Homeಮುಖಪುಟ2020ರಿಂದ ಮಾದಕ ದ್ರವ್ಯ ಸೇವನೆ, ಕಳ್ಳಸಾಗಣೆ ಹೆಚ್ಚಳ: ಎನ್‌ಸಿಬಿ ಕಳವಳ

2020ರಿಂದ ಮಾದಕ ದ್ರವ್ಯ ಸೇವನೆ, ಕಳ್ಳಸಾಗಣೆ ಹೆಚ್ಚಳ: ಎನ್‌ಸಿಬಿ ಕಳವಳ

- Advertisement -
- Advertisement -

ಶನಿವಾರ ಮಾದಕದ್ರವ್ಯ ರಹಿತ ದಿನ  ಆಚರಿಸಲಾಗಿತು. ಈ ಸಂದರ್ಭದಲ್ಲಿ ರಾಷ್ಟ್ರೀಯ ಮಾದಕದ್ರವ್ಯ ನಿಯಂತ್ರಂಣ ಮಂಡಳಿ (ಎನ್‍ಸಿಬಿ) ನೀಡಿದ ವರದಿ ಪ್ರಕಾರ, 2020ರಿಂದ ಮಾದಕ ದ್ರವ್ಯ ಸೇವನೆ, ಕಳ್ಳಸಾಗಣೆ ಅನೇಕ ಪಟ್ಟು ಹೆಚ್ಚಾಗಿದೆ ಎಂದು ಹಿಂದೂಸ್ತಾನ್‍ ಟೈಮ್ಸ್  ವರದಿ ಮಾಡಿತ್ತು.

ಅರೆ, ಕೋವಿಡ್‍ ಸಂದರ್ಭಕ್ಕೂ ಇದಕ್ಕೂ ಲಿಂಕ್‍ ಇರಬಹುದಾ? ಎಲ್ಲ ಸ್ಥಗಿತವಾಗಿರುವಾಗ ಇದೆಲ್ಲ ಹೇಗೆ ಸಾಧ್ಯವಾಗಿತು? ಕಳೆದ ವರ್ಷ ಭಾರಿ ಸುದ್ದಿ ಮಾಡಿದ ಬಾಲಿವುಡ್‍ ಮತ್ತು ನಮ್ಮ ಕನ್ನಡ ಚಿತ್ರರಂಗದ ಕೆಲವರ ಡ್ರಗ್ಸ್ ಸುದ್ದಿಗಳು ಇದಕ್ಕೆ ಪೂರಕವಾಗಿವೆಯೇ? ಅದಕ್ಕೂ ಮುಖ್ಯವಾಗಿ ಈ ಎನ್‍ಸಿಬಿ, ಆಗೆಲ್ಲ ದೊಡ್ಡ ಹವಾ ಮಾಡಿ ಈಗೇಕೆ ತಣ್ಣಗಾಗಿದೆ?- ಈ ಎಲ್ಲ ಪ್ರಶ್ನೆಗಳಿಗೆ ಸುಲಭ ಉತ್ತರವಿಲ್ಲ ಅನಿಸುತ್ತದೆ.

ಅದಿರಲಿ, 2020-21ನೆ ಸಾಲಿನಲ್ಲಿ ಕರ್ನಾಟಕದಲ್ಲಿ 50 ಕೋಟಿ ರೂ. ಮೌಲ್ಯದ ಮಾದಕ ವಸ್ತು ವಶಪಡಿಸಿಕೊಂಡು ನಾಶ ಮಾಡಲಾಗಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಶನಿವಾರ ತಿಳಿಸಿದ್ದಾರೆ. ಪೊಲೀಸರಿಗೆ ಸಿಕ್ಕಿದ್ದು 50 ಕೋಟಿ ರೂ. ಮೌಲ್ಯದ ಡ್ರಗ್ಸ್ ಎಂದಾದರೆ, ಸಿಗದೇ ಇರುವುದು ಎಷ್ಟು ಪಟ್ಟು ಇರಬಹುದು?

ಶನಿವಾರ ಮಾದಕದ್ರವ್ಯ ರಹಿತ ದಿನದ ಅಂಗವಾಗಿ ಎಲ್ಲ ಜಿಲ್ಲೆಯ ಪೊಲೀಸರು ಎಸ್‍ಪಿ ನೇತೃತ್ವದಲ್ಲಿ, ಸೀಜ್‍ ಮಾಡಿದ ಮಾದಕ ದ್ರವ್ಯಗಳನ್ನು ಸುಟ್ಟು ಹಾಕಿದರು.

ಪುಟ್ಟ ಗದಗ ಜಿಲ್ಲೆಯಲ್ಲಿ 7.18 ಲಕ್ಷ ರೂ ಮೊತ್ತದ ಗಾಂಜಾವನ್ನು ಸುಟ್ಟು ನಾಶ ಪಡಿಸಿದರು. ಇದು ಒಂದು ವರ್ಷದ ಸಾಮಾಗ್ರಿ ಅಥವಾ ಜನೆವರಿಯಿಂದ ಸೀಜ್‍ ಮಾಡಿದ ಸಾಮಾಗ್ರಿ ಎಂಬುದು ಸ್ಪಷ್ಟವಿಲ್ಲ.

ಕಳೆದ ವರ್ಷ ಕನ್ನಡ ಚಿತ್ರರಂಗದ ಕೆಲವರು ಡ್ರಗ್ಸ್ ಜಾಲದಲ್ಲಿ ಸಿಕ್ಕಿ ಬಿದ್ದಾಗ, ಗೃಹ ಸಚಿವ ಬೊಮ್ಮಾಯಿ ಎಲ್ಲ ಎಸ್‍ಪಿಗಳಿಗೆ ಈ ಜಾಲ ಮೆಟ್ಟಿ ಹಾಕಲು ನಿರ್ದೇಶನ ನೀಡಿದರು.

ಆಗ ಏನಾಯಿತು? ದಿನವೂ ಗಾಂಜಾ ಮಾರುತ್ತಿದ್ದವನ ಬಂಧನ ಎಂಬ ಸುದ್ದಿಗಳು ಹರಿದಾಡಿದವು. ಒಬ್ಬ ವ್ಯಕ್ತಿಯಿಂದ 70 ಗ್ರಾಂ ಗಾಂಜಾ ವಶ ಮಾಡಿಕೊಂಡು, ಆತನಿಂದ 1,147 ರೂ. ವಶಪಡಿಸಿಕೊಳ್ಳಲಾಗಿದೆ’ ಎಂಬ ಎಫ್‍ಐಆರ್‌ಗಳು ಬಿಡುಗಡೆ ಆಗುತ್ತಿದ್ದವು.

ಆದರೆ ಇದರ ಮೂಲಗಳು ಪೊಲೀಸರಿಗೆ ಗೊತ್ತೇ ಇಲ್ಲವೇ? ಗುಡಿ ಹತ್ತಿರ ನಿಂತು ಮಾರಲು ಆತನೇನು ಮೂರ್ಖನೇ? ಯಾವುದೋ ಮನೆ ಅಥವಾ ಅಂಗಡಿಯಲ್ಲಿ ಕುಳಿತೇ ಮಾರಿರುತ್ತಾನೆ ಅಲ್ಲವೇ? ಆತನ ಗಿರಾಕಿಗಳು ಕೂಡ ದಾರಿ ಮಧ್ಯೆ ಗುಡಿ ಪಕ್ಕ ಗಾಂಜಾ ಖರೀದಿಸುತ್ತಾರೆಯೇ? ಈ ಪ್ರಶ್ನೆಗಳು ಆಗ ಜನರನ್ನು ಕಾಡಿಸುತ್ತಿದ್ದವು.

ಯಾವಾಗ ಜಾರಕಿಹೊಳಿ ಕೇಸು ಮುನ್ನೆಲೆಗೆ ಬಂದಿತೋ ಆಗ ಡ್ರಗ್ಸ್ ವಿಷಯ ಹಿನ್ನಲೆಗೆ ಸರಿಯಿತು. ಹಾಗೆಯೇ ಬಿಹಾರ ಚುನಾವಣೆ ಮುಗಿದ ನಂತರ ಬಾಲಿವುಡ್‍ ನಟ ಸುಶಾಂತ್‍  ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ನಡೆದಿದ್ದ ಡ್ರಗ್ಸ್ ತನಿಖೆಯೂ ಹಿನ್ನೆಲೆಗೆ ಸರಿಯಿತು.

ಆ ನಂತರ ‘ಗುಡಿ ಹತ್ತಿರವೋ ಅಥವಾ ರಸ್ತೆಯಲ್ಲೋ ನಿಂತು’ ಗಾಂಜಾ ಮಾರುವವರ ಎಫ್‍ಐಆರ್‌ಗಳು ಕಾಣದಾದವು!

ದೇಶದ ಸ್ಥಿತಿ ಏನು?

ಈ ವರ್ಷ ಇನ್ನೂ ಆರು ತಿಂಗಳುಗಳು ಬಾಕಿ ಇರುವಾಗ, ಎನ್‌ಸಿಬಿ ಈಗಾಗಲೇ 4.82 ಟನ್ ಗಾಂಜಾ, 5.25 ಕೆಜಿ ಅಫೀಮು, 48.8 ಕೆಜಿ ಚರಸ್‍ಗಳನ್ನು ವಶಪಡಿಸಿಕೊಂಡಿದೆ.

ಕೋವಿಡ್‍ ಸಾಂಕ್ರಾಮಿಕದ ಸಂದರ್ಭದಲ್ಲೂ ಮಾದಕ ದ್ರವ್ಯ ಮತ್ತು ಕಳ್ಳಸಾಗಣೆ 2020ರಿಂದ ಅನೇಕ ಪಟ್ಟು ಹೆಚ್ಚಾಗಿದೆ ಮತ್ತು ಇದು ವಿವಿಧ ಮಾದಕವಸ್ತು ನಿಯಂತ್ರಣ ಜಾರಿ ಸಂಸ್ಥೆಗಳ ಚಟುವಟಿಕೆಗಳಿಂದ ಸ್ಪಷ್ಟವಾಗಿದೆ ಎನ್ನಲಾಗಿದೆ.

ಈ ವರ್ಷದ ದಿನಾಚರಣೆಯ ಸಂದರ್ಭದಲ್ಲಿ ‘ಮಾದಕವಸ್ತುಗಳ ಬಗ್ಗೆ ಸತ್ಯಗಳನ್ನು ಹಂಚಿಕೊಳ್ಳಿ, ಜೀವಗಳನ್ನು ಉಳಿಸಿ’ ಎಂದು ವಿಶ್ವಸಂಸ್ಥೆಯು ತಿಳಿಸಿದೆ.

ಆದರೆ, ಪೊಲೀಸರು ಮತ್ತು ಮಾದಕದ್ರವ್ಯಗಳ ತಡೆಗೆ ಸಂಬಂಧಪಟ್ಟ ಇಲಾಖೆಗಳು ಸತ್ಯವನ್ನು ಹಂಚಿಕೊಳ್ಳುತ್ತವಾ? ಜನರಿಗೆ ನಂಬಿಕೆಯಿಲ್ಲ!

  • ಪಿ.ಕೆ ಮಲ್ಲನಗೌಡರ್

ಇದನ್ನೂ ಓದಿ: ಹರಿದ ಜೀನ್ಸ್ ಧರಿಸುವುದು ಮಾದಕ ವಸ್ತು ಸೇವನೆಗೂ ಕಾರಣವಾಗುತ್ತದೆ- ಉತ್ತರಾಖಂಡ ಸಿಎಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಏಷ್ಯಾ ಬಿಕ್ಕಟ್ಟು| ’10 ಅಂಶಗಳ ಪ್ರಸ್ತಾವನೆಯ ಮೂರು ಷರತ್ತುಗಳನ್ನು ಉಲ್ಲಂಘಿಸಲಾಗಿದೆ’: ‘ಕದನ ವಿರಾಮ’ದ ಮರುದಿನ ಇರಾನ್ ಹೇಳಿಕೆ

ಮಂಗಳವಾರ ಒಪ್ಪಿಕೊಂಡ ಕದನ ವಿರಾಮದ ನಿಯಮಗಳನ್ನು ಅಮೆರಿಕ ಉಲ್ಲಂಘಿಸಿದೆ ಎಂದು ಇರಾನ್ ಸಂಸತ್ತಿನ ಸ್ಪೀಕರ್ ಎಂ.ಬಿ ಗಾಲಿಬಾಫ್ ಬುಧವಾರ ಆರೋಪಿಸಿದ್ದಾರೆ. ತಮ್ಮ ಅಧಿಕೃತ ಸಾಮಾಜಿಕ ಮಾಧ್ಯಮ  X ನಲ್ಲಿ ಈಬರೆದಿರುವ ಗಾಲಿಬಾಫ್, ಅಮೆರಿಕದ ಬಗ್ಗೆ...

ಬಂಗಾಳ ಚುನಾವಣೆ: ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಆರ್‌ಜಿ-ಕರ್ ಸಂತ್ರಸ್ತೆ ತಾಯಿ

ಕರ್ತವ್ಯದಲ್ಲಿರುವಾಗಲೇ ಅತ್ಯಾಚಾರಕ್ಕೊಳಗಾಗಿ ಸಾವನ್ನಪ್ಪಿದ ಆರ್‌ಜಿಕರ್ ಆಸ್ಪತ್ರೆಯ ವೈದ್ಯೆಯ ತಾಯಿ ರತ್ನಾ ದೇಬ್ನಾಥ್ ಅವರು ಪಾಣಿಹತಿಯ ಬಿಜೆಪಿ ಅಭ್ಯರ್ಥಿಯಾಗಿ ಗುರುವಾರ ತಮ್ಮ ನಾಮಪತ್ರ ಸಲ್ಲಿಸಿದ್ದಾರೆ. ಅವರೊಂದಿಗೆ ಬಿಜೆಪಿಯ ಹಿರಿಯ ನಾಯಕಿ ಮತ್ತು ಮಾಜಿ ಕೇಂದ್ರ ಸಚಿವೆ...

‘ಮುಸ್ಲಿಮರನ್ನು ಮರುಳು ಮಾಡುವುದು ಸುಲಭ’: ಹುಮಾಯೂನ್ ಕಬೀರ್ ವಿಡಿಯೋ ವಿವಾದ: ತನಿಖೆಗೆ ಟಿಎಂಸಿ ಒತ್ತಾಯ

ಪಶ್ಚಿಮ ಬಂಗಾಳದಲ್ಲಿ ಗುರುವಾರ ರಾಜಕೀಯ ವಿವಾದ ಭುಗಿಲೆದ್ದಿದ್ದು, ಹುಮಾಯೂನ್ ಕಬೀರ್ ಅವರ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ಕಾಣಿಸಿಕೊಂಡಿದ್ದು, ಇದರಲ್ಲಿ ಅವರು ಹಿರಿಯ ಬಿಜೆಪಿ ನಾಯಕರೊಂದಿಗೆ ಸಂಪರ್ಕ ಹೊಂದಿದ್ದಾರೆ ಮತ್ತು ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ...

ಲೆಬನಾನ್ ಮೇಲೆ ‘ಅಗತ್ಯವಿರುವಲ್ಲೆಲ್ಲಾ’ ದಾಳಿ ಮುಂದುವರಿಸುವುದಾಗಿ ಘೋಷಿಸಿದ ನೆತನ್ಯಾಹು; ಹಿಜ್ಬೊಲ್ಲಾದ ಉನ್ನತ ಅಧಿಕಾರಿ ಹತ್ಯೆ 

ಇಸ್ರೇಲ್, ಲೆಬನಾನ್ ಮೇಲೆ ದಾಳಿ ಮಾಡಿದ ಮರುದಿನ, ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಗುರುವಾರ, ಇರಾನ್ ಬೆಂಬಲಿತ ಹೆಜ್ಬೊಲ್ಲಾ ಮೇಲೆ "ಅಗತ್ಯವಿರುವಲ್ಲೆಲ್ಲಾ" ದಾಳಿ ಮುಂದುವರಿಸುವುದಾಗಿ ಘೋಷಿಸಿದ್ದಾರೆ. ಇಸ್ರೇಲಿ ಸೇನೆಯು ಗುರುವಾರ ದಕ್ಷಿಣ ಲೆಬನಾನ್‌ನಲ್ಲಿ ಮತ್ತಷ್ಟು...

ಬಾರಾಮತಿ ಉಪ ಚುನಾವಣಾ ಕಣದಿಂದ ಹಿಂದೆ ಸರಿದ ಕಾಂಗ್ರೆಸ್ ; ಸುನೇತ್ರಾ ಪವಾರ್ ಗೆಲುವು ಖಚಿತ

ಬಾರಾಮತಿ ಕ್ಷೇತ್ರದ ಉಪಚುನಾವಣಾ ಕಣದಿಂದ ಕಾಂಗ್ರೆಸ್ ಪಕ್ಷ ಹಿಂದೆ ಸರಿದ ಕಾರಣ ಮಹಾರಾಷ್ಟ್ರದ ಉಪ ಮುಖ್ಯಮಂತ್ರಿ ಸುನೇತ್ರಾ ಪವಾರ್ ಅವರ ಗೆಲುವು ಖಚಿತವಾಗಿದೆ. ಬಾರಾಮತಿ ವಿಮಾನ ದುರಂತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್...

ಗಿಗ್ ಕಾರ್ಮಿಕರ ಹಿನ್ನೆಲೆ ಪರಿಶೀಲನೆ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಸರ್ಕಾರ

ದಾಖಲೆರಹಿತ ವಲಸಿಗರ ಒಳನುಸುಳುವಿಕೆ ಆರೋಪದ ರಾಜಕೀಯ ವಿವಾದದ ನಡುವೆ, ಮುಂಬೈ ಮತ್ತು ಮುಂಬೈ ಮೆಟ್ರೋಪಾಲಿಟನ್ ಪ್ರದೇಶದಾದ್ಯಂತ (ಎಂಎಂಆರ್‌) ಲಕ್ಷಾಂತರ ಗಿಗ್ ಮತ್ತು ವಿತರಣಾ ಕಾರ್ಮಿಕರಿಗೆ ಕಠಿಣ, ಕಡ್ಡಾಯ ಪರಿಶೀಲನಾ ಪ್ರಕ್ರಿಯೆಯನ್ನು ಮಹಾರಾಷ್ಟ್ರ ಸರ್ಕಾರ...

ಪಶ್ಚಿಮ ಬಂಗಾಳ| ಎಸ್‌ಐಆರ್‌ ತೀರ್ಪಿನ ನಂತರ ಒಂದೇ ಗ್ರಾಮದ 3,700 ಹೆಸರುಗಳು ಡಿಲೀಟ್!

ಪಶ್ಚಿಮ ಬಂಗಾಳದ ಮಾಲ್ಡಾದ ಹಳ್ಳಿಯೊಂದರ ಸುಮಾರು 4,000 ಮತದಾರರ ಭವಿಷ್ಯವು ತೂಗುಯ್ಯಾಲೆಯಲ್ಲಿದೆ. ಮೊದಲ ಹಂತದ ಮತದಾರರ ಪಟ್ಟಿ ಈಗಾಗಲೇ ಸ್ಥಗಿತಗೊಂಡಿದ್ದು, ಇದರಿಂದಾಗಿ ಅವರು ರಾಜ್ಯಾದ್ಯಂತ ಲಕ್ಷಾಂತರ ಜನರಂತೆ ಏಪ್ರಿಲ್ 23 ರಂದು...

ದಲಿತ ಯುವಕನ ಕಸ್ಟಡಿ ಸಾವು ಆರೋಪ : ರಾಜ್ಯ ಸರ್ಕಾರ, ಪೊಲೀಸರು, ರಾಜ್ಯ ಮಾನವ ಹಕ್ಕುಗಳ ಆಯೋಗಕ್ಕೆ ಹೈಕೋರ್ಟ್ ನೋಟಿಸ್

ಪೀಪಲ್ಸ್ ಯೂನಿಯನ್ ಫಾರ್ ಸಿವಿಲ್ ಲಿಬರ್ಟೀಸ್ (ಪಿಯುಸಿಎಲ್‌) ಕರ್ನಾಟಕ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್)ಗೆ ಸಂಬಂಧಿಸಿದಂತೆ ಹೈಕೋರ್ಟ್ ಬುಧವಾರ (ಏ.8) ರಾಜ್ಯ ಸರ್ಕಾರ, ಪೊಲೀಸರು ಮತ್ತು ರಾಜ್ಯ ಮಾನವ ಹಕ್ಕುಗಳ ಆಯೋಗಕ್ಕೆ...

ಇಬ್ಬರು ಮಕ್ಕಳ ಸಾವಿನ ಬಳಿಕ ಮಣಿಪುರದಲ್ಲಿ ಭುಗಿಲೆದ್ದ ಪ್ರತಿಭಟನೆ; ಅಶ್ರುವಾಯು ಪ್ರಯೋಗಿಸಿದ ಪೊಲೀಸರು

ಏಪ್ರಿಲ್ 7 ರಂದು ಬಿಷ್ಣುಪುರ ಜಿಲ್ಲೆಯಲ್ಲಿ ಬಾಂಬ್ ದಾಳಿಯಲ್ಲಿ ಇಬ್ಬರು ಅಪ್ರಾಪ್ತ ಮಕ್ಕಳು ಸಾವನ್ನಪ್ಪಿದ ನಂತರ ಕಣಿವೆ ರಾಜ್ಯದಲ್ಲಿ ವ್ಯಾಪಕ ಪ್ರತಿಭಟನೆಗಳು ಭುಗಿಲೆದ್ದ ಕಾರಣ ಬುಧವಾರ (ಏಪ್ರಿಲ್ 8) ಮಣಿಪುರದಾದ್ಯಂತ ಉದ್ವಿಗ್ನತೆ ಉಂಟಾಗಿತ್ತು....

ಮತಕ್ಕಾಗಿ ನಗದು ಪ್ರಕರಣ: ಪಾಲಕ್ಕಾಡ್‌ನಲ್ಲಿ ಎನ್‌ಡಿಎ ಕಾರ್ಯಕರ್ತರ ವಿರುದ್ಧ ಎಫ್‌ಐಆರ್

ಮತದಾನದ ಒಂದು ದಿನಕ್ಕೆ ಮುಂಚಿತವಾಗಿ ಮತದಾರರಿಗೆ ಲಂಚ ನೀಡಿದ ಆರೋಪದ ಮೇಲೆ ಪಾಲಕ್ಕಾಡ್ ಕ್ಷೇತ್ರದ ಬಿಜೆಪಿ ನೇತೃತ್ವದ ಎನ್‌ಡಿಎ ಪ್ರತಿನಿಧಿಗಳ ವಿರುದ್ಧ ಬುಧವಾರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಏಪ್ರಿಲ್ 8 ರಂದು ಬೆಳಿಗ್ಗೆ 10...