Homeಮುಖಪುಟ2020ರಿಂದ ಮಾದಕ ದ್ರವ್ಯ ಸೇವನೆ, ಕಳ್ಳಸಾಗಣೆ ಹೆಚ್ಚಳ: ಎನ್‌ಸಿಬಿ ಕಳವಳ

2020ರಿಂದ ಮಾದಕ ದ್ರವ್ಯ ಸೇವನೆ, ಕಳ್ಳಸಾಗಣೆ ಹೆಚ್ಚಳ: ಎನ್‌ಸಿಬಿ ಕಳವಳ

- Advertisement -
- Advertisement -

ಶನಿವಾರ ಮಾದಕದ್ರವ್ಯ ರಹಿತ ದಿನ  ಆಚರಿಸಲಾಗಿತು. ಈ ಸಂದರ್ಭದಲ್ಲಿ ರಾಷ್ಟ್ರೀಯ ಮಾದಕದ್ರವ್ಯ ನಿಯಂತ್ರಂಣ ಮಂಡಳಿ (ಎನ್‍ಸಿಬಿ) ನೀಡಿದ ವರದಿ ಪ್ರಕಾರ, 2020ರಿಂದ ಮಾದಕ ದ್ರವ್ಯ ಸೇವನೆ, ಕಳ್ಳಸಾಗಣೆ ಅನೇಕ ಪಟ್ಟು ಹೆಚ್ಚಾಗಿದೆ ಎಂದು ಹಿಂದೂಸ್ತಾನ್‍ ಟೈಮ್ಸ್  ವರದಿ ಮಾಡಿತ್ತು.

ಅರೆ, ಕೋವಿಡ್‍ ಸಂದರ್ಭಕ್ಕೂ ಇದಕ್ಕೂ ಲಿಂಕ್‍ ಇರಬಹುದಾ? ಎಲ್ಲ ಸ್ಥಗಿತವಾಗಿರುವಾಗ ಇದೆಲ್ಲ ಹೇಗೆ ಸಾಧ್ಯವಾಗಿತು? ಕಳೆದ ವರ್ಷ ಭಾರಿ ಸುದ್ದಿ ಮಾಡಿದ ಬಾಲಿವುಡ್‍ ಮತ್ತು ನಮ್ಮ ಕನ್ನಡ ಚಿತ್ರರಂಗದ ಕೆಲವರ ಡ್ರಗ್ಸ್ ಸುದ್ದಿಗಳು ಇದಕ್ಕೆ ಪೂರಕವಾಗಿವೆಯೇ? ಅದಕ್ಕೂ ಮುಖ್ಯವಾಗಿ ಈ ಎನ್‍ಸಿಬಿ, ಆಗೆಲ್ಲ ದೊಡ್ಡ ಹವಾ ಮಾಡಿ ಈಗೇಕೆ ತಣ್ಣಗಾಗಿದೆ?- ಈ ಎಲ್ಲ ಪ್ರಶ್ನೆಗಳಿಗೆ ಸುಲಭ ಉತ್ತರವಿಲ್ಲ ಅನಿಸುತ್ತದೆ.

ಅದಿರಲಿ, 2020-21ನೆ ಸಾಲಿನಲ್ಲಿ ಕರ್ನಾಟಕದಲ್ಲಿ 50 ಕೋಟಿ ರೂ. ಮೌಲ್ಯದ ಮಾದಕ ವಸ್ತು ವಶಪಡಿಸಿಕೊಂಡು ನಾಶ ಮಾಡಲಾಗಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಶನಿವಾರ ತಿಳಿಸಿದ್ದಾರೆ. ಪೊಲೀಸರಿಗೆ ಸಿಕ್ಕಿದ್ದು 50 ಕೋಟಿ ರೂ. ಮೌಲ್ಯದ ಡ್ರಗ್ಸ್ ಎಂದಾದರೆ, ಸಿಗದೇ ಇರುವುದು ಎಷ್ಟು ಪಟ್ಟು ಇರಬಹುದು?

ಶನಿವಾರ ಮಾದಕದ್ರವ್ಯ ರಹಿತ ದಿನದ ಅಂಗವಾಗಿ ಎಲ್ಲ ಜಿಲ್ಲೆಯ ಪೊಲೀಸರು ಎಸ್‍ಪಿ ನೇತೃತ್ವದಲ್ಲಿ, ಸೀಜ್‍ ಮಾಡಿದ ಮಾದಕ ದ್ರವ್ಯಗಳನ್ನು ಸುಟ್ಟು ಹಾಕಿದರು.

ಪುಟ್ಟ ಗದಗ ಜಿಲ್ಲೆಯಲ್ಲಿ 7.18 ಲಕ್ಷ ರೂ ಮೊತ್ತದ ಗಾಂಜಾವನ್ನು ಸುಟ್ಟು ನಾಶ ಪಡಿಸಿದರು. ಇದು ಒಂದು ವರ್ಷದ ಸಾಮಾಗ್ರಿ ಅಥವಾ ಜನೆವರಿಯಿಂದ ಸೀಜ್‍ ಮಾಡಿದ ಸಾಮಾಗ್ರಿ ಎಂಬುದು ಸ್ಪಷ್ಟವಿಲ್ಲ.

ಕಳೆದ ವರ್ಷ ಕನ್ನಡ ಚಿತ್ರರಂಗದ ಕೆಲವರು ಡ್ರಗ್ಸ್ ಜಾಲದಲ್ಲಿ ಸಿಕ್ಕಿ ಬಿದ್ದಾಗ, ಗೃಹ ಸಚಿವ ಬೊಮ್ಮಾಯಿ ಎಲ್ಲ ಎಸ್‍ಪಿಗಳಿಗೆ ಈ ಜಾಲ ಮೆಟ್ಟಿ ಹಾಕಲು ನಿರ್ದೇಶನ ನೀಡಿದರು.

ಆಗ ಏನಾಯಿತು? ದಿನವೂ ಗಾಂಜಾ ಮಾರುತ್ತಿದ್ದವನ ಬಂಧನ ಎಂಬ ಸುದ್ದಿಗಳು ಹರಿದಾಡಿದವು. ಒಬ್ಬ ವ್ಯಕ್ತಿಯಿಂದ 70 ಗ್ರಾಂ ಗಾಂಜಾ ವಶ ಮಾಡಿಕೊಂಡು, ಆತನಿಂದ 1,147 ರೂ. ವಶಪಡಿಸಿಕೊಳ್ಳಲಾಗಿದೆ’ ಎಂಬ ಎಫ್‍ಐಆರ್‌ಗಳು ಬಿಡುಗಡೆ ಆಗುತ್ತಿದ್ದವು.

ಆದರೆ ಇದರ ಮೂಲಗಳು ಪೊಲೀಸರಿಗೆ ಗೊತ್ತೇ ಇಲ್ಲವೇ? ಗುಡಿ ಹತ್ತಿರ ನಿಂತು ಮಾರಲು ಆತನೇನು ಮೂರ್ಖನೇ? ಯಾವುದೋ ಮನೆ ಅಥವಾ ಅಂಗಡಿಯಲ್ಲಿ ಕುಳಿತೇ ಮಾರಿರುತ್ತಾನೆ ಅಲ್ಲವೇ? ಆತನ ಗಿರಾಕಿಗಳು ಕೂಡ ದಾರಿ ಮಧ್ಯೆ ಗುಡಿ ಪಕ್ಕ ಗಾಂಜಾ ಖರೀದಿಸುತ್ತಾರೆಯೇ? ಈ ಪ್ರಶ್ನೆಗಳು ಆಗ ಜನರನ್ನು ಕಾಡಿಸುತ್ತಿದ್ದವು.

ಯಾವಾಗ ಜಾರಕಿಹೊಳಿ ಕೇಸು ಮುನ್ನೆಲೆಗೆ ಬಂದಿತೋ ಆಗ ಡ್ರಗ್ಸ್ ವಿಷಯ ಹಿನ್ನಲೆಗೆ ಸರಿಯಿತು. ಹಾಗೆಯೇ ಬಿಹಾರ ಚುನಾವಣೆ ಮುಗಿದ ನಂತರ ಬಾಲಿವುಡ್‍ ನಟ ಸುಶಾಂತ್‍  ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ನಡೆದಿದ್ದ ಡ್ರಗ್ಸ್ ತನಿಖೆಯೂ ಹಿನ್ನೆಲೆಗೆ ಸರಿಯಿತು.

ಆ ನಂತರ ‘ಗುಡಿ ಹತ್ತಿರವೋ ಅಥವಾ ರಸ್ತೆಯಲ್ಲೋ ನಿಂತು’ ಗಾಂಜಾ ಮಾರುವವರ ಎಫ್‍ಐಆರ್‌ಗಳು ಕಾಣದಾದವು!

ದೇಶದ ಸ್ಥಿತಿ ಏನು?

ಈ ವರ್ಷ ಇನ್ನೂ ಆರು ತಿಂಗಳುಗಳು ಬಾಕಿ ಇರುವಾಗ, ಎನ್‌ಸಿಬಿ ಈಗಾಗಲೇ 4.82 ಟನ್ ಗಾಂಜಾ, 5.25 ಕೆಜಿ ಅಫೀಮು, 48.8 ಕೆಜಿ ಚರಸ್‍ಗಳನ್ನು ವಶಪಡಿಸಿಕೊಂಡಿದೆ.

ಕೋವಿಡ್‍ ಸಾಂಕ್ರಾಮಿಕದ ಸಂದರ್ಭದಲ್ಲೂ ಮಾದಕ ದ್ರವ್ಯ ಮತ್ತು ಕಳ್ಳಸಾಗಣೆ 2020ರಿಂದ ಅನೇಕ ಪಟ್ಟು ಹೆಚ್ಚಾಗಿದೆ ಮತ್ತು ಇದು ವಿವಿಧ ಮಾದಕವಸ್ತು ನಿಯಂತ್ರಣ ಜಾರಿ ಸಂಸ್ಥೆಗಳ ಚಟುವಟಿಕೆಗಳಿಂದ ಸ್ಪಷ್ಟವಾಗಿದೆ ಎನ್ನಲಾಗಿದೆ.

ಈ ವರ್ಷದ ದಿನಾಚರಣೆಯ ಸಂದರ್ಭದಲ್ಲಿ ‘ಮಾದಕವಸ್ತುಗಳ ಬಗ್ಗೆ ಸತ್ಯಗಳನ್ನು ಹಂಚಿಕೊಳ್ಳಿ, ಜೀವಗಳನ್ನು ಉಳಿಸಿ’ ಎಂದು ವಿಶ್ವಸಂಸ್ಥೆಯು ತಿಳಿಸಿದೆ.

ಆದರೆ, ಪೊಲೀಸರು ಮತ್ತು ಮಾದಕದ್ರವ್ಯಗಳ ತಡೆಗೆ ಸಂಬಂಧಪಟ್ಟ ಇಲಾಖೆಗಳು ಸತ್ಯವನ್ನು ಹಂಚಿಕೊಳ್ಳುತ್ತವಾ? ಜನರಿಗೆ ನಂಬಿಕೆಯಿಲ್ಲ!

  • ಪಿ.ಕೆ ಮಲ್ಲನಗೌಡರ್

ಇದನ್ನೂ ಓದಿ: ಹರಿದ ಜೀನ್ಸ್ ಧರಿಸುವುದು ಮಾದಕ ವಸ್ತು ಸೇವನೆಗೂ ಕಾರಣವಾಗುತ್ತದೆ- ಉತ್ತರಾಖಂಡ ಸಿಎಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...