲ್ಕತ್ತಾದಲ್ಲಿ ಎಲ್‌ಪಿಜಿ ಸಿಲಿಂಡರ್‌ ಬೆಲೆ 2073.50 ಆಗಿದೆ. ಚೆನ್ನೈನಲ್ಲಿ ಪ್ರಸ್ತುತ ಸಿಲಿಂಡರ್‌ ಬೆಲೆಯು 2133 ರೂಗೆ ಏರಿಕೆಯಾಗಿದೆ.

ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆ ಏರಿಕೆಯ ಹೊರೆ ಸಹ ಎಲ್ಲಾ ಜನಸಾಮಾನ್ಯರಿಗೂ ಅನ್ವಹಿಸಲಿದೆ. ಇನ್ನು ಮುಂದೆ ಹೋಟೆಲ್ ಆಹಾರದ ಬೆಲೆ ಹೆಚ್ಚಳವಾಗುವ ಸಂಭವವಿದೆ.

ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್‌ ಬೆಲೆ ಸಹ ಅಧಿಕವಾಗಿದೆ. ಸುಮಾರು 900 ರೂಗಳ ಆಸುಪಾಸಿನಲ್ಲಿದೆ.

ಪೆಟ್ರೋಲ್, ಡೀಸೆಲ್ ಬೆಲೆ ಹೆಚ್ಚಳ

ಸತತ ಆರನೇ ದಿನವೂ ದೇಶದಲ್ಲಿ ಪ್ರೆಟ್ರೋಲ್‌ ಮತ್ತು ಡೀಸೆಲ್‌ ಬೆಲೆ ತಲಾ 35 ಪೈಸೆ ಹೆಚ್ಚಳವಾಗಿದೆ. ಬೆಂಗಳೂರಿನಲ್ಲಿ ಪ್ರತಿ ಲೀಟರ್‌ ಪೆಟ್ರೋಲ್‌ ಬೆಲೆ 113.11 ರೂ ಹಾಗೂ ಡೀಸೆಲ್‌ ಬೆಲೆ 104.05 ರೂ ಆಗಿದೆ.

ಮುಂಬೈನಲ್ಲಿ ಪೆಟ್ರೋಲ್‌ ಮತ್ತು ಡೀಸೆಲ್‌ ದರ ಕ್ರಮವಾಗಿ 115.50 ರೂ ಮತ್ತು 106.62 ರೂ ಆಗಿದ್ದರೆ ಕೋಲ್ಕತ್ತಾದಲ್ಲಿ 110.15ರೂ ಮತ್ತು 101.56 ರೂ ಏರಿಕೆಯಾಗಿದೆ.

ರಾಜಸ್ಥಾನದ ಗಂಗಾನಗರದಲ್ಲಿ ಪೆಟ್ರೋಲ್‌, ಡೀಸೆಲ್ ಬೆಲೆ ದಾಖಲೆ ಮಟ್ಟಕ್ಕೇರಿದೆ. ಅಲ್ಲಿ ಪೆಟ್ರೋಲ್ 122.32 ಹಾಗೂ ಡೀಸೆಲ್‌ ಬೆಲೆ 113.21 ರೂ ತಲುಪಿದೆ. ಮಧ್ಯಪ್ರದೇಶದ ಹಲವು ಭಾಗಗಳಲ್ಲಿ ಪೆಟ್ರೊಲ್‌ ಬೆಲೆ ಪ್ರತಿ ಲೀಟರ್‌ಗೆ 120 ರೂ ದಾಟಿದೆ.


ಇದನ್ನೂ ಓದಿ: ಲಸಿಕೆ ಖರೀದಿಗೆ ವಿದೇಶಿ ಬ್ಯಾಂಕ್‌ಗಳಿಂದ ಸಾಲ ಪಡೆಯಲು ಮುಂದಾದ ಭಾರತ: ಇಂಧನ ತೆರಿಗೆ ಎಲ್ಲಿಗೆ ಹೋಯಿತು?


ಇನ್ನು ಪೆಟ್ರೊಲ್‌, ಡೀಸೆಲ್‌ ಬೆಲೆ ದಿನದಿಂದ ದಿನಕ್ಕೆ ಹೆಚ್ಚುತ್ತಲಿದ್ದರೂ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಮಾತ್ರ ತಮ್ಮ ಬೊಕ್ಕಸ ತುಂಬಿಸಿಕೊಳ್ಳುವತ್ತ ಗಮನ ಹರಿಸಿರುವುದು ಶೋಚನೀಯ ಸಂಗತಿ. ಪೆಟ್ರೋಲ್ ಮೇಲೆ ಕೇಂದ್ರ ಸರ್ಕಾರವು ಪ್ರತಿ ಲೀಟರ್‌ಗೆ 32ರೂ ಮತ್ತು ರಾಜ್ಯ ಸರ್ಕಾರವು 27 ರೂ ಸುಂಕ ವಸೂಲಿ ಮಾಡುತ್ತಿದೆ. ಹಾಗೆಯೇ ಡೀಸೆಲ್ ಮೇಲೆ ಕೇಂದ್ರವು 31 ರೂ ಹಾಗೂ ರಾಜ್ಯವೂ 18 ರೂ ತೆರಿಗೆ ವಿಧಿಸುತ್ತಿದೆ.

ತರಕಾರಿ ಸೇರಿದಂತೆ ದಿನನಿತ್ಯದ ಬಳಕೆಯ ವಸ್ತುಗಳ ಬೆಲೆ ಏರಿಕೆಯಿಂದ ನಲುಗುತ್ತಿರುವ ಜನಸಾಮಾನ್ಯರಿಗೆ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಇಂಧನ ಬೆಲೆ ಏರಿಕೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಜನಪರವಾಗಿದ್ದರೆ ಇಂಧನದ ಮೇಲೆ ವಿಧಿಸುತ್ತಿರುವ ತೆರಿಗೆಯನ್ನು ಪೂರ್ಣವಾಗಿ ಹಿಂಪಡೆಯಲಿ ಎಂದು ಜನರು ಆಗ್ರಹಿಸುತ್ತಿದ್ದಾರೆ.


ಇದನ್ನೂ ಓದಿ; ಪೆಟ್ರೋಲ್, ಡೀಸೆಲ್, ಗ್ಯಾಸ್ ಸೇರಿದಂತೆ ದಿನಬಳಕೆಯ ವಸ್ತುಗಳ ಬೆಲೆ ಏರಿಕೆ ನಿಂತಿಲ್ಲ: ಏಕೆ ಗೊತ್ತೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. Sarakarakke kannu kanuvudilla badavara hotte mele hodeuvade kelasa? 1liter gas 67 adare auto ran madodu hege ?passengers duddu kodthara? Metar minimus change madi

LEAVE A REPLY

Please enter your comment!
Please enter your name here

- Advertisment -

ಕಾಂಗ್ರೆಸ್ ನಿಂದ ಏಪ್ರಿಲ್ 12ರಂದು ‘ರನ್ ಫಾರ್ ಅಂಬೇಡ್ಕರ್, ರನ್ ಫಾರ್ ಕಾನ್ಸ್ಟಿಟ್ಯೂಷನ್’ ಮ್ಯಾರಥಾನ್ ಆಯೋಜನೆ

ನವದೆಹಲಿ: ಬಿ.ಆರ್. ಅಂಬೇಡ್ಕರ್ ಅವರ ಜನ್ಮ ದಿನಾಚರಣೆಯ ಅಂಗವಾಗಿ ಕಾಂಗ್ರೆಸ್ ಭಾನುವಾರ 'ಅಂಬೇಡ್ಕರ್‌ಗಾಗಿ ಓಟ, ಸಂವಿಧಾನಕ್ಕಾಗಿ ಓಟ' ಮ್ಯಾರಥಾನ್ ಆಯೋಜಿಸಿದೆ. ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಇಲ್ಲಿನ ಮಂಡಿ ಹೌಸ್‌ನಿಂದ ಮ್ಯಾರಥಾನ್‌ಗೆ...

ಮುಖ್ಯವಾಹಿನಿಗೆ ಬಂದ 42 ಕೇಡರ್‌ಗಳು; ರಾಜ್ಯದಲ್ಲಿ’ಮಾವೋವಾದಿ ಕಾರ್ಯಾಚರಣೆ’ ಅಂತ್ಯವಾಗಿದೆ ಎಂದ ತೆಲಂಗಾಣ ಪೊಲೀಸರು

ರಾಜ್ಯದಲ್ಲಿ ಸಿಪಿಐ (ಮಾವೋವಾದಿ) ಸಂಘಟನೆಯ ಕಾರ್ಯಚರಣೆ ಅಂತಿಮವಾಗಿದೆ ಎಂದು ತೆಲಂಗಾಣ ಪೊಲೀಸರು ಘೋಷಣೆ ಮಾಡಿದ್ದಾರೆ. ಬೆಟಾಲಿಯನ್ ಕಮಾಂಡರ್ ಮತ್ತು ಎರಡು ಪ್ರಮುಖ ಗುಂಪುಗಳ ಹಿರಿಯ ನಾಯಕತ್ವ ಸೇರಿದಂತೆ ನಿಷೇಧಿತ ಸಂಘಟನೆಯ 42 ಕೇಡರ್‌ಗಳು...

‘ಹಿಂದಿ ನಿರ್ಮೂಲನೆ ಮಾಡುತ್ತೇವೆ’ ಎಂದು ಸಚಿವರು ಹೇಳಿಲ್ಲ; ಹಿಂದಿ ಪರ ಅರ್ಜಿ ವಜಾ; ₹1 ಲಕ್ಷ ದಂಡ ವಿಧಿಸಿದ ಹೈಕೋರ್ಟ್‌

ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ಹಿಂದಿ ಸೇರಿದಂತೆ ತೃತೀಯ ಭಾಷಾ ವಿಷಯಗಳ ಮೌಲ್ಯಮಾಪನ ಸಂಬಂಧ ರಾಜ್ಯ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ನೀಡಿದ ಹೇಳಿಕೆಯ ವಿರುದ್ಧ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯನ್ನು (ಪಿಐಎಲ್) ಕರ್ನಾಟಕ...

ದೆಹಲಿ| ಮುಸ್ಲಿಮರ ಮೇಲಿನ ದ್ವೇಷಕ್ಕೆ ಜೀವಂತ ಹಂದಿಗಳನ್ನು ಪೂಜಿಸುತ್ತಿರುವ ಹಿಂದೂಗಳು

ಹಳೆಯ ದೆಹಲಿಯ ಹಿಂದೂ-ಮುಸ್ಲಿಂ ಜನರು ವಾಸಿಸುವ ತ್ರನಗರದ ನೆರೆಹೊರೆಯಲ್ಲಿ ಹಿಂದೂ ಕುಟುಂಬಗಳು ಜೀವಂತ ಹಂದಿಗಳನ್ನು ಪೂಜಿಸುತ್ತಿದ್ದಾರೆ. ಮುಸ್ಲಿಮರ ಮೇಲಿನ ದ್ವೇಷಕ್ಕೆ ಮನೆಯ ಮುಂಭಾಗ ಅಲಂಕೃತ ಹಂದಿ (ವರಹಾಸ್ವಾಮಿ) ಚಿತ್ರಗಳನ್ನು ಅಳವಡಿಸಿದ್ದಾರೆ ಎಂದು 'ದಿ...

ಪ. ಬಂಗಾಳ: ಮಹಿಳೆಯರಿಗೆ ₹3,000 ರಿಂದ 6 ತಿಂಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ ಸೇರಿದಂತೆ ಹಲವು ಭರವಸೆ ನೀಡಿದ ಬಿಜೆಪಿ 

ಕೋಲ್ಕತ್ತಾ : ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಪ್ರಚಾರ ಆರಂಭವಾಗಿದ್ದು, ಮೊದಲ ಹಂತದ ಮತದಾನಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ಕೇಂದ್ರ ಗೃಹ ಸಚಿವ ಅಮಿತ್ ಶಾ ಶುಕ್ರವಾರ ಪಶ್ಚಿಮ ಬಂಗಾಳದ ಬಿಜೆಪಿ...

ಹಾಸನ| ರೈತ ಮುಖಂಡ ವಾಸುದೇವ ಕಲ್ಕೆರೆ ಮೇಲೆ ಹಲ್ಲೆ; ದುಷ್ಕರ್ಮಿಗಳ ಬಂಧನಕ್ಕೆ ಕೆಪಿಆರ್‌ಎಸ್‌ ಆಗ್ರಹ

ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲ್ಲೂಕಿನ ಕರ್ನಾಟಕ ಪ್ರಾಂತ ರೈತ ಸಂಘದ (ಕೆಪಿಆರ್‌ಎಸ್‌) ಕಾರ್ಯದರ್ಶಿ ಹಾಗೂ ಕಲ್ಕೆರೆ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ, ಡಿವೈಎಫ್‌ಐ ಜಿಲ್ಲಾಧ್ಯಕ್ಷ ವಾಸುದೇವ ಕಲ್ಕೆರೆ ಮೇಲೆ ಹಲ್ಲೆ-ದೌರ್ಜನ್ಯ ನಡೆಸಿರುವ ಗೂಂಡಾಗಳನ್ನು...

ಉತ್ತರ ಪ್ರದೇಶ| ಡಿಜಿಟಲ್ ಬಂಧನದಿಂದ ಪೋಷಕರನ್ನು ರಕ್ಷಿಸಿದ 8ನೇ ತರಗತಿ ವಿದ್ಯಾರ್ಥಿ

ಸುಮಾರು 10 ಗಂಟೆಗಳ ಕಾಲ ವೀಡಿಯೊ ಕರೆ ಮೂಲಕ ಡಿಜಿಟಲ್ ಬಂಧನಕ್ಕೆ ಒಳಗಾಗಿದ್ದ ತನ್ನ ಹೆತ್ತವರು ಹಣ ಕಳೆದುಕೊಳ್ಳದಂತೆ 8ನೇ ತರಗತಿಯ ಬಾಲಕನೊಬ್ಬ ರಕ್ಷಿಸಿರುವ ಘಟನೆ ಬೆಳಕಿಗೆ ಬಂದಿದೆ. ಉತ್ತರ ಪ್ರದೇಶದ ಬರೇಲಿಯಲ್ಲಿ...

ಅಸ್ಸಾಂ: ಪವನ್ ಖೇರಾ ವಿರುದ್ಧದ ಪ್ರಕರಣದಲ್ಲಿ ಒಂದು ವಾರದ ನಿರೀಕ್ಷಣ ಜಾಮೀನು ನೀಡಿದ ತೆಲಂಗಾಣ ಹೈಕೋರ್ಟ್

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ಅವರು ಸಲ್ಲಿಸಿದ ಎಫ್‌ಐಆರ್‌ಗೆ ಸಂಬಂಧಿಸಿದಂತೆ ತೆಲಂಗಾಣ ಹೈಕೋರ್ಟ್ ಶುಕ್ರವಾರ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರಿಗೆ ಒಂದು ವಾರದ...

ನಿವಾಸದಲ್ಲಿ ನಗದು ಪತ್ತೆ ಪ್ರಕರಣದಲ್ಲಿ ಸಿಲುಕಿದ್ದ ನ್ಯಾಯಮೂರ್ತಿ ಯಶವಂತ್ ವರ್ಮಾ ರಾಜೀನಾಮೆ

ತಮ್ಮ ನಿವಾಸದಲ್ಲಿ ನಗದು ಪತ್ತೆ ಆರೋಪದ ಕೇಂದ್ರಬಿಂದುವಾಗಿದ್ದ ಅಲಹಾಬಾದ್ ಹೈಕೋರ್ಟ್ ನ್ಯಾಯಾಧೀಶ ನ್ಯಾಯಮೂರ್ತಿ ಯಶವಂತ್ ವರ್ಮಾ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ತಮ್ಮ ರಾಜೀನಾಮೆಯನ್ನು ಸಲ್ಲಿಸಿದ್ದಾರೆ. ಕಳೆದ ವರ್ಷ ಏಪ್ರಿಲ್ 5...

ಆಂಧ್ರಪ್ರದೇಶ: ಬೇಸಿಗೆ ವಿಹಾರಕ್ಕೆಂದು ತೆರಳಿದ್ದ ಮೂವರು ಅಪ್ರಾಪ್ತ ಬಾಲಕಿಯರು ಅನಂತಗಿರಿ ಜಲಪಾತದಲ್ಲಿ ಮುಳುಗಿ ಸಾವು 

ಅನಂತಗಿರಿ: ಬೇಸಿಗೆ ವಿಹಾಕ್ಕೆಂದು ತೆರಳಿದ್ದ ಮೂವರು ಅಪ್ರಾಪ್ತ ಬಾಲಕಿಯರು ಅನಂತಗಿರಿ ಜಲಪಾತದಲ್ಲಿ ಸೆಲ್ಫಿ ತೆಗೆದುಕೊಳ್ಳಲು ಜಲಪಾತಕ್ಕೆ ಇಳಿದು ನೀರಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಅಲ್ಲೂರಿ ಸೀತಾರಾಮರಾಜು ಮೂಲಗುಮ್ಮಿ ಗ್ರಾಮದಲ್ಲಿ ನಾಲ್ವರು...