Homeಮುಖಪುಟ2020ರಿಂದ ಮಾದಕ ದ್ರವ್ಯ ಸೇವನೆ, ಕಳ್ಳಸಾಗಣೆ ಹೆಚ್ಚಳ: ಎನ್‌ಸಿಬಿ ಕಳವಳ

2020ರಿಂದ ಮಾದಕ ದ್ರವ್ಯ ಸೇವನೆ, ಕಳ್ಳಸಾಗಣೆ ಹೆಚ್ಚಳ: ಎನ್‌ಸಿಬಿ ಕಳವಳ

- Advertisement -
- Advertisement -

ಶನಿವಾರ ಮಾದಕದ್ರವ್ಯ ರಹಿತ ದಿನ  ಆಚರಿಸಲಾಗಿತು. ಈ ಸಂದರ್ಭದಲ್ಲಿ ರಾಷ್ಟ್ರೀಯ ಮಾದಕದ್ರವ್ಯ ನಿಯಂತ್ರಂಣ ಮಂಡಳಿ (ಎನ್‍ಸಿಬಿ) ನೀಡಿದ ವರದಿ ಪ್ರಕಾರ, 2020ರಿಂದ ಮಾದಕ ದ್ರವ್ಯ ಸೇವನೆ, ಕಳ್ಳಸಾಗಣೆ ಅನೇಕ ಪಟ್ಟು ಹೆಚ್ಚಾಗಿದೆ ಎಂದು ಹಿಂದೂಸ್ತಾನ್‍ ಟೈಮ್ಸ್  ವರದಿ ಮಾಡಿತ್ತು.

ಅರೆ, ಕೋವಿಡ್‍ ಸಂದರ್ಭಕ್ಕೂ ಇದಕ್ಕೂ ಲಿಂಕ್‍ ಇರಬಹುದಾ? ಎಲ್ಲ ಸ್ಥಗಿತವಾಗಿರುವಾಗ ಇದೆಲ್ಲ ಹೇಗೆ ಸಾಧ್ಯವಾಗಿತು? ಕಳೆದ ವರ್ಷ ಭಾರಿ ಸುದ್ದಿ ಮಾಡಿದ ಬಾಲಿವುಡ್‍ ಮತ್ತು ನಮ್ಮ ಕನ್ನಡ ಚಿತ್ರರಂಗದ ಕೆಲವರ ಡ್ರಗ್ಸ್ ಸುದ್ದಿಗಳು ಇದಕ್ಕೆ ಪೂರಕವಾಗಿವೆಯೇ? ಅದಕ್ಕೂ ಮುಖ್ಯವಾಗಿ ಈ ಎನ್‍ಸಿಬಿ, ಆಗೆಲ್ಲ ದೊಡ್ಡ ಹವಾ ಮಾಡಿ ಈಗೇಕೆ ತಣ್ಣಗಾಗಿದೆ?- ಈ ಎಲ್ಲ ಪ್ರಶ್ನೆಗಳಿಗೆ ಸುಲಭ ಉತ್ತರವಿಲ್ಲ ಅನಿಸುತ್ತದೆ.

ಅದಿರಲಿ, 2020-21ನೆ ಸಾಲಿನಲ್ಲಿ ಕರ್ನಾಟಕದಲ್ಲಿ 50 ಕೋಟಿ ರೂ. ಮೌಲ್ಯದ ಮಾದಕ ವಸ್ತು ವಶಪಡಿಸಿಕೊಂಡು ನಾಶ ಮಾಡಲಾಗಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಶನಿವಾರ ತಿಳಿಸಿದ್ದಾರೆ. ಪೊಲೀಸರಿಗೆ ಸಿಕ್ಕಿದ್ದು 50 ಕೋಟಿ ರೂ. ಮೌಲ್ಯದ ಡ್ರಗ್ಸ್ ಎಂದಾದರೆ, ಸಿಗದೇ ಇರುವುದು ಎಷ್ಟು ಪಟ್ಟು ಇರಬಹುದು?

ಶನಿವಾರ ಮಾದಕದ್ರವ್ಯ ರಹಿತ ದಿನದ ಅಂಗವಾಗಿ ಎಲ್ಲ ಜಿಲ್ಲೆಯ ಪೊಲೀಸರು ಎಸ್‍ಪಿ ನೇತೃತ್ವದಲ್ಲಿ, ಸೀಜ್‍ ಮಾಡಿದ ಮಾದಕ ದ್ರವ್ಯಗಳನ್ನು ಸುಟ್ಟು ಹಾಕಿದರು.

ಪುಟ್ಟ ಗದಗ ಜಿಲ್ಲೆಯಲ್ಲಿ 7.18 ಲಕ್ಷ ರೂ ಮೊತ್ತದ ಗಾಂಜಾವನ್ನು ಸುಟ್ಟು ನಾಶ ಪಡಿಸಿದರು. ಇದು ಒಂದು ವರ್ಷದ ಸಾಮಾಗ್ರಿ ಅಥವಾ ಜನೆವರಿಯಿಂದ ಸೀಜ್‍ ಮಾಡಿದ ಸಾಮಾಗ್ರಿ ಎಂಬುದು ಸ್ಪಷ್ಟವಿಲ್ಲ.

ಕಳೆದ ವರ್ಷ ಕನ್ನಡ ಚಿತ್ರರಂಗದ ಕೆಲವರು ಡ್ರಗ್ಸ್ ಜಾಲದಲ್ಲಿ ಸಿಕ್ಕಿ ಬಿದ್ದಾಗ, ಗೃಹ ಸಚಿವ ಬೊಮ್ಮಾಯಿ ಎಲ್ಲ ಎಸ್‍ಪಿಗಳಿಗೆ ಈ ಜಾಲ ಮೆಟ್ಟಿ ಹಾಕಲು ನಿರ್ದೇಶನ ನೀಡಿದರು.

ಆಗ ಏನಾಯಿತು? ದಿನವೂ ಗಾಂಜಾ ಮಾರುತ್ತಿದ್ದವನ ಬಂಧನ ಎಂಬ ಸುದ್ದಿಗಳು ಹರಿದಾಡಿದವು. ಒಬ್ಬ ವ್ಯಕ್ತಿಯಿಂದ 70 ಗ್ರಾಂ ಗಾಂಜಾ ವಶ ಮಾಡಿಕೊಂಡು, ಆತನಿಂದ 1,147 ರೂ. ವಶಪಡಿಸಿಕೊಳ್ಳಲಾಗಿದೆ’ ಎಂಬ ಎಫ್‍ಐಆರ್‌ಗಳು ಬಿಡುಗಡೆ ಆಗುತ್ತಿದ್ದವು.

ಆದರೆ ಇದರ ಮೂಲಗಳು ಪೊಲೀಸರಿಗೆ ಗೊತ್ತೇ ಇಲ್ಲವೇ? ಗುಡಿ ಹತ್ತಿರ ನಿಂತು ಮಾರಲು ಆತನೇನು ಮೂರ್ಖನೇ? ಯಾವುದೋ ಮನೆ ಅಥವಾ ಅಂಗಡಿಯಲ್ಲಿ ಕುಳಿತೇ ಮಾರಿರುತ್ತಾನೆ ಅಲ್ಲವೇ? ಆತನ ಗಿರಾಕಿಗಳು ಕೂಡ ದಾರಿ ಮಧ್ಯೆ ಗುಡಿ ಪಕ್ಕ ಗಾಂಜಾ ಖರೀದಿಸುತ್ತಾರೆಯೇ? ಈ ಪ್ರಶ್ನೆಗಳು ಆಗ ಜನರನ್ನು ಕಾಡಿಸುತ್ತಿದ್ದವು.

ಯಾವಾಗ ಜಾರಕಿಹೊಳಿ ಕೇಸು ಮುನ್ನೆಲೆಗೆ ಬಂದಿತೋ ಆಗ ಡ್ರಗ್ಸ್ ವಿಷಯ ಹಿನ್ನಲೆಗೆ ಸರಿಯಿತು. ಹಾಗೆಯೇ ಬಿಹಾರ ಚುನಾವಣೆ ಮುಗಿದ ನಂತರ ಬಾಲಿವುಡ್‍ ನಟ ಸುಶಾಂತ್‍  ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ನಡೆದಿದ್ದ ಡ್ರಗ್ಸ್ ತನಿಖೆಯೂ ಹಿನ್ನೆಲೆಗೆ ಸರಿಯಿತು.

ಆ ನಂತರ ‘ಗುಡಿ ಹತ್ತಿರವೋ ಅಥವಾ ರಸ್ತೆಯಲ್ಲೋ ನಿಂತು’ ಗಾಂಜಾ ಮಾರುವವರ ಎಫ್‍ಐಆರ್‌ಗಳು ಕಾಣದಾದವು!

ದೇಶದ ಸ್ಥಿತಿ ಏನು?

ಈ ವರ್ಷ ಇನ್ನೂ ಆರು ತಿಂಗಳುಗಳು ಬಾಕಿ ಇರುವಾಗ, ಎನ್‌ಸಿಬಿ ಈಗಾಗಲೇ 4.82 ಟನ್ ಗಾಂಜಾ, 5.25 ಕೆಜಿ ಅಫೀಮು, 48.8 ಕೆಜಿ ಚರಸ್‍ಗಳನ್ನು ವಶಪಡಿಸಿಕೊಂಡಿದೆ.

ಕೋವಿಡ್‍ ಸಾಂಕ್ರಾಮಿಕದ ಸಂದರ್ಭದಲ್ಲೂ ಮಾದಕ ದ್ರವ್ಯ ಮತ್ತು ಕಳ್ಳಸಾಗಣೆ 2020ರಿಂದ ಅನೇಕ ಪಟ್ಟು ಹೆಚ್ಚಾಗಿದೆ ಮತ್ತು ಇದು ವಿವಿಧ ಮಾದಕವಸ್ತು ನಿಯಂತ್ರಣ ಜಾರಿ ಸಂಸ್ಥೆಗಳ ಚಟುವಟಿಕೆಗಳಿಂದ ಸ್ಪಷ್ಟವಾಗಿದೆ ಎನ್ನಲಾಗಿದೆ.

ಈ ವರ್ಷದ ದಿನಾಚರಣೆಯ ಸಂದರ್ಭದಲ್ಲಿ ‘ಮಾದಕವಸ್ತುಗಳ ಬಗ್ಗೆ ಸತ್ಯಗಳನ್ನು ಹಂಚಿಕೊಳ್ಳಿ, ಜೀವಗಳನ್ನು ಉಳಿಸಿ’ ಎಂದು ವಿಶ್ವಸಂಸ್ಥೆಯು ತಿಳಿಸಿದೆ.

ಆದರೆ, ಪೊಲೀಸರು ಮತ್ತು ಮಾದಕದ್ರವ್ಯಗಳ ತಡೆಗೆ ಸಂಬಂಧಪಟ್ಟ ಇಲಾಖೆಗಳು ಸತ್ಯವನ್ನು ಹಂಚಿಕೊಳ್ಳುತ್ತವಾ? ಜನರಿಗೆ ನಂಬಿಕೆಯಿಲ್ಲ!

  • ಪಿ.ಕೆ ಮಲ್ಲನಗೌಡರ್

ಇದನ್ನೂ ಓದಿ: ಹರಿದ ಜೀನ್ಸ್ ಧರಿಸುವುದು ಮಾದಕ ವಸ್ತು ಸೇವನೆಗೂ ಕಾರಣವಾಗುತ್ತದೆ- ಉತ್ತರಾಖಂಡ ಸಿಎಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಾರಣಾಸಿ: ಗಂಗಾ ನದಿಯ ದೋಣಿಯಲ್ಲಿ ‘ಇಫ್ತಾರ್’ ಕೂಟ ಆಯೋಜಿಸಿದ್ದಕ್ಕಾಗಿ 14 ಜನರ ಬಂಧನ 

ವಾರಣಾಸಿಯಲ್ಲಿ ಗಂಗಾ ನದಿಯ ಮಧ್ಯದಲ್ಲಿ ದೋಣಿಯಲ್ಲಿ 'ಇಫ್ತಾರ್' (ರಂಜಾನ್ ಸಮಯದಲ್ಲಿ ಸೂರ್ಯಾಸ್ತದ ನಂತರ ತಿನ್ನುವ ಊಟ) ಕೂಟವನ್ನು ಆಯೋಜಿಸಿದ್ದಕ್ಕಾಗಿ ಹದಿನಾಲ್ಕು ಮುಸ್ಲಿಂ ಯುವಕರನ್ನು ಬಂಧಿಸಲಾಗಿದೆ.  ದೈನಂದಿನ ಮುಸ್ಲಿಂ ಜೀವನವನ್ನು ಅಪರಾಧೀಕರಿಸುವ ಮತ್ತೊಂದು ಪ್ರಕರಣ ಇದಾಗಿದ್ದು,...

ಚುನಾವಣೆ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಇಬ್ಬರು ಪ್ರಮುಖ ನಾಯಕರು ರಾಜೀನಾಮೆ

ಚುನಾವಣೆ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಇಬ್ಬರು ಪ್ರಮುಖ ನಾಯಕರು ತಮ್ಮ ಸ್ಥಾನಗಳಿಗೆ ಮಂಗಳವಾರ (ಮಾ.17) ರಾಜೀನಾಮೆ ಸಲ್ಲಿಸಿದ್ದಾರೆ. ಪಕ್ಷದ ಹಿರಿಯ ನಾಯಕ ಹಾಗೂ ನೌಗಾಂಗ್ ಲೋಕಸಭಾ ಕ್ಷೇತ್ರದ ಹಾಲಿ ಸಂಸದ ಪ್ರದ್ಯುತ್ ಬೋರ್ಡೊಲೊಯ್...

ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನ : ಮೂವರು ಶಾಸಕರನ್ನು ಅಮಾನತುಗೊಳಿಸಿದ ಒಡಿಶಾ ಕಾಂಗ್ರೆಸ್

ರಾಜ್ಯಸಭಾ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ್ದಕ್ಕಾಗಿ ಒಡಿಶಾ ಕಾಂಗ್ರೆಸ್ ಮೂವರು ಶಾಸಕರಾದ ಸೋಫಿಯಾ ಫಿರ್ದೌಸ್, ರಮೇಶ್ ಜೆನಾ ಮತ್ತು ದಾಸರಥಿ ಗೊಮಾಂಗೊ ಅವರನ್ನು ಅಮಾನತುಗೊಳಿಸಿದೆ. ಒಡಿಶಾ ವಿಧಾನಸಭೆಯಲ್ಲಿ ಕಾಂಗ್ರೆಸ್ 14 ಶಾಸಕರನ್ನು ಹೊಂದಿದ್ದು, ನಾಲ್ಕನೇ...

ಅಮೆರಿಕ ರಾಷ್ಟ್ರೀಯ ಭಯೋತ್ಪಾದನಾ ನಿಗ್ರಹ ದಳದ ನಿರ್ದೇಶಕ ಜೋ ಕೆಂಟ್‌ ರಾಜೀನಾಮೆ

ಅಮೆರಿಕದ ರಾಷ್ಟ್ರೀಯ ಭಯೋತ್ಪಾದನಾ ನಿಗ್ರಹ ಕೇಂದ್ರದ (ಎನ್‌ಸಿಟಿಸಿ) ನಿರ್ದೇಶಕ ಜೋ ಕೆಂಟ್ ಅವರು ಇರಾನ್ ಜೊತೆಗಿನ ಯುದ್ಧಕ್ಕೆ ವಿರೋಧ ವ್ಯಕ್ತಪಡಿಸಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. "ಇರಾನ್‌ನಿಂದ ಅಮೆರಿಕಕ್ಕೆ ಯಾವುದೇ ತಕ್ಷಣದ ಅಪಾಯವಿರಲಿಲ್ಲ. ಇಸ್ರೇಲ್‌ನ ಒತ್ತಡದಿಂದಾಗಿ...

ಪಶ್ಚಿಮ ಏಷ್ಯಾ ಸಂಘರ್ಷ: ಇರಾನ್ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ಹತ್ಯೆ ಮಾಡಿರುವುದಾಗಿ ಹೇಳಿಕೊಂಡ ಇಸ್ರೇಲ್ 

ಇರಾನ್‌ನ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ವೈಮಾನಿಕ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಇಸ್ರೇಲ್ ರಕ್ಷಣಾ ಸಚಿವ ಕಾಟ್ಜ್ ಮಂಗಳವಾರ ಹೇಳಿದ್ದಾರೆ. ಆದರೆ ಟೆಹ್ರಾನ್‌ನಿಂದ ಯಾವುದೇ ಅಧಿಕೃತ ದೃಢೀಕರಣವಿಲ್ಲ. ಕಾಟ್ಜ್ ಪ್ರಕಾರ, ಜನರಲ್ ಘೋಲಮ್...

ನಾಲ್ಕು ತಿಂಗಳಲ್ಲೇ ಗರಿಷ್ಠ ಮಟ್ಟಕ್ಕೆ ತಲುಪಿದ ಯುವಜನರ ನಿರುದ್ಯೋಗ ಪ್ರಮಾಣ

15–29 ವರ್ಷ ವಯಸ್ಸಿನ ಯುವಕರಲ್ಲಿ ನಿರುದ್ಯೋಗ ದರವು ಫೆಬ್ರವರಿಯಲ್ಲಿ ನಾಲ್ಕು ತಿಂಗಳಲ್ಲೇ ಗರಿಷ್ಠ ಶೇ. 14.8 ಕ್ಕೆ ಏರಿದೆ. ಇದು ಜನವರಿಯಲ್ಲಿ ಶೇ. 14.7 ರಷ್ಟು ಹೆಚ್ಚಾಗಿ, ಯುವಜನರಲ್ಲಿ ನಿರುದ್ಯೋಗ ಹೆಚ್ಚಳ ಉಂಟಾಗಿದೆ...

ಆರ್‌ಎಸ್‌ಎಸ್‌ ನಿಷೇಧಕ್ಕೆ ಒತ್ತಾಯಿಸಿದ ಅಮೆರಿಕದ ಧಾರ್ಮಿಕ ಸ್ವಾತಂತ್ರ್ಯ ಸಮಿತಿ; ಕಾಂಗ್ರೆಸ್ ಪ್ರತಿಕ್ರಿಯೆ

ಭಾರತದಲ್ಲಿ ಧಾರ್ಮಿಕ ಸ್ವಾತಂತ್ರ್ಯದ ಉಲ್ಲಂಘನೆಯಾಗಿದೆ ಎಂದು ಆರೋಪಿಸಿರುವ ಅಂತರರಾಷ್ಟ್ರೀಯ ಧಾರ್ಮಿಕ ಸ್ವಾತಂತ್ರ್ಯದ ಯುನೈಟೆಡ್ ಸ್ಟೇಟ್ಸ್ ಆಯೋಗವು, ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರೆಸ್ಸೆಸ್) ಮತ್ತು ಭಾರತದ ಬಾಹ್ಯ ಗುಪ್ತಚರ ಸಂಸ್ಥೆಯಾದ ಸಂಶೋಧನೆ, ವಿಶ್ಲೇಷಣಾ...

ಕಾಂಗ್ರೆಸ್ ವಿರುದ್ಧದ ‘ಟರ್ಕಿ ಕಚೇರಿ’ ಹೇಳಿಕೆ: ಅರ್ನಾಬ್ ಗೋಸ್ವಾಮಿಗೆ ₹2 ಕೋಟಿ ಮಾನನಷ್ಟ ಮೊಕದ್ದಮೆ ಹೂಡಲು ಸಮನ್ಸ್ ಜಾರಿ ಮಾಡಿದ ದೆಹಲಿ ಹೈಕೋರ್ಟ್

ಕಾಂಗ್ರೆಸ್ ವಿರುದ್ಧದ "ಟರ್ಕಿ ಕಚೇರಿ" ಆರೋಪಕ್ಕೆ ಸಂಬಂಧಿಸಿದಂತೆ ಅರ್ನಾಬ್ ಗೋಸ್ವಾಮಿಗೆ ₹2 ಕೋಟಿ ಮಾನನಷ್ಟ ಮೊಕದ್ದಮೆ ಹೂಡಲು ದೆಹಲಿ ಹೈಕೋರ್ಟ್ ಸಮನ್ಸ್ ಜಾರಿ ಮಾಡಿದೆ. ಟರ್ಕಿಯಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಅಂತರರಾಷ್ಟ್ರೀಯ ಕಚೇರಿಯನ್ನು ನಡೆಸುತ್ತಿದೆ...

ಚುನಾವಣಾ ಆಯೋಗ ಬಿಜೆಪಿ ಆಜ್ಞೆಯ ಮೇರೆಗೆ ಕೆಲಸ ಮಾಡುತ್ತಿದೆ: ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ

ವಿಧಾನಸಭಾ ಚುನಾವಣೆಗೂ ಮುನ್ನ, ಭಾರತದ ಚುನಾವಣಾ ಆಯೋಗ (ಇಸಿಐ) ಪ್ರಸ್ತುತ ಡಿಜಿಪಿ, ಕೋಲ್ಕತ್ತಾ ಪೊಲೀಸ್ ಆಯುಕ್ತರು, ಮುಖ್ಯ ಮತ್ತು ಗೃಹ ಕಾರ್ಯದರ್ಶಿಗಳನ್ನು ಬದಲಿಸುವ ಮೂಲಕ ಪ್ರಮುಖ ಪುನರ್ರಚನೆಯನ್ನು ಮಾಡಿದೆ. ಪಶ್ಚಿಮ ಬಂಗಾಳದ ಹೊಸ ಡಿಜಿ...

‘ಶಾಂತಿಗೆ ಇದು ಸಮಯವಲ್ಲ’: ‘ಕದನ ವಿರಾಮ’ ಪ್ರಸ್ತಾಪಗಳನ್ನು ತಿರಸ್ಕರಿಸಿದ ಇರಾನ್ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ 

ಇರಾನ್‌ನ ನೂತನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ ಅವರು ಉದ್ವಿಗ್ನತೆಯನ್ನು ಕಡಿಮೆ ಮಾಡುವ ಅಥವಾ ಎರಡು ಮಧ್ಯವರ್ತಿ ರಾಷ್ಟ್ರಗಳು ಟೆಹ್ರಾನ್‌ಗೆ ತಲುಪಿಸಿದ ಯುನೈಟೆಡ್ ಸ್ಟೇಟ್ಸ್‌ನೊಂದಿಗೆ ಕದನ ವಿರಾಮದ ಪ್ರಸ್ತಾಪಗಳನ್ನು ತಿರಸ್ಕರಿಸಿದರು ಎಂದು...