Homeಕರ್ನಾಟಕರಸಗೊಬ್ಬರ ಬೆಲೆ ಏರಿಕೆ ಪ್ರಶ್ನಿಸದ ರಾಜ್ಯ ಸರ್ಕಾರ, ಬಿಜೆಪಿ ಸಂಸದರು ಹೇಡಿಗಳು- ಸಿದ್ದರಾಮಯ್ಯ

ರಸಗೊಬ್ಬರ ಬೆಲೆ ಏರಿಕೆ ಪ್ರಶ್ನಿಸದ ರಾಜ್ಯ ಸರ್ಕಾರ, ಬಿಜೆಪಿ ಸಂಸದರು ಹೇಡಿಗಳು- ಸಿದ್ದರಾಮಯ್ಯ

'ದೇಶದ ಸರ್ಕಾರಿ ಖಜಾನೆ ಖಾಲಿಯಾಗುತ್ತಿದೆ. ಆದರೆ ಅದಾನಿ, ಅಂಬಾನಿ ಮುಂತಾದವರ ಖಜಾನೆಗಳು ತುಂಬಿ ತುಳುಕುತ್ತಿವೆ. ಕೊರೊನಾ ಬಿಕ್ಕಟ್ಟಿನಲ್ಲೂ ಅವರಿಗೆ 12 ಲಕ್ಷ ಕೋಟಿಗೂ ಹೆಚ್ಚು ಸಂಪತ್ತು ವೃದ್ಧಿಯಾಗಿದೆ'

- Advertisement -
- Advertisement -

ರಸಗೊಬ್ಬರಗಳ ಬೆಲೆ ಏರಿಕೆ ಖಂಡಿಸಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಬೆಲೆ ಏರಿಕೆಯನ್ನು ಪ್ರಶ್ನಿಸದ ಬಿಜೆಪಿ ಸಂಸದರು ಮತ್ತು ರಾಜ್ಯ ಸರ್ಕಾರವನ್ನು ಹೇಡಿಗಳು, ಗುಲಾಮಿ ಮನಸ್ಥಿತಿಯವರು ಎಂದು ಜರಿದಿದ್ದಾರೆ.

ಮಾಧ್ಯಮ ಪ್ರಕಟಣೆ ಹೊರಡಿಸಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ’ಕೇಂದ್ರದದಲ್ಲಿರುವ ಮೋದಿಯವರ ನೇತೃತ್ವದ ಸರ್ಕಾರವು ಯಾವ ದೃಷ್ಟಿಯಿಂದ ನೋಡಿದರೂ ಬಡವರ, ರೈತರ, ಹಿಂದುಳಿದವರ, ದಲಿತರ, ಮಹಿಳೆಯರ, ಮಕ್ಕಳ ಪರವಾಗಿಲ್ಲ ಎಂಬುದು ಪದೇ ಪದೇ ನಿಜವಾಗುತ್ತಿದೆ’ ಎಂದಿದ್ದಾರೆ.

ಮೋದಿಯವರ ಭಾಷಣಗಳು ಹೂರಣ ಇಲ್ಲದ ಹೋಳಿಗೆಯಂತೆ, ಕಡುಬಿನಂತೆ. ಅವರು ಬರೀ ಸುಳ್ಳು ಹೇಳುತ್ತಿದ್ದಾರೆ. ಅಲಂಕಾರಕ್ಕೆ ಬಳಸುವ ಪ್ಲಾಸ್ಟಿಕ್ ಹೂವನ್ನೇ ನಿಜವಾದ ಹೂವು ಅನ್ನುತ್ತಾರೆ. ಮುಗ್ಧ ಜನರೂ ಕೆಲವೊಮ್ಮೆ ನಂಬಿಬಿಡುತ್ತಾರೆ. ಇಂತಹ ಜನದ್ರೋಹಿ ಸರ್ಕಾರಗಳನ್ನು ನನ್ನ ಜೀವಮಾನದಲ್ಲಿ ನೋಡಿರಲಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಅತ್ಯಾಚಾರಿ ಕುಲದೀಪ್ ಸೆಂಗಾರ್‌ ಪತ್ನಿಗೆ ಜಿಲ್ಲಾ ಪಂಚಾಯತ್ ಟಿಕೆಟ್ ನೀಡಿದ ಬಿಜೆಪಿ

’ದೇಶ ಬಿಕ್ಕಟ್ಟಿನ ಸ್ಥಿತಿಯಲ್ಲಿರುವಾಗ ರೈತರು ಕಷ್ಟ ಪಟ್ಟು ದುಡಿದು ಈ ವರ್ಷ ದೇಶವನ್ನು ಉಳಿಸಿದ್ದಾರೆ. ಕೃಷಿಯು ರಾಜ್ಯದಲ್ಲಿ ಶೇ.6.4 ರಷ್ಟು ಪ್ರಗತಿ ಕಂಡಿದೆ. ದೇಶದಲ್ಲಿ ಶೇ. 3.4 ಕ್ಕೂ ಹೆಚ್ಚು ಬೆಳವಣಿಗೆ ಕಂಡಿದೆ. ದೇಶದ ಜಿಡಿಪಿ ಗೆ ಈ ವರ್ಷ ಶೇ. 20 ರಷ್ಟು ಕೊಡುಗೆಯನ್ನು ಕೃಷಿ ಕೊಟ್ಟಿದೆ. ಇಂಥ ಸಂದರ್ಭದಲ್ಲಿ ಈ ಮನೆಹಾಳೂ ಮೋದಿ ಸರ್ಕಾರ ರಸಗೊಬ್ಬರದ ಬೆಲೆಗಳನ್ನು ಶೇ. 60 ರಷ್ಟು ಹೆಚ್ಚಿಸಿದೆ’ ಎಂದು ಕೇಂದ್ರದ ವಿರುದ್ಧ ಕಿಡಿಕಾರಿದ್ದಾರೆ.

“ಡಿಎಪಿ ಗೊಬ್ಬರ ಏಪ್ರಿಲ್ 1 ರಿಂದ ಒಂದು ಕ್ವಿಂಟಾಲಿಗೆ 1400 ಗಳಷ್ಟು ಬೆಲೆ ಜಾಸ್ತಿಯಾಗಿದೆ. ಇದುವರೆಗೆ 2400 ರೂಪಾಯಿಗಳಿದ್ದ ಬೆಲೆ ಈಗ 3800 ರೂ.ಗಳಾಗುತ್ತಿದೆ.  ಎನ್‌ಪಿಕೆ [ಸಾರಜನಕ, ರಂಜಕ ಮತ್ತು ಪೊಟ್ಯಾಷ್]ಗಳ ಮೇಲಿನ ಬೆಲೆ ಒಂದು ಕ್ವಿಂಟಾಲ್ ಗೆ 1250 ರೂಪಾಯಿಗಳಷ್ಟು ಹೆಚ್ಚಿಸಿದ್ದಾರೆ. ಇದುವರೆಗೆ 2350 ರೂಗಳಿಗೆ ಸಿಗುತ್ತಿದ್ದ ಗೊಬ್ಬರ ಈಗ 3600 ಆಗಲಿದೆ. ಕೇಂದ್ರ ಸರ್ಕಾರ ಅಂತರರಾಷ್ಟ್ರೀಯ ಮಟ್ಟದಲ್ಲಿ ಬೆಲೆ ಜಾಸ್ತಿಯಾಗಿದೆ. ಅದಕ್ಕೆ ಬೆಲೆ ಜಾಸ್ತಿ ಮಾಡಿದ್ದೇವೆ ಎನ್ನುತ್ತಿದ್ದಾರೆ ಇದು ಶುದ್ಧ ಸುಳ್ಳು” ಎಂದು ಸಿದ್ದರಾಮಯ್ಯ ಆರೋಪಿಸಿದ್ದಾರೆ.

’ಸರ್ಕಾರ ರಸಗೊಬ್ಬರಕ್ಕೆ ಈ ಬಾರಿ ಬಜೆಟ್ಟಿನಲ್ಲಿ 54,417 ಕೋಟಿ ರೂಪಾಯಿಗಳಷ್ಟು ಸಬ್ಸಿಡಿಯನ್ನು ಕಡಿಮೆ ಮಾಡಿದೆ. ಕಳೆದ ವರ್ಷ 1,33,947 ಕೋಟಿ ರೂಪಾಯಿಗಳನ್ನು ರಸಗೊಬ್ಬರಕ್ಕಾಗಿ ಸಬ್ಸಿಡಿ ನೀಡಲಾಗಿತ್ತು. ಈಗ ಅದು 79,530 ಕೋಟಿ ರೂಪಾಯಿಗಳಿಗೆ ಇಳಿಸಿದ್ದಾರೆ. ಶೇ 40.62 ರಷ್ಟು ಕಡಿಮೆ ಮಾಡಿದ್ದಾರೆ. ಆದ್ದರಿಂದಲೇ ರಸಗೊಬ್ಬರದ ಬೆಲೆ ಹೆಚ್ಚಾಗಿದೆ’ ಎಂದಿದ್ದಾರೆ.

“ರೈತರ ಮೇಲೆ ಹೊರೆಯಾಗಿರುವ ಇದನ್ನು ಪ್ರಶ್ನಿಸದ ರಾಜ್ಯ ಸರ್ಕಾರ ಮತ್ತು ರಾಜ್ಯವನ್ನು ಪ್ರತಿನಿಧಿಸುವ ಬಿಜೆಪಿ ಸಂಸದರು ಹೇಡಿಗಳು, ಗುಲಾಮೀ ಮನಸ್ಥಿತಿಯವರು. ಇವರು ರಾಜ್ಯಕ್ಕೆ ಅಷ್ಟೆ ಅಲ್ಲ. ಭೂಮಿಗೇ ಭಾರ. ಈ ದುಷ್ಟ ಬಿಜೆಪಿ ಸರ್ಕಾರಗಳನ್ನು ಮೊದಲು ಕಿತ್ತೆಸೆಯದಿದ್ದರೆ ದೇಶ ಜಗತ್ತಿನಲ್ಲಿ ತಲೆ ಎತ್ತಿ ನಡೆಯಲಾಗದ ಸ್ಥಿತಿಗೆ ತಲುಪುತ್ತದೆ. ದೇಶದ ಜನ ಎರಡು ಹೊತ್ತಿನ ಅನ್ನಕ್ಕೆ ಪರದಾಡಬೇಕಾದ ಸ್ಥಿತಿಗೆ ಬರುತ್ತಾರೆ” ಎಂದು ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

’ಗ್ಯಾಸ್, ಪೆಟ್ರೋಲ್ ,ಡೀಸೆಲ್ ಎಲ್ಲದರ ಬೆಲೆ ಗಗನಕ್ಕೆ ಮುಟ್ಟಿದೆ. ಇಂಥ ಸಂದರ್ಭದಲ್ಲಿ ರಸಗೊಬ್ಬರಗಳ ಬೆಲೆ ಹೆಚ್ಚಿಸಲಾಗಿದೆ. ಇದು ರೈತನ ಹೊಟ್ಟೆಯ ಮೇಲೆ ಹಾಕಿದ ಭೀಕರ ಬರೆ. ರಸಗೊಬ್ಬರಗಳ ಬೆಲೆಯೇರಿಕೆಯಂಥ ಜನದ್ರೋಹಿ ನಿರ್ಧಾರವನ್ನು ಈ ಕೂಡಲೇ ವಾಪಸ್ಸು ಹಿಂತೆಗೆದುಕೊಳ್ಳಬೇಕು’ ಎಂದು ಆಗ್ರಹಿಸಿದ್ದಾರೆ.

’ದೇಶ ಭೀಕರ ಹತಾಶೆಯಲ್ಲಿದೆ. ದೇಶದ ಎಲ್ಲ ರಂಗಗಳೂ ಮಕಾಡೆ ಮಲಗಿವೆ. ದೇಶದ ಸರ್ಕಾರಿ ಖಜಾನೆ ಖಾಲಿಯಾಗುತ್ತಿದೆ. ಆದರೆ ಅದಾನಿ, ಅಂಬಾನಿ ಮುಂತಾದವರ ಖಜಾನೆಗಳು ತುಂಬಿ ತುಳುಕುತ್ತಿವೆ. ಕೊರೊನಾ ಬಿಕ್ಕಟ್ಟಿನಲ್ಲೂ ಅವರಿಗೆ 12 ಲಕ್ಷ ಕೋಟಿಗೂ ಹೆಚ್ಚು ಸಂಪತ್ತು ವೃದ್ಧಿಯಾಗಿದೆ. ಅವರ ಮೇಲೆ ತೆರಿಗೆ ಹಾಕುವ ಬದಲು ಬಡವರ ಅನ್ನದ ತಟ್ಟೆಯ ಮೇಲೆ ಮೋದಿಯವರು ಕಣ್ಣು ಹಾಕಿದ್ದಾರೆ’ ಎಂದಿದ್ದಾರೆ.


ಇದನ್ನೂ ಓದಿ: ರೈತರ ಮೇಲೆ ರಸಗೊಬ್ಬರ ದರ ಹೆಚ್ಚಳದ ಬರೆ: ಸರ್ಕಾರದ ಕ್ರಮ ಖಂಡಿಸಿದ ಎಸ್‌ಕೆಎಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...