Homeಮುಖಪುಟ2020ರಿಂದ ಮಾದಕ ದ್ರವ್ಯ ಸೇವನೆ, ಕಳ್ಳಸಾಗಣೆ ಹೆಚ್ಚಳ: ಎನ್‌ಸಿಬಿ ಕಳವಳ

2020ರಿಂದ ಮಾದಕ ದ್ರವ್ಯ ಸೇವನೆ, ಕಳ್ಳಸಾಗಣೆ ಹೆಚ್ಚಳ: ಎನ್‌ಸಿಬಿ ಕಳವಳ

- Advertisement -
- Advertisement -

ಶನಿವಾರ ಮಾದಕದ್ರವ್ಯ ರಹಿತ ದಿನ  ಆಚರಿಸಲಾಗಿತು. ಈ ಸಂದರ್ಭದಲ್ಲಿ ರಾಷ್ಟ್ರೀಯ ಮಾದಕದ್ರವ್ಯ ನಿಯಂತ್ರಂಣ ಮಂಡಳಿ (ಎನ್‍ಸಿಬಿ) ನೀಡಿದ ವರದಿ ಪ್ರಕಾರ, 2020ರಿಂದ ಮಾದಕ ದ್ರವ್ಯ ಸೇವನೆ, ಕಳ್ಳಸಾಗಣೆ ಅನೇಕ ಪಟ್ಟು ಹೆಚ್ಚಾಗಿದೆ ಎಂದು ಹಿಂದೂಸ್ತಾನ್‍ ಟೈಮ್ಸ್  ವರದಿ ಮಾಡಿತ್ತು.

ಅರೆ, ಕೋವಿಡ್‍ ಸಂದರ್ಭಕ್ಕೂ ಇದಕ್ಕೂ ಲಿಂಕ್‍ ಇರಬಹುದಾ? ಎಲ್ಲ ಸ್ಥಗಿತವಾಗಿರುವಾಗ ಇದೆಲ್ಲ ಹೇಗೆ ಸಾಧ್ಯವಾಗಿತು? ಕಳೆದ ವರ್ಷ ಭಾರಿ ಸುದ್ದಿ ಮಾಡಿದ ಬಾಲಿವುಡ್‍ ಮತ್ತು ನಮ್ಮ ಕನ್ನಡ ಚಿತ್ರರಂಗದ ಕೆಲವರ ಡ್ರಗ್ಸ್ ಸುದ್ದಿಗಳು ಇದಕ್ಕೆ ಪೂರಕವಾಗಿವೆಯೇ? ಅದಕ್ಕೂ ಮುಖ್ಯವಾಗಿ ಈ ಎನ್‍ಸಿಬಿ, ಆಗೆಲ್ಲ ದೊಡ್ಡ ಹವಾ ಮಾಡಿ ಈಗೇಕೆ ತಣ್ಣಗಾಗಿದೆ?- ಈ ಎಲ್ಲ ಪ್ರಶ್ನೆಗಳಿಗೆ ಸುಲಭ ಉತ್ತರವಿಲ್ಲ ಅನಿಸುತ್ತದೆ.

ಅದಿರಲಿ, 2020-21ನೆ ಸಾಲಿನಲ್ಲಿ ಕರ್ನಾಟಕದಲ್ಲಿ 50 ಕೋಟಿ ರೂ. ಮೌಲ್ಯದ ಮಾದಕ ವಸ್ತು ವಶಪಡಿಸಿಕೊಂಡು ನಾಶ ಮಾಡಲಾಗಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಶನಿವಾರ ತಿಳಿಸಿದ್ದಾರೆ. ಪೊಲೀಸರಿಗೆ ಸಿಕ್ಕಿದ್ದು 50 ಕೋಟಿ ರೂ. ಮೌಲ್ಯದ ಡ್ರಗ್ಸ್ ಎಂದಾದರೆ, ಸಿಗದೇ ಇರುವುದು ಎಷ್ಟು ಪಟ್ಟು ಇರಬಹುದು?

ಶನಿವಾರ ಮಾದಕದ್ರವ್ಯ ರಹಿತ ದಿನದ ಅಂಗವಾಗಿ ಎಲ್ಲ ಜಿಲ್ಲೆಯ ಪೊಲೀಸರು ಎಸ್‍ಪಿ ನೇತೃತ್ವದಲ್ಲಿ, ಸೀಜ್‍ ಮಾಡಿದ ಮಾದಕ ದ್ರವ್ಯಗಳನ್ನು ಸುಟ್ಟು ಹಾಕಿದರು.

ಪುಟ್ಟ ಗದಗ ಜಿಲ್ಲೆಯಲ್ಲಿ 7.18 ಲಕ್ಷ ರೂ ಮೊತ್ತದ ಗಾಂಜಾವನ್ನು ಸುಟ್ಟು ನಾಶ ಪಡಿಸಿದರು. ಇದು ಒಂದು ವರ್ಷದ ಸಾಮಾಗ್ರಿ ಅಥವಾ ಜನೆವರಿಯಿಂದ ಸೀಜ್‍ ಮಾಡಿದ ಸಾಮಾಗ್ರಿ ಎಂಬುದು ಸ್ಪಷ್ಟವಿಲ್ಲ.

ಕಳೆದ ವರ್ಷ ಕನ್ನಡ ಚಿತ್ರರಂಗದ ಕೆಲವರು ಡ್ರಗ್ಸ್ ಜಾಲದಲ್ಲಿ ಸಿಕ್ಕಿ ಬಿದ್ದಾಗ, ಗೃಹ ಸಚಿವ ಬೊಮ್ಮಾಯಿ ಎಲ್ಲ ಎಸ್‍ಪಿಗಳಿಗೆ ಈ ಜಾಲ ಮೆಟ್ಟಿ ಹಾಕಲು ನಿರ್ದೇಶನ ನೀಡಿದರು.

ಆಗ ಏನಾಯಿತು? ದಿನವೂ ಗಾಂಜಾ ಮಾರುತ್ತಿದ್ದವನ ಬಂಧನ ಎಂಬ ಸುದ್ದಿಗಳು ಹರಿದಾಡಿದವು. ಒಬ್ಬ ವ್ಯಕ್ತಿಯಿಂದ 70 ಗ್ರಾಂ ಗಾಂಜಾ ವಶ ಮಾಡಿಕೊಂಡು, ಆತನಿಂದ 1,147 ರೂ. ವಶಪಡಿಸಿಕೊಳ್ಳಲಾಗಿದೆ’ ಎಂಬ ಎಫ್‍ಐಆರ್‌ಗಳು ಬಿಡುಗಡೆ ಆಗುತ್ತಿದ್ದವು.

ಆದರೆ ಇದರ ಮೂಲಗಳು ಪೊಲೀಸರಿಗೆ ಗೊತ್ತೇ ಇಲ್ಲವೇ? ಗುಡಿ ಹತ್ತಿರ ನಿಂತು ಮಾರಲು ಆತನೇನು ಮೂರ್ಖನೇ? ಯಾವುದೋ ಮನೆ ಅಥವಾ ಅಂಗಡಿಯಲ್ಲಿ ಕುಳಿತೇ ಮಾರಿರುತ್ತಾನೆ ಅಲ್ಲವೇ? ಆತನ ಗಿರಾಕಿಗಳು ಕೂಡ ದಾರಿ ಮಧ್ಯೆ ಗುಡಿ ಪಕ್ಕ ಗಾಂಜಾ ಖರೀದಿಸುತ್ತಾರೆಯೇ? ಈ ಪ್ರಶ್ನೆಗಳು ಆಗ ಜನರನ್ನು ಕಾಡಿಸುತ್ತಿದ್ದವು.

ಯಾವಾಗ ಜಾರಕಿಹೊಳಿ ಕೇಸು ಮುನ್ನೆಲೆಗೆ ಬಂದಿತೋ ಆಗ ಡ್ರಗ್ಸ್ ವಿಷಯ ಹಿನ್ನಲೆಗೆ ಸರಿಯಿತು. ಹಾಗೆಯೇ ಬಿಹಾರ ಚುನಾವಣೆ ಮುಗಿದ ನಂತರ ಬಾಲಿವುಡ್‍ ನಟ ಸುಶಾಂತ್‍  ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ನಡೆದಿದ್ದ ಡ್ರಗ್ಸ್ ತನಿಖೆಯೂ ಹಿನ್ನೆಲೆಗೆ ಸರಿಯಿತು.

ಆ ನಂತರ ‘ಗುಡಿ ಹತ್ತಿರವೋ ಅಥವಾ ರಸ್ತೆಯಲ್ಲೋ ನಿಂತು’ ಗಾಂಜಾ ಮಾರುವವರ ಎಫ್‍ಐಆರ್‌ಗಳು ಕಾಣದಾದವು!

ದೇಶದ ಸ್ಥಿತಿ ಏನು?

ಈ ವರ್ಷ ಇನ್ನೂ ಆರು ತಿಂಗಳುಗಳು ಬಾಕಿ ಇರುವಾಗ, ಎನ್‌ಸಿಬಿ ಈಗಾಗಲೇ 4.82 ಟನ್ ಗಾಂಜಾ, 5.25 ಕೆಜಿ ಅಫೀಮು, 48.8 ಕೆಜಿ ಚರಸ್‍ಗಳನ್ನು ವಶಪಡಿಸಿಕೊಂಡಿದೆ.

ಕೋವಿಡ್‍ ಸಾಂಕ್ರಾಮಿಕದ ಸಂದರ್ಭದಲ್ಲೂ ಮಾದಕ ದ್ರವ್ಯ ಮತ್ತು ಕಳ್ಳಸಾಗಣೆ 2020ರಿಂದ ಅನೇಕ ಪಟ್ಟು ಹೆಚ್ಚಾಗಿದೆ ಮತ್ತು ಇದು ವಿವಿಧ ಮಾದಕವಸ್ತು ನಿಯಂತ್ರಣ ಜಾರಿ ಸಂಸ್ಥೆಗಳ ಚಟುವಟಿಕೆಗಳಿಂದ ಸ್ಪಷ್ಟವಾಗಿದೆ ಎನ್ನಲಾಗಿದೆ.

ಈ ವರ್ಷದ ದಿನಾಚರಣೆಯ ಸಂದರ್ಭದಲ್ಲಿ ‘ಮಾದಕವಸ್ತುಗಳ ಬಗ್ಗೆ ಸತ್ಯಗಳನ್ನು ಹಂಚಿಕೊಳ್ಳಿ, ಜೀವಗಳನ್ನು ಉಳಿಸಿ’ ಎಂದು ವಿಶ್ವಸಂಸ್ಥೆಯು ತಿಳಿಸಿದೆ.

ಆದರೆ, ಪೊಲೀಸರು ಮತ್ತು ಮಾದಕದ್ರವ್ಯಗಳ ತಡೆಗೆ ಸಂಬಂಧಪಟ್ಟ ಇಲಾಖೆಗಳು ಸತ್ಯವನ್ನು ಹಂಚಿಕೊಳ್ಳುತ್ತವಾ? ಜನರಿಗೆ ನಂಬಿಕೆಯಿಲ್ಲ!

  • ಪಿ.ಕೆ ಮಲ್ಲನಗೌಡರ್

ಇದನ್ನೂ ಓದಿ: ಹರಿದ ಜೀನ್ಸ್ ಧರಿಸುವುದು ಮಾದಕ ವಸ್ತು ಸೇವನೆಗೂ ಕಾರಣವಾಗುತ್ತದೆ- ಉತ್ತರಾಖಂಡ ಸಿಎಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...