Homeಕರ್ನಾಟಕಎಲ್‌ಪಿಜಿ, ಪೆಟ್ರೋಲಿಯಂ ಉತ್ಪನ್ನಗಳ ಬೆಲೆ ಏರಿಕೆ - ಯುವ ಕಾಂಗ್ರೆಸ್ ಪ್ರತಿಭಟನೆ

ಎಲ್‌ಪಿಜಿ, ಪೆಟ್ರೋಲಿಯಂ ಉತ್ಪನ್ನಗಳ ಬೆಲೆ ಏರಿಕೆ – ಯುವ ಕಾಂಗ್ರೆಸ್ ಪ್ರತಿಭಟನೆ

ಬೆಲೆ ಇಳಿಕೆ ಮಾಡದಿದ್ದರೆ ಬಿಜೆಪಿ ಸಚಿವರು, ಸಂಸದರು, ಶಾಸಕರು ಸೇರಿದಂತೆ ಎಲ್ಲರನ್ನೂ ಘೇರಾವ್ ಮಾಡಿ ಹೋರಾಟವನ್ನು ತೀವ್ರಗೊಳಿಸುತ್ತೇವೆ ಯುವ ಕಾಂಗ್ರೆಸ್‌ ರಾಷ್ಟ್ರಾಧ್ಯಕ್ಷ ಶ್ರೀನಿವಾಸ್ ಬಿ.ವಿ. ಎಚ್ಚರಿಕೆ ನೀಡಿದ್ದಾರೆ

- Advertisement -
- Advertisement -

ಅಡುಗೆ ಅನಿಲ, ಪೆಟ್ರೋಲಿಯಂ ಉತ್ಪನ್ನಗಳು ಸೇರಿ, ಅಗತ್ಯ ವಸ್ತುಗಳ ಬೆಲೆ ಏರಿಕೆಯನ್ನು ವಿರೋಧಿಸಿ ಪ್ರದೇಶ ಯುವ ಕಾಂಗ್ರೆಸ್ ಬೆಂಗಳೂರಿನ ಆನಂದ್ ರಾವ್ ವೃತ್ತದಲ್ಲಿ ಗುರುವಾರದಂದು ಬೃಹತ್ ಪ್ರತಿಭಟನಾ ಜಾಥ ನಡೆಸಿದೆ. ಯುವ ಕಾಂಗ್ರೆಸ್ ನ ರಾಷ್ಟ್ರೀಯ ಅಧ್ಯಕ್ಷ ಶ್ರೀನಿವಾಸ್ ಬಿ.ವಿ, ರಾಜ್ಯಾಧ್ಯಕ್ಷ ಎಂ.ಎಸ್. ರಕ್ಷಾ ರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್ ಭವನದಿಂದ 100 ಅಡಿ ಉದ್ದದ ಸಿಲಿಂಡರ್‌‌ನ ಬಾವುಟ ಹಿಡಿದು ಹೊರಟ ಜಾಥ ಆನಂದ್ ರಾವ್ ವೃತ್ತದ ಮೇಲ್ಸೇತುವೆಯಿಂದ ಮೌರ್ಯ ಸರ್ಕಲ್‌ನ ಗಾಂಧಿ ಪ್ರತಿಮೆ ಮೂಲಕ ಸಾಗಿ ವಿನೂತನವಾಗಿ ಪ್ರತಿಭಟನೆ ನಡೆಸಿತು.

ಅಡುಗೆ ಅನಿಲ ಸಿಲಿಂಡರ್ ಗಳನ್ನು ಹಿಡಿದು ಯುವ ಕಾಂಗ್ರೆಸ್ ಕಾರ್ಯಕರ್ತರು ರಾಜ್ಯ ಮತ್ತು ಒಕ್ಕೂಟ ಸರ್ಕಾರಗಳ ವಿರುದ್ಧ ಘೋಷಣೆ ಕೂಗಿದರು. ಒಕ್ಕೂಟ ಸರ್ಕಾರ ಕಳೆದ ಏಳು ವರ್ಷಗಳಲ್ಲಿ ಜನ ಸಾಮಾನ್ಯರ ಮೇಲೆ ನಿರಂತರವಾಗಿ ಬೆಲೆ ಏರಿಕೆ ಮಾಡಿ ಅನ್ಯಾಯ ಮಾಡುತ್ತಿದೆ. ಈ ಸರ್ಕಾರವನ್ನು ಕಿತ್ತೊಗೆಯುವವರೆಗೆ ಹೋರಾಟ ಮಾಡುವುದಾಗಿ ಪ್ರತಿಭಟನಾಕಾರರು ಘೋಷಣೆ ಕೂಗಿದರು.

ಇದನ್ನೂ ಓದಿ: ‘ಬೆಲೆ ಏರಿಕೆಗೆ ಕಾಂಗ್ರೆಸ್‌ ಕಾರಣ’ ಎಂದ ಬಿಜೆಪಿ ಸಂಸದ ಸಂಗಣ್ಣ ಕರಡಿ!

ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಶ್ರೀನಿವಾಸ್ ಬಿ.ವಿ. ಮಾತನಾಡಿ, “ಒಂದೆಡೆ ಉಜ್ವಲ ಯೋಜನೆಯಡಿ ಉಚಿತ ಸಿಲಿಂಡರ್‌ಗಳನ್ನು ನೀಡಿ, ಮತ್ತೊಂದೆಡೆ ಅಡುಗೆ ಸಿಲಿಂಡರ್ ಬೆಲೆಯನ್ನು ಗಣನೀಯವಾಗಿ ಏರಿಕೆ ಮಾಡಲಾಗುತ್ತಿದೆ. ಡಾ. ಮನಮೋಹನ್ ಸಿಂಗ್ ಕಾಲದಲ್ಲಿ 400 ರೂ ಇದ್ದ ಸಿಲಿಂಡರ್ ಬೆಲೆ ಇದೀಗ 900 ರೂಗೆ ತಲುಪಿದೆ. ಗೃಹಿಣಿಯರು ರಕ್ತ ಕಣ್ಣೀರಿನಲ್ಲಿ ಕೈ ತೊಳೆಯುತ್ತಿದ್ದಾರೆ. ಅಡುಗೆ ಮಾಡುವ ಪ್ರತಿಯೊಂದು ಪದಾರ್ಥದ ಬೆಲೆಯಲ್ಲಿಯೂ ವಿಪರೀತ ಏರಿಕೆಯಾಗಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

“ಬಿಜೆಪಿ ಎಂದರೆ ಬೆಲೆ ಏರಿಕೆ, ನರೇಂದ್ರ ಮೋದಿ ಎಂದರೆ ಬೆಲೆ ಏರಿಕೆಯಾಗಿದೆ. ಇವರಿಗೆ ಬಡವರ ಬಗ್ಗೆ ಕಿಂಚಿತ್ತೂ ಕಾಳಜಿ ಇಲ್ಲ. ಇಲ್ಲವಾಗಿದ್ದರೆ ಇಷ್ಟೊಂದು ಪ್ರಮಾಣದಲ್ಲಿ ಜನರಿಗೆ ಕಷ್ಟ ನೀಡುತ್ತಿರಲಿಲ್ಲ. ಬೆಲೆ ಇಳಿಕೆ ಮಾಡದಿದ್ದರೆ ಬಿಜೆಪಿ ಸಚಿವರು, ಸಂಸದರು, ಶಾಸಕರು ಹೀಗೆ ಎಲ್ಲರನ್ನೂ ಘೇರಾವ್ ಮಾಡಿ ಹೋರಾಟವನ್ನು ತೀವ್ರಗೊಳಿಸುತ್ತೇವೆ” ಎಂದು ಶ್ರೀನಿವಾಸ್ ಬಿ.ವಿ. ಎಚ್ಚರಿಕೆ ನೀಡಿದರು.

ಇದನ್ನೂ ಓದಿ: ಆಸ್ತಿ ಮಾರಾಟ, ಬೆಲೆ ಏರಿಕೆ: ಕರ್ನಾಟಕ ಕಾಂಗ್ರೆಸ್‌ನಿಂದ ’ಬಿಜೆಪಿಯ ಲೂಟಿಯ ವಿರುದ್ದ ಭಾರತ’ ಅಭಿಯಾನ

ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಎಂ.ಎಸ್. ರಕ್ಷಾ ರಾಮಯ್ಯ ಮಾತನಾಡಿ, “ಬಿಜೆಪಿ ನಾಯಕರು ಜನರ ಸಂಕಷ್ಟಕ್ಕೆ ಸ್ಪಂದಿಸುವಲ್ಲಿ ವಿಫಲರಾಗಿದ್ದಾರೆ. ರಾಜ್ಯಕ್ಕೆ ಅಮಿತ್ ಶಾ ಭೇಟಿ ನೀಡಿದ್ದು, ಅವರು ಬೆಲೆ ಏರಿಕೆ ಕುರಿತು ಮಾತನಾಡಬೇಕು. ಆದರೆ ವಿಚಿತ್ರವೆಂದರೆ ನರೇಂದ್ರ ಮೋದಿ, ಅಮಿತ್ ಶಾ ಮತ್ತಿತರ ಬಿಜೆಪಿ ನಾಯಕರು ಜನತೆ ಸಂಕಷ್ಟದಲ್ಲಿದ್ದಾಗ ಯಾವತ್ತೂ ಅಂತಹ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ. ರಾಜ್ಯಕ್ಕೂ ಭೇಟಿ ನೀಡುವುದಿಲ್ಲ. ಯಾರದೋ ಮದುವೆ, ಇಲ್ಲವೆ ಪಕ್ಷದ ಸಭೆಗಳಿಗೆ ಆಗಮಿಸುತ್ತಾರೆ. ಬಿಜೆಪಿ ನಾಯಕರು ಮನೆಯಲ್ಲಿ ಕುಳಿತಿದ್ದಾರೆ. ನಮ್ಮ ಹೋರಾಟ ದೆಹಲಿವರೆಗೆ ಕೊಂಡೊಯ್ಯುತ್ತೇವೆ” ಎಂದು ಹೇಳಿದರು.

“ರಾಜ್ಯ ಮತ್ತು ಒಕ್ಕೂಟ ಸರ್ಕಾರದ ಬಲೆ ಏರಿಕೆ ನೀತಿಯಿಂದಾಗಿ ಜನ ಸಾಮಾನ್ಯರು ತೀವ್ರ ಸಂಕಷ್ಟದಲ್ಲಿ ಸಿಲುಕಿದ್ದಾರೆ. ಜನರಿಗೆ ಉದ್ಯೋಗ ಸೃಷ್ಟಿಯಾಗಿಲ್ಲ. ಇರುವ ಉದ್ಯೋಗವೂ ನಷ್ಟವಾಗಿದೆ. ಜನರಲ್ಲಿ ಹಣ ಇಲ್ಲ. ಮುಂದಿನ 15 ದಿನಗಳ ಒಳಗಾಗಿ ಬೆಲೆ ಇಳಿಕೆಯಾಗದಿದ್ದರೆ ಬೇಡಿಕೆ ಈಡೇರುವ ತನಕ ರಾಜ್ಯದ ಮೂಲೆ ಮೂಲೆಗಳಲ್ಲಿ ಯುವ ಕಾಂಗ್ರೆಸ್ ತೀವ್ರ ಹೋರಾಟ ನಡೆಸಲಿದೆ” ಎಂದು ಎಚ್ಚರಿಕೆ ನೀಡಿದರು.

ತಮಿಳುನಾಡಿನಲ್ಲಿ ರಾಜ್ಯದ ಪಾಲಿನ 3 ರೂ ಸೆಸ್ ಕಡಿಮೆ ಮಾಡಿದ್ದು, ರಾಜ್ಯದಲ್ಲಿ ಬೆಲೆ ಇಳಿಕೆ ಮಾಡುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಸಲ್ಲಿಸಲಾಗುವುದು. ರಾಜ್ಯ ಹಾಗೂ ಒಕ್ಕೂಟ ಸರ್ಕಾರದಲ್ಲಿ ಒಂದೇ ಪಕ್ಷದ ಆಡಳಿತ ಇದ್ದರೆ ಅನುಕೂಲವಾಗುತ್ತದೆ ಎನ್ನುವ ನಂಬಿಕೆ ಹುಸಿಯಾಗಿದೆ. ದೇಶಕ್ಕೆ ಸ್ವಾತಂತ್ರ್ಯ ಬಂದ ನಂತರದಿಂದ ಈವರೆಗೆ ಇಂತಹ ಜನ ವಿರೋಧಿ, ರೈತ, ವಿದ್ಯಾರ್ಥಿ ವಿರೋಧಿ ಸರ್ಕಾರವನ್ನು ಜನತೆ ಕಂಡಿರಲಿಲ್ಲ ಎಂದು ರಕ್ಷಾ ರಾಮಯ್ಯ ಕಿಡಿ ಕಾರಿದ್ದಾರೆ.

ಇದನ್ನೂ ಓದಿ: ‘ಸಾಮೂಹಿಕ ಸಭೆಗಳನ್ನು ಕಡಿಮೆಗೊಳಿಸಿ’- ಹಬ್ಬಗಳ ಆಚರಣೆ ಬಗ್ಗೆ ಒಕ್ಕೂಟ ಸರ್ಕಾರ

ವಿಡಿಯೊ ನೋಡಿ: ಮತ್ತೆ ಹೆಚ್ಚಾದ LPG ಗ್ಯಾಸ್ ಬೆಲೆ: ಜನಸಾಮಾನ್ಯರ ರಿಯಾಕ್ಷನ್ ಹೀಗಿದೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...