Homeಮುಖಪುಟ2020ರಿಂದ ಮಾದಕ ದ್ರವ್ಯ ಸೇವನೆ, ಕಳ್ಳಸಾಗಣೆ ಹೆಚ್ಚಳ: ಎನ್‌ಸಿಬಿ ಕಳವಳ

2020ರಿಂದ ಮಾದಕ ದ್ರವ್ಯ ಸೇವನೆ, ಕಳ್ಳಸಾಗಣೆ ಹೆಚ್ಚಳ: ಎನ್‌ಸಿಬಿ ಕಳವಳ

- Advertisement -
- Advertisement -

ಶನಿವಾರ ಮಾದಕದ್ರವ್ಯ ರಹಿತ ದಿನ  ಆಚರಿಸಲಾಗಿತು. ಈ ಸಂದರ್ಭದಲ್ಲಿ ರಾಷ್ಟ್ರೀಯ ಮಾದಕದ್ರವ್ಯ ನಿಯಂತ್ರಂಣ ಮಂಡಳಿ (ಎನ್‍ಸಿಬಿ) ನೀಡಿದ ವರದಿ ಪ್ರಕಾರ, 2020ರಿಂದ ಮಾದಕ ದ್ರವ್ಯ ಸೇವನೆ, ಕಳ್ಳಸಾಗಣೆ ಅನೇಕ ಪಟ್ಟು ಹೆಚ್ಚಾಗಿದೆ ಎಂದು ಹಿಂದೂಸ್ತಾನ್‍ ಟೈಮ್ಸ್  ವರದಿ ಮಾಡಿತ್ತು.

ಅರೆ, ಕೋವಿಡ್‍ ಸಂದರ್ಭಕ್ಕೂ ಇದಕ್ಕೂ ಲಿಂಕ್‍ ಇರಬಹುದಾ? ಎಲ್ಲ ಸ್ಥಗಿತವಾಗಿರುವಾಗ ಇದೆಲ್ಲ ಹೇಗೆ ಸಾಧ್ಯವಾಗಿತು? ಕಳೆದ ವರ್ಷ ಭಾರಿ ಸುದ್ದಿ ಮಾಡಿದ ಬಾಲಿವುಡ್‍ ಮತ್ತು ನಮ್ಮ ಕನ್ನಡ ಚಿತ್ರರಂಗದ ಕೆಲವರ ಡ್ರಗ್ಸ್ ಸುದ್ದಿಗಳು ಇದಕ್ಕೆ ಪೂರಕವಾಗಿವೆಯೇ? ಅದಕ್ಕೂ ಮುಖ್ಯವಾಗಿ ಈ ಎನ್‍ಸಿಬಿ, ಆಗೆಲ್ಲ ದೊಡ್ಡ ಹವಾ ಮಾಡಿ ಈಗೇಕೆ ತಣ್ಣಗಾಗಿದೆ?- ಈ ಎಲ್ಲ ಪ್ರಶ್ನೆಗಳಿಗೆ ಸುಲಭ ಉತ್ತರವಿಲ್ಲ ಅನಿಸುತ್ತದೆ.

ಅದಿರಲಿ, 2020-21ನೆ ಸಾಲಿನಲ್ಲಿ ಕರ್ನಾಟಕದಲ್ಲಿ 50 ಕೋಟಿ ರೂ. ಮೌಲ್ಯದ ಮಾದಕ ವಸ್ತು ವಶಪಡಿಸಿಕೊಂಡು ನಾಶ ಮಾಡಲಾಗಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಶನಿವಾರ ತಿಳಿಸಿದ್ದಾರೆ. ಪೊಲೀಸರಿಗೆ ಸಿಕ್ಕಿದ್ದು 50 ಕೋಟಿ ರೂ. ಮೌಲ್ಯದ ಡ್ರಗ್ಸ್ ಎಂದಾದರೆ, ಸಿಗದೇ ಇರುವುದು ಎಷ್ಟು ಪಟ್ಟು ಇರಬಹುದು?

ಶನಿವಾರ ಮಾದಕದ್ರವ್ಯ ರಹಿತ ದಿನದ ಅಂಗವಾಗಿ ಎಲ್ಲ ಜಿಲ್ಲೆಯ ಪೊಲೀಸರು ಎಸ್‍ಪಿ ನೇತೃತ್ವದಲ್ಲಿ, ಸೀಜ್‍ ಮಾಡಿದ ಮಾದಕ ದ್ರವ್ಯಗಳನ್ನು ಸುಟ್ಟು ಹಾಕಿದರು.

ಪುಟ್ಟ ಗದಗ ಜಿಲ್ಲೆಯಲ್ಲಿ 7.18 ಲಕ್ಷ ರೂ ಮೊತ್ತದ ಗಾಂಜಾವನ್ನು ಸುಟ್ಟು ನಾಶ ಪಡಿಸಿದರು. ಇದು ಒಂದು ವರ್ಷದ ಸಾಮಾಗ್ರಿ ಅಥವಾ ಜನೆವರಿಯಿಂದ ಸೀಜ್‍ ಮಾಡಿದ ಸಾಮಾಗ್ರಿ ಎಂಬುದು ಸ್ಪಷ್ಟವಿಲ್ಲ.

ಕಳೆದ ವರ್ಷ ಕನ್ನಡ ಚಿತ್ರರಂಗದ ಕೆಲವರು ಡ್ರಗ್ಸ್ ಜಾಲದಲ್ಲಿ ಸಿಕ್ಕಿ ಬಿದ್ದಾಗ, ಗೃಹ ಸಚಿವ ಬೊಮ್ಮಾಯಿ ಎಲ್ಲ ಎಸ್‍ಪಿಗಳಿಗೆ ಈ ಜಾಲ ಮೆಟ್ಟಿ ಹಾಕಲು ನಿರ್ದೇಶನ ನೀಡಿದರು.

ಆಗ ಏನಾಯಿತು? ದಿನವೂ ಗಾಂಜಾ ಮಾರುತ್ತಿದ್ದವನ ಬಂಧನ ಎಂಬ ಸುದ್ದಿಗಳು ಹರಿದಾಡಿದವು. ಒಬ್ಬ ವ್ಯಕ್ತಿಯಿಂದ 70 ಗ್ರಾಂ ಗಾಂಜಾ ವಶ ಮಾಡಿಕೊಂಡು, ಆತನಿಂದ 1,147 ರೂ. ವಶಪಡಿಸಿಕೊಳ್ಳಲಾಗಿದೆ’ ಎಂಬ ಎಫ್‍ಐಆರ್‌ಗಳು ಬಿಡುಗಡೆ ಆಗುತ್ತಿದ್ದವು.

ಆದರೆ ಇದರ ಮೂಲಗಳು ಪೊಲೀಸರಿಗೆ ಗೊತ್ತೇ ಇಲ್ಲವೇ? ಗುಡಿ ಹತ್ತಿರ ನಿಂತು ಮಾರಲು ಆತನೇನು ಮೂರ್ಖನೇ? ಯಾವುದೋ ಮನೆ ಅಥವಾ ಅಂಗಡಿಯಲ್ಲಿ ಕುಳಿತೇ ಮಾರಿರುತ್ತಾನೆ ಅಲ್ಲವೇ? ಆತನ ಗಿರಾಕಿಗಳು ಕೂಡ ದಾರಿ ಮಧ್ಯೆ ಗುಡಿ ಪಕ್ಕ ಗಾಂಜಾ ಖರೀದಿಸುತ್ತಾರೆಯೇ? ಈ ಪ್ರಶ್ನೆಗಳು ಆಗ ಜನರನ್ನು ಕಾಡಿಸುತ್ತಿದ್ದವು.

ಯಾವಾಗ ಜಾರಕಿಹೊಳಿ ಕೇಸು ಮುನ್ನೆಲೆಗೆ ಬಂದಿತೋ ಆಗ ಡ್ರಗ್ಸ್ ವಿಷಯ ಹಿನ್ನಲೆಗೆ ಸರಿಯಿತು. ಹಾಗೆಯೇ ಬಿಹಾರ ಚುನಾವಣೆ ಮುಗಿದ ನಂತರ ಬಾಲಿವುಡ್‍ ನಟ ಸುಶಾಂತ್‍  ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ನಡೆದಿದ್ದ ಡ್ರಗ್ಸ್ ತನಿಖೆಯೂ ಹಿನ್ನೆಲೆಗೆ ಸರಿಯಿತು.

ಆ ನಂತರ ‘ಗುಡಿ ಹತ್ತಿರವೋ ಅಥವಾ ರಸ್ತೆಯಲ್ಲೋ ನಿಂತು’ ಗಾಂಜಾ ಮಾರುವವರ ಎಫ್‍ಐಆರ್‌ಗಳು ಕಾಣದಾದವು!

ದೇಶದ ಸ್ಥಿತಿ ಏನು?

ಈ ವರ್ಷ ಇನ್ನೂ ಆರು ತಿಂಗಳುಗಳು ಬಾಕಿ ಇರುವಾಗ, ಎನ್‌ಸಿಬಿ ಈಗಾಗಲೇ 4.82 ಟನ್ ಗಾಂಜಾ, 5.25 ಕೆಜಿ ಅಫೀಮು, 48.8 ಕೆಜಿ ಚರಸ್‍ಗಳನ್ನು ವಶಪಡಿಸಿಕೊಂಡಿದೆ.

ಕೋವಿಡ್‍ ಸಾಂಕ್ರಾಮಿಕದ ಸಂದರ್ಭದಲ್ಲೂ ಮಾದಕ ದ್ರವ್ಯ ಮತ್ತು ಕಳ್ಳಸಾಗಣೆ 2020ರಿಂದ ಅನೇಕ ಪಟ್ಟು ಹೆಚ್ಚಾಗಿದೆ ಮತ್ತು ಇದು ವಿವಿಧ ಮಾದಕವಸ್ತು ನಿಯಂತ್ರಣ ಜಾರಿ ಸಂಸ್ಥೆಗಳ ಚಟುವಟಿಕೆಗಳಿಂದ ಸ್ಪಷ್ಟವಾಗಿದೆ ಎನ್ನಲಾಗಿದೆ.

ಈ ವರ್ಷದ ದಿನಾಚರಣೆಯ ಸಂದರ್ಭದಲ್ಲಿ ‘ಮಾದಕವಸ್ತುಗಳ ಬಗ್ಗೆ ಸತ್ಯಗಳನ್ನು ಹಂಚಿಕೊಳ್ಳಿ, ಜೀವಗಳನ್ನು ಉಳಿಸಿ’ ಎಂದು ವಿಶ್ವಸಂಸ್ಥೆಯು ತಿಳಿಸಿದೆ.

ಆದರೆ, ಪೊಲೀಸರು ಮತ್ತು ಮಾದಕದ್ರವ್ಯಗಳ ತಡೆಗೆ ಸಂಬಂಧಪಟ್ಟ ಇಲಾಖೆಗಳು ಸತ್ಯವನ್ನು ಹಂಚಿಕೊಳ್ಳುತ್ತವಾ? ಜನರಿಗೆ ನಂಬಿಕೆಯಿಲ್ಲ!

  • ಪಿ.ಕೆ ಮಲ್ಲನಗೌಡರ್

ಇದನ್ನೂ ಓದಿ: ಹರಿದ ಜೀನ್ಸ್ ಧರಿಸುವುದು ಮಾದಕ ವಸ್ತು ಸೇವನೆಗೂ ಕಾರಣವಾಗುತ್ತದೆ- ಉತ್ತರಾಖಂಡ ಸಿಎಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಬಳಿಕ ಒಡಿಶಾದ ಕರಡು ಮತದಾರರ ಪಟ್ಟಿ ಪ್ರಕಟ : 20 ಲಕ್ಷ ಹೆಸರುಗಳು ಡಿಲೀಟ್

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಗಣತಿ ಹಂತದ ಬಳಿಕ ಚುನಾವಣಾ ಆಯೋಗ ಭಾನುವಾರ (ಜು.5) ಒಡಿಶಾದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ 20 ಲಕ್ಷಕ್ಕೂ ಹೆಚ್ಚು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...

SIR: ಟಾರ್ಗೆಟ್ ಮತ್ತು ಒತ್ತಡದ ಕೆಲಸದಿಂದ ಮೂವರು ಸಿಬ್ಬಂದಿ ಸಾವು

ಕರ್ನಾಟಕದಲ್ಲಿ ನಡೆಯುತ್ತಿರುವ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯು ಕೆಳಹಂತದ ನೌಕರರ ಪಾಲಿಗೆ ಮರಣಶಾಸನವಾಗುತ್ತಿದೆಯೇ ಎಂಬ ಗಂಭೀರ ಪ್ರಶ್ನೆಯೊಂದು ಎದ್ದಿದೆ. ಅಧಿಕಾರಿಗಳು ನೀಡುತ್ತಿರುವ ಅತಿಯಾದ ಒತ್ತಡ ಮತ್ತು ಟಾರ್ಗೆಟ್ ಬೆನ್ನತ್ತುವ ಧಾವಂತದಿಂದಾಗಿ...

ಖಮೇನಿ ಅಂತ್ಯಕ್ರಿಯೆ ವೇಳೆ ಟ್ರಂಪ್ ಉದ್ಧಟತನದ ಹೇಳಿಕೆ: “ಇತಿಹಾಸ, ಗೌರವವಿಲ್ಲದ ದೇಶ ಅಮೆರಿಕ” ಎಂದು ಇರಾನ್ ತೀಕ್ಷ್ಣ ತಿರುಗೇಟು

ಟೆಹ್ರಾನ್: ಇರಾನ್‌ನ ಮಾಜಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ನಿಧನದ ನಂತರ ಜಾಗತಿಕ ರಾಜತಾಂತ್ರಿಕ ವಲಯದಲ್ಲಿ ಭಾರೀ ವಾಕ್ಸಮರ ಉಂಟಾಗಿದೆ. ಖಮೇನಿ ಅವರ ಅಂತ್ಯಕ್ರಿಯೆಯ ಸಂದರ್ಭದಲ್ಲಿ ಒಟ್ಟುಗೂಡಿರುವ ಇರಾನ್‌ನ ಇಡೀ...

ಮ್ಯಾಚ್ ಮಧ್ಯೆ ಕಾಂಡೊಮ್ ಜಾಹೀರಾತು: ಬಿಸಿಸಿಐ ವಿರುದ್ಧ ಕಿಡಿಕಾರಿದ ಮಾಜಿ ಕ್ರಿಕೆಟಿಗ, TMC ಸಂಸದ ಕೀರ್ತಿ ಆಜಾದ್

ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫರ್ಡ್‌ನಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ20 ಅಂತರರಾಷ್ಟ್ರೀಯ ಪಂದ್ಯದ ನೇರ ಪ್ರಸಾರದ ವೇಳೆ ಕಾಂಡೊಮ್ ಜಾಹೀರಾತುಗಳನ್ನು ಪ್ರಸಾರ ಮಾಡಿದ್ದನ್ನು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಮತ್ತು ಮಾಜಿ...

ಒಂದೇ ಒಂದು ಇಟ್ಟಿಗೆ ಇಟ್ಟಿಲ್ಲ : ಕಳೆದ ಆರು ವರ್ಷಗಳಿಂದ ಕಾಗದದ ಮೇಲೆಯೇ ಕಾರ್ಯ ನಿರ್ವಹಿಸುತ್ತಿರುವ 100 ಹಾಸಿಗೆಗಳ ಆಸ್ಪತ್ರೆ!

ಮಧ್ಯ ಪ್ರದೇಶದ ಇಂದೋರ್‌ನ ಖಜರಾನಾದಲ್ಲಿ ಮಂಜೂರಾದ 100 ಹಾಸಿಗೆಗಳ ಸಿವಿಲ್ ಆಸ್ಪತ್ರೆಯು ಕಳೆದ 6 ವರ್ಷಗಳಿಂದ ಕೇವಲ ಕಾಗದದ ಮೇಲಷ್ಟೇ (ದಾಖಲೆಗಳಲ್ಲಿ) ಅಸ್ತಿತ್ವದಲ್ಲಿರುವುದು ವರದಿಯಾಗಿದೆ. ಈ ವಿಲಕ್ಷಣ ಮತ್ತು ಆಘಾತಕಾರಿ ಆಡಳಿತಾತ್ಮಕ ವೈಫಲ್ಯದ ಪ್ರಕರಣವು...

ವೋಟ್‌ಯಿಂದ ಹಿಡಿದು ಮಂದಿರದ ಚಂದಾದವರೆಗೆ ಬಿಜೆಪಿಯದ್ದು ಬರೀ ‘ಚೋರಿ’ ಎಂದ ಕಾಂಗ್ರೆಸ್

ಅಯೋಧ್ಯೆಯ ರಾಮ ಮಂದಿರದಲ್ಲಿ ನಡೆದಿದೆ ಎನ್ನಲಾದ ದೇಣಿಗೆ ದುರುಪಯೋಗದ ವಿಚಾರವಾಗಿ ಭಾನುವಾರ ಕಾಂಗ್ರೆಸ್ ಪಕ್ಷವು ಬಿಜೆಪಿ-ಆರ್‌ಎಸ್‌ಎಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ. ಇದು ಅವರದೇ ಆದ ಇಕೋ ಸಿಸ್ಟಮ್‌ನ ದೊಡ್ಡ "ಹಗರಣ"ವಾಗಿದ್ದು, ಈ...

ಮುಸ್ಲಿಮರನ್ನು ಮಾದಕ ದ್ರವ್ಯ, ಭಯೋತ್ಪಾದನೆಗೆ ಲಿಂಕ್ ಮಾಡಿ ಪೋಸ್ಟ್: ಕೇರಳ ಹಿಂದೂ ಐಕ್ಯ ವೇದಿಕೆ ಮುಖ್ಯಸ್ಥ ಆರ್‌ವಿ ಬಾಬು ವಿರುದ್ಧ ಪ್ರಕರಣ ದಾಖಲು

ಕೊಚ್ಚಿ: ಮುಸ್ಲಿಂ ಸಮುದಾಯ ಮತ್ತು ಅದರ ಧಾರ್ಮಿಕ ಮುಖಂಡರನ್ನು ಗುರಿಯಾಗಿಸಿಕೊಂಡು ಸಾಮಾಜಿಕ ಮಾಧ್ಯಮದಲ್ಲಿ ಆಕ್ಷೇಪಾರ್ಹ ಹಾಗೂ ಕೋಮು ಪ್ರಚೋದನಾತ್ಮಕ ಪೋಸ್ಟ್ ಹಂಚಿಕೊಂಡಿದ್ದಕ್ಕಾಗಿ ಕೇರಳದ ಹಿಂದೂ ಐಕ್ಯ ವೇದಿಕೆಯ ರಾಜ್ಯ ಅಧ್ಯಕ್ಷ ಆರ್.ವಿ. ಬಾಬು...

ಇರಾನ್ ಜನರು ಅವರನ್ನು ದ್ವೇಷಿಸುತ್ತಾರೆ ಅಂದುಕೊಂಡಿದ್ದೆ: ಖಮೇನಿ ಅಂತ್ಯಕ್ರಿಯೆಯ ಜನಸಾಗರ ನೋಡಿ ಶಾಕ್ ಆದ ಟ್ರಂಪ್

ಇರಾನ್‌ನ ಮಾಜಿ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಅಂತ್ಯಕ್ರಿಯೆಯಲ್ಲಿ ಲಕ್ಷಾಂತರ ಜನರು ಭಾಗವಹಿಸಿ ಕಣ್ಣೀರು ಹಾಕುತ್ತಿರುವುದನ್ನು ನೋಡಿ ತಮಗೆ ತೀವ್ರ ಆಘಾತವಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ....

‘ನಿಮ್ಮ ಮೌನ ಯುವಜನರನ್ನು ಕೇವಲ ಕೀಟಗಳಂತೆ ನೋಡುತ್ತೀರಿ ಎಂಬುದಕ್ಕೆ ಒಪ್ಪಿಗೆಯಾಗಿದೆ’: ಮೋದಿಗೆ ಬಹಿರಂಗ ಪತ್ರ ಬರೆದ ಸಿಜೆಪಿ

"ಈ ದೇಶದ ಯುವಜನರನ್ನು ನೀವು ಕೇವಲ ನಿರ್ಲಕ್ಷಿಸಬೇಕಾದ ಕೀಟಗಳಂತೆ ನೋಡುತ್ತಿದ್ದೀರಾ?" ಎಂದು ಪ್ರಶ್ನಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಪ್ರಧಾನಿ ನರೇಂದ್ರ ಮೋದಿ ಅವರಿಗೆ ಶನಿವಾರ (ಜುಲೈ 4) ಬಹಿರಂಗ ಪತ್ರ ಬರೆದಿದೆ. ದೇಶದ...

ಮಮತಾ ಬ್ಯಾನರ್ಜಿಗೆ ಬಿಗ್ ಶಾಕ್: ನೇಮಕಗೊಂಡ ತಿಂಗಳಲ್ಲೇ ಟಿಎಂಸಿ ರಾಜ್ಯಾಧ್ಯಕ್ಷೆ ಚಂದ್ರಿಮಾ ಭಟ್ಟಾಚಾರ್ಯ ರಾಜೀನಾಮೆ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಹೀನಾಯ ಸೋಲಿನ ಹಿನ್ನೆಲೆಯಲ್ಲಿ, ಅತ್ಯಂತ ನಿರ್ಣಾಯಕವಾದ ಸಾಂಸ್ಥಿಕ ಜವಾಬ್ದಾರಿಗೆ ನೇಮಕಗೊಂಡ ಕೇವಲ ಒಂದು ತಿಂಗಳ ಒಳಗಾಗಿಯೇ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ರಾಜ್ಯ ಘಟಕದ ಅಧ್ಯಕ್ಷೆ ಚಂದ್ರಿಮಾ...