Homeಕರ್ನಾಟಕಎಲ್‌ಪಿಜಿ, ಪೆಟ್ರೋಲಿಯಂ ಉತ್ಪನ್ನಗಳ ಬೆಲೆ ಏರಿಕೆ - ಯುವ ಕಾಂಗ್ರೆಸ್ ಪ್ರತಿಭಟನೆ

ಎಲ್‌ಪಿಜಿ, ಪೆಟ್ರೋಲಿಯಂ ಉತ್ಪನ್ನಗಳ ಬೆಲೆ ಏರಿಕೆ – ಯುವ ಕಾಂಗ್ರೆಸ್ ಪ್ರತಿಭಟನೆ

ಬೆಲೆ ಇಳಿಕೆ ಮಾಡದಿದ್ದರೆ ಬಿಜೆಪಿ ಸಚಿವರು, ಸಂಸದರು, ಶಾಸಕರು ಸೇರಿದಂತೆ ಎಲ್ಲರನ್ನೂ ಘೇರಾವ್ ಮಾಡಿ ಹೋರಾಟವನ್ನು ತೀವ್ರಗೊಳಿಸುತ್ತೇವೆ ಯುವ ಕಾಂಗ್ರೆಸ್‌ ರಾಷ್ಟ್ರಾಧ್ಯಕ್ಷ ಶ್ರೀನಿವಾಸ್ ಬಿ.ವಿ. ಎಚ್ಚರಿಕೆ ನೀಡಿದ್ದಾರೆ

- Advertisement -
- Advertisement -

ಅಡುಗೆ ಅನಿಲ, ಪೆಟ್ರೋಲಿಯಂ ಉತ್ಪನ್ನಗಳು ಸೇರಿ, ಅಗತ್ಯ ವಸ್ತುಗಳ ಬೆಲೆ ಏರಿಕೆಯನ್ನು ವಿರೋಧಿಸಿ ಪ್ರದೇಶ ಯುವ ಕಾಂಗ್ರೆಸ್ ಬೆಂಗಳೂರಿನ ಆನಂದ್ ರಾವ್ ವೃತ್ತದಲ್ಲಿ ಗುರುವಾರದಂದು ಬೃಹತ್ ಪ್ರತಿಭಟನಾ ಜಾಥ ನಡೆಸಿದೆ. ಯುವ ಕಾಂಗ್ರೆಸ್ ನ ರಾಷ್ಟ್ರೀಯ ಅಧ್ಯಕ್ಷ ಶ್ರೀನಿವಾಸ್ ಬಿ.ವಿ, ರಾಜ್ಯಾಧ್ಯಕ್ಷ ಎಂ.ಎಸ್. ರಕ್ಷಾ ರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್ ಭವನದಿಂದ 100 ಅಡಿ ಉದ್ದದ ಸಿಲಿಂಡರ್‌‌ನ ಬಾವುಟ ಹಿಡಿದು ಹೊರಟ ಜಾಥ ಆನಂದ್ ರಾವ್ ವೃತ್ತದ ಮೇಲ್ಸೇತುವೆಯಿಂದ ಮೌರ್ಯ ಸರ್ಕಲ್‌ನ ಗಾಂಧಿ ಪ್ರತಿಮೆ ಮೂಲಕ ಸಾಗಿ ವಿನೂತನವಾಗಿ ಪ್ರತಿಭಟನೆ ನಡೆಸಿತು.

ಅಡುಗೆ ಅನಿಲ ಸಿಲಿಂಡರ್ ಗಳನ್ನು ಹಿಡಿದು ಯುವ ಕಾಂಗ್ರೆಸ್ ಕಾರ್ಯಕರ್ತರು ರಾಜ್ಯ ಮತ್ತು ಒಕ್ಕೂಟ ಸರ್ಕಾರಗಳ ವಿರುದ್ಧ ಘೋಷಣೆ ಕೂಗಿದರು. ಒಕ್ಕೂಟ ಸರ್ಕಾರ ಕಳೆದ ಏಳು ವರ್ಷಗಳಲ್ಲಿ ಜನ ಸಾಮಾನ್ಯರ ಮೇಲೆ ನಿರಂತರವಾಗಿ ಬೆಲೆ ಏರಿಕೆ ಮಾಡಿ ಅನ್ಯಾಯ ಮಾಡುತ್ತಿದೆ. ಈ ಸರ್ಕಾರವನ್ನು ಕಿತ್ತೊಗೆಯುವವರೆಗೆ ಹೋರಾಟ ಮಾಡುವುದಾಗಿ ಪ್ರತಿಭಟನಾಕಾರರು ಘೋಷಣೆ ಕೂಗಿದರು.

ಇದನ್ನೂ ಓದಿ: ‘ಬೆಲೆ ಏರಿಕೆಗೆ ಕಾಂಗ್ರೆಸ್‌ ಕಾರಣ’ ಎಂದ ಬಿಜೆಪಿ ಸಂಸದ ಸಂಗಣ್ಣ ಕರಡಿ!

ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಶ್ರೀನಿವಾಸ್ ಬಿ.ವಿ. ಮಾತನಾಡಿ, “ಒಂದೆಡೆ ಉಜ್ವಲ ಯೋಜನೆಯಡಿ ಉಚಿತ ಸಿಲಿಂಡರ್‌ಗಳನ್ನು ನೀಡಿ, ಮತ್ತೊಂದೆಡೆ ಅಡುಗೆ ಸಿಲಿಂಡರ್ ಬೆಲೆಯನ್ನು ಗಣನೀಯವಾಗಿ ಏರಿಕೆ ಮಾಡಲಾಗುತ್ತಿದೆ. ಡಾ. ಮನಮೋಹನ್ ಸಿಂಗ್ ಕಾಲದಲ್ಲಿ 400 ರೂ ಇದ್ದ ಸಿಲಿಂಡರ್ ಬೆಲೆ ಇದೀಗ 900 ರೂಗೆ ತಲುಪಿದೆ. ಗೃಹಿಣಿಯರು ರಕ್ತ ಕಣ್ಣೀರಿನಲ್ಲಿ ಕೈ ತೊಳೆಯುತ್ತಿದ್ದಾರೆ. ಅಡುಗೆ ಮಾಡುವ ಪ್ರತಿಯೊಂದು ಪದಾರ್ಥದ ಬೆಲೆಯಲ್ಲಿಯೂ ವಿಪರೀತ ಏರಿಕೆಯಾಗಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

“ಬಿಜೆಪಿ ಎಂದರೆ ಬೆಲೆ ಏರಿಕೆ, ನರೇಂದ್ರ ಮೋದಿ ಎಂದರೆ ಬೆಲೆ ಏರಿಕೆಯಾಗಿದೆ. ಇವರಿಗೆ ಬಡವರ ಬಗ್ಗೆ ಕಿಂಚಿತ್ತೂ ಕಾಳಜಿ ಇಲ್ಲ. ಇಲ್ಲವಾಗಿದ್ದರೆ ಇಷ್ಟೊಂದು ಪ್ರಮಾಣದಲ್ಲಿ ಜನರಿಗೆ ಕಷ್ಟ ನೀಡುತ್ತಿರಲಿಲ್ಲ. ಬೆಲೆ ಇಳಿಕೆ ಮಾಡದಿದ್ದರೆ ಬಿಜೆಪಿ ಸಚಿವರು, ಸಂಸದರು, ಶಾಸಕರು ಹೀಗೆ ಎಲ್ಲರನ್ನೂ ಘೇರಾವ್ ಮಾಡಿ ಹೋರಾಟವನ್ನು ತೀವ್ರಗೊಳಿಸುತ್ತೇವೆ” ಎಂದು ಶ್ರೀನಿವಾಸ್ ಬಿ.ವಿ. ಎಚ್ಚರಿಕೆ ನೀಡಿದರು.

ಇದನ್ನೂ ಓದಿ: ಆಸ್ತಿ ಮಾರಾಟ, ಬೆಲೆ ಏರಿಕೆ: ಕರ್ನಾಟಕ ಕಾಂಗ್ರೆಸ್‌ನಿಂದ ’ಬಿಜೆಪಿಯ ಲೂಟಿಯ ವಿರುದ್ದ ಭಾರತ’ ಅಭಿಯಾನ

ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಎಂ.ಎಸ್. ರಕ್ಷಾ ರಾಮಯ್ಯ ಮಾತನಾಡಿ, “ಬಿಜೆಪಿ ನಾಯಕರು ಜನರ ಸಂಕಷ್ಟಕ್ಕೆ ಸ್ಪಂದಿಸುವಲ್ಲಿ ವಿಫಲರಾಗಿದ್ದಾರೆ. ರಾಜ್ಯಕ್ಕೆ ಅಮಿತ್ ಶಾ ಭೇಟಿ ನೀಡಿದ್ದು, ಅವರು ಬೆಲೆ ಏರಿಕೆ ಕುರಿತು ಮಾತನಾಡಬೇಕು. ಆದರೆ ವಿಚಿತ್ರವೆಂದರೆ ನರೇಂದ್ರ ಮೋದಿ, ಅಮಿತ್ ಶಾ ಮತ್ತಿತರ ಬಿಜೆಪಿ ನಾಯಕರು ಜನತೆ ಸಂಕಷ್ಟದಲ್ಲಿದ್ದಾಗ ಯಾವತ್ತೂ ಅಂತಹ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ. ರಾಜ್ಯಕ್ಕೂ ಭೇಟಿ ನೀಡುವುದಿಲ್ಲ. ಯಾರದೋ ಮದುವೆ, ಇಲ್ಲವೆ ಪಕ್ಷದ ಸಭೆಗಳಿಗೆ ಆಗಮಿಸುತ್ತಾರೆ. ಬಿಜೆಪಿ ನಾಯಕರು ಮನೆಯಲ್ಲಿ ಕುಳಿತಿದ್ದಾರೆ. ನಮ್ಮ ಹೋರಾಟ ದೆಹಲಿವರೆಗೆ ಕೊಂಡೊಯ್ಯುತ್ತೇವೆ” ಎಂದು ಹೇಳಿದರು.

“ರಾಜ್ಯ ಮತ್ತು ಒಕ್ಕೂಟ ಸರ್ಕಾರದ ಬಲೆ ಏರಿಕೆ ನೀತಿಯಿಂದಾಗಿ ಜನ ಸಾಮಾನ್ಯರು ತೀವ್ರ ಸಂಕಷ್ಟದಲ್ಲಿ ಸಿಲುಕಿದ್ದಾರೆ. ಜನರಿಗೆ ಉದ್ಯೋಗ ಸೃಷ್ಟಿಯಾಗಿಲ್ಲ. ಇರುವ ಉದ್ಯೋಗವೂ ನಷ್ಟವಾಗಿದೆ. ಜನರಲ್ಲಿ ಹಣ ಇಲ್ಲ. ಮುಂದಿನ 15 ದಿನಗಳ ಒಳಗಾಗಿ ಬೆಲೆ ಇಳಿಕೆಯಾಗದಿದ್ದರೆ ಬೇಡಿಕೆ ಈಡೇರುವ ತನಕ ರಾಜ್ಯದ ಮೂಲೆ ಮೂಲೆಗಳಲ್ಲಿ ಯುವ ಕಾಂಗ್ರೆಸ್ ತೀವ್ರ ಹೋರಾಟ ನಡೆಸಲಿದೆ” ಎಂದು ಎಚ್ಚರಿಕೆ ನೀಡಿದರು.

ತಮಿಳುನಾಡಿನಲ್ಲಿ ರಾಜ್ಯದ ಪಾಲಿನ 3 ರೂ ಸೆಸ್ ಕಡಿಮೆ ಮಾಡಿದ್ದು, ರಾಜ್ಯದಲ್ಲಿ ಬೆಲೆ ಇಳಿಕೆ ಮಾಡುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಸಲ್ಲಿಸಲಾಗುವುದು. ರಾಜ್ಯ ಹಾಗೂ ಒಕ್ಕೂಟ ಸರ್ಕಾರದಲ್ಲಿ ಒಂದೇ ಪಕ್ಷದ ಆಡಳಿತ ಇದ್ದರೆ ಅನುಕೂಲವಾಗುತ್ತದೆ ಎನ್ನುವ ನಂಬಿಕೆ ಹುಸಿಯಾಗಿದೆ. ದೇಶಕ್ಕೆ ಸ್ವಾತಂತ್ರ್ಯ ಬಂದ ನಂತರದಿಂದ ಈವರೆಗೆ ಇಂತಹ ಜನ ವಿರೋಧಿ, ರೈತ, ವಿದ್ಯಾರ್ಥಿ ವಿರೋಧಿ ಸರ್ಕಾರವನ್ನು ಜನತೆ ಕಂಡಿರಲಿಲ್ಲ ಎಂದು ರಕ್ಷಾ ರಾಮಯ್ಯ ಕಿಡಿ ಕಾರಿದ್ದಾರೆ.

ಇದನ್ನೂ ಓದಿ: ‘ಸಾಮೂಹಿಕ ಸಭೆಗಳನ್ನು ಕಡಿಮೆಗೊಳಿಸಿ’- ಹಬ್ಬಗಳ ಆಚರಣೆ ಬಗ್ಗೆ ಒಕ್ಕೂಟ ಸರ್ಕಾರ

ವಿಡಿಯೊ ನೋಡಿ: ಮತ್ತೆ ಹೆಚ್ಚಾದ LPG ಗ್ಯಾಸ್ ಬೆಲೆ: ಜನಸಾಮಾನ್ಯರ ರಿಯಾಕ್ಷನ್ ಹೀಗಿದೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...