Homeಮುಖಪುಟ2020ರಿಂದ ಮಾದಕ ದ್ರವ್ಯ ಸೇವನೆ, ಕಳ್ಳಸಾಗಣೆ ಹೆಚ್ಚಳ: ಎನ್‌ಸಿಬಿ ಕಳವಳ

2020ರಿಂದ ಮಾದಕ ದ್ರವ್ಯ ಸೇವನೆ, ಕಳ್ಳಸಾಗಣೆ ಹೆಚ್ಚಳ: ಎನ್‌ಸಿಬಿ ಕಳವಳ

- Advertisement -
- Advertisement -

ಶನಿವಾರ ಮಾದಕದ್ರವ್ಯ ರಹಿತ ದಿನ  ಆಚರಿಸಲಾಗಿತು. ಈ ಸಂದರ್ಭದಲ್ಲಿ ರಾಷ್ಟ್ರೀಯ ಮಾದಕದ್ರವ್ಯ ನಿಯಂತ್ರಂಣ ಮಂಡಳಿ (ಎನ್‍ಸಿಬಿ) ನೀಡಿದ ವರದಿ ಪ್ರಕಾರ, 2020ರಿಂದ ಮಾದಕ ದ್ರವ್ಯ ಸೇವನೆ, ಕಳ್ಳಸಾಗಣೆ ಅನೇಕ ಪಟ್ಟು ಹೆಚ್ಚಾಗಿದೆ ಎಂದು ಹಿಂದೂಸ್ತಾನ್‍ ಟೈಮ್ಸ್  ವರದಿ ಮಾಡಿತ್ತು.

ಅರೆ, ಕೋವಿಡ್‍ ಸಂದರ್ಭಕ್ಕೂ ಇದಕ್ಕೂ ಲಿಂಕ್‍ ಇರಬಹುದಾ? ಎಲ್ಲ ಸ್ಥಗಿತವಾಗಿರುವಾಗ ಇದೆಲ್ಲ ಹೇಗೆ ಸಾಧ್ಯವಾಗಿತು? ಕಳೆದ ವರ್ಷ ಭಾರಿ ಸುದ್ದಿ ಮಾಡಿದ ಬಾಲಿವುಡ್‍ ಮತ್ತು ನಮ್ಮ ಕನ್ನಡ ಚಿತ್ರರಂಗದ ಕೆಲವರ ಡ್ರಗ್ಸ್ ಸುದ್ದಿಗಳು ಇದಕ್ಕೆ ಪೂರಕವಾಗಿವೆಯೇ? ಅದಕ್ಕೂ ಮುಖ್ಯವಾಗಿ ಈ ಎನ್‍ಸಿಬಿ, ಆಗೆಲ್ಲ ದೊಡ್ಡ ಹವಾ ಮಾಡಿ ಈಗೇಕೆ ತಣ್ಣಗಾಗಿದೆ?- ಈ ಎಲ್ಲ ಪ್ರಶ್ನೆಗಳಿಗೆ ಸುಲಭ ಉತ್ತರವಿಲ್ಲ ಅನಿಸುತ್ತದೆ.

ಅದಿರಲಿ, 2020-21ನೆ ಸಾಲಿನಲ್ಲಿ ಕರ್ನಾಟಕದಲ್ಲಿ 50 ಕೋಟಿ ರೂ. ಮೌಲ್ಯದ ಮಾದಕ ವಸ್ತು ವಶಪಡಿಸಿಕೊಂಡು ನಾಶ ಮಾಡಲಾಗಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಶನಿವಾರ ತಿಳಿಸಿದ್ದಾರೆ. ಪೊಲೀಸರಿಗೆ ಸಿಕ್ಕಿದ್ದು 50 ಕೋಟಿ ರೂ. ಮೌಲ್ಯದ ಡ್ರಗ್ಸ್ ಎಂದಾದರೆ, ಸಿಗದೇ ಇರುವುದು ಎಷ್ಟು ಪಟ್ಟು ಇರಬಹುದು?

ಶನಿವಾರ ಮಾದಕದ್ರವ್ಯ ರಹಿತ ದಿನದ ಅಂಗವಾಗಿ ಎಲ್ಲ ಜಿಲ್ಲೆಯ ಪೊಲೀಸರು ಎಸ್‍ಪಿ ನೇತೃತ್ವದಲ್ಲಿ, ಸೀಜ್‍ ಮಾಡಿದ ಮಾದಕ ದ್ರವ್ಯಗಳನ್ನು ಸುಟ್ಟು ಹಾಕಿದರು.

ಪುಟ್ಟ ಗದಗ ಜಿಲ್ಲೆಯಲ್ಲಿ 7.18 ಲಕ್ಷ ರೂ ಮೊತ್ತದ ಗಾಂಜಾವನ್ನು ಸುಟ್ಟು ನಾಶ ಪಡಿಸಿದರು. ಇದು ಒಂದು ವರ್ಷದ ಸಾಮಾಗ್ರಿ ಅಥವಾ ಜನೆವರಿಯಿಂದ ಸೀಜ್‍ ಮಾಡಿದ ಸಾಮಾಗ್ರಿ ಎಂಬುದು ಸ್ಪಷ್ಟವಿಲ್ಲ.

ಕಳೆದ ವರ್ಷ ಕನ್ನಡ ಚಿತ್ರರಂಗದ ಕೆಲವರು ಡ್ರಗ್ಸ್ ಜಾಲದಲ್ಲಿ ಸಿಕ್ಕಿ ಬಿದ್ದಾಗ, ಗೃಹ ಸಚಿವ ಬೊಮ್ಮಾಯಿ ಎಲ್ಲ ಎಸ್‍ಪಿಗಳಿಗೆ ಈ ಜಾಲ ಮೆಟ್ಟಿ ಹಾಕಲು ನಿರ್ದೇಶನ ನೀಡಿದರು.

ಆಗ ಏನಾಯಿತು? ದಿನವೂ ಗಾಂಜಾ ಮಾರುತ್ತಿದ್ದವನ ಬಂಧನ ಎಂಬ ಸುದ್ದಿಗಳು ಹರಿದಾಡಿದವು. ಒಬ್ಬ ವ್ಯಕ್ತಿಯಿಂದ 70 ಗ್ರಾಂ ಗಾಂಜಾ ವಶ ಮಾಡಿಕೊಂಡು, ಆತನಿಂದ 1,147 ರೂ. ವಶಪಡಿಸಿಕೊಳ್ಳಲಾಗಿದೆ’ ಎಂಬ ಎಫ್‍ಐಆರ್‌ಗಳು ಬಿಡುಗಡೆ ಆಗುತ್ತಿದ್ದವು.

ಆದರೆ ಇದರ ಮೂಲಗಳು ಪೊಲೀಸರಿಗೆ ಗೊತ್ತೇ ಇಲ್ಲವೇ? ಗುಡಿ ಹತ್ತಿರ ನಿಂತು ಮಾರಲು ಆತನೇನು ಮೂರ್ಖನೇ? ಯಾವುದೋ ಮನೆ ಅಥವಾ ಅಂಗಡಿಯಲ್ಲಿ ಕುಳಿತೇ ಮಾರಿರುತ್ತಾನೆ ಅಲ್ಲವೇ? ಆತನ ಗಿರಾಕಿಗಳು ಕೂಡ ದಾರಿ ಮಧ್ಯೆ ಗುಡಿ ಪಕ್ಕ ಗಾಂಜಾ ಖರೀದಿಸುತ್ತಾರೆಯೇ? ಈ ಪ್ರಶ್ನೆಗಳು ಆಗ ಜನರನ್ನು ಕಾಡಿಸುತ್ತಿದ್ದವು.

ಯಾವಾಗ ಜಾರಕಿಹೊಳಿ ಕೇಸು ಮುನ್ನೆಲೆಗೆ ಬಂದಿತೋ ಆಗ ಡ್ರಗ್ಸ್ ವಿಷಯ ಹಿನ್ನಲೆಗೆ ಸರಿಯಿತು. ಹಾಗೆಯೇ ಬಿಹಾರ ಚುನಾವಣೆ ಮುಗಿದ ನಂತರ ಬಾಲಿವುಡ್‍ ನಟ ಸುಶಾಂತ್‍  ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ನಡೆದಿದ್ದ ಡ್ರಗ್ಸ್ ತನಿಖೆಯೂ ಹಿನ್ನೆಲೆಗೆ ಸರಿಯಿತು.

ಆ ನಂತರ ‘ಗುಡಿ ಹತ್ತಿರವೋ ಅಥವಾ ರಸ್ತೆಯಲ್ಲೋ ನಿಂತು’ ಗಾಂಜಾ ಮಾರುವವರ ಎಫ್‍ಐಆರ್‌ಗಳು ಕಾಣದಾದವು!

ದೇಶದ ಸ್ಥಿತಿ ಏನು?

ಈ ವರ್ಷ ಇನ್ನೂ ಆರು ತಿಂಗಳುಗಳು ಬಾಕಿ ಇರುವಾಗ, ಎನ್‌ಸಿಬಿ ಈಗಾಗಲೇ 4.82 ಟನ್ ಗಾಂಜಾ, 5.25 ಕೆಜಿ ಅಫೀಮು, 48.8 ಕೆಜಿ ಚರಸ್‍ಗಳನ್ನು ವಶಪಡಿಸಿಕೊಂಡಿದೆ.

ಕೋವಿಡ್‍ ಸಾಂಕ್ರಾಮಿಕದ ಸಂದರ್ಭದಲ್ಲೂ ಮಾದಕ ದ್ರವ್ಯ ಮತ್ತು ಕಳ್ಳಸಾಗಣೆ 2020ರಿಂದ ಅನೇಕ ಪಟ್ಟು ಹೆಚ್ಚಾಗಿದೆ ಮತ್ತು ಇದು ವಿವಿಧ ಮಾದಕವಸ್ತು ನಿಯಂತ್ರಣ ಜಾರಿ ಸಂಸ್ಥೆಗಳ ಚಟುವಟಿಕೆಗಳಿಂದ ಸ್ಪಷ್ಟವಾಗಿದೆ ಎನ್ನಲಾಗಿದೆ.

ಈ ವರ್ಷದ ದಿನಾಚರಣೆಯ ಸಂದರ್ಭದಲ್ಲಿ ‘ಮಾದಕವಸ್ತುಗಳ ಬಗ್ಗೆ ಸತ್ಯಗಳನ್ನು ಹಂಚಿಕೊಳ್ಳಿ, ಜೀವಗಳನ್ನು ಉಳಿಸಿ’ ಎಂದು ವಿಶ್ವಸಂಸ್ಥೆಯು ತಿಳಿಸಿದೆ.

ಆದರೆ, ಪೊಲೀಸರು ಮತ್ತು ಮಾದಕದ್ರವ್ಯಗಳ ತಡೆಗೆ ಸಂಬಂಧಪಟ್ಟ ಇಲಾಖೆಗಳು ಸತ್ಯವನ್ನು ಹಂಚಿಕೊಳ್ಳುತ್ತವಾ? ಜನರಿಗೆ ನಂಬಿಕೆಯಿಲ್ಲ!

  • ಪಿ.ಕೆ ಮಲ್ಲನಗೌಡರ್

ಇದನ್ನೂ ಓದಿ: ಹರಿದ ಜೀನ್ಸ್ ಧರಿಸುವುದು ಮಾದಕ ವಸ್ತು ಸೇವನೆಗೂ ಕಾರಣವಾಗುತ್ತದೆ- ಉತ್ತರಾಖಂಡ ಸಿಎಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ರಾಜಭವನ’ಗಳನ್ನು ‘ಲೋಕಭವನ’ಗಳೆಂದು ಮರುನಾಮಕರಣ; ಇದು ಒಕ್ಕೂಟ ವ್ಯವಸ್ಥೆ ಮತ್ತು ಭಾಷಾ ಸಮಾನತೆಯ ಮೇಲಿನ ಆಕ್ರಮಣ: ಜಾಗೃತ ಕರ್ನಾಟಕ

ದೇಶಾದಾದ್ಯಂತ ಇರುವ ರಾಜಭವನಗಳ ಹೆಸರನ್ನು ಲೋಕಭವನ ಎಂದು ಮರುನಾಮಕರಣ ಮಾಡುವುದಾಗಿ ಕೇಂದ್ರ ಗೃಹಸಚಿವಾಲಯ ತೀರ್ಮಾನಿಸಿದೆ. ಕೇಂದ್ರದ  ಈ ನೀತಿಯನ್ನು ವಿರೋಧಿಸಿರುವ ಜಾಗೃತ ಕರ್ನಾಟಕ ದೇಶದ ಎಲ್ಲಾ ಹಿಂದಿಯೇತರ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದೆ....

ಯುಜಿಸಿ ಈಕ್ವಿಟಿ ನಿಯಮಗಳ ಮೇಲಿನ ಸುಪ್ರೀಂ ಕೋರ್ಟ್ ತಡೆಗೆ ವಿದ್ಯಾರ್ಥಿಗಳ ಪ್ರತಿಭಟನೆ, ರೋಹಿತ್ ಕಾಯ್ದೆಗೆ ಒತ್ತಾಯ

ಯುಜಿಸಿ ಇಕ್ವಿಟಿ ನಿಯಮಗಳಿಗೆ ಸುಪ್ರೀಂ ಕೋರ್ಟ್ ನೀಡಿದ ತಡೆಯಾಜ್ಞೆಯ ವಿರುದ್ಧ ಮತ್ತು ವಿಶ್ವವಿದ್ಯಾಲಯಗಳಲ್ಲಿ ಜಾತಿ ತಾರತಮ್ಯವನ್ನು ಎದುರಿಸಲು ಶಾಸನಬದ್ಧ ರೋಹಿತ್ ಕಾಯ್ದೆಯನ್ನು ಜಾರಿಗೆ ತರುವಂತೆ ಒತ್ತಾಯಿಸಿ ಅಖಿಲ ಭಾರತ ವಿದ್ಯಾರ್ಥಿ ಸಂಘ (ಎಐಎಸ್ಎ)...

ನರವಾಣೆ ಅಪ್ರಕಟಿತ ಪುಸ್ತಕ ಗದ್ದಲ | ಸತ್ಯ ಹೊರಬಂದರೆ ಮೋದಿ, ರಾಜನಾಥ್ ಸಿಂಗ್ ಮುಖವಾಡ ಬಯಲಾಗಲಿದೆ : ರಾಹುಲ್ ಗಾಂಧಿ

ಮಾಜಿ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆ ಕುರಿತು ರಾಹುಲ್ ಗಾಂಧಿ ಸೋಮವಾರ (ಫೆ.2) ಲೋಕಸಭೆಯಲ್ಲಿ ಉಲ್ಲೇಖಿಸಿದ್ದು, ಈ ವೇಳೆ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ...

ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ಘರ್ಷಣೆ : ಮೂವರ ಬಂಧನ

ಗುಜರಾತ್‌ನ ಪಠಾಣ್ ತಾಲೂಕಿನ ಚದ್ರುಮಣ ಗ್ರಾಮದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದು, ಇನ್ನೂ ಐವರ ಬಂಧನಕ್ಕೆ ಬಲೆ ಬೀಸಿದ್ದಾರೆ. ಆರೋಪಿಗಳ ವಿರುದ್ದ ಎಸ್‌ಸಿ/ಎಸ್‌ಟಿ...

ಲೋಕಸಭೆಯಲ್ಲಿ ಲಡಾಖ್ ಬಿಕ್ಕಟ್ಟಿನ ಬಗ್ಗೆ ಮಾಜಿ ಸೇನಾ ಮುಖ್ಯಸ್ಥರ ಅಪ್ರಕಟಿತ ಆತ್ಮಚರಿತ್ರೆ ಉಲ್ಲೇಖಿಸಿದ ರಾಹುಲ್ ಗಾಂಧಿ: ಸಭೆಯಲ್ಲಿ ತೀವ್ರ ಗದ್ದಲ

ಸೋಮವಾರ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮಾಜಿ ಸೇನಾ ಮುಖ್ಯಸ್ಥ ಎಂಎಂ ನರವಾಣೆ ಅವರ ಆತ್ಮಚರಿತ್ರೆಯಿಂದ ಉಲ್ಲೇಖಿಸಲು ಪ್ರಯತ್ನಿಸಿದ ನಂತರ ಗದ್ದಲ ಭುಗಿಲೆದ್ದಿತು. ರಾಹುಲ್ ಮಾತನಾಡಲು ಪ್ರಾರಂಭಿಸುತ್ತಿದ್ದಂತೆ, ರಕ್ಷಣಾ ಸಚಿವ...

ಪಂಜಾಬ್ ನಿರೀಕ್ಷೆಗಳನ್ನು ಪೂರೈಸುವಲ್ಲಿ ಕೇಂದ್ರ ಬಜೆಟ್ ಮತ್ತೊಮ್ಮೆ ವಿಫಲವಾಗಿದೆ: ಸಿಎಂ ಭಗವಂತ್ ಮಾನ್

ಕೇಂದ್ರ ಬಜೆಟ್ ಮತ್ತೊಮ್ಮೆ ಪಂಜಾಬ್‌ನ ನಿರೀಕ್ಷೆಗಳನ್ನು ಪೂರೈಸುವಲ್ಲಿ ವಿಫಲವಾಗಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮತ್ತು ಆಡಳಿತಾರೂಢ ಆಮ್ ಆದ್ಮಿ ಪಕ್ಷದ (ಎಎಪಿ) ಸರ್ಕಾರದ ಸಚಿವರು ಭಾನುವಾರ ಅಭಿಪ್ರಾಯಪಟ್ಟಿದ್ದಾರೆ. ಬಜೆಟ್ ರೈತರಿಗೆ ಯಾವುದೇ...

ರಾಜ್ಯಪಾಲರು ಪೂರ್ಣ ಭಾಷಣ ಓದಿಲ್ಲ, ‘ಜೈ ಸಂವಿಧಾನ’ ಎನ್ನುವುದನ್ನು ಉಲ್ಲೇಖಿಸದೆ ಹೋದರು : ಸಿಎಂ ಸಿದ್ದರಾಮಯ್ಯ

ರಾಜ್ಯಪಾಲರು ಪೂರ್ತಿ ಭಾಷಣ ಓದದೆ ತರಾತುರಿಯಲ್ಲಿ ಹೋದರು. ಭಾಷಣದಲ್ಲಿದ್ದ "ಜೈ ಸಂವಿಧಾನ" ಎನ್ನುವುದನ್ನೂ ಉಲ್ಲೇಖಿಸದೆ ತೆರಳಿದರು. ರಾಷ್ಟ್ರಗೀತೆ ಮುಗಿಯುವವರೆಗೂ ಕಾಯದೆ ಹೋಗಿಬಿಟ್ಟರು. ಇದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬಿಜೆಪಿ ಶಾಸಕ...

ಉತ್ತರಾಖಂಡ| ಹಿಂದುತ್ವ ಗುಂಪಿನ ಕಿರುಕುಳದಿಂದ ಮುಸ್ಲಿಂ ಅಂಗಡಿ ಮಾಲೀಕನನ್ನು ರಕ್ಷಿಸಿದ ದೀಪಕ್ ಕುಮಾರ್

ಸ್ಥಳೀಯ ಮುಸ್ಲಿಂ ಅಂಗಡಿ ಮಾಲೀಕನ ವಿರುದ್ಧ ಬಜರಂಗದಳ ಸದಸ್ಯರು ನೀಡುತ್ತಿದ್ದ ಕಿರುಕುಳವನ್ನು ಜಿಮ್ ಮಾಲೀಕ ದೀಪಕ್ ಕುಮಾರ್ ಸ್ಥಳದಲ್ಲೇ ಎದುರಿಸಿದ್ದಾರೆ. ಆಕ್ರೋಶಿತರಾದ ಹಿಂದುತ್ವ ಗುಂಪಿನ ಸದಸ್ಯರು ದೀಪಕ್ ವಿರುದ್ಧವೇ ಪ್ರತಿಭಟನೆ ನಡೆಸಿದ್ದು, ಹಲವಾರ...

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ನಡೆಸುವ ಭಾರತೀಯ ಚುನಾವಣಾ ಆಯೋಗದ (ಇಸಿಐ) ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ...

ದಕ್ಷಿಣ ಪಿನಾಕಿನಿ ಜಲವಿವಾದ : ನ್ಯಾಯಮಂಡಳಿ ಸ್ಥಾಪಿಸಲು ಸುಪ್ರೀಂ ಕೋರ್ಟ್ ಆದೇಶ

ದಕ್ಷಿಣ ಪಿನಾಕಿನಿ (ಪೆನ್ನೈಯಾರ್) ನದಿ ನೀರಿನ ಹಂಚಿಕೆಗೆ ಸಂಬಂಧಿಸಿದಂತೆ ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳ ನಡುವೆ ಬಾಕಿ ಇರುವ ವಿವಾದಗಳನ್ನು ಪರಿಹರಿಸಲು ನ್ಯಾಯಮಂಡಳಿ ಸ್ಥಾಪಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.2) ನಿರ್ದೇಶನ ನೀಡಿದೆ. ಕೇಂದ್ರ...