Homeಚಳವಳಿರೈತರ ಮೇಲೆ ರಸಗೊಬ್ಬರ ದರ ಹೆಚ್ಚಳದ ಬರೆ: ಸರ್ಕಾರದ ಕ್ರಮ ಖಂಡಿಸಿದ ಎಸ್‌ಕೆಎಂ

ರೈತರ ಮೇಲೆ ರಸಗೊಬ್ಬರ ದರ ಹೆಚ್ಚಳದ ಬರೆ: ಸರ್ಕಾರದ ಕ್ರಮ ಖಂಡಿಸಿದ ಎಸ್‌ಕೆಎಂ

- Advertisement -
- Advertisement -

ಪೆಟ್ರೋಲ್, ಡೀಸೆಲ್, ಗ್ಯಾಸ್ ಸಿಲಿಂಡರ್‌, ದಿನಬಳಕೆ ವಸ್ತುಗಳ ಬೆಲೆ ಹೆಚ್ಚಾಗಿ ಜನಸಾಮಾನ್ಯರ ಜೀವನದ ಮೇಲೆ ಬರೆ ಬಿದ್ದಿದೆ. ಮೂರು ವಿವಾದಿತ ಕೃಷಿ ಕಾನೂನುಗಳನ್ನು ವಿರೋಧಿಸಿ ಲಕ್ಷಾಂತರ ರೈತರು ಬೀದಿಗಿಳಿದಿದ್ದಾರೆ. ಈ ನಡುವೆಯೇ ರಸಗೊಬ್ಬರ ಬೆಲೆ ಹೆಚ್ಚಿಸಿ ಮತ್ತಷ್ಟು ಹೊರೆ ನೀಡಲು ಕೇಂದ್ರ ಸರ್ಕಾರ ಮುಂದಾಗಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ.

ಇಂಡಿಯನ್ ಫಾರ್ಮರ್ಸ್ ಫರ್ಟಿಲೈಜರ್ ಕೋಆಪರೇಟಿವ್ ಲಿಮಿಟೆಡ್ (ಇಫ್ಕೊ) ಇತ್ತೀಚೆಗೆ ನೀಡಿರುವ ನೋಟಿಸ್ ಪ್ರಕಾರ, ಡಿ-ಅಮೋನಿಯಂ ಫಾಸ್ಫೇಟ್ (ಡಿಎಪಿ) 1.200 ರೂ.ಗಳು ಇದದ್ದು, 1,900 ರೂಗಳಿಗೆ ಏರಿಕೆಯಾಗಿದೆ. ಏಕಾಏಕಿ 700 ರೂಪಾಯಿಗಳನ್ನು ಏರಿಕೆ ಮಾಡಿರುವ ಕ್ರಮಕ್ಕೆ ರೈತರು ಆತಂಕಕ್ಕೆ ಒಳಗಾಗಿದ್ದಾರೆ. ಇದರ ಜೊತೆಗೆ, ಇತರ ಉತ್ಪನ್ನಗಳ ಬೆಲೆಯೂ ಹೆಚ್ಚಾಗಿದೆ.

ರಸಗೊಬ್ಬರದ ಬೆಲೆ ಹೆಚ್ಚಳವನ್ನು ವಿರೋಧಿಸಿರುವ ಸಂಯುಕ್ತ ಕಿಸಾನ್ ಮೋರ್ಚಾ, “ಈ ಹೆಚ್ಚಳವು ರೈತರ ಮೇಲೆ ನೇರ ದಾಳಿಯಾಗಿದ್ದು, ದುಬಾರಿ ಬೆಲೆಯಲ್ಲಿ ಡಿಎಪಿ ಖರೀದಿಸಲು ರೈತರ ಮೇಲೆ ಒತ್ತಡ ಹೇರಲಾಗುತ್ತಿದೆ. ಸರ್ಕಾರದ ಈ ಕ್ರಮವನ್ನು ಯೂನಿಯನ್ ತೀವ್ರವಾಗಿ ಖಂಡಿಸುತ್ತದೆ. ಬೆಲೆ ಕಡಿಮೆಯಾಗದಿದ್ದರೆ ಹೋರಾಟ ತೀವ್ರಗೊಳ್ಳುತ್ತದೆ’ ಎಂದು ಎಚ್ಚರಿಕೆ ನೀಡಿದೆ.

ಇದನ್ನೂ ಓದಿ: ರೈತ ಹೋರಾಟ: ಹುತಾತ್ಮ ಸ್ಮಾರಕಕ್ಕೆ ಸೇರಿದ ದೇಶದ 23 ರಾಜ್ಯಗಳ 1,500 ಹಳ್ಳಿಗಳ ಮಣ್ಣು

1,200 ರೂ ಇದ್ದ ಡಿಎಪಿ ಗೊಬ್ಬರ ಈಗ 1900 ಅಂದರೆ 700 ರೂ. ಏರಿಕೆ. ಇಫ್ಕೋ ಗೊಬ್ಬರ 1,185 ರೂ. ಇದದ್ದು 1,800 ರೂಪಾಯಿಯಾಗಿದೆ.ಅಂದರೆ 615 ರೂ. ಏರಿಕೆಯಾಗಿದೆ. 20-20 ಗೊಬ್ಬರವನ್ನು 425 ರೂಪಾಯಿ ಹೆಚ್ಚಳ ಮಾಡಲಾಗಿದ್ದು, 925 ರಿಂದ 1350 ರೂ.ಏರಿಕೆಯಾಗಿದೆ.

ರಸಗೊಬ್ಬರವನ್ನು ಒಂದೇ ಬಾರಿ ಈ ಪ್ರಮಾಣದಲ್ಲಿ ಬೆಲೆ ಏರಿಸಿದ ಇತಿಹಾಸವಿಲ್ಲ. ಇದು ರೈತರಿಗೆ ಬಹು ದೊಡ್ಡ ಹೊಡೆತ. ಬೆಲೆ ಏರಿಕೆಗಳ ನಡುವೆ ಜನಸಾಮಾನ್ಯರ ಮೇಲೆ ಸವಾರಿ ಮಾಡುತ್ತಿದೆ ಕೇಂದ್ರ ಸರ್ಕಾರ. ಬೆನ್ನೆಲುಬು ಅಂತಲೇ ರೈತನ ಬೆನ್ನೆಲುಬು ಮುರಿದಿದೆ. ಇವೆಲ್ಲಾ ಬೆಳವಣಿಗೆಗಳು ನಿರೀಕ್ಷಿತ ಎಂದು ರೈತ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ದಾಸ್ತಾನಿರುವ ಗೊಬ್ಬರವನ್ನು ಹಳೆಯ ದರಕ್ಕೆ ಮಾರಾಟ ಮಾಡಲಾಗುವುದು. ಹೊಸ ರಸಗೊಬ್ಬರ ಉತ್ಪನ್ನಕ್ಕೆ ಹೊಸ ದರ ಅನ್ವಯವಾಗಲಿದೆ ಎಂದು ಕೇಂದ್ರದ ರಸಗೊಬ್ಬರ ಮತ್ತು ರಾಸಾಯನಿಕ ಖಾತೆಗಳ ಸಚಿವ ಡಿ.ವಿ. ಸದಾನಂದ ಗೌಡ ತಿಳಿಸಿದ್ದಾರೆ.

ಇಫ್ಕೊ ಭಾರತದ ಅತಿದೊಡ್ಡ ಸಹಕಾರಿ ಸಂಘಗಳಲ್ಲಿ ಒಂದಾಗಿದ್ದು, ಇದು ಸಂಪೂರ್ಣವಾಗಿ ಭಾರತೀಯ ಸಹಕಾರಿ ಸಂಸ್ಥೆಗಳ ಒಡೆತನದಲ್ಲಿದೆ. ಇಫ್ಕೋ ವೆಬ್‌ಸೈಟ್‌ನ ಪ್ರಕಾರ ದಕ್ಷ ರಸಗೊಬ್ಬರಗಳ ಸಮತೋಲನ ಬಳಕೆಯ ಮೂಲಕ ರೈತರ ಬೆಳೆ ಉತ್ಪಾದಕತೆಯನ್ನು ಹೆಚ್ಚಿಸಲು ಸಹಾಯ ಮಾಡಿ, ಆದಾಯವನ್ನು ಹೆಚ್ಚಿಸುವ ಗುರಿಯನ್ನು ಹೊಂದಿದೆ ಎಂದು ಹೇಳುತ್ತದೆ.

ಇದಕ್ಕೆ ಪ್ರತಿಕ್ರಿಯೆಯಾಗಿ, ’ಇಫ್ಕೋ ಮಾಡಿರುವ ಬೆಲೆಗಳ ಹೆಚ್ಚಳವು ರೈತರಿಗೆ ಯಾವುದೇ ರೀತಿಯಲ್ಲಿ ಸಹಾಯವಾಗುವುದಿಲ್ಲ. ಎಲ್ಲಾ ಉತ್ಪನ್ನಗಳ ಬೆಲೆಗಳನ್ನು ಕಡಿಮೆ ಮಾಡದಿದ್ದರೆ ಚಳುವಳಿ ಮತ್ತಷ್ಟು ತೀವ್ರಗೊಳ್ಳುತ್ತದೆ’ ಎಂದು ಇಫ್ಕೊ ಮತ್ತು ಸರ್ಕಾರಕ್ಕೆ ಎಸ್‌ಕೆಎಂ ಎಚ್ಚರಿಕೆ ನೀಡಿದೆ.

ಒಕ್ಕೂಟ ಸರ್ಕಾರ ಜಾರಿಗೆ ತಂದಿರುವ ವಿವಾದಿತ ಮೂರು ಕೃಷಿ ಕಾನೂನುಗಳನ್ನು ವಿರೋಧಿಸಿ ರೈತರು ನಡೆಸುತ್ತಿರುವ ಪ್ರತಿಭಟನೆ 134ನೇ ದಿನಕ್ಕೆ ಕಾಲಿಟ್ಟಿದೆ. ವಿವಾದಿತ ಕೃಷಿ ಕಾನೂನುಗಳನ್ನು ರದ್ದುಗೊಳಿಸಬೇಕು ಮತ್ತು ಕನಿಷ್ಠ ಬೆಂಬಲ ಬೆಲೆ ಕಾಯ್ದೆಯನ್ನು ಜಾರಿಗೊಳಿಸಬೇಕೆಂದು ಲಕ್ಷಾಂತರ ರೈತರು ಹೋರಾಟ ನಡೆಸುತ್ತಿದ್ದಾರೆ.


ಇದನ್ನೂ ಓದಿ: ಸಾರಿಗೆ ನೌಕರರ ಮುಷ್ಕರವನ್ನು ಮುರಿಯಲು ಪ್ರಯತ್ನಿಸುತ್ತಿರುವ ಸರ್ಕಾರ?; ಗೃಹ ಸಚಿವ ಹೇಳಿದ್ದೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಬಾಗಲಕೋಟೆಯ ವಿವಿಧ ಪ್ರದೇಶಗಳಲ್ಲಿ ಎಸ್‌ಐಆರ್‌ ವಿರುದ್ಧ ಜನಜಾಗೃತಿ ಜಾಥಾ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬಾಗಲಕೋಟೆ ನಗರದ ವಿವಿಧ ಭಾಗಗಳಲ್ಲಿ ಭಾನುವಾರ (ಜೂ.14) ಜಾಗೃತಿ ಜಾಥಾ ನಡೆಯಿತು. ನವನಗರದ ವಿದ್ಯಾಗಿರಿ ಬಸವೇಶ್ವರ ಇಂಜಿನಿಯರಿಂಗ್ ಕಾಲೇಜು ಸರ್ಕಲ್‌ನಿಂದ ಪ್ರಾರಂಭವಾದ ಜಾಥಾ...

SIR ವಿರೋಧಿ ಜನಜಾಗೃತಿ ಜಾಥಾ: ಕಾಫಿ ನಾಡು ಚಿಕ್ಕಮಗಳೂರಲ್ಲಿ ಅದ್ದೂರಿ ಸ್ವಾಗತ

ಚಿಕ್ಕಮಗಳೂರು: ರಾಜ್ಯಾದ್ಯಂತ ಐದು ವಿಭಾಗಗಳಲ್ಲಿ ಸಂಚರಿಸುತ್ತಿರುವ 'SIR ವಿರೋಧಿ ಜನಜಾಗೃತಿ ಜಾಥಾ'ದ 3ನೇ ಮಾರ್ಗದ ತಂಡಕ್ಕೆ ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಅದ್ದೂರಿ ಸ್ವಾಗತ ದೊರೆಯಿತು. ಭಾನುವಾರ ಬೆಳಗ್ಗೆ ಜಿಲ್ಲೆಯ ಕೊಪ್ಪ ತಾಲ್ಲೂಕಿಗೆ ಆಗಮಿಸಿದ ಜಾಥಾ...

ಚಿಕ್ಕಮಗಳೂರಿನಲ್ಲಿ ಎಸ್‌ಐಆರ್ (SIR) ವಿರೋಧಿ ಜಾಥಾ: ಮತದಾರರ ಹಕ್ಕು ಕಸಿಯುವ ಹುನ್ನಾರದ ವಿರುದ್ಧ ಆಕ್ರೋಶ

ಭಾರತ ಚುನಾವಣಾ ಆಯೋಗವು ಜಾರಿಗೆ ತಂದಿರುವ ವಿಶೇಷ ತೀವ್ರ ಪರಿಷ್ಕರಣೆ (SIR - Special Intensive Revision) ಪ್ರಕ್ರಿಯೆಯಲ್ಲಿ ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಜಾಗ್ರತೆ ವಹಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ....

ಮಂಗಳೂರು: ಚುನಾವಣಾ ಆಯೋಗ ಕೇಂದ್ರ ಸರ್ಕಾರದ ಮುಖವಾಣಿಯಾಗಿ ಕಾರ್ಯನಿರ್ವಹಿಸುತ್ತಿದೆ: ವಿ.ಎಸ್. ಶ್ರೀಧರ್ 

ರಾಜ್ಯದ ಆರು ಜಿಲ್ಲೆಗಳಲ್ಲಿ ಪ್ರಗತಿಪರ ಸಂಘಟನೆಗಳು, ಎದ್ದೇಳು ಕರ್ನಾಟಕ ಹಾಗೂ ಜಾತ್ಯತೀತ ಪಕ್ಷಗಳ ಒಕ್ಕೂಟವಾದ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿರುವ ಎಸ್‌ಐಆರ್ ಜನಜಾಗೃತಿ ಜಾಥಾದ ಭಾಗವಾಗಿ ಇಂದು (ಜೂನ್-14) ಮಂಗಳೂರಿನಲ್ಲಿ ಸಭೆ...

ಬಿಸಿಲ ನಾಡು ಕಲಬುರಗಿಯಲ್ಲಿ ಮೊಳಗಿದ SIR ವಿರೋಧಿ ಘೋಷಣೆ.

ಕೇಂದ್ರ ಚುನಾವಣಾ ಆಯೋಗ ಜಾರಿಗೆ ತಂದಿರುವ ವಿಶೇಷ ತೀವ್ರ ಮತ ಪರಿಷ್ಕರಣೆ SIR ಅನ್ನು ಕರ್ನಾಟಕದಲ್ಲಿ ಜಾರಿ ಮಾಡಬಾರದು ಎಂದು ಆಗ್ರಹಿಸಿ ಕರ್ನಾಟಕದಾದ್ಯಂತ ಎದ್ದೇಳು ಕರ್ನಾಟಕ ಹಾಗಾ SIR ವಿರೋಧಿ ಕರ್ನಾಟಕ ವೇದಿಕೆಯು...

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...