Homeಮುಖಪುಟ2020ರಿಂದ ಮಾದಕ ದ್ರವ್ಯ ಸೇವನೆ, ಕಳ್ಳಸಾಗಣೆ ಹೆಚ್ಚಳ: ಎನ್‌ಸಿಬಿ ಕಳವಳ

2020ರಿಂದ ಮಾದಕ ದ್ರವ್ಯ ಸೇವನೆ, ಕಳ್ಳಸಾಗಣೆ ಹೆಚ್ಚಳ: ಎನ್‌ಸಿಬಿ ಕಳವಳ

- Advertisement -
- Advertisement -

ಶನಿವಾರ ಮಾದಕದ್ರವ್ಯ ರಹಿತ ದಿನ  ಆಚರಿಸಲಾಗಿತು. ಈ ಸಂದರ್ಭದಲ್ಲಿ ರಾಷ್ಟ್ರೀಯ ಮಾದಕದ್ರವ್ಯ ನಿಯಂತ್ರಂಣ ಮಂಡಳಿ (ಎನ್‍ಸಿಬಿ) ನೀಡಿದ ವರದಿ ಪ್ರಕಾರ, 2020ರಿಂದ ಮಾದಕ ದ್ರವ್ಯ ಸೇವನೆ, ಕಳ್ಳಸಾಗಣೆ ಅನೇಕ ಪಟ್ಟು ಹೆಚ್ಚಾಗಿದೆ ಎಂದು ಹಿಂದೂಸ್ತಾನ್‍ ಟೈಮ್ಸ್  ವರದಿ ಮಾಡಿತ್ತು.

ಅರೆ, ಕೋವಿಡ್‍ ಸಂದರ್ಭಕ್ಕೂ ಇದಕ್ಕೂ ಲಿಂಕ್‍ ಇರಬಹುದಾ? ಎಲ್ಲ ಸ್ಥಗಿತವಾಗಿರುವಾಗ ಇದೆಲ್ಲ ಹೇಗೆ ಸಾಧ್ಯವಾಗಿತು? ಕಳೆದ ವರ್ಷ ಭಾರಿ ಸುದ್ದಿ ಮಾಡಿದ ಬಾಲಿವುಡ್‍ ಮತ್ತು ನಮ್ಮ ಕನ್ನಡ ಚಿತ್ರರಂಗದ ಕೆಲವರ ಡ್ರಗ್ಸ್ ಸುದ್ದಿಗಳು ಇದಕ್ಕೆ ಪೂರಕವಾಗಿವೆಯೇ? ಅದಕ್ಕೂ ಮುಖ್ಯವಾಗಿ ಈ ಎನ್‍ಸಿಬಿ, ಆಗೆಲ್ಲ ದೊಡ್ಡ ಹವಾ ಮಾಡಿ ಈಗೇಕೆ ತಣ್ಣಗಾಗಿದೆ?- ಈ ಎಲ್ಲ ಪ್ರಶ್ನೆಗಳಿಗೆ ಸುಲಭ ಉತ್ತರವಿಲ್ಲ ಅನಿಸುತ್ತದೆ.

ಅದಿರಲಿ, 2020-21ನೆ ಸಾಲಿನಲ್ಲಿ ಕರ್ನಾಟಕದಲ್ಲಿ 50 ಕೋಟಿ ರೂ. ಮೌಲ್ಯದ ಮಾದಕ ವಸ್ತು ವಶಪಡಿಸಿಕೊಂಡು ನಾಶ ಮಾಡಲಾಗಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಶನಿವಾರ ತಿಳಿಸಿದ್ದಾರೆ. ಪೊಲೀಸರಿಗೆ ಸಿಕ್ಕಿದ್ದು 50 ಕೋಟಿ ರೂ. ಮೌಲ್ಯದ ಡ್ರಗ್ಸ್ ಎಂದಾದರೆ, ಸಿಗದೇ ಇರುವುದು ಎಷ್ಟು ಪಟ್ಟು ಇರಬಹುದು?

ಶನಿವಾರ ಮಾದಕದ್ರವ್ಯ ರಹಿತ ದಿನದ ಅಂಗವಾಗಿ ಎಲ್ಲ ಜಿಲ್ಲೆಯ ಪೊಲೀಸರು ಎಸ್‍ಪಿ ನೇತೃತ್ವದಲ್ಲಿ, ಸೀಜ್‍ ಮಾಡಿದ ಮಾದಕ ದ್ರವ್ಯಗಳನ್ನು ಸುಟ್ಟು ಹಾಕಿದರು.

ಪುಟ್ಟ ಗದಗ ಜಿಲ್ಲೆಯಲ್ಲಿ 7.18 ಲಕ್ಷ ರೂ ಮೊತ್ತದ ಗಾಂಜಾವನ್ನು ಸುಟ್ಟು ನಾಶ ಪಡಿಸಿದರು. ಇದು ಒಂದು ವರ್ಷದ ಸಾಮಾಗ್ರಿ ಅಥವಾ ಜನೆವರಿಯಿಂದ ಸೀಜ್‍ ಮಾಡಿದ ಸಾಮಾಗ್ರಿ ಎಂಬುದು ಸ್ಪಷ್ಟವಿಲ್ಲ.

ಕಳೆದ ವರ್ಷ ಕನ್ನಡ ಚಿತ್ರರಂಗದ ಕೆಲವರು ಡ್ರಗ್ಸ್ ಜಾಲದಲ್ಲಿ ಸಿಕ್ಕಿ ಬಿದ್ದಾಗ, ಗೃಹ ಸಚಿವ ಬೊಮ್ಮಾಯಿ ಎಲ್ಲ ಎಸ್‍ಪಿಗಳಿಗೆ ಈ ಜಾಲ ಮೆಟ್ಟಿ ಹಾಕಲು ನಿರ್ದೇಶನ ನೀಡಿದರು.

ಆಗ ಏನಾಯಿತು? ದಿನವೂ ಗಾಂಜಾ ಮಾರುತ್ತಿದ್ದವನ ಬಂಧನ ಎಂಬ ಸುದ್ದಿಗಳು ಹರಿದಾಡಿದವು. ಒಬ್ಬ ವ್ಯಕ್ತಿಯಿಂದ 70 ಗ್ರಾಂ ಗಾಂಜಾ ವಶ ಮಾಡಿಕೊಂಡು, ಆತನಿಂದ 1,147 ರೂ. ವಶಪಡಿಸಿಕೊಳ್ಳಲಾಗಿದೆ’ ಎಂಬ ಎಫ್‍ಐಆರ್‌ಗಳು ಬಿಡುಗಡೆ ಆಗುತ್ತಿದ್ದವು.

ಆದರೆ ಇದರ ಮೂಲಗಳು ಪೊಲೀಸರಿಗೆ ಗೊತ್ತೇ ಇಲ್ಲವೇ? ಗುಡಿ ಹತ್ತಿರ ನಿಂತು ಮಾರಲು ಆತನೇನು ಮೂರ್ಖನೇ? ಯಾವುದೋ ಮನೆ ಅಥವಾ ಅಂಗಡಿಯಲ್ಲಿ ಕುಳಿತೇ ಮಾರಿರುತ್ತಾನೆ ಅಲ್ಲವೇ? ಆತನ ಗಿರಾಕಿಗಳು ಕೂಡ ದಾರಿ ಮಧ್ಯೆ ಗುಡಿ ಪಕ್ಕ ಗಾಂಜಾ ಖರೀದಿಸುತ್ತಾರೆಯೇ? ಈ ಪ್ರಶ್ನೆಗಳು ಆಗ ಜನರನ್ನು ಕಾಡಿಸುತ್ತಿದ್ದವು.

ಯಾವಾಗ ಜಾರಕಿಹೊಳಿ ಕೇಸು ಮುನ್ನೆಲೆಗೆ ಬಂದಿತೋ ಆಗ ಡ್ರಗ್ಸ್ ವಿಷಯ ಹಿನ್ನಲೆಗೆ ಸರಿಯಿತು. ಹಾಗೆಯೇ ಬಿಹಾರ ಚುನಾವಣೆ ಮುಗಿದ ನಂತರ ಬಾಲಿವುಡ್‍ ನಟ ಸುಶಾಂತ್‍  ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ನಡೆದಿದ್ದ ಡ್ರಗ್ಸ್ ತನಿಖೆಯೂ ಹಿನ್ನೆಲೆಗೆ ಸರಿಯಿತು.

ಆ ನಂತರ ‘ಗುಡಿ ಹತ್ತಿರವೋ ಅಥವಾ ರಸ್ತೆಯಲ್ಲೋ ನಿಂತು’ ಗಾಂಜಾ ಮಾರುವವರ ಎಫ್‍ಐಆರ್‌ಗಳು ಕಾಣದಾದವು!

ದೇಶದ ಸ್ಥಿತಿ ಏನು?

ಈ ವರ್ಷ ಇನ್ನೂ ಆರು ತಿಂಗಳುಗಳು ಬಾಕಿ ಇರುವಾಗ, ಎನ್‌ಸಿಬಿ ಈಗಾಗಲೇ 4.82 ಟನ್ ಗಾಂಜಾ, 5.25 ಕೆಜಿ ಅಫೀಮು, 48.8 ಕೆಜಿ ಚರಸ್‍ಗಳನ್ನು ವಶಪಡಿಸಿಕೊಂಡಿದೆ.

ಕೋವಿಡ್‍ ಸಾಂಕ್ರಾಮಿಕದ ಸಂದರ್ಭದಲ್ಲೂ ಮಾದಕ ದ್ರವ್ಯ ಮತ್ತು ಕಳ್ಳಸಾಗಣೆ 2020ರಿಂದ ಅನೇಕ ಪಟ್ಟು ಹೆಚ್ಚಾಗಿದೆ ಮತ್ತು ಇದು ವಿವಿಧ ಮಾದಕವಸ್ತು ನಿಯಂತ್ರಣ ಜಾರಿ ಸಂಸ್ಥೆಗಳ ಚಟುವಟಿಕೆಗಳಿಂದ ಸ್ಪಷ್ಟವಾಗಿದೆ ಎನ್ನಲಾಗಿದೆ.

ಈ ವರ್ಷದ ದಿನಾಚರಣೆಯ ಸಂದರ್ಭದಲ್ಲಿ ‘ಮಾದಕವಸ್ತುಗಳ ಬಗ್ಗೆ ಸತ್ಯಗಳನ್ನು ಹಂಚಿಕೊಳ್ಳಿ, ಜೀವಗಳನ್ನು ಉಳಿಸಿ’ ಎಂದು ವಿಶ್ವಸಂಸ್ಥೆಯು ತಿಳಿಸಿದೆ.

ಆದರೆ, ಪೊಲೀಸರು ಮತ್ತು ಮಾದಕದ್ರವ್ಯಗಳ ತಡೆಗೆ ಸಂಬಂಧಪಟ್ಟ ಇಲಾಖೆಗಳು ಸತ್ಯವನ್ನು ಹಂಚಿಕೊಳ್ಳುತ್ತವಾ? ಜನರಿಗೆ ನಂಬಿಕೆಯಿಲ್ಲ!

  • ಪಿ.ಕೆ ಮಲ್ಲನಗೌಡರ್

ಇದನ್ನೂ ಓದಿ: ಹರಿದ ಜೀನ್ಸ್ ಧರಿಸುವುದು ಮಾದಕ ವಸ್ತು ಸೇವನೆಗೂ ಕಾರಣವಾಗುತ್ತದೆ- ಉತ್ತರಾಖಂಡ ಸಿಎಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: BLO ಮನೆ-ಮನೆ ಭೇಟಿ ಗಡುವು ಆಗಸ್ಟ್‌ 17ರವರೆಗೆ ವಿಸ್ತರಣೆ!

ರಾಜ್ಯದಲ್ಲಿ ನಡೆಯುತ್ತಿರುವ ‘ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ’ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ಕೇಂದ್ರ ಚುನಾವಣಾ ಆಯೋಗವು (ECI) ಪರಿಷ್ಕೃತ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಮನೆ-ಮನೆ ಗಣತಿ ಪ್ರಕ್ರಿಯೆಯ ಗಡುವನ್ನು ಆಗಸ್ಟ್ 17ರವರೆಗೆ ವಿಸ್ತರಿಸಲಾಗಿದ್ದು,...

ಕಾವೇರಿ ವಿಚಾರದಲ್ಲಿ ಅಗ್ಗದ ರಾಜಕೀಯ ಮಾಡಲ್ಲ: ತಮಿಳುನಾಡು ಸಿಎಂ ವಿಜಯ್

ಕರ್ನಾಟಕ ಸರ್ಕಾರ ಮೇಕೆದಾಟು ಅಣೆಕಟ್ಟು ನಿರ್ಮಾಣಕ್ಕೆ ಮುಂದಾಗಿರುವ ವಿಚಾರವಾಗಿ ತಮಿಳುನಾಡಿನಲ್ಲಿ ರಾಜಕೀಯ ಕಾವು ಏರುತ್ತಿರುವ ಬೆನ್ನಲ್ಲೇ, ಈ ಕುರಿತು ತಕ್ಷಣವೇ ಸರ್ವಪಕ್ಷಗಳ ಸಭೆಯನ್ನು ಆಯೋಜಿಸುವ ಯಾವುದೇ ಅಗತ್ಯವಿಲ್ಲ ಎಂದು ತಮಿಳುನಾಡು ಮುಖ್ಯಮಂತ್ರಿ ಸಿ....

ಬೆಂಗಳೂರಿನ ಜಕ್ಕೂರಿನಲ್ಲಿ 22-23 ವರ್ಷದ ಇಬ್ಬರು ನೇಪಾಳಿ ಯುವತಿಯರ ಶವಗಳು ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಬೆಂಗಳೂರು: ಜಕ್ಕೂರು ಮುಖ್ಯ ರಸ್ತೆಯ ನಿರ್ಜನ ಪ್ರದೇಶವೊಂದರಲ್ಲಿ ನೇಪಾಳ ಮೂಲದ ಇಬ್ಬರು ಯುವತಿಯರು ಒಂದೇ ಸೀರೆಯಿಂದ ಮರಕ್ಕೆ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿರುವ ಆಘಾತಕಾರಿ ಘಟನೆ ಗುರುವಾರ ಮುಂಜಾನೆ ಬೆಳಕಿಗೆ ಬಂದಿದೆ. ಮೃತರನ್ನು ನೇಪಾಳ...

NEET Paper Leak: ಒಂದೇ ಒಂದು CCTV ಇರಲಿಲ್ಲ, ಚೆಕಿಂಗ್ ಇರಲಿಲ್ಲ! ಪ್ರಶ್ನೆ ಪತ್ರಿಕೆ ಲೀಕ್ ಮಾಡಿದ್ದು ಹೇಗೆ? CBI ವರದಿ ಇಲ್ಲಿದೆ

ದೇಶಾದ್ಯಂತ ಭಾರಿ ಸಂಚಲನ ಮೂಡಿಸಿದ್ದ ನೀಟ್ (NEET) ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ದಳ (ಸಿಬಿಐ) ತನ್ನ ಅಂತಿಮ ಚಾರ್ಜ್‌ಶೀಟ್ ಸಲ್ಲಿಸಿದೆ. ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯ (NTA)...

ಉತ್ತರಾಖಂಡ : ರಾಜ್ಯ ಮುಖ್ಯ ಚುನಾವಣಾ ಅಧಿಕಾರಿಗೆ SIR ನೋಟಿಸ್

ಉತ್ತರಾಖಂಡದಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯು ಉನ್ನತ ಸರ್ಕಾರಿ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳ ಮನೆ ಬಾಗಿಲಿಗೆ ತಲುಪಿದೆ. ರಾಜ್ಯದ ಮುಖ್ಯ ಚುನಾವಣಾ ಅಧಿಕಾರಿ (ಸಿಇಒ),...

SIR: ಗಣತಿ ನಮೂನೆ ವಾಪಸ್‌ಗೆ ನಾಳೆಯೇ ಅಂತಿಮ ಗಡುವು, 1.10 ಕೋಟಿ ಮತದಾರರ ಹೆಸರು ಡಿಲೀಟ್‌!

ರಾಜ್ಯಾದ್ಯಂತ ನಡೆಯುತ್ತಿರುವ ‘ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯ ಮೊದಲ ಹಂತವಾದ ಗಣತಿ ನಮೂನೆಗಳನ್ನು ಭರ್ತಿ ಮಾಡಿ ವಾಪಸ್ ನೀಡಲು ನಾಳೆ (ಆಗಸ್ಟ್ 8) ಕೊನೆಯ ದಿನವಾಗಿದೆ. ಈ ನಡುವೆ...

ಕರ್ನಾಟಕ ಎಸ್ಐಆರ್: ಬೆಂಗಳೂರಿನ ಅರ್ಧದಷ್ಟು ಮತದಾರರು ‘ಹೊರಕ್ಕೆ’: ರಾಜ್ಯದಲ್ಲಿ 1.11 ಕೋಟಿ ಜನರು ಮತದಾನದ ಹಕ್ಕು ಕಳೆದುಕೊಳ್ಳುವ ಭೀತಿ

ಕರ್ನಾಟಕದಲ್ಲಿ ಭಾರತೀಯ ಚುನಾವಣಾ ಆಯೋಗವು (ECI) ಕೈಗೊಂಡಿರುವ ‘ವಿಶೇಷ ತೀವ್ರ ಪರಿಷ್ಕರಣೆ’ (Special Intensive Revision - SIR) ಪ್ರಕ್ರಿಯೆಯು ರಾಜ್ಯದ ಕೋಟ್ಯಂತರ ನಾಗರಿಕರ ಮತದಾನದ ಹಕ್ಕನ್ನೇ ಕಸಿದುಕೊಳ್ಳುವ ಭೀತಿಯನ್ನು ಹುಟ್ಟುಹಾಕಿದೆ. ಪ್ರಜಾಪ್ರಭುತ್ವ...

ಎರಡು ನ್ಯೂಸ್ ಚಾನೆಲ್‌ಗಳಿಗೆ ಉದಯನಿಧಿ ಲೀಗಲ್ ನೋಟಿಸ್ : ಸಾರ್ವಜನಿಕ ಕ್ಷಮೆಯಾಚನೆ, 100 ಕೋಟಿ ಪರಿಹಾರಕ್ಕೆ ಆಗ್ರಹ-ವರದಿ

ತಮಿಳುನಾಡಿನ ವಿರೋಧ ಪಕ್ಷದ ನಾಯಕ ಹಾಗೂ ಡಿಎಂಕೆ ಯುವ ಘಟಕದ ಕಾರ್ಯದರ್ಶಿ ಉದಯನಿಧಿ ಸ್ಟಾಲಿನ್ ಅವರು ತಮ್ಮ ಇತ್ತೀಚಿನ ಹೇಳಿಕೆಯ ಪ್ರಸಾರಕ್ಕೆ ಸಂಬಂಧಿಸಿದಂತೆ ಮಾನನಷ್ಟ ಆರೋಪ ಮಾಡಿ ಎರಡು ರಾಷ್ಟ್ರೀಯ ಸುದ್ದಿ ವಾಹಿನಿಗಳಿಗೆ...

CJP ರಾಷ್ಟ್ರೀಯ ಕಾರ್ಯಕಾರಿ ಸಮಿತಿ ರಚನೆ: ಅಭಿಜೀತ್ ದೀಪ್ಕೆಗೆ ‘ರಾಷ್ಟ್ರೀಯ ಸಂಚಾಲಕ’

ದೇಶಾದ್ಯಂತ ವಿದ್ಯಾರ್ಥಿ ಮತ್ತು ಯುವಜನರ ಬೃಹತ್ ಹೋರಾಟದ ಮೂಲಕ ಗಮನಸೆಳೆದಿರುವ ಕಾಕ್ರೋಚ್ ಜನತಾ ಪಾರ್ಟಿ (CJP) ಅಧಿಕೃತವಾಗಿ ತನ್ನ ಮೊದಲ 14 ಸದಸ್ಯರ ರಾಷ್ಟ್ರೀಯ ಕಾರ್ಯಕಾರಿ ಸಮಿತಿಯನ್ನು (National Working Committee) ಪ್ರಕಟಿಸಿದೆ....

ಕ್ಷೇತ್ರ ಪುನರ್ ವಿಂಗಡಣೆಗೆ ಡಿಎಂಕೆ ವಿರೋಧ: ‘ಮೃದು ಧೋರಣೆ’ ವದಂತಿಗೆ ಉದಯನಿಧಿ ಸ್ಟಾಲಿನ್ ಬ್ರೇಕ್

ಕ್ಷೇತ್ರ ಪುನರ್ ವಿಂಗಡಣೆ ಮಸೂದೆಯನ್ನು ಕೇಂದ್ರ ಸರ್ಕಾರ ಮರುಪರಿಚಯಿಸಲು ಮುಂದಾಗಿರುವುದು ತಮಿಳುನಾಡಿನಲ್ಲಿ ತೀವ್ರ ರಾಜಕೀಯ ಕಸರತ್ತಿಗೆ ಕಾರಣವಾಗಿದೆ. ಕ್ಷೇತ್ರ ಪುನರ್ ವಿಂಗಡಣೆ ವಿಷಯದಲ್ಲಿ ಡಿಎಂಕೆ (DMK) ತನ್ನ ಕಠಿಣ ನಿಲುವನ್ನು ಮೃದುಗೊಳಿಸಿದೆ ಎಂಬ...