Homeಕರ್ನಾಟಕರಸಗೊಬ್ಬರ ಬೆಲೆ ಏರಿಕೆ ಪ್ರಶ್ನಿಸದ ರಾಜ್ಯ ಸರ್ಕಾರ, ಬಿಜೆಪಿ ಸಂಸದರು ಹೇಡಿಗಳು- ಸಿದ್ದರಾಮಯ್ಯ

ರಸಗೊಬ್ಬರ ಬೆಲೆ ಏರಿಕೆ ಪ್ರಶ್ನಿಸದ ರಾಜ್ಯ ಸರ್ಕಾರ, ಬಿಜೆಪಿ ಸಂಸದರು ಹೇಡಿಗಳು- ಸಿದ್ದರಾಮಯ್ಯ

'ದೇಶದ ಸರ್ಕಾರಿ ಖಜಾನೆ ಖಾಲಿಯಾಗುತ್ತಿದೆ. ಆದರೆ ಅದಾನಿ, ಅಂಬಾನಿ ಮುಂತಾದವರ ಖಜಾನೆಗಳು ತುಂಬಿ ತುಳುಕುತ್ತಿವೆ. ಕೊರೊನಾ ಬಿಕ್ಕಟ್ಟಿನಲ್ಲೂ ಅವರಿಗೆ 12 ಲಕ್ಷ ಕೋಟಿಗೂ ಹೆಚ್ಚು ಸಂಪತ್ತು ವೃದ್ಧಿಯಾಗಿದೆ'

- Advertisement -
- Advertisement -

ರಸಗೊಬ್ಬರಗಳ ಬೆಲೆ ಏರಿಕೆ ಖಂಡಿಸಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಬೆಲೆ ಏರಿಕೆಯನ್ನು ಪ್ರಶ್ನಿಸದ ಬಿಜೆಪಿ ಸಂಸದರು ಮತ್ತು ರಾಜ್ಯ ಸರ್ಕಾರವನ್ನು ಹೇಡಿಗಳು, ಗುಲಾಮಿ ಮನಸ್ಥಿತಿಯವರು ಎಂದು ಜರಿದಿದ್ದಾರೆ.

ಮಾಧ್ಯಮ ಪ್ರಕಟಣೆ ಹೊರಡಿಸಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ’ಕೇಂದ್ರದದಲ್ಲಿರುವ ಮೋದಿಯವರ ನೇತೃತ್ವದ ಸರ್ಕಾರವು ಯಾವ ದೃಷ್ಟಿಯಿಂದ ನೋಡಿದರೂ ಬಡವರ, ರೈತರ, ಹಿಂದುಳಿದವರ, ದಲಿತರ, ಮಹಿಳೆಯರ, ಮಕ್ಕಳ ಪರವಾಗಿಲ್ಲ ಎಂಬುದು ಪದೇ ಪದೇ ನಿಜವಾಗುತ್ತಿದೆ’ ಎಂದಿದ್ದಾರೆ.

ಮೋದಿಯವರ ಭಾಷಣಗಳು ಹೂರಣ ಇಲ್ಲದ ಹೋಳಿಗೆಯಂತೆ, ಕಡುಬಿನಂತೆ. ಅವರು ಬರೀ ಸುಳ್ಳು ಹೇಳುತ್ತಿದ್ದಾರೆ. ಅಲಂಕಾರಕ್ಕೆ ಬಳಸುವ ಪ್ಲಾಸ್ಟಿಕ್ ಹೂವನ್ನೇ ನಿಜವಾದ ಹೂವು ಅನ್ನುತ್ತಾರೆ. ಮುಗ್ಧ ಜನರೂ ಕೆಲವೊಮ್ಮೆ ನಂಬಿಬಿಡುತ್ತಾರೆ. ಇಂತಹ ಜನದ್ರೋಹಿ ಸರ್ಕಾರಗಳನ್ನು ನನ್ನ ಜೀವಮಾನದಲ್ಲಿ ನೋಡಿರಲಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಅತ್ಯಾಚಾರಿ ಕುಲದೀಪ್ ಸೆಂಗಾರ್‌ ಪತ್ನಿಗೆ ಜಿಲ್ಲಾ ಪಂಚಾಯತ್ ಟಿಕೆಟ್ ನೀಡಿದ ಬಿಜೆಪಿ

’ದೇಶ ಬಿಕ್ಕಟ್ಟಿನ ಸ್ಥಿತಿಯಲ್ಲಿರುವಾಗ ರೈತರು ಕಷ್ಟ ಪಟ್ಟು ದುಡಿದು ಈ ವರ್ಷ ದೇಶವನ್ನು ಉಳಿಸಿದ್ದಾರೆ. ಕೃಷಿಯು ರಾಜ್ಯದಲ್ಲಿ ಶೇ.6.4 ರಷ್ಟು ಪ್ರಗತಿ ಕಂಡಿದೆ. ದೇಶದಲ್ಲಿ ಶೇ. 3.4 ಕ್ಕೂ ಹೆಚ್ಚು ಬೆಳವಣಿಗೆ ಕಂಡಿದೆ. ದೇಶದ ಜಿಡಿಪಿ ಗೆ ಈ ವರ್ಷ ಶೇ. 20 ರಷ್ಟು ಕೊಡುಗೆಯನ್ನು ಕೃಷಿ ಕೊಟ್ಟಿದೆ. ಇಂಥ ಸಂದರ್ಭದಲ್ಲಿ ಈ ಮನೆಹಾಳೂ ಮೋದಿ ಸರ್ಕಾರ ರಸಗೊಬ್ಬರದ ಬೆಲೆಗಳನ್ನು ಶೇ. 60 ರಷ್ಟು ಹೆಚ್ಚಿಸಿದೆ’ ಎಂದು ಕೇಂದ್ರದ ವಿರುದ್ಧ ಕಿಡಿಕಾರಿದ್ದಾರೆ.

“ಡಿಎಪಿ ಗೊಬ್ಬರ ಏಪ್ರಿಲ್ 1 ರಿಂದ ಒಂದು ಕ್ವಿಂಟಾಲಿಗೆ 1400 ಗಳಷ್ಟು ಬೆಲೆ ಜಾಸ್ತಿಯಾಗಿದೆ. ಇದುವರೆಗೆ 2400 ರೂಪಾಯಿಗಳಿದ್ದ ಬೆಲೆ ಈಗ 3800 ರೂ.ಗಳಾಗುತ್ತಿದೆ.  ಎನ್‌ಪಿಕೆ [ಸಾರಜನಕ, ರಂಜಕ ಮತ್ತು ಪೊಟ್ಯಾಷ್]ಗಳ ಮೇಲಿನ ಬೆಲೆ ಒಂದು ಕ್ವಿಂಟಾಲ್ ಗೆ 1250 ರೂಪಾಯಿಗಳಷ್ಟು ಹೆಚ್ಚಿಸಿದ್ದಾರೆ. ಇದುವರೆಗೆ 2350 ರೂಗಳಿಗೆ ಸಿಗುತ್ತಿದ್ದ ಗೊಬ್ಬರ ಈಗ 3600 ಆಗಲಿದೆ. ಕೇಂದ್ರ ಸರ್ಕಾರ ಅಂತರರಾಷ್ಟ್ರೀಯ ಮಟ್ಟದಲ್ಲಿ ಬೆಲೆ ಜಾಸ್ತಿಯಾಗಿದೆ. ಅದಕ್ಕೆ ಬೆಲೆ ಜಾಸ್ತಿ ಮಾಡಿದ್ದೇವೆ ಎನ್ನುತ್ತಿದ್ದಾರೆ ಇದು ಶುದ್ಧ ಸುಳ್ಳು” ಎಂದು ಸಿದ್ದರಾಮಯ್ಯ ಆರೋಪಿಸಿದ್ದಾರೆ.

’ಸರ್ಕಾರ ರಸಗೊಬ್ಬರಕ್ಕೆ ಈ ಬಾರಿ ಬಜೆಟ್ಟಿನಲ್ಲಿ 54,417 ಕೋಟಿ ರೂಪಾಯಿಗಳಷ್ಟು ಸಬ್ಸಿಡಿಯನ್ನು ಕಡಿಮೆ ಮಾಡಿದೆ. ಕಳೆದ ವರ್ಷ 1,33,947 ಕೋಟಿ ರೂಪಾಯಿಗಳನ್ನು ರಸಗೊಬ್ಬರಕ್ಕಾಗಿ ಸಬ್ಸಿಡಿ ನೀಡಲಾಗಿತ್ತು. ಈಗ ಅದು 79,530 ಕೋಟಿ ರೂಪಾಯಿಗಳಿಗೆ ಇಳಿಸಿದ್ದಾರೆ. ಶೇ 40.62 ರಷ್ಟು ಕಡಿಮೆ ಮಾಡಿದ್ದಾರೆ. ಆದ್ದರಿಂದಲೇ ರಸಗೊಬ್ಬರದ ಬೆಲೆ ಹೆಚ್ಚಾಗಿದೆ’ ಎಂದಿದ್ದಾರೆ.

“ರೈತರ ಮೇಲೆ ಹೊರೆಯಾಗಿರುವ ಇದನ್ನು ಪ್ರಶ್ನಿಸದ ರಾಜ್ಯ ಸರ್ಕಾರ ಮತ್ತು ರಾಜ್ಯವನ್ನು ಪ್ರತಿನಿಧಿಸುವ ಬಿಜೆಪಿ ಸಂಸದರು ಹೇಡಿಗಳು, ಗುಲಾಮೀ ಮನಸ್ಥಿತಿಯವರು. ಇವರು ರಾಜ್ಯಕ್ಕೆ ಅಷ್ಟೆ ಅಲ್ಲ. ಭೂಮಿಗೇ ಭಾರ. ಈ ದುಷ್ಟ ಬಿಜೆಪಿ ಸರ್ಕಾರಗಳನ್ನು ಮೊದಲು ಕಿತ್ತೆಸೆಯದಿದ್ದರೆ ದೇಶ ಜಗತ್ತಿನಲ್ಲಿ ತಲೆ ಎತ್ತಿ ನಡೆಯಲಾಗದ ಸ್ಥಿತಿಗೆ ತಲುಪುತ್ತದೆ. ದೇಶದ ಜನ ಎರಡು ಹೊತ್ತಿನ ಅನ್ನಕ್ಕೆ ಪರದಾಡಬೇಕಾದ ಸ್ಥಿತಿಗೆ ಬರುತ್ತಾರೆ” ಎಂದು ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

’ಗ್ಯಾಸ್, ಪೆಟ್ರೋಲ್ ,ಡೀಸೆಲ್ ಎಲ್ಲದರ ಬೆಲೆ ಗಗನಕ್ಕೆ ಮುಟ್ಟಿದೆ. ಇಂಥ ಸಂದರ್ಭದಲ್ಲಿ ರಸಗೊಬ್ಬರಗಳ ಬೆಲೆ ಹೆಚ್ಚಿಸಲಾಗಿದೆ. ಇದು ರೈತನ ಹೊಟ್ಟೆಯ ಮೇಲೆ ಹಾಕಿದ ಭೀಕರ ಬರೆ. ರಸಗೊಬ್ಬರಗಳ ಬೆಲೆಯೇರಿಕೆಯಂಥ ಜನದ್ರೋಹಿ ನಿರ್ಧಾರವನ್ನು ಈ ಕೂಡಲೇ ವಾಪಸ್ಸು ಹಿಂತೆಗೆದುಕೊಳ್ಳಬೇಕು’ ಎಂದು ಆಗ್ರಹಿಸಿದ್ದಾರೆ.

’ದೇಶ ಭೀಕರ ಹತಾಶೆಯಲ್ಲಿದೆ. ದೇಶದ ಎಲ್ಲ ರಂಗಗಳೂ ಮಕಾಡೆ ಮಲಗಿವೆ. ದೇಶದ ಸರ್ಕಾರಿ ಖಜಾನೆ ಖಾಲಿಯಾಗುತ್ತಿದೆ. ಆದರೆ ಅದಾನಿ, ಅಂಬಾನಿ ಮುಂತಾದವರ ಖಜಾನೆಗಳು ತುಂಬಿ ತುಳುಕುತ್ತಿವೆ. ಕೊರೊನಾ ಬಿಕ್ಕಟ್ಟಿನಲ್ಲೂ ಅವರಿಗೆ 12 ಲಕ್ಷ ಕೋಟಿಗೂ ಹೆಚ್ಚು ಸಂಪತ್ತು ವೃದ್ಧಿಯಾಗಿದೆ. ಅವರ ಮೇಲೆ ತೆರಿಗೆ ಹಾಕುವ ಬದಲು ಬಡವರ ಅನ್ನದ ತಟ್ಟೆಯ ಮೇಲೆ ಮೋದಿಯವರು ಕಣ್ಣು ಹಾಕಿದ್ದಾರೆ’ ಎಂದಿದ್ದಾರೆ.


ಇದನ್ನೂ ಓದಿ: ರೈತರ ಮೇಲೆ ರಸಗೊಬ್ಬರ ದರ ಹೆಚ್ಚಳದ ಬರೆ: ಸರ್ಕಾರದ ಕ್ರಮ ಖಂಡಿಸಿದ ಎಸ್‌ಕೆಎಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...