Homeಚಳವಳಿರೈತರ ಮೇಲೆ ರಸಗೊಬ್ಬರ ದರ ಹೆಚ್ಚಳದ ಬರೆ: ಸರ್ಕಾರದ ಕ್ರಮ ಖಂಡಿಸಿದ ಎಸ್‌ಕೆಎಂ

ರೈತರ ಮೇಲೆ ರಸಗೊಬ್ಬರ ದರ ಹೆಚ್ಚಳದ ಬರೆ: ಸರ್ಕಾರದ ಕ್ರಮ ಖಂಡಿಸಿದ ಎಸ್‌ಕೆಎಂ

- Advertisement -
- Advertisement -

ಪೆಟ್ರೋಲ್, ಡೀಸೆಲ್, ಗ್ಯಾಸ್ ಸಿಲಿಂಡರ್‌, ದಿನಬಳಕೆ ವಸ್ತುಗಳ ಬೆಲೆ ಹೆಚ್ಚಾಗಿ ಜನಸಾಮಾನ್ಯರ ಜೀವನದ ಮೇಲೆ ಬರೆ ಬಿದ್ದಿದೆ. ಮೂರು ವಿವಾದಿತ ಕೃಷಿ ಕಾನೂನುಗಳನ್ನು ವಿರೋಧಿಸಿ ಲಕ್ಷಾಂತರ ರೈತರು ಬೀದಿಗಿಳಿದಿದ್ದಾರೆ. ಈ ನಡುವೆಯೇ ರಸಗೊಬ್ಬರ ಬೆಲೆ ಹೆಚ್ಚಿಸಿ ಮತ್ತಷ್ಟು ಹೊರೆ ನೀಡಲು ಕೇಂದ್ರ ಸರ್ಕಾರ ಮುಂದಾಗಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ.

ಇಂಡಿಯನ್ ಫಾರ್ಮರ್ಸ್ ಫರ್ಟಿಲೈಜರ್ ಕೋಆಪರೇಟಿವ್ ಲಿಮಿಟೆಡ್ (ಇಫ್ಕೊ) ಇತ್ತೀಚೆಗೆ ನೀಡಿರುವ ನೋಟಿಸ್ ಪ್ರಕಾರ, ಡಿ-ಅಮೋನಿಯಂ ಫಾಸ್ಫೇಟ್ (ಡಿಎಪಿ) 1.200 ರೂ.ಗಳು ಇದದ್ದು, 1,900 ರೂಗಳಿಗೆ ಏರಿಕೆಯಾಗಿದೆ. ಏಕಾಏಕಿ 700 ರೂಪಾಯಿಗಳನ್ನು ಏರಿಕೆ ಮಾಡಿರುವ ಕ್ರಮಕ್ಕೆ ರೈತರು ಆತಂಕಕ್ಕೆ ಒಳಗಾಗಿದ್ದಾರೆ. ಇದರ ಜೊತೆಗೆ, ಇತರ ಉತ್ಪನ್ನಗಳ ಬೆಲೆಯೂ ಹೆಚ್ಚಾಗಿದೆ.

ರಸಗೊಬ್ಬರದ ಬೆಲೆ ಹೆಚ್ಚಳವನ್ನು ವಿರೋಧಿಸಿರುವ ಸಂಯುಕ್ತ ಕಿಸಾನ್ ಮೋರ್ಚಾ, “ಈ ಹೆಚ್ಚಳವು ರೈತರ ಮೇಲೆ ನೇರ ದಾಳಿಯಾಗಿದ್ದು, ದುಬಾರಿ ಬೆಲೆಯಲ್ಲಿ ಡಿಎಪಿ ಖರೀದಿಸಲು ರೈತರ ಮೇಲೆ ಒತ್ತಡ ಹೇರಲಾಗುತ್ತಿದೆ. ಸರ್ಕಾರದ ಈ ಕ್ರಮವನ್ನು ಯೂನಿಯನ್ ತೀವ್ರವಾಗಿ ಖಂಡಿಸುತ್ತದೆ. ಬೆಲೆ ಕಡಿಮೆಯಾಗದಿದ್ದರೆ ಹೋರಾಟ ತೀವ್ರಗೊಳ್ಳುತ್ತದೆ’ ಎಂದು ಎಚ್ಚರಿಕೆ ನೀಡಿದೆ.

ಇದನ್ನೂ ಓದಿ: ರೈತ ಹೋರಾಟ: ಹುತಾತ್ಮ ಸ್ಮಾರಕಕ್ಕೆ ಸೇರಿದ ದೇಶದ 23 ರಾಜ್ಯಗಳ 1,500 ಹಳ್ಳಿಗಳ ಮಣ್ಣು

1,200 ರೂ ಇದ್ದ ಡಿಎಪಿ ಗೊಬ್ಬರ ಈಗ 1900 ಅಂದರೆ 700 ರೂ. ಏರಿಕೆ. ಇಫ್ಕೋ ಗೊಬ್ಬರ 1,185 ರೂ. ಇದದ್ದು 1,800 ರೂಪಾಯಿಯಾಗಿದೆ.ಅಂದರೆ 615 ರೂ. ಏರಿಕೆಯಾಗಿದೆ. 20-20 ಗೊಬ್ಬರವನ್ನು 425 ರೂಪಾಯಿ ಹೆಚ್ಚಳ ಮಾಡಲಾಗಿದ್ದು, 925 ರಿಂದ 1350 ರೂ.ಏರಿಕೆಯಾಗಿದೆ.

ರಸಗೊಬ್ಬರವನ್ನು ಒಂದೇ ಬಾರಿ ಈ ಪ್ರಮಾಣದಲ್ಲಿ ಬೆಲೆ ಏರಿಸಿದ ಇತಿಹಾಸವಿಲ್ಲ. ಇದು ರೈತರಿಗೆ ಬಹು ದೊಡ್ಡ ಹೊಡೆತ. ಬೆಲೆ ಏರಿಕೆಗಳ ನಡುವೆ ಜನಸಾಮಾನ್ಯರ ಮೇಲೆ ಸವಾರಿ ಮಾಡುತ್ತಿದೆ ಕೇಂದ್ರ ಸರ್ಕಾರ. ಬೆನ್ನೆಲುಬು ಅಂತಲೇ ರೈತನ ಬೆನ್ನೆಲುಬು ಮುರಿದಿದೆ. ಇವೆಲ್ಲಾ ಬೆಳವಣಿಗೆಗಳು ನಿರೀಕ್ಷಿತ ಎಂದು ರೈತ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ದಾಸ್ತಾನಿರುವ ಗೊಬ್ಬರವನ್ನು ಹಳೆಯ ದರಕ್ಕೆ ಮಾರಾಟ ಮಾಡಲಾಗುವುದು. ಹೊಸ ರಸಗೊಬ್ಬರ ಉತ್ಪನ್ನಕ್ಕೆ ಹೊಸ ದರ ಅನ್ವಯವಾಗಲಿದೆ ಎಂದು ಕೇಂದ್ರದ ರಸಗೊಬ್ಬರ ಮತ್ತು ರಾಸಾಯನಿಕ ಖಾತೆಗಳ ಸಚಿವ ಡಿ.ವಿ. ಸದಾನಂದ ಗೌಡ ತಿಳಿಸಿದ್ದಾರೆ.

ಇಫ್ಕೊ ಭಾರತದ ಅತಿದೊಡ್ಡ ಸಹಕಾರಿ ಸಂಘಗಳಲ್ಲಿ ಒಂದಾಗಿದ್ದು, ಇದು ಸಂಪೂರ್ಣವಾಗಿ ಭಾರತೀಯ ಸಹಕಾರಿ ಸಂಸ್ಥೆಗಳ ಒಡೆತನದಲ್ಲಿದೆ. ಇಫ್ಕೋ ವೆಬ್‌ಸೈಟ್‌ನ ಪ್ರಕಾರ ದಕ್ಷ ರಸಗೊಬ್ಬರಗಳ ಸಮತೋಲನ ಬಳಕೆಯ ಮೂಲಕ ರೈತರ ಬೆಳೆ ಉತ್ಪಾದಕತೆಯನ್ನು ಹೆಚ್ಚಿಸಲು ಸಹಾಯ ಮಾಡಿ, ಆದಾಯವನ್ನು ಹೆಚ್ಚಿಸುವ ಗುರಿಯನ್ನು ಹೊಂದಿದೆ ಎಂದು ಹೇಳುತ್ತದೆ.

ಇದಕ್ಕೆ ಪ್ರತಿಕ್ರಿಯೆಯಾಗಿ, ’ಇಫ್ಕೋ ಮಾಡಿರುವ ಬೆಲೆಗಳ ಹೆಚ್ಚಳವು ರೈತರಿಗೆ ಯಾವುದೇ ರೀತಿಯಲ್ಲಿ ಸಹಾಯವಾಗುವುದಿಲ್ಲ. ಎಲ್ಲಾ ಉತ್ಪನ್ನಗಳ ಬೆಲೆಗಳನ್ನು ಕಡಿಮೆ ಮಾಡದಿದ್ದರೆ ಚಳುವಳಿ ಮತ್ತಷ್ಟು ತೀವ್ರಗೊಳ್ಳುತ್ತದೆ’ ಎಂದು ಇಫ್ಕೊ ಮತ್ತು ಸರ್ಕಾರಕ್ಕೆ ಎಸ್‌ಕೆಎಂ ಎಚ್ಚರಿಕೆ ನೀಡಿದೆ.

ಒಕ್ಕೂಟ ಸರ್ಕಾರ ಜಾರಿಗೆ ತಂದಿರುವ ವಿವಾದಿತ ಮೂರು ಕೃಷಿ ಕಾನೂನುಗಳನ್ನು ವಿರೋಧಿಸಿ ರೈತರು ನಡೆಸುತ್ತಿರುವ ಪ್ರತಿಭಟನೆ 134ನೇ ದಿನಕ್ಕೆ ಕಾಲಿಟ್ಟಿದೆ. ವಿವಾದಿತ ಕೃಷಿ ಕಾನೂನುಗಳನ್ನು ರದ್ದುಗೊಳಿಸಬೇಕು ಮತ್ತು ಕನಿಷ್ಠ ಬೆಂಬಲ ಬೆಲೆ ಕಾಯ್ದೆಯನ್ನು ಜಾರಿಗೊಳಿಸಬೇಕೆಂದು ಲಕ್ಷಾಂತರ ರೈತರು ಹೋರಾಟ ನಡೆಸುತ್ತಿದ್ದಾರೆ.


ಇದನ್ನೂ ಓದಿ: ಸಾರಿಗೆ ನೌಕರರ ಮುಷ್ಕರವನ್ನು ಮುರಿಯಲು ಪ್ರಯತ್ನಿಸುತ್ತಿರುವ ಸರ್ಕಾರ?; ಗೃಹ ಸಚಿವ ಹೇಳಿದ್ದೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...