Homeಚಳವಳಿರೈತರ ಮೇಲೆ ರಸಗೊಬ್ಬರ ದರ ಹೆಚ್ಚಳದ ಬರೆ: ಸರ್ಕಾರದ ಕ್ರಮ ಖಂಡಿಸಿದ ಎಸ್‌ಕೆಎಂ

ರೈತರ ಮೇಲೆ ರಸಗೊಬ್ಬರ ದರ ಹೆಚ್ಚಳದ ಬರೆ: ಸರ್ಕಾರದ ಕ್ರಮ ಖಂಡಿಸಿದ ಎಸ್‌ಕೆಎಂ

- Advertisement -
- Advertisement -

ಪೆಟ್ರೋಲ್, ಡೀಸೆಲ್, ಗ್ಯಾಸ್ ಸಿಲಿಂಡರ್‌, ದಿನಬಳಕೆ ವಸ್ತುಗಳ ಬೆಲೆ ಹೆಚ್ಚಾಗಿ ಜನಸಾಮಾನ್ಯರ ಜೀವನದ ಮೇಲೆ ಬರೆ ಬಿದ್ದಿದೆ. ಮೂರು ವಿವಾದಿತ ಕೃಷಿ ಕಾನೂನುಗಳನ್ನು ವಿರೋಧಿಸಿ ಲಕ್ಷಾಂತರ ರೈತರು ಬೀದಿಗಿಳಿದಿದ್ದಾರೆ. ಈ ನಡುವೆಯೇ ರಸಗೊಬ್ಬರ ಬೆಲೆ ಹೆಚ್ಚಿಸಿ ಮತ್ತಷ್ಟು ಹೊರೆ ನೀಡಲು ಕೇಂದ್ರ ಸರ್ಕಾರ ಮುಂದಾಗಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ.

ಇಂಡಿಯನ್ ಫಾರ್ಮರ್ಸ್ ಫರ್ಟಿಲೈಜರ್ ಕೋಆಪರೇಟಿವ್ ಲಿಮಿಟೆಡ್ (ಇಫ್ಕೊ) ಇತ್ತೀಚೆಗೆ ನೀಡಿರುವ ನೋಟಿಸ್ ಪ್ರಕಾರ, ಡಿ-ಅಮೋನಿಯಂ ಫಾಸ್ಫೇಟ್ (ಡಿಎಪಿ) 1.200 ರೂ.ಗಳು ಇದದ್ದು, 1,900 ರೂಗಳಿಗೆ ಏರಿಕೆಯಾಗಿದೆ. ಏಕಾಏಕಿ 700 ರೂಪಾಯಿಗಳನ್ನು ಏರಿಕೆ ಮಾಡಿರುವ ಕ್ರಮಕ್ಕೆ ರೈತರು ಆತಂಕಕ್ಕೆ ಒಳಗಾಗಿದ್ದಾರೆ. ಇದರ ಜೊತೆಗೆ, ಇತರ ಉತ್ಪನ್ನಗಳ ಬೆಲೆಯೂ ಹೆಚ್ಚಾಗಿದೆ.

ರಸಗೊಬ್ಬರದ ಬೆಲೆ ಹೆಚ್ಚಳವನ್ನು ವಿರೋಧಿಸಿರುವ ಸಂಯುಕ್ತ ಕಿಸಾನ್ ಮೋರ್ಚಾ, “ಈ ಹೆಚ್ಚಳವು ರೈತರ ಮೇಲೆ ನೇರ ದಾಳಿಯಾಗಿದ್ದು, ದುಬಾರಿ ಬೆಲೆಯಲ್ಲಿ ಡಿಎಪಿ ಖರೀದಿಸಲು ರೈತರ ಮೇಲೆ ಒತ್ತಡ ಹೇರಲಾಗುತ್ತಿದೆ. ಸರ್ಕಾರದ ಈ ಕ್ರಮವನ್ನು ಯೂನಿಯನ್ ತೀವ್ರವಾಗಿ ಖಂಡಿಸುತ್ತದೆ. ಬೆಲೆ ಕಡಿಮೆಯಾಗದಿದ್ದರೆ ಹೋರಾಟ ತೀವ್ರಗೊಳ್ಳುತ್ತದೆ’ ಎಂದು ಎಚ್ಚರಿಕೆ ನೀಡಿದೆ.

ಇದನ್ನೂ ಓದಿ: ರೈತ ಹೋರಾಟ: ಹುತಾತ್ಮ ಸ್ಮಾರಕಕ್ಕೆ ಸೇರಿದ ದೇಶದ 23 ರಾಜ್ಯಗಳ 1,500 ಹಳ್ಳಿಗಳ ಮಣ್ಣು

1,200 ರೂ ಇದ್ದ ಡಿಎಪಿ ಗೊಬ್ಬರ ಈಗ 1900 ಅಂದರೆ 700 ರೂ. ಏರಿಕೆ. ಇಫ್ಕೋ ಗೊಬ್ಬರ 1,185 ರೂ. ಇದದ್ದು 1,800 ರೂಪಾಯಿಯಾಗಿದೆ.ಅಂದರೆ 615 ರೂ. ಏರಿಕೆಯಾಗಿದೆ. 20-20 ಗೊಬ್ಬರವನ್ನು 425 ರೂಪಾಯಿ ಹೆಚ್ಚಳ ಮಾಡಲಾಗಿದ್ದು, 925 ರಿಂದ 1350 ರೂ.ಏರಿಕೆಯಾಗಿದೆ.

ರಸಗೊಬ್ಬರವನ್ನು ಒಂದೇ ಬಾರಿ ಈ ಪ್ರಮಾಣದಲ್ಲಿ ಬೆಲೆ ಏರಿಸಿದ ಇತಿಹಾಸವಿಲ್ಲ. ಇದು ರೈತರಿಗೆ ಬಹು ದೊಡ್ಡ ಹೊಡೆತ. ಬೆಲೆ ಏರಿಕೆಗಳ ನಡುವೆ ಜನಸಾಮಾನ್ಯರ ಮೇಲೆ ಸವಾರಿ ಮಾಡುತ್ತಿದೆ ಕೇಂದ್ರ ಸರ್ಕಾರ. ಬೆನ್ನೆಲುಬು ಅಂತಲೇ ರೈತನ ಬೆನ್ನೆಲುಬು ಮುರಿದಿದೆ. ಇವೆಲ್ಲಾ ಬೆಳವಣಿಗೆಗಳು ನಿರೀಕ್ಷಿತ ಎಂದು ರೈತ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ದಾಸ್ತಾನಿರುವ ಗೊಬ್ಬರವನ್ನು ಹಳೆಯ ದರಕ್ಕೆ ಮಾರಾಟ ಮಾಡಲಾಗುವುದು. ಹೊಸ ರಸಗೊಬ್ಬರ ಉತ್ಪನ್ನಕ್ಕೆ ಹೊಸ ದರ ಅನ್ವಯವಾಗಲಿದೆ ಎಂದು ಕೇಂದ್ರದ ರಸಗೊಬ್ಬರ ಮತ್ತು ರಾಸಾಯನಿಕ ಖಾತೆಗಳ ಸಚಿವ ಡಿ.ವಿ. ಸದಾನಂದ ಗೌಡ ತಿಳಿಸಿದ್ದಾರೆ.

ಇಫ್ಕೊ ಭಾರತದ ಅತಿದೊಡ್ಡ ಸಹಕಾರಿ ಸಂಘಗಳಲ್ಲಿ ಒಂದಾಗಿದ್ದು, ಇದು ಸಂಪೂರ್ಣವಾಗಿ ಭಾರತೀಯ ಸಹಕಾರಿ ಸಂಸ್ಥೆಗಳ ಒಡೆತನದಲ್ಲಿದೆ. ಇಫ್ಕೋ ವೆಬ್‌ಸೈಟ್‌ನ ಪ್ರಕಾರ ದಕ್ಷ ರಸಗೊಬ್ಬರಗಳ ಸಮತೋಲನ ಬಳಕೆಯ ಮೂಲಕ ರೈತರ ಬೆಳೆ ಉತ್ಪಾದಕತೆಯನ್ನು ಹೆಚ್ಚಿಸಲು ಸಹಾಯ ಮಾಡಿ, ಆದಾಯವನ್ನು ಹೆಚ್ಚಿಸುವ ಗುರಿಯನ್ನು ಹೊಂದಿದೆ ಎಂದು ಹೇಳುತ್ತದೆ.

ಇದಕ್ಕೆ ಪ್ರತಿಕ್ರಿಯೆಯಾಗಿ, ’ಇಫ್ಕೋ ಮಾಡಿರುವ ಬೆಲೆಗಳ ಹೆಚ್ಚಳವು ರೈತರಿಗೆ ಯಾವುದೇ ರೀತಿಯಲ್ಲಿ ಸಹಾಯವಾಗುವುದಿಲ್ಲ. ಎಲ್ಲಾ ಉತ್ಪನ್ನಗಳ ಬೆಲೆಗಳನ್ನು ಕಡಿಮೆ ಮಾಡದಿದ್ದರೆ ಚಳುವಳಿ ಮತ್ತಷ್ಟು ತೀವ್ರಗೊಳ್ಳುತ್ತದೆ’ ಎಂದು ಇಫ್ಕೊ ಮತ್ತು ಸರ್ಕಾರಕ್ಕೆ ಎಸ್‌ಕೆಎಂ ಎಚ್ಚರಿಕೆ ನೀಡಿದೆ.

ಒಕ್ಕೂಟ ಸರ್ಕಾರ ಜಾರಿಗೆ ತಂದಿರುವ ವಿವಾದಿತ ಮೂರು ಕೃಷಿ ಕಾನೂನುಗಳನ್ನು ವಿರೋಧಿಸಿ ರೈತರು ನಡೆಸುತ್ತಿರುವ ಪ್ರತಿಭಟನೆ 134ನೇ ದಿನಕ್ಕೆ ಕಾಲಿಟ್ಟಿದೆ. ವಿವಾದಿತ ಕೃಷಿ ಕಾನೂನುಗಳನ್ನು ರದ್ದುಗೊಳಿಸಬೇಕು ಮತ್ತು ಕನಿಷ್ಠ ಬೆಂಬಲ ಬೆಲೆ ಕಾಯ್ದೆಯನ್ನು ಜಾರಿಗೊಳಿಸಬೇಕೆಂದು ಲಕ್ಷಾಂತರ ರೈತರು ಹೋರಾಟ ನಡೆಸುತ್ತಿದ್ದಾರೆ.


ಇದನ್ನೂ ಓದಿ: ಸಾರಿಗೆ ನೌಕರರ ಮುಷ್ಕರವನ್ನು ಮುರಿಯಲು ಪ್ರಯತ್ನಿಸುತ್ತಿರುವ ಸರ್ಕಾರ?; ಗೃಹ ಸಚಿವ ಹೇಳಿದ್ದೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...