Homeಕರ್ನಾಟಕರಸಗೊಬ್ಬರ ಬೆಲೆ ಏರಿಕೆ ಪ್ರಶ್ನಿಸದ ರಾಜ್ಯ ಸರ್ಕಾರ, ಬಿಜೆಪಿ ಸಂಸದರು ಹೇಡಿಗಳು- ಸಿದ್ದರಾಮಯ್ಯ

ರಸಗೊಬ್ಬರ ಬೆಲೆ ಏರಿಕೆ ಪ್ರಶ್ನಿಸದ ರಾಜ್ಯ ಸರ್ಕಾರ, ಬಿಜೆಪಿ ಸಂಸದರು ಹೇಡಿಗಳು- ಸಿದ್ದರಾಮಯ್ಯ

'ದೇಶದ ಸರ್ಕಾರಿ ಖಜಾನೆ ಖಾಲಿಯಾಗುತ್ತಿದೆ. ಆದರೆ ಅದಾನಿ, ಅಂಬಾನಿ ಮುಂತಾದವರ ಖಜಾನೆಗಳು ತುಂಬಿ ತುಳುಕುತ್ತಿವೆ. ಕೊರೊನಾ ಬಿಕ್ಕಟ್ಟಿನಲ್ಲೂ ಅವರಿಗೆ 12 ಲಕ್ಷ ಕೋಟಿಗೂ ಹೆಚ್ಚು ಸಂಪತ್ತು ವೃದ್ಧಿಯಾಗಿದೆ'

- Advertisement -
- Advertisement -

ರಸಗೊಬ್ಬರಗಳ ಬೆಲೆ ಏರಿಕೆ ಖಂಡಿಸಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಬೆಲೆ ಏರಿಕೆಯನ್ನು ಪ್ರಶ್ನಿಸದ ಬಿಜೆಪಿ ಸಂಸದರು ಮತ್ತು ರಾಜ್ಯ ಸರ್ಕಾರವನ್ನು ಹೇಡಿಗಳು, ಗುಲಾಮಿ ಮನಸ್ಥಿತಿಯವರು ಎಂದು ಜರಿದಿದ್ದಾರೆ.

ಮಾಧ್ಯಮ ಪ್ರಕಟಣೆ ಹೊರಡಿಸಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ’ಕೇಂದ್ರದದಲ್ಲಿರುವ ಮೋದಿಯವರ ನೇತೃತ್ವದ ಸರ್ಕಾರವು ಯಾವ ದೃಷ್ಟಿಯಿಂದ ನೋಡಿದರೂ ಬಡವರ, ರೈತರ, ಹಿಂದುಳಿದವರ, ದಲಿತರ, ಮಹಿಳೆಯರ, ಮಕ್ಕಳ ಪರವಾಗಿಲ್ಲ ಎಂಬುದು ಪದೇ ಪದೇ ನಿಜವಾಗುತ್ತಿದೆ’ ಎಂದಿದ್ದಾರೆ.

ಮೋದಿಯವರ ಭಾಷಣಗಳು ಹೂರಣ ಇಲ್ಲದ ಹೋಳಿಗೆಯಂತೆ, ಕಡುಬಿನಂತೆ. ಅವರು ಬರೀ ಸುಳ್ಳು ಹೇಳುತ್ತಿದ್ದಾರೆ. ಅಲಂಕಾರಕ್ಕೆ ಬಳಸುವ ಪ್ಲಾಸ್ಟಿಕ್ ಹೂವನ್ನೇ ನಿಜವಾದ ಹೂವು ಅನ್ನುತ್ತಾರೆ. ಮುಗ್ಧ ಜನರೂ ಕೆಲವೊಮ್ಮೆ ನಂಬಿಬಿಡುತ್ತಾರೆ. ಇಂತಹ ಜನದ್ರೋಹಿ ಸರ್ಕಾರಗಳನ್ನು ನನ್ನ ಜೀವಮಾನದಲ್ಲಿ ನೋಡಿರಲಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಅತ್ಯಾಚಾರಿ ಕುಲದೀಪ್ ಸೆಂಗಾರ್‌ ಪತ್ನಿಗೆ ಜಿಲ್ಲಾ ಪಂಚಾಯತ್ ಟಿಕೆಟ್ ನೀಡಿದ ಬಿಜೆಪಿ

’ದೇಶ ಬಿಕ್ಕಟ್ಟಿನ ಸ್ಥಿತಿಯಲ್ಲಿರುವಾಗ ರೈತರು ಕಷ್ಟ ಪಟ್ಟು ದುಡಿದು ಈ ವರ್ಷ ದೇಶವನ್ನು ಉಳಿಸಿದ್ದಾರೆ. ಕೃಷಿಯು ರಾಜ್ಯದಲ್ಲಿ ಶೇ.6.4 ರಷ್ಟು ಪ್ರಗತಿ ಕಂಡಿದೆ. ದೇಶದಲ್ಲಿ ಶೇ. 3.4 ಕ್ಕೂ ಹೆಚ್ಚು ಬೆಳವಣಿಗೆ ಕಂಡಿದೆ. ದೇಶದ ಜಿಡಿಪಿ ಗೆ ಈ ವರ್ಷ ಶೇ. 20 ರಷ್ಟು ಕೊಡುಗೆಯನ್ನು ಕೃಷಿ ಕೊಟ್ಟಿದೆ. ಇಂಥ ಸಂದರ್ಭದಲ್ಲಿ ಈ ಮನೆಹಾಳೂ ಮೋದಿ ಸರ್ಕಾರ ರಸಗೊಬ್ಬರದ ಬೆಲೆಗಳನ್ನು ಶೇ. 60 ರಷ್ಟು ಹೆಚ್ಚಿಸಿದೆ’ ಎಂದು ಕೇಂದ್ರದ ವಿರುದ್ಧ ಕಿಡಿಕಾರಿದ್ದಾರೆ.

“ಡಿಎಪಿ ಗೊಬ್ಬರ ಏಪ್ರಿಲ್ 1 ರಿಂದ ಒಂದು ಕ್ವಿಂಟಾಲಿಗೆ 1400 ಗಳಷ್ಟು ಬೆಲೆ ಜಾಸ್ತಿಯಾಗಿದೆ. ಇದುವರೆಗೆ 2400 ರೂಪಾಯಿಗಳಿದ್ದ ಬೆಲೆ ಈಗ 3800 ರೂ.ಗಳಾಗುತ್ತಿದೆ.  ಎನ್‌ಪಿಕೆ [ಸಾರಜನಕ, ರಂಜಕ ಮತ್ತು ಪೊಟ್ಯಾಷ್]ಗಳ ಮೇಲಿನ ಬೆಲೆ ಒಂದು ಕ್ವಿಂಟಾಲ್ ಗೆ 1250 ರೂಪಾಯಿಗಳಷ್ಟು ಹೆಚ್ಚಿಸಿದ್ದಾರೆ. ಇದುವರೆಗೆ 2350 ರೂಗಳಿಗೆ ಸಿಗುತ್ತಿದ್ದ ಗೊಬ್ಬರ ಈಗ 3600 ಆಗಲಿದೆ. ಕೇಂದ್ರ ಸರ್ಕಾರ ಅಂತರರಾಷ್ಟ್ರೀಯ ಮಟ್ಟದಲ್ಲಿ ಬೆಲೆ ಜಾಸ್ತಿಯಾಗಿದೆ. ಅದಕ್ಕೆ ಬೆಲೆ ಜಾಸ್ತಿ ಮಾಡಿದ್ದೇವೆ ಎನ್ನುತ್ತಿದ್ದಾರೆ ಇದು ಶುದ್ಧ ಸುಳ್ಳು” ಎಂದು ಸಿದ್ದರಾಮಯ್ಯ ಆರೋಪಿಸಿದ್ದಾರೆ.

’ಸರ್ಕಾರ ರಸಗೊಬ್ಬರಕ್ಕೆ ಈ ಬಾರಿ ಬಜೆಟ್ಟಿನಲ್ಲಿ 54,417 ಕೋಟಿ ರೂಪಾಯಿಗಳಷ್ಟು ಸಬ್ಸಿಡಿಯನ್ನು ಕಡಿಮೆ ಮಾಡಿದೆ. ಕಳೆದ ವರ್ಷ 1,33,947 ಕೋಟಿ ರೂಪಾಯಿಗಳನ್ನು ರಸಗೊಬ್ಬರಕ್ಕಾಗಿ ಸಬ್ಸಿಡಿ ನೀಡಲಾಗಿತ್ತು. ಈಗ ಅದು 79,530 ಕೋಟಿ ರೂಪಾಯಿಗಳಿಗೆ ಇಳಿಸಿದ್ದಾರೆ. ಶೇ 40.62 ರಷ್ಟು ಕಡಿಮೆ ಮಾಡಿದ್ದಾರೆ. ಆದ್ದರಿಂದಲೇ ರಸಗೊಬ್ಬರದ ಬೆಲೆ ಹೆಚ್ಚಾಗಿದೆ’ ಎಂದಿದ್ದಾರೆ.

“ರೈತರ ಮೇಲೆ ಹೊರೆಯಾಗಿರುವ ಇದನ್ನು ಪ್ರಶ್ನಿಸದ ರಾಜ್ಯ ಸರ್ಕಾರ ಮತ್ತು ರಾಜ್ಯವನ್ನು ಪ್ರತಿನಿಧಿಸುವ ಬಿಜೆಪಿ ಸಂಸದರು ಹೇಡಿಗಳು, ಗುಲಾಮೀ ಮನಸ್ಥಿತಿಯವರು. ಇವರು ರಾಜ್ಯಕ್ಕೆ ಅಷ್ಟೆ ಅಲ್ಲ. ಭೂಮಿಗೇ ಭಾರ. ಈ ದುಷ್ಟ ಬಿಜೆಪಿ ಸರ್ಕಾರಗಳನ್ನು ಮೊದಲು ಕಿತ್ತೆಸೆಯದಿದ್ದರೆ ದೇಶ ಜಗತ್ತಿನಲ್ಲಿ ತಲೆ ಎತ್ತಿ ನಡೆಯಲಾಗದ ಸ್ಥಿತಿಗೆ ತಲುಪುತ್ತದೆ. ದೇಶದ ಜನ ಎರಡು ಹೊತ್ತಿನ ಅನ್ನಕ್ಕೆ ಪರದಾಡಬೇಕಾದ ಸ್ಥಿತಿಗೆ ಬರುತ್ತಾರೆ” ಎಂದು ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

’ಗ್ಯಾಸ್, ಪೆಟ್ರೋಲ್ ,ಡೀಸೆಲ್ ಎಲ್ಲದರ ಬೆಲೆ ಗಗನಕ್ಕೆ ಮುಟ್ಟಿದೆ. ಇಂಥ ಸಂದರ್ಭದಲ್ಲಿ ರಸಗೊಬ್ಬರಗಳ ಬೆಲೆ ಹೆಚ್ಚಿಸಲಾಗಿದೆ. ಇದು ರೈತನ ಹೊಟ್ಟೆಯ ಮೇಲೆ ಹಾಕಿದ ಭೀಕರ ಬರೆ. ರಸಗೊಬ್ಬರಗಳ ಬೆಲೆಯೇರಿಕೆಯಂಥ ಜನದ್ರೋಹಿ ನಿರ್ಧಾರವನ್ನು ಈ ಕೂಡಲೇ ವಾಪಸ್ಸು ಹಿಂತೆಗೆದುಕೊಳ್ಳಬೇಕು’ ಎಂದು ಆಗ್ರಹಿಸಿದ್ದಾರೆ.

’ದೇಶ ಭೀಕರ ಹತಾಶೆಯಲ್ಲಿದೆ. ದೇಶದ ಎಲ್ಲ ರಂಗಗಳೂ ಮಕಾಡೆ ಮಲಗಿವೆ. ದೇಶದ ಸರ್ಕಾರಿ ಖಜಾನೆ ಖಾಲಿಯಾಗುತ್ತಿದೆ. ಆದರೆ ಅದಾನಿ, ಅಂಬಾನಿ ಮುಂತಾದವರ ಖಜಾನೆಗಳು ತುಂಬಿ ತುಳುಕುತ್ತಿವೆ. ಕೊರೊನಾ ಬಿಕ್ಕಟ್ಟಿನಲ್ಲೂ ಅವರಿಗೆ 12 ಲಕ್ಷ ಕೋಟಿಗೂ ಹೆಚ್ಚು ಸಂಪತ್ತು ವೃದ್ಧಿಯಾಗಿದೆ. ಅವರ ಮೇಲೆ ತೆರಿಗೆ ಹಾಕುವ ಬದಲು ಬಡವರ ಅನ್ನದ ತಟ್ಟೆಯ ಮೇಲೆ ಮೋದಿಯವರು ಕಣ್ಣು ಹಾಕಿದ್ದಾರೆ’ ಎಂದಿದ್ದಾರೆ.


ಇದನ್ನೂ ಓದಿ: ರೈತರ ಮೇಲೆ ರಸಗೊಬ್ಬರ ದರ ಹೆಚ್ಚಳದ ಬರೆ: ಸರ್ಕಾರದ ಕ್ರಮ ಖಂಡಿಸಿದ ಎಸ್‌ಕೆಎಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...