Homeಮುಖಪುಟ2020ರಿಂದ ಮಾದಕ ದ್ರವ್ಯ ಸೇವನೆ, ಕಳ್ಳಸಾಗಣೆ ಹೆಚ್ಚಳ: ಎನ್‌ಸಿಬಿ ಕಳವಳ

2020ರಿಂದ ಮಾದಕ ದ್ರವ್ಯ ಸೇವನೆ, ಕಳ್ಳಸಾಗಣೆ ಹೆಚ್ಚಳ: ಎನ್‌ಸಿಬಿ ಕಳವಳ

- Advertisement -
- Advertisement -

ಶನಿವಾರ ಮಾದಕದ್ರವ್ಯ ರಹಿತ ದಿನ  ಆಚರಿಸಲಾಗಿತು. ಈ ಸಂದರ್ಭದಲ್ಲಿ ರಾಷ್ಟ್ರೀಯ ಮಾದಕದ್ರವ್ಯ ನಿಯಂತ್ರಂಣ ಮಂಡಳಿ (ಎನ್‍ಸಿಬಿ) ನೀಡಿದ ವರದಿ ಪ್ರಕಾರ, 2020ರಿಂದ ಮಾದಕ ದ್ರವ್ಯ ಸೇವನೆ, ಕಳ್ಳಸಾಗಣೆ ಅನೇಕ ಪಟ್ಟು ಹೆಚ್ಚಾಗಿದೆ ಎಂದು ಹಿಂದೂಸ್ತಾನ್‍ ಟೈಮ್ಸ್  ವರದಿ ಮಾಡಿತ್ತು.

ಅರೆ, ಕೋವಿಡ್‍ ಸಂದರ್ಭಕ್ಕೂ ಇದಕ್ಕೂ ಲಿಂಕ್‍ ಇರಬಹುದಾ? ಎಲ್ಲ ಸ್ಥಗಿತವಾಗಿರುವಾಗ ಇದೆಲ್ಲ ಹೇಗೆ ಸಾಧ್ಯವಾಗಿತು? ಕಳೆದ ವರ್ಷ ಭಾರಿ ಸುದ್ದಿ ಮಾಡಿದ ಬಾಲಿವುಡ್‍ ಮತ್ತು ನಮ್ಮ ಕನ್ನಡ ಚಿತ್ರರಂಗದ ಕೆಲವರ ಡ್ರಗ್ಸ್ ಸುದ್ದಿಗಳು ಇದಕ್ಕೆ ಪೂರಕವಾಗಿವೆಯೇ? ಅದಕ್ಕೂ ಮುಖ್ಯವಾಗಿ ಈ ಎನ್‍ಸಿಬಿ, ಆಗೆಲ್ಲ ದೊಡ್ಡ ಹವಾ ಮಾಡಿ ಈಗೇಕೆ ತಣ್ಣಗಾಗಿದೆ?- ಈ ಎಲ್ಲ ಪ್ರಶ್ನೆಗಳಿಗೆ ಸುಲಭ ಉತ್ತರವಿಲ್ಲ ಅನಿಸುತ್ತದೆ.

ಅದಿರಲಿ, 2020-21ನೆ ಸಾಲಿನಲ್ಲಿ ಕರ್ನಾಟಕದಲ್ಲಿ 50 ಕೋಟಿ ರೂ. ಮೌಲ್ಯದ ಮಾದಕ ವಸ್ತು ವಶಪಡಿಸಿಕೊಂಡು ನಾಶ ಮಾಡಲಾಗಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಶನಿವಾರ ತಿಳಿಸಿದ್ದಾರೆ. ಪೊಲೀಸರಿಗೆ ಸಿಕ್ಕಿದ್ದು 50 ಕೋಟಿ ರೂ. ಮೌಲ್ಯದ ಡ್ರಗ್ಸ್ ಎಂದಾದರೆ, ಸಿಗದೇ ಇರುವುದು ಎಷ್ಟು ಪಟ್ಟು ಇರಬಹುದು?

ಶನಿವಾರ ಮಾದಕದ್ರವ್ಯ ರಹಿತ ದಿನದ ಅಂಗವಾಗಿ ಎಲ್ಲ ಜಿಲ್ಲೆಯ ಪೊಲೀಸರು ಎಸ್‍ಪಿ ನೇತೃತ್ವದಲ್ಲಿ, ಸೀಜ್‍ ಮಾಡಿದ ಮಾದಕ ದ್ರವ್ಯಗಳನ್ನು ಸುಟ್ಟು ಹಾಕಿದರು.

ಪುಟ್ಟ ಗದಗ ಜಿಲ್ಲೆಯಲ್ಲಿ 7.18 ಲಕ್ಷ ರೂ ಮೊತ್ತದ ಗಾಂಜಾವನ್ನು ಸುಟ್ಟು ನಾಶ ಪಡಿಸಿದರು. ಇದು ಒಂದು ವರ್ಷದ ಸಾಮಾಗ್ರಿ ಅಥವಾ ಜನೆವರಿಯಿಂದ ಸೀಜ್‍ ಮಾಡಿದ ಸಾಮಾಗ್ರಿ ಎಂಬುದು ಸ್ಪಷ್ಟವಿಲ್ಲ.

ಕಳೆದ ವರ್ಷ ಕನ್ನಡ ಚಿತ್ರರಂಗದ ಕೆಲವರು ಡ್ರಗ್ಸ್ ಜಾಲದಲ್ಲಿ ಸಿಕ್ಕಿ ಬಿದ್ದಾಗ, ಗೃಹ ಸಚಿವ ಬೊಮ್ಮಾಯಿ ಎಲ್ಲ ಎಸ್‍ಪಿಗಳಿಗೆ ಈ ಜಾಲ ಮೆಟ್ಟಿ ಹಾಕಲು ನಿರ್ದೇಶನ ನೀಡಿದರು.

ಆಗ ಏನಾಯಿತು? ದಿನವೂ ಗಾಂಜಾ ಮಾರುತ್ತಿದ್ದವನ ಬಂಧನ ಎಂಬ ಸುದ್ದಿಗಳು ಹರಿದಾಡಿದವು. ಒಬ್ಬ ವ್ಯಕ್ತಿಯಿಂದ 70 ಗ್ರಾಂ ಗಾಂಜಾ ವಶ ಮಾಡಿಕೊಂಡು, ಆತನಿಂದ 1,147 ರೂ. ವಶಪಡಿಸಿಕೊಳ್ಳಲಾಗಿದೆ’ ಎಂಬ ಎಫ್‍ಐಆರ್‌ಗಳು ಬಿಡುಗಡೆ ಆಗುತ್ತಿದ್ದವು.

ಆದರೆ ಇದರ ಮೂಲಗಳು ಪೊಲೀಸರಿಗೆ ಗೊತ್ತೇ ಇಲ್ಲವೇ? ಗುಡಿ ಹತ್ತಿರ ನಿಂತು ಮಾರಲು ಆತನೇನು ಮೂರ್ಖನೇ? ಯಾವುದೋ ಮನೆ ಅಥವಾ ಅಂಗಡಿಯಲ್ಲಿ ಕುಳಿತೇ ಮಾರಿರುತ್ತಾನೆ ಅಲ್ಲವೇ? ಆತನ ಗಿರಾಕಿಗಳು ಕೂಡ ದಾರಿ ಮಧ್ಯೆ ಗುಡಿ ಪಕ್ಕ ಗಾಂಜಾ ಖರೀದಿಸುತ್ತಾರೆಯೇ? ಈ ಪ್ರಶ್ನೆಗಳು ಆಗ ಜನರನ್ನು ಕಾಡಿಸುತ್ತಿದ್ದವು.

ಯಾವಾಗ ಜಾರಕಿಹೊಳಿ ಕೇಸು ಮುನ್ನೆಲೆಗೆ ಬಂದಿತೋ ಆಗ ಡ್ರಗ್ಸ್ ವಿಷಯ ಹಿನ್ನಲೆಗೆ ಸರಿಯಿತು. ಹಾಗೆಯೇ ಬಿಹಾರ ಚುನಾವಣೆ ಮುಗಿದ ನಂತರ ಬಾಲಿವುಡ್‍ ನಟ ಸುಶಾಂತ್‍  ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ನಡೆದಿದ್ದ ಡ್ರಗ್ಸ್ ತನಿಖೆಯೂ ಹಿನ್ನೆಲೆಗೆ ಸರಿಯಿತು.

ಆ ನಂತರ ‘ಗುಡಿ ಹತ್ತಿರವೋ ಅಥವಾ ರಸ್ತೆಯಲ್ಲೋ ನಿಂತು’ ಗಾಂಜಾ ಮಾರುವವರ ಎಫ್‍ಐಆರ್‌ಗಳು ಕಾಣದಾದವು!

ದೇಶದ ಸ್ಥಿತಿ ಏನು?

ಈ ವರ್ಷ ಇನ್ನೂ ಆರು ತಿಂಗಳುಗಳು ಬಾಕಿ ಇರುವಾಗ, ಎನ್‌ಸಿಬಿ ಈಗಾಗಲೇ 4.82 ಟನ್ ಗಾಂಜಾ, 5.25 ಕೆಜಿ ಅಫೀಮು, 48.8 ಕೆಜಿ ಚರಸ್‍ಗಳನ್ನು ವಶಪಡಿಸಿಕೊಂಡಿದೆ.

ಕೋವಿಡ್‍ ಸಾಂಕ್ರಾಮಿಕದ ಸಂದರ್ಭದಲ್ಲೂ ಮಾದಕ ದ್ರವ್ಯ ಮತ್ತು ಕಳ್ಳಸಾಗಣೆ 2020ರಿಂದ ಅನೇಕ ಪಟ್ಟು ಹೆಚ್ಚಾಗಿದೆ ಮತ್ತು ಇದು ವಿವಿಧ ಮಾದಕವಸ್ತು ನಿಯಂತ್ರಣ ಜಾರಿ ಸಂಸ್ಥೆಗಳ ಚಟುವಟಿಕೆಗಳಿಂದ ಸ್ಪಷ್ಟವಾಗಿದೆ ಎನ್ನಲಾಗಿದೆ.

ಈ ವರ್ಷದ ದಿನಾಚರಣೆಯ ಸಂದರ್ಭದಲ್ಲಿ ‘ಮಾದಕವಸ್ತುಗಳ ಬಗ್ಗೆ ಸತ್ಯಗಳನ್ನು ಹಂಚಿಕೊಳ್ಳಿ, ಜೀವಗಳನ್ನು ಉಳಿಸಿ’ ಎಂದು ವಿಶ್ವಸಂಸ್ಥೆಯು ತಿಳಿಸಿದೆ.

ಆದರೆ, ಪೊಲೀಸರು ಮತ್ತು ಮಾದಕದ್ರವ್ಯಗಳ ತಡೆಗೆ ಸಂಬಂಧಪಟ್ಟ ಇಲಾಖೆಗಳು ಸತ್ಯವನ್ನು ಹಂಚಿಕೊಳ್ಳುತ್ತವಾ? ಜನರಿಗೆ ನಂಬಿಕೆಯಿಲ್ಲ!

  • ಪಿ.ಕೆ ಮಲ್ಲನಗೌಡರ್

ಇದನ್ನೂ ಓದಿ: ಹರಿದ ಜೀನ್ಸ್ ಧರಿಸುವುದು ಮಾದಕ ವಸ್ತು ಸೇವನೆಗೂ ಕಾರಣವಾಗುತ್ತದೆ- ಉತ್ತರಾಖಂಡ ಸಿಎಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...

ವೈಯಕ್ತಿಕ ಸ್ವಾತಂತ್ರ್ಯ Vs ಕಠಿಣ ಕಾಯ್ದೆ: ಯುಎಪಿಎ ಜಾಮೀನು ಭಿನ್ನಾಭಿಪ್ರಾಯಕ್ಕೆ ಸಿಗುವುದೇ ಸುಪ್ರೀಂ ಪರಿಹಾರ?

ಯುಎಪಿಎ ಅಡಿಯಲ್ಲಿ ದೀರ್ಘಕಾಲದ ಜೈಲುವಾಸದ ಹಿನ್ನೆಲೆ, ಜಾಮೀನು ನೀಡುವ ಕುರಿತು ಸುಪ್ರೀಂ ಕೋರ್ಟ್‌ನ ಎರಡು ನ್ಯಾಯಪೀಠಗಳ ನಡುವೆ ಭಿನ್ನಾಭಿಪ್ರಾಯ ಮೂಡಿದ ಕಾರಣ, ವಿಚಾರವನ್ನು ಸುಪ್ರೀಂ ಕೋರ್ಟ್‌ ವಿಸ್ತೃತ ಪೀಠಕ್ಕೆ ಶಿಫಾರಸು ಮಾಡಲಾಗಿದೆ ಎಂದು...

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...

ಪಶ್ಚಿಮ ಬಂಗಾಳ: ಬಿಜೆಪಿಗೆ ಉಲ್ಟಾ ಹೊಡೆಯುತ್ತಾ ಗೋ-ಹತ್ಯೆ ನಿಷೇಧ ಕಾಯ್ದೆ?

ಬಕ್ರೀದ್ (ಈದ್-ಉಲ್-ಅದ್ಹಾ) ಹಬ್ಬ ಹತ್ತಿರ ಬರುತ್ತಿದ್ದಂತೆ, ಪಶ್ಚಿಮ ಬಂಗಾಳದಲ್ಲಿ ಗೋ ಹತ್ಯೆ ನಿಯಂತ್ರಣ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುತ್ತಿರುವುದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಈ ಆಕ್ರೋಶ ಕೇವಲ ಧಾರ್ಮಿಕ ಕಾರಣಗಳಿಗಷ್ಟೇ ಸೀಮಿತವಾಗಿಲ್ಲ, ಬದಲಿಗೆ ವ್ಯಾಪಾರಿಗಳು,...

ಪ.ಬಂಗಾಳ: ಮಮತಾ ಸರ್ಕಾರ ಜಾರಿ ಮಾಡಿದ್ದ OBC ಮೀಸಲಾತಿಯನ್ನು ಕಿತ್ತೆಸೆದ ಸುವೇಂದು ನೇತೃತ್ವದ ಬಿಜೆಪಿ ಸರ್ಕಾರ

ಪಶ್ಚಿಮ ಬಂಗಾಳದ ಒಬಿಸಿ (ಇತರ ಹಿಂದುಳಿದ ವರ್ಗಗಳು) ಪಟ್ಟಿಯಲ್ಲಿದ್ದ ಮುಸ್ಲಿಂ ಸಮುದಾಯಗಳನ್ನು ಕೈಬಿಡುವ ಮೂಲಕ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರವು ಭಾರಿ ರಾಜಕೀಯ ಸಂಚಲನ ಸೃಷ್ಟಿಸಿದೆ. ಈ ಹಿಂದೆ...

ಸಾಮಾಜಿಕ ಹೋರಾಟಗಾರ ‘ಫರಿದುಲ್ ಇಸ್ಲಾಂ’ರನ್ನು ಸುಳ್ಳು ಪ್ರಕರಣದಲ್ಲಿ ಬಂಧಿಸಿದ ಕೋಲ್ಕತ್ತಾ ಪೊಲೀಸರು

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಇನ್ನು ಹತ್ತು ದಿನಗಳು ಕಳೆಯುವಷ್ಟರಲ್ಲೇ, ಸರ್ಕಾರದ ಆಡಳಿತವನ್ನು ಪ್ರಶ್ನಿಸುವವರ ಹಾಗೂ ಹೋರಾಟಗಾರರ ಧ್ವನಿಯನ್ನು ಹತ್ತಿಕ್ಕುವ ಕೆಲಸ ಆರಂಭವಾಗಿದೆ ಎಂಬ...

ಉಪ್ಪಿನಂಗಡಿ: ಸೂರ್ಯ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯ, ಚಿಕಿತ್ಸೆಗೆಂದು ತೆರಳಿ ಶವವಾಗಿ ಮರಳಿದ ಬೀದಿಬದಿ ವ್ಯಾಪಾರಿ!

ಖಾಸಗಿ ಆಸ್ಪತ್ರೆಗಳ ಹಣದ ದಾಹ ಮತ್ತು ವೈದ್ಯಕೀಯ ಸಿಬ್ಬಂದಿಯ ಘೋರ ನಿರ್ಲಕ್ಷ್ಯಕ್ಕೆ ಮತ್ತೊಂದು ಬಡ ಜೀವ ಬಲಿಯಾಗಿದೆ. ಉಪ್ಪಿನಂಗಡಿಯ ಸೂರ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದ ಮೊಹಮ್ಮದ್ ಶರೀಫ್ (35) ಎಂಬ ಬೀದಿ ಬದಿ...

ಬಿಸಿಲಿನ ಬೆಂಕಿಗೆ ‘ಎಲ್ ನಿನೊ’ ತುಪ್ಪ: 2026ರ ಮುಂಗಾರು ಕಥೆ ಏನು?

ದೇಶಾದ್ಯಂತ ತಾಪಮಾನ ದಿನೇ ದಿನೇ ಏರುತ್ತಿದ್ದು, ಭೀಕರ ಶಾಖದ ಅಲೆಗಳಿಗೆ (Heatwaves) ಜನ ತತ್ತರಿಸಿ ಹೋಗಿದ್ದಾರೆ. ಈ ಹೊತ್ತಿನಲ್ಲಿ ಎಲ್ಲರ ಕಣ್ಣುಗಳು ಸಾವಿರಾರು ಕಿಲೋಮೀಟರ್ ದೂರದ ಪೆಸಿಫಿಕ್ ಮಹಾಸಾಗರದಲ್ಲಿ ಸಂಭವಿಸುತ್ತಿರುವ ಹವಾಮಾನ ಬದಲಾವಣೆಯ...

ಸುಮಾರು 1 ಲಕ್ಷ ಶಾಲೆಗಳಲ್ಲಿ ಬಾಲಕಿಯರಿಗೆ ಶೌಚಾಲಯವಿಲ್ಲ, 61,000 ಶಾಲೆಗಳಲ್ಲಿ ಕ್ರಿಯಾತ್ಮಕ ಶೌಚಾಲಯಗಳಿಲ್ಲ: ನೀತಿ ಆಯೋಗ

ಶಿಕ್ಷಣವು ಒಂದು ದೇಶದ ಅಭಿವೃದ್ಧಿಯ ಬೆನ್ನೆಲುಬು ಅಂತಲೇ ಹೇಳಲಾಗುತ್ತದೆ. ಆದರೆ, ಭಾರತದ ಶಾಲಾ ಶಿಕ್ಷಣದ ಮೂಲಭೂತ ಸೌಕರ್ಯಗಳು ಮತ್ತು ವ್ಯವಸ್ಥೆಯ ಕುರಿತಾಗಿ ನೀತಿ ಆಯೋಗ ಹಾಗೂ ಯುಡಿಐಎಸ್ಇ+ (UDISE+ 2024–25) ಇತ್ತೀಚೆಗೆ ಬಿಡುಗಡೆ...