Homeಕರ್ನಾಟಕಎಲ್‌ಪಿಜಿ, ಪೆಟ್ರೋಲಿಯಂ ಉತ್ಪನ್ನಗಳ ಬೆಲೆ ಏರಿಕೆ - ಯುವ ಕಾಂಗ್ರೆಸ್ ಪ್ರತಿಭಟನೆ

ಎಲ್‌ಪಿಜಿ, ಪೆಟ್ರೋಲಿಯಂ ಉತ್ಪನ್ನಗಳ ಬೆಲೆ ಏರಿಕೆ – ಯುವ ಕಾಂಗ್ರೆಸ್ ಪ್ರತಿಭಟನೆ

ಬೆಲೆ ಇಳಿಕೆ ಮಾಡದಿದ್ದರೆ ಬಿಜೆಪಿ ಸಚಿವರು, ಸಂಸದರು, ಶಾಸಕರು ಸೇರಿದಂತೆ ಎಲ್ಲರನ್ನೂ ಘೇರಾವ್ ಮಾಡಿ ಹೋರಾಟವನ್ನು ತೀವ್ರಗೊಳಿಸುತ್ತೇವೆ ಯುವ ಕಾಂಗ್ರೆಸ್‌ ರಾಷ್ಟ್ರಾಧ್ಯಕ್ಷ ಶ್ರೀನಿವಾಸ್ ಬಿ.ವಿ. ಎಚ್ಚರಿಕೆ ನೀಡಿದ್ದಾರೆ

- Advertisement -
- Advertisement -

ಅಡುಗೆ ಅನಿಲ, ಪೆಟ್ರೋಲಿಯಂ ಉತ್ಪನ್ನಗಳು ಸೇರಿ, ಅಗತ್ಯ ವಸ್ತುಗಳ ಬೆಲೆ ಏರಿಕೆಯನ್ನು ವಿರೋಧಿಸಿ ಪ್ರದೇಶ ಯುವ ಕಾಂಗ್ರೆಸ್ ಬೆಂಗಳೂರಿನ ಆನಂದ್ ರಾವ್ ವೃತ್ತದಲ್ಲಿ ಗುರುವಾರದಂದು ಬೃಹತ್ ಪ್ರತಿಭಟನಾ ಜಾಥ ನಡೆಸಿದೆ. ಯುವ ಕಾಂಗ್ರೆಸ್ ನ ರಾಷ್ಟ್ರೀಯ ಅಧ್ಯಕ್ಷ ಶ್ರೀನಿವಾಸ್ ಬಿ.ವಿ, ರಾಜ್ಯಾಧ್ಯಕ್ಷ ಎಂ.ಎಸ್. ರಕ್ಷಾ ರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್ ಭವನದಿಂದ 100 ಅಡಿ ಉದ್ದದ ಸಿಲಿಂಡರ್‌‌ನ ಬಾವುಟ ಹಿಡಿದು ಹೊರಟ ಜಾಥ ಆನಂದ್ ರಾವ್ ವೃತ್ತದ ಮೇಲ್ಸೇತುವೆಯಿಂದ ಮೌರ್ಯ ಸರ್ಕಲ್‌ನ ಗಾಂಧಿ ಪ್ರತಿಮೆ ಮೂಲಕ ಸಾಗಿ ವಿನೂತನವಾಗಿ ಪ್ರತಿಭಟನೆ ನಡೆಸಿತು.

ಅಡುಗೆ ಅನಿಲ ಸಿಲಿಂಡರ್ ಗಳನ್ನು ಹಿಡಿದು ಯುವ ಕಾಂಗ್ರೆಸ್ ಕಾರ್ಯಕರ್ತರು ರಾಜ್ಯ ಮತ್ತು ಒಕ್ಕೂಟ ಸರ್ಕಾರಗಳ ವಿರುದ್ಧ ಘೋಷಣೆ ಕೂಗಿದರು. ಒಕ್ಕೂಟ ಸರ್ಕಾರ ಕಳೆದ ಏಳು ವರ್ಷಗಳಲ್ಲಿ ಜನ ಸಾಮಾನ್ಯರ ಮೇಲೆ ನಿರಂತರವಾಗಿ ಬೆಲೆ ಏರಿಕೆ ಮಾಡಿ ಅನ್ಯಾಯ ಮಾಡುತ್ತಿದೆ. ಈ ಸರ್ಕಾರವನ್ನು ಕಿತ್ತೊಗೆಯುವವರೆಗೆ ಹೋರಾಟ ಮಾಡುವುದಾಗಿ ಪ್ರತಿಭಟನಾಕಾರರು ಘೋಷಣೆ ಕೂಗಿದರು.

ಇದನ್ನೂ ಓದಿ: ‘ಬೆಲೆ ಏರಿಕೆಗೆ ಕಾಂಗ್ರೆಸ್‌ ಕಾರಣ’ ಎಂದ ಬಿಜೆಪಿ ಸಂಸದ ಸಂಗಣ್ಣ ಕರಡಿ!

ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಶ್ರೀನಿವಾಸ್ ಬಿ.ವಿ. ಮಾತನಾಡಿ, “ಒಂದೆಡೆ ಉಜ್ವಲ ಯೋಜನೆಯಡಿ ಉಚಿತ ಸಿಲಿಂಡರ್‌ಗಳನ್ನು ನೀಡಿ, ಮತ್ತೊಂದೆಡೆ ಅಡುಗೆ ಸಿಲಿಂಡರ್ ಬೆಲೆಯನ್ನು ಗಣನೀಯವಾಗಿ ಏರಿಕೆ ಮಾಡಲಾಗುತ್ತಿದೆ. ಡಾ. ಮನಮೋಹನ್ ಸಿಂಗ್ ಕಾಲದಲ್ಲಿ 400 ರೂ ಇದ್ದ ಸಿಲಿಂಡರ್ ಬೆಲೆ ಇದೀಗ 900 ರೂಗೆ ತಲುಪಿದೆ. ಗೃಹಿಣಿಯರು ರಕ್ತ ಕಣ್ಣೀರಿನಲ್ಲಿ ಕೈ ತೊಳೆಯುತ್ತಿದ್ದಾರೆ. ಅಡುಗೆ ಮಾಡುವ ಪ್ರತಿಯೊಂದು ಪದಾರ್ಥದ ಬೆಲೆಯಲ್ಲಿಯೂ ವಿಪರೀತ ಏರಿಕೆಯಾಗಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

“ಬಿಜೆಪಿ ಎಂದರೆ ಬೆಲೆ ಏರಿಕೆ, ನರೇಂದ್ರ ಮೋದಿ ಎಂದರೆ ಬೆಲೆ ಏರಿಕೆಯಾಗಿದೆ. ಇವರಿಗೆ ಬಡವರ ಬಗ್ಗೆ ಕಿಂಚಿತ್ತೂ ಕಾಳಜಿ ಇಲ್ಲ. ಇಲ್ಲವಾಗಿದ್ದರೆ ಇಷ್ಟೊಂದು ಪ್ರಮಾಣದಲ್ಲಿ ಜನರಿಗೆ ಕಷ್ಟ ನೀಡುತ್ತಿರಲಿಲ್ಲ. ಬೆಲೆ ಇಳಿಕೆ ಮಾಡದಿದ್ದರೆ ಬಿಜೆಪಿ ಸಚಿವರು, ಸಂಸದರು, ಶಾಸಕರು ಹೀಗೆ ಎಲ್ಲರನ್ನೂ ಘೇರಾವ್ ಮಾಡಿ ಹೋರಾಟವನ್ನು ತೀವ್ರಗೊಳಿಸುತ್ತೇವೆ” ಎಂದು ಶ್ರೀನಿವಾಸ್ ಬಿ.ವಿ. ಎಚ್ಚರಿಕೆ ನೀಡಿದರು.

ಇದನ್ನೂ ಓದಿ: ಆಸ್ತಿ ಮಾರಾಟ, ಬೆಲೆ ಏರಿಕೆ: ಕರ್ನಾಟಕ ಕಾಂಗ್ರೆಸ್‌ನಿಂದ ’ಬಿಜೆಪಿಯ ಲೂಟಿಯ ವಿರುದ್ದ ಭಾರತ’ ಅಭಿಯಾನ

ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಎಂ.ಎಸ್. ರಕ್ಷಾ ರಾಮಯ್ಯ ಮಾತನಾಡಿ, “ಬಿಜೆಪಿ ನಾಯಕರು ಜನರ ಸಂಕಷ್ಟಕ್ಕೆ ಸ್ಪಂದಿಸುವಲ್ಲಿ ವಿಫಲರಾಗಿದ್ದಾರೆ. ರಾಜ್ಯಕ್ಕೆ ಅಮಿತ್ ಶಾ ಭೇಟಿ ನೀಡಿದ್ದು, ಅವರು ಬೆಲೆ ಏರಿಕೆ ಕುರಿತು ಮಾತನಾಡಬೇಕು. ಆದರೆ ವಿಚಿತ್ರವೆಂದರೆ ನರೇಂದ್ರ ಮೋದಿ, ಅಮಿತ್ ಶಾ ಮತ್ತಿತರ ಬಿಜೆಪಿ ನಾಯಕರು ಜನತೆ ಸಂಕಷ್ಟದಲ್ಲಿದ್ದಾಗ ಯಾವತ್ತೂ ಅಂತಹ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ. ರಾಜ್ಯಕ್ಕೂ ಭೇಟಿ ನೀಡುವುದಿಲ್ಲ. ಯಾರದೋ ಮದುವೆ, ಇಲ್ಲವೆ ಪಕ್ಷದ ಸಭೆಗಳಿಗೆ ಆಗಮಿಸುತ್ತಾರೆ. ಬಿಜೆಪಿ ನಾಯಕರು ಮನೆಯಲ್ಲಿ ಕುಳಿತಿದ್ದಾರೆ. ನಮ್ಮ ಹೋರಾಟ ದೆಹಲಿವರೆಗೆ ಕೊಂಡೊಯ್ಯುತ್ತೇವೆ” ಎಂದು ಹೇಳಿದರು.

“ರಾಜ್ಯ ಮತ್ತು ಒಕ್ಕೂಟ ಸರ್ಕಾರದ ಬಲೆ ಏರಿಕೆ ನೀತಿಯಿಂದಾಗಿ ಜನ ಸಾಮಾನ್ಯರು ತೀವ್ರ ಸಂಕಷ್ಟದಲ್ಲಿ ಸಿಲುಕಿದ್ದಾರೆ. ಜನರಿಗೆ ಉದ್ಯೋಗ ಸೃಷ್ಟಿಯಾಗಿಲ್ಲ. ಇರುವ ಉದ್ಯೋಗವೂ ನಷ್ಟವಾಗಿದೆ. ಜನರಲ್ಲಿ ಹಣ ಇಲ್ಲ. ಮುಂದಿನ 15 ದಿನಗಳ ಒಳಗಾಗಿ ಬೆಲೆ ಇಳಿಕೆಯಾಗದಿದ್ದರೆ ಬೇಡಿಕೆ ಈಡೇರುವ ತನಕ ರಾಜ್ಯದ ಮೂಲೆ ಮೂಲೆಗಳಲ್ಲಿ ಯುವ ಕಾಂಗ್ರೆಸ್ ತೀವ್ರ ಹೋರಾಟ ನಡೆಸಲಿದೆ” ಎಂದು ಎಚ್ಚರಿಕೆ ನೀಡಿದರು.

ತಮಿಳುನಾಡಿನಲ್ಲಿ ರಾಜ್ಯದ ಪಾಲಿನ 3 ರೂ ಸೆಸ್ ಕಡಿಮೆ ಮಾಡಿದ್ದು, ರಾಜ್ಯದಲ್ಲಿ ಬೆಲೆ ಇಳಿಕೆ ಮಾಡುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಸಲ್ಲಿಸಲಾಗುವುದು. ರಾಜ್ಯ ಹಾಗೂ ಒಕ್ಕೂಟ ಸರ್ಕಾರದಲ್ಲಿ ಒಂದೇ ಪಕ್ಷದ ಆಡಳಿತ ಇದ್ದರೆ ಅನುಕೂಲವಾಗುತ್ತದೆ ಎನ್ನುವ ನಂಬಿಕೆ ಹುಸಿಯಾಗಿದೆ. ದೇಶಕ್ಕೆ ಸ್ವಾತಂತ್ರ್ಯ ಬಂದ ನಂತರದಿಂದ ಈವರೆಗೆ ಇಂತಹ ಜನ ವಿರೋಧಿ, ರೈತ, ವಿದ್ಯಾರ್ಥಿ ವಿರೋಧಿ ಸರ್ಕಾರವನ್ನು ಜನತೆ ಕಂಡಿರಲಿಲ್ಲ ಎಂದು ರಕ್ಷಾ ರಾಮಯ್ಯ ಕಿಡಿ ಕಾರಿದ್ದಾರೆ.

ಇದನ್ನೂ ಓದಿ: ‘ಸಾಮೂಹಿಕ ಸಭೆಗಳನ್ನು ಕಡಿಮೆಗೊಳಿಸಿ’- ಹಬ್ಬಗಳ ಆಚರಣೆ ಬಗ್ಗೆ ಒಕ್ಕೂಟ ಸರ್ಕಾರ

ವಿಡಿಯೊ ನೋಡಿ: ಮತ್ತೆ ಹೆಚ್ಚಾದ LPG ಗ್ಯಾಸ್ ಬೆಲೆ: ಜನಸಾಮಾನ್ಯರ ರಿಯಾಕ್ಷನ್ ಹೀಗಿದೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...

ಕೊಲ್ಕತ್ತಾದ 26 ಲಕ್ಷ ಮತದಾರರ ಹೆಸರು 2002 ರ ಪಟ್ಟಿಗೆ ಹೊಂದಿಕೆಯಾಗುತ್ತಿಲ್ಲ: ಮುಖ್ಯ ಚುನಾವಣಾ ಅಧಿಕಾರಿ

ಕೋಲ್ಕತ್ತಾ ಮತ್ತು ಸುತ್ತಮುತ್ತಲಿನ ಹಲವಾರು ವಿಧಾನಸಭಾ ಕ್ಷೇತ್ರಗಳ ಮತದಾರರ ಹೆಸರುಗಳು 2002 ರ ಮತದಾರರ ಪಟ್ಟಿಯಲ್ಲಿರುವ ನಮೂದುಗಳಿಗೆ ಹೊಂದಿಕೆಯಾಗುತ್ತಿಲ್ಲ ಎಂದು ಮುಖ್ಯ ಚುನಾವಣಾ ಅಧಿಕಾರಿ ಮನೋಜ್ ಕುಮಾರ್ ಅಗರ್ವಾಲ್ ಕಚೇರಿಯ ಅಧಿಕಾರಿಗಳು ತಿಳಿಸಿದ್ದಾರೆ...