Homeಮುಖಪುಟ2020ರಿಂದ ಮಾದಕ ದ್ರವ್ಯ ಸೇವನೆ, ಕಳ್ಳಸಾಗಣೆ ಹೆಚ್ಚಳ: ಎನ್‌ಸಿಬಿ ಕಳವಳ

2020ರಿಂದ ಮಾದಕ ದ್ರವ್ಯ ಸೇವನೆ, ಕಳ್ಳಸಾಗಣೆ ಹೆಚ್ಚಳ: ಎನ್‌ಸಿಬಿ ಕಳವಳ

- Advertisement -
- Advertisement -

ಶನಿವಾರ ಮಾದಕದ್ರವ್ಯ ರಹಿತ ದಿನ  ಆಚರಿಸಲಾಗಿತು. ಈ ಸಂದರ್ಭದಲ್ಲಿ ರಾಷ್ಟ್ರೀಯ ಮಾದಕದ್ರವ್ಯ ನಿಯಂತ್ರಂಣ ಮಂಡಳಿ (ಎನ್‍ಸಿಬಿ) ನೀಡಿದ ವರದಿ ಪ್ರಕಾರ, 2020ರಿಂದ ಮಾದಕ ದ್ರವ್ಯ ಸೇವನೆ, ಕಳ್ಳಸಾಗಣೆ ಅನೇಕ ಪಟ್ಟು ಹೆಚ್ಚಾಗಿದೆ ಎಂದು ಹಿಂದೂಸ್ತಾನ್‍ ಟೈಮ್ಸ್  ವರದಿ ಮಾಡಿತ್ತು.

ಅರೆ, ಕೋವಿಡ್‍ ಸಂದರ್ಭಕ್ಕೂ ಇದಕ್ಕೂ ಲಿಂಕ್‍ ಇರಬಹುದಾ? ಎಲ್ಲ ಸ್ಥಗಿತವಾಗಿರುವಾಗ ಇದೆಲ್ಲ ಹೇಗೆ ಸಾಧ್ಯವಾಗಿತು? ಕಳೆದ ವರ್ಷ ಭಾರಿ ಸುದ್ದಿ ಮಾಡಿದ ಬಾಲಿವುಡ್‍ ಮತ್ತು ನಮ್ಮ ಕನ್ನಡ ಚಿತ್ರರಂಗದ ಕೆಲವರ ಡ್ರಗ್ಸ್ ಸುದ್ದಿಗಳು ಇದಕ್ಕೆ ಪೂರಕವಾಗಿವೆಯೇ? ಅದಕ್ಕೂ ಮುಖ್ಯವಾಗಿ ಈ ಎನ್‍ಸಿಬಿ, ಆಗೆಲ್ಲ ದೊಡ್ಡ ಹವಾ ಮಾಡಿ ಈಗೇಕೆ ತಣ್ಣಗಾಗಿದೆ?- ಈ ಎಲ್ಲ ಪ್ರಶ್ನೆಗಳಿಗೆ ಸುಲಭ ಉತ್ತರವಿಲ್ಲ ಅನಿಸುತ್ತದೆ.

ಅದಿರಲಿ, 2020-21ನೆ ಸಾಲಿನಲ್ಲಿ ಕರ್ನಾಟಕದಲ್ಲಿ 50 ಕೋಟಿ ರೂ. ಮೌಲ್ಯದ ಮಾದಕ ವಸ್ತು ವಶಪಡಿಸಿಕೊಂಡು ನಾಶ ಮಾಡಲಾಗಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಶನಿವಾರ ತಿಳಿಸಿದ್ದಾರೆ. ಪೊಲೀಸರಿಗೆ ಸಿಕ್ಕಿದ್ದು 50 ಕೋಟಿ ರೂ. ಮೌಲ್ಯದ ಡ್ರಗ್ಸ್ ಎಂದಾದರೆ, ಸಿಗದೇ ಇರುವುದು ಎಷ್ಟು ಪಟ್ಟು ಇರಬಹುದು?

ಶನಿವಾರ ಮಾದಕದ್ರವ್ಯ ರಹಿತ ದಿನದ ಅಂಗವಾಗಿ ಎಲ್ಲ ಜಿಲ್ಲೆಯ ಪೊಲೀಸರು ಎಸ್‍ಪಿ ನೇತೃತ್ವದಲ್ಲಿ, ಸೀಜ್‍ ಮಾಡಿದ ಮಾದಕ ದ್ರವ್ಯಗಳನ್ನು ಸುಟ್ಟು ಹಾಕಿದರು.

ಪುಟ್ಟ ಗದಗ ಜಿಲ್ಲೆಯಲ್ಲಿ 7.18 ಲಕ್ಷ ರೂ ಮೊತ್ತದ ಗಾಂಜಾವನ್ನು ಸುಟ್ಟು ನಾಶ ಪಡಿಸಿದರು. ಇದು ಒಂದು ವರ್ಷದ ಸಾಮಾಗ್ರಿ ಅಥವಾ ಜನೆವರಿಯಿಂದ ಸೀಜ್‍ ಮಾಡಿದ ಸಾಮಾಗ್ರಿ ಎಂಬುದು ಸ್ಪಷ್ಟವಿಲ್ಲ.

ಕಳೆದ ವರ್ಷ ಕನ್ನಡ ಚಿತ್ರರಂಗದ ಕೆಲವರು ಡ್ರಗ್ಸ್ ಜಾಲದಲ್ಲಿ ಸಿಕ್ಕಿ ಬಿದ್ದಾಗ, ಗೃಹ ಸಚಿವ ಬೊಮ್ಮಾಯಿ ಎಲ್ಲ ಎಸ್‍ಪಿಗಳಿಗೆ ಈ ಜಾಲ ಮೆಟ್ಟಿ ಹಾಕಲು ನಿರ್ದೇಶನ ನೀಡಿದರು.

ಆಗ ಏನಾಯಿತು? ದಿನವೂ ಗಾಂಜಾ ಮಾರುತ್ತಿದ್ದವನ ಬಂಧನ ಎಂಬ ಸುದ್ದಿಗಳು ಹರಿದಾಡಿದವು. ಒಬ್ಬ ವ್ಯಕ್ತಿಯಿಂದ 70 ಗ್ರಾಂ ಗಾಂಜಾ ವಶ ಮಾಡಿಕೊಂಡು, ಆತನಿಂದ 1,147 ರೂ. ವಶಪಡಿಸಿಕೊಳ್ಳಲಾಗಿದೆ’ ಎಂಬ ಎಫ್‍ಐಆರ್‌ಗಳು ಬಿಡುಗಡೆ ಆಗುತ್ತಿದ್ದವು.

ಆದರೆ ಇದರ ಮೂಲಗಳು ಪೊಲೀಸರಿಗೆ ಗೊತ್ತೇ ಇಲ್ಲವೇ? ಗುಡಿ ಹತ್ತಿರ ನಿಂತು ಮಾರಲು ಆತನೇನು ಮೂರ್ಖನೇ? ಯಾವುದೋ ಮನೆ ಅಥವಾ ಅಂಗಡಿಯಲ್ಲಿ ಕುಳಿತೇ ಮಾರಿರುತ್ತಾನೆ ಅಲ್ಲವೇ? ಆತನ ಗಿರಾಕಿಗಳು ಕೂಡ ದಾರಿ ಮಧ್ಯೆ ಗುಡಿ ಪಕ್ಕ ಗಾಂಜಾ ಖರೀದಿಸುತ್ತಾರೆಯೇ? ಈ ಪ್ರಶ್ನೆಗಳು ಆಗ ಜನರನ್ನು ಕಾಡಿಸುತ್ತಿದ್ದವು.

ಯಾವಾಗ ಜಾರಕಿಹೊಳಿ ಕೇಸು ಮುನ್ನೆಲೆಗೆ ಬಂದಿತೋ ಆಗ ಡ್ರಗ್ಸ್ ವಿಷಯ ಹಿನ್ನಲೆಗೆ ಸರಿಯಿತು. ಹಾಗೆಯೇ ಬಿಹಾರ ಚುನಾವಣೆ ಮುಗಿದ ನಂತರ ಬಾಲಿವುಡ್‍ ನಟ ಸುಶಾಂತ್‍  ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ನಡೆದಿದ್ದ ಡ್ರಗ್ಸ್ ತನಿಖೆಯೂ ಹಿನ್ನೆಲೆಗೆ ಸರಿಯಿತು.

ಆ ನಂತರ ‘ಗುಡಿ ಹತ್ತಿರವೋ ಅಥವಾ ರಸ್ತೆಯಲ್ಲೋ ನಿಂತು’ ಗಾಂಜಾ ಮಾರುವವರ ಎಫ್‍ಐಆರ್‌ಗಳು ಕಾಣದಾದವು!

ದೇಶದ ಸ್ಥಿತಿ ಏನು?

ಈ ವರ್ಷ ಇನ್ನೂ ಆರು ತಿಂಗಳುಗಳು ಬಾಕಿ ಇರುವಾಗ, ಎನ್‌ಸಿಬಿ ಈಗಾಗಲೇ 4.82 ಟನ್ ಗಾಂಜಾ, 5.25 ಕೆಜಿ ಅಫೀಮು, 48.8 ಕೆಜಿ ಚರಸ್‍ಗಳನ್ನು ವಶಪಡಿಸಿಕೊಂಡಿದೆ.

ಕೋವಿಡ್‍ ಸಾಂಕ್ರಾಮಿಕದ ಸಂದರ್ಭದಲ್ಲೂ ಮಾದಕ ದ್ರವ್ಯ ಮತ್ತು ಕಳ್ಳಸಾಗಣೆ 2020ರಿಂದ ಅನೇಕ ಪಟ್ಟು ಹೆಚ್ಚಾಗಿದೆ ಮತ್ತು ಇದು ವಿವಿಧ ಮಾದಕವಸ್ತು ನಿಯಂತ್ರಣ ಜಾರಿ ಸಂಸ್ಥೆಗಳ ಚಟುವಟಿಕೆಗಳಿಂದ ಸ್ಪಷ್ಟವಾಗಿದೆ ಎನ್ನಲಾಗಿದೆ.

ಈ ವರ್ಷದ ದಿನಾಚರಣೆಯ ಸಂದರ್ಭದಲ್ಲಿ ‘ಮಾದಕವಸ್ತುಗಳ ಬಗ್ಗೆ ಸತ್ಯಗಳನ್ನು ಹಂಚಿಕೊಳ್ಳಿ, ಜೀವಗಳನ್ನು ಉಳಿಸಿ’ ಎಂದು ವಿಶ್ವಸಂಸ್ಥೆಯು ತಿಳಿಸಿದೆ.

ಆದರೆ, ಪೊಲೀಸರು ಮತ್ತು ಮಾದಕದ್ರವ್ಯಗಳ ತಡೆಗೆ ಸಂಬಂಧಪಟ್ಟ ಇಲಾಖೆಗಳು ಸತ್ಯವನ್ನು ಹಂಚಿಕೊಳ್ಳುತ್ತವಾ? ಜನರಿಗೆ ನಂಬಿಕೆಯಿಲ್ಲ!

  • ಪಿ.ಕೆ ಮಲ್ಲನಗೌಡರ್

ಇದನ್ನೂ ಓದಿ: ಹರಿದ ಜೀನ್ಸ್ ಧರಿಸುವುದು ಮಾದಕ ವಸ್ತು ಸೇವನೆಗೂ ಕಾರಣವಾಗುತ್ತದೆ- ಉತ್ತರಾಖಂಡ ಸಿಎಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...