Homeಮುಖಪುಟರಾಜೌರಿ-ಪೂಂಚ್‌ನಲ್ಲಿ ಭಯೋತ್ಪಾದನೆ ಹೆಚ್ಚಳ; ಕಳವಳ ವ್ಯಕ್ತಪಡಿಸಿದ ಸೇನಾ ಮುಖ್ಯಸ್ಥ

ರಾಜೌರಿ-ಪೂಂಚ್‌ನಲ್ಲಿ ಭಯೋತ್ಪಾದನೆ ಹೆಚ್ಚಳ; ಕಳವಳ ವ್ಯಕ್ತಪಡಿಸಿದ ಸೇನಾ ಮುಖ್ಯಸ್ಥ

- Advertisement -
- Advertisement -

ಭಾರತ-ಮ್ಯಾನ್ಮಾರ್ ಗಡಿಯಲ್ಲಿನ ಪರಿಸ್ಥಿತಿ ಮತ್ತು ಜಮ್ಮು-ಕಾಶ್ಮೀರದ ರಾಜೌರಿ-ಪೂಂಚ್ ಸೆಕ್ಟರ್‌ನಲ್ಲಿನ ಭಯೋತ್ಪಾದಕ ಚಟುವಟಿಕೆಗಳ ಬಗ್ಗೆ ಸೇನಾ ಮುಖ್ಯಸ್ಥ (COAS) ಜನರಲ್ ಮನೋಜ್ ಪಾಂಡೆ ಗುರುವಾರ ಕಳವಳ ವ್ಯಕ್ತಪಡಿಸಿದ್ದಾರೆ.

ಸೇನಾ ವಾರ್ಷಿಕ ದಿನದ ಪ್ರಯುಕ್ತ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಪಾಂಡೆ, ಭಾರತದ ಗಡಿಗಳಲ್ಲಿ ಚಾಲ್ತಿಯಲ್ಲಿರುವ ಭದ್ರತಾ ಸನ್ನಿವೇಶಗಳ ಬಗ್ಗೆ ವಿವರಣೆ ನೀಡಿದರು. ಉತ್ತರದ ಗಡಿಯಲ್ಲಿ, ವಿಶೇಷವಾಗಿ ಲಡಾಖ್‌ನಲ್ಲಿ ಪರಿಸ್ಥಿತಿ ಸ್ಥಿರವಾಗಿದೆ; ಆದರೆ ಸೂಕ್ಷ್ಮವಾಗಿದೆ’ ಎಂದು ಹೇಳಿದರು.

‘ನಾವು ಮಿಲಿಟರಿ ಮತ್ತು ರಾಜತಾಂತ್ರಿಕ ಮಟ್ಟದಲ್ಲಿ ಮಾತನಾಡುವುದನ್ನು ಮುಂದುವರಿಸುತ್ತೇವೆ, ಜಾರಿಯಲ್ಲಿರುವ ಪ್ರೋಟೋಕಾಲ್‌ಗಳು ಮತ್ತು ಕಾರ್ಯವಿಧಾನಗಳ ಪ್ರಕಾರ ಉಳಿದಿರುವ ಸಮಸ್ಯೆಗಳಿಗೆ ಸಮತೋಲನ ಪರಿಹಾರವನ್ನು ಕಂಡುಹಿಡಿಯುತ್ತೇವೆ’ ಎಂದು ಅವರು ಹೇಳಿದರು.

ವ್ಯಾಪಕವಾದ ರಾಜತಾಂತ್ರಿಕ ಮತ್ತು ಮಿಲಿಟರಿ ಮಾತುಕತೆಗಳ ನಂತರವೂ ಚೀನಾ ಮತ್ತು ಭಾರತದ ದೇಶಗಳ ನಡುವೆ ಪೂರ್ವ ಲಡಾಖ್‌ನಲ್ಲಿ ಕೆಲವು ಘರ್ಷಣೆ ಮುಂದುವರಿದಿದೆ. ‘ಸೇನಾ ಪಡೆಗಳ ದೃಢ, ಸಮತೋಲಿತ ನಿಯೋಜನೆಯೊಂದಿಗೆ ಕಾರ್ಯಾಚರಣೆಯ ಸನ್ನದ್ಧತೆಯು ಉನ್ನತ ಮಟ್ಟದಲ್ಲಿ ಮುಂದುವರಿಯುತ್ತದೆ’ ಎಂದು ಪಾಂಡೆ ಭರವಸೆ ನೀಡಿದ್ದಾರೆ.

ಜಮ್ಮು ಮತ್ತು ಕಾಶ್ಮೀರದ ಪರಿಸ್ಥಿತಿಯ ಬಗ್ಗೆ ಮಾತನಾಡಿದ ಜನರಲ್ ಪಾಂಡೆ, ಗಡಿ ನಿಯಂತ್ರಣ ರೇಖೆಯ ಉದ್ದಕ್ಕೂ ಕದನ ವಿರಾಮ ಉಲ್ಲಂಘೆನಯಾಗುತ್ತಿರುವ ಬಗ್ಗೆ ಗಮನ ಸೆಳೆದರು. ‘ಒಳನುಸುಳುವಿಕೆ ಯತ್ನಗಳ ಹೊರತಾಗಿಯೂ, ಭಾರತೀಯ ಸೇನೆಯು ಅಂತಹ ಪ್ರಯತ್ನಗಳನ್ನು ಯಶಸ್ವಿಯಾಗಿ ವಿಫಲಗೊಳಿಸಿದೆ. ಶಸ್ತ್ರಾಸ್ತ್ರಗಳು ಮತ್ತು ಮಾದಕವಸ್ತುಗಳ ಕಳ್ಳಸಾಗಣೆಯನ್ನು ತಡೆಯಲು ಪ್ರಬಲವಾದ ಡ್ರೋನ್ ಕಾರ್ಯವಿಧಾನವು ಸೇನಾ ಯಶಸ್ಸಿಗೆ ಕಾರಣವಾಗಿದೆ’ ಎಂದು ಹೇಳಿದರು.

‘ಜಮ್ಮು ಮತ್ತು ಕಾಶ್ಮೀರದಲ್ಲಿ ಒಟ್ಟಾರೆ ಹಿಂಸಾಚಾರದ ಘಟನೆಗಳು ಕಡಿಮೆಯಾಗಿವೆ. ಆದರೆ, ರಜೌರಿ-ಪೂಂಚ್ ವಲಯದಲ್ಲಿ ಇಂತಹ ಘಟನೆಗಳು ಹೆಚ್ಚಿವೆ’ ಎಂದು ಜನರಲ್ ಪಾಂಡೆ ಹೇಳಿದರು.

ಕಳೆದ 5-6 ತಿಂಗಳುಗಳಲ್ಲಿ ರಾಜೌರಿ ಮತ್ತು ಪೂಂಚ್‌ನಲ್ಲಿನ ಪರಿಸ್ಥಿತಿ ಮತ್ತು ಭಯೋತ್ಪಾದಕ ಚಟುವಟಿಕೆಗಳು ನಮಗೆ ಕಳವಳಕಾರಿ ವಿಷಯವಾಗಿದೆ. 2003ರ ಹೊತ್ತಿಗೆ, ಈ ಪ್ರದೇಶದಲ್ಲಿ ಭಯೋತ್ಪಾದನೆ ಸಂಪೂರ್ಣವಾಗಿ ಹರಡಿತು. 2017-18 ರವರೆಗೆ ಅಲ್ಲಿ ಶಾಂತಿ ಸ್ಥಾಪಿಸಲಾಯಿತು. ಕಣಿವೆಯಲ್ಲಿ ಶಾಂತಿ ನೆಲೆಸಿರುವ ಕಾರಣ, ನಮ್ಮ ವಿರೋಧಿಗಳು ಈ ಪ್ರದೇಶದಲ್ಲಿ ಭಯೋತ್ಪಾದನೆಯನ್ನು ಪ್ರೋತ್ಸಾಹಿಸುತ್ತಿದ್ದಾರೆ’ ಎಂದು ಜನರಲ್ ಪಾಂಡೆ ಹೇಳಿದರು.

ಇಂಡೋ-ಮ್ಯಾನ್ಮಾರ್ ಗಡಿಯಲ್ಲಿನ ಪರಿಸ್ಥಿತಿಯ ಬಗ್ಗೆ ಕಳವಳ ವ್ಯಕ್ತಪಡಿಸಿದ ಜನರಲ್ ಪಾಂಡೆ, ಮ್ಯಾನ್ಮಾರ್ ಸೇನೆ ಮತ್ತು ಜನಾಂಗೀಯ ಸಶಸ್ತ್ರ ಸಂಘಟನೆಗಳ ಚಟುವಟಿಕೆಗಳ ಪ್ರಭಾವವನ್ನು ಎತ್ತಿ ತೋರಿಸಿದರು. ಮ್ಯಾನ್ಮಾರ್ ಸೇನೆಯ ಸಿಬ್ಬಂದಿ ಮತ್ತು ಭೂತಾನ್ ನಾಗರಿಕರು ಭಾರತೀಯ ಪ್ರದೇಶಗಳಲ್ಲಿ ಆಶ್ರಯ ಪಡೆಯುವ ನಿದರ್ಶನಗಳನ್ನು ಅವರು ಗುರುತಿಸಿದ್ದಾರೆ.

‘ನಮ್ಮಲ್ಲಿ ಕೆಲವು ಬಂಡುಕೋರ ಗುಂಪುಗಳಿವೆ, ಅವರು ಒತ್ತಡವನ್ನು ಅನುಭವಿಸುತ್ತಿದ್ದಾರೆ ಮತ್ತು ಅವರು ಈಗ ಮಣಿಪುರ ರಾಜ್ಯದ ಗಡಿಯ ನಮ್ಮ ಭಾಗಕ್ಕೆ ಬರಲು ಪ್ರಯತ್ನಿಸಿದ್ದಾರೆ. ಅದು ಮಣಿಪುರದ ಪರಿಸ್ಥಿತಿಯೊಂದಿಗೆ ಸೇರಿಕೊಳ್ಳುವುದನ್ನು ನಾವು ಸೂಕ್ಷ್ಮವಾಗಿ ಗಮನಿಸುತ್ತಿದ್ದೇವೆ. ನಾವು ಸುಮಾರು 20 ಅಸ್ಸಾಂ ರೈಫಲ್ ಬೆಟಾಲಿಯನ್‌ಗಳನ್ನು ಹೊಂದಿದ್ದೇವೆ. ಇವುಗಳನ್ನು ಇಂಡೋ-ಮ್ಯಾನ್ಮಾರ್ ಗಡಿಯಲ್ಲಿ ನಿಯೋಜಿಸಲಾಗಿದೆ. ಗಡಿಯಲ್ಲಿ ನಮ್ಮ ಬೇಲಿಯನ್ನು ಮತ್ತಷ್ಟು ಬಲಪಡಿಸುವ ಬಗ್ಗೆಯೂ ಚರ್ಚೆ ನಡೆಯುತ್ತಿದೆ’ ಎಂದು ವಿವರಿಸಿದರು.

‘ತುರ್ತು ನಿಬಂಧನೆಗಳ ಭಾಗವಾಗಿ, ನಾವು ಕೆಲವು ಹೊಸ ತಂತ್ರಜ್ಞಾನಗಳನ್ನು ಸೇರಿಸಲು ಮತ್ತು ಯುದ್ಧದ ಡೊಮೇನ್‌ಗಳನ್ನು ಪರಿಹರಿಸಲು ಸಮರ್ಥರಾಗಿದ್ದೇವೆ. ನಾವು ಉತ್ತಮ ವಾಹನಗಳು, ಡ್ರೋನ್‌ಗಳು ಮತ್ತು ಕೌಂಟರ್-ಡ್ರೋನ್ ವ್ಯವಸ್ಥೆಗಳನ್ನು ಸಿದ್ದಪಡಿಸಿಕೊಂಡಿದ್ದೇವೆ. ನಾವು ಭೂಪ್ರದೇಶ-ನಿರ್ದಿಷ್ಟ ಎಲೆಕ್ಟ್ರಾನಿಕ್ ವಾರ್ಫೇರ್ ಸಿಸ್ಟಮ್‌ಗಳನ್ನು ಹೊಂದಿದ್ದೇವೆ’ ಎಂದು ಜನರಲ್ ಪಾಂಡೆ ಹೇಳಿದರು.

‘ನಾವು ನಮ್ಮ ಫಿರಂಗಿ ಘಟಕಗಳನ್ನು ಪುನರ್ ರಚಿಸಿದ್ದೇವೆ. ಎಲೆಕ್ಟ್ರಾನಿಕ್ ವಾರ್ ಫೇರ್ ಮತ್ತು ಎಲೆಕ್ಟ್ರಾನಿಕ್ ಇಂಟೆಲಿಜೆನ್ಸ್‌ನ್ನು ಪುನರ್ ರಚಿಸಿದ ಘಟಕಗಳನ್ನು ಸಹ ಹೊಂದಿದ್ದೇವೆ. ನಮ್ಮ ಪ್ರಾಣಿ ಘಟಕಗಳಲ್ಲಿ ಪ್ರಾಣಿಗಳನ್ನು ಕಡಿಮೆ ಮಾಡುವ ಪ್ರಕ್ರಿಯೆಯನ್ನು ಪ್ರಾರಂಭಿಸಿದ್ದೇವೆ; ಅವುಗಳನ್ನು ಡ್ರೋನ್‌ಗಳಾಗಿ ಬದಲಾಯಿಸಲಾಗುತ್ತಿದೆ. ನಾವು ಹಲವು ಯೋಜನೆಯನ್ನು ಮಾಡಿದ್ದು, ಗಮನಾರ್ಹವಾಗಿ ನಮ್ಮ ಶಕ್ತಿಯನ್ನು ಉತ್ತಮಗೊಳಿಸಿದ್ದೇವೆ. 2027ರ ವೇಳೆಗೆ ನಾವು 1 ಲಕ್ಷ ಸಂಖ್ಯೆಗಳ ಆಪ್ಟಿಮೈಸೇಶನ್ ಅನ್ನು ಸಾಧಿಸುತ್ತೇವೆ. ಈ ಪ್ರಸ್ತಾವನೆಯನ್ನು ಸರ್ಕಾರಕ್ಕೆ ನೀಡಿದ್ದೇವೆ’ ಎಂದರು.

ಇದನ್ನೂ ಓದಿ; ಪ್ರಜಾಪ್ರಭುತ್ವಕ್ಕೆ ‘ಶ್ರದ್ಧಾಂಜಲಿ’ ಸಲ್ಲಿಸಿದ ಶಿವಸೇನೆ ಸಂಸದ ಸಂಜಯ್ ರಾವತ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐದು ರಾಜ್ಯಗಳ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟ; ಬಂಗಾಳದಲ್ಲಿ ಮಾತ್ರ ಎರಡು ಹಂತದ ಮತದಾನ

ಅಸ್ಸಾಂ, ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಗಳ ವೇಳಾಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗದ (ಇಸಿಐ) ಮುಖ್ಯಸ್ಥರಾದ ಜ್ಞಾನೇಶ್ ಕುಮಾರ್ ಪ್ರಕಟಿಸಿದರು. ದೆಹಲಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯ...

ಫ್ಲಿಪ್‌ಕಾರ್ಟ್‌ನಿಂದ 1 ರೂ.ಗೆ ಹಾಲು ಮಾರಾಟ; ಪ್ರಧಾನಿ ಮೋದಿ ಮಧ್ಯಸ್ಥಿಕೆಗೆ ಬಮುಲ್‌ ಆಗ್ರಹ

ಫ್ಲಿಪ್‌ಕಾರ್ಟ್‌ ಸಂಸ್ಥೆಯು ಆನ್‌ಲೈನ್‌ ಮೂಲಕ 1 ರೂ.ಗೆ ಲೀಟರ್‌ ಹಾಲನ್ನು ಮಾರಾಟ ಮಾಡಿರುವುದು ಭಾರಿ ಜನಾಕ್ರೋಶಕ್ಕೆ ಕಾರಣವಾಗಿದೆ. ಈ ಬಗ್ಗೆ, ಬೆಂಗಳೂರು ನಗರ, ಗ್ರಾಮೀಣ ಮತ್ತು ರಾಮನಗರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ...

“ಮಕ್ಕಳ ಹಂತಕನನ್ನು ಹುಡುಕಿ ಹತ್ಯೆ ಮಾಡುತ್ತೇವೆ” : ನೆತನ್ಯಾಹು ಸುರಕ್ಷಿತವಾಗಿದ್ದಾರೆ ಎಂಬ ಇಸ್ರೇಲ್ ಸ್ಪಷ್ಟನೆ ಬೆನ್ನಲ್ಲೆ ಐಆರ್‌ಜಿಸಿ ಹೇಳಿಕೆ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರನ್ನು ಹುಡುಕಿ ಹತ್ಯೆ ಮಾಡುತ್ತೇವೆ ಎಂದು ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ಹೇಳಿರುವುದಾಗಿ ವರದಿಯಾಗಿದೆ. ನೆತನ್ಯಾಹು ಅವರ ಹತ್ಯೆಯ ವದಂತಿಗಳನ್ನು ಇಸ್ರೇಲ್ ನಿರಾಕರಿಸಿದ ಬೆನ್ನಲ್ಲೇ, ಐಆರ್‌ಜಿಸಿ ಈ...

ಮಹಾರಾಷ್ಟ್ರ| ಇಫ್ತಾರ್ ಕೂಟಕ್ಕೆ ಸೇರಿದ್ದ ಮುಸ್ಲಿಮರ ಮೇಲೆ ಹಿಂದುತ್ವವಾದಿ ಗುಂಪಿನಿಂದ ದಾಳಿ

ರಂಜಾನ್‌ ಮಾಸದ ಉಪವಾಸ ಮುರಿಯಲು ನೆರೆದಿದ್ದ ಜನರ ಮೇಲೆ ಅಪರಿಚಿತ ವ್ಯಕ್ತಿಗಳ ಗುಂಪೊಂದು ದಾಳಿ ನಡೆಸಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಇಫ್ತಾರ್ ಕೂಟಕ್ಕೆ ಸಿದ್ಧತೆ ನಡೆಸುತ್ತಿದ್ದಾಗ, ಸುಮಾರು 100 ಕ್ಕೂ ಹೆಚ್ಚು...

ಆಸ್ಕರ್‌ ಅಂತಿಮ ಪಟ್ಟಿಗೆ ಆಯ್ಕೆಯಾದ ‘ದಿ ವಾಯ್ಸ್ ಆಫ್ ಹಿಂದ್ ರಜಬ್’

ಗಾಝಾದ ಆರು ವರ್ಷದ ಬಾಲಕಿ ಹಿಂದ್ ರಜಬ್‌ ಮತ್ತು ಆಕೆಯ ಸಂಬಂಧಿಕರನ್ನು ಇಸ್ರೇಲಿ ಸೈನಿಕರು ಭೀಕರವಾಗಿ ಹತ್ಯೆ ಮಾಡಿದ ಕಥೆಯನ್ನು ಹೇಳುವ 'ದಿ ವಾಯ್ಸ್ ಆಫ್ ಹಿಂದ್ ರಜಬ್' ಚಲನಚಿತ್ರವು 2026ರ ಆಸ್ಕರ್...

ಉತ್ತರ ಪ್ರದೇಶ| ದಲಿತ ಕುಟುಂಬದ ಮದುವೆ ಮನೆಯಲ್ಲಿ ಸವರ್ಣಿಯರಿಂದ ಹಲ್ಲೆ; ಬಂದೂಕಿನಿಂದ ಬೆದರಿಕೆ

ಮಾರ್ಚ್ 10 ರಂದು ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಟಿಕುನಿಯಾ ಪೊಲೀಸ್ ಠಾಣೆ ಪ್ರದೇಶದಲ್ಲಿ ಜಾತಿ ಆಧಾರಿತ ಹಿಂಸಾಚಾರದ ತೀವ್ರ ಆತಂಕಕಾರಿ ಘಟನೆ ಬೆಳಕಿಗೆ ಬಂದಿದೆ. 24 ಗಂಟೆಗಳ ಒಳಗೆ ಎಫ್‌ಐಆರ್...

’70 ಲಕ್ಷ ಬಂಗಾಳಿ ಮುಸ್ಲಿಮರನ್ನು ಹೊರದಬ್ಬಲು ಸಾಧ್ಯವಿಲ್ಲ..ಅವರೇ ದೇಶ ಬಿಡುವಂತಹ ಪರಿಸ್ಥಿತಿ ಸೃಷ್ಟಿಸುತ್ತೇವೆ’: ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಸುಮಾರು 70 ಲಕ್ಷ 'ಬಂಗಾಳಿ ಮುಸ್ಲಿಮರ'ನ್ನು ಭಾರತದಿಂದ ಹೊರಹಾಕುವುದು 'ಮಾನವೀಯವಾಗಿ ಸಾಧ್ಯವಿಲ್ಲ'. ಹಾಗಾಗಿ, ಅವರಾಗಿಯೇ ದೇಶ ತೊರೆಯುವಂತಹ ಪರಿಸ್ಥಿತಿಯನ್ನು ನಾವು ಸೃಷ್ಟಿಸುತ್ತೇವೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ. ಈ...

ಮೋದಿಯವರ ವಿದೇಶಾಂಗ ನೀತಿ ಸಂಪೂರ್ಣವಾಗಿ ದಿಕ್ಕು ತಪ್ಪಿದೆ, ನಗೆಪಾಟಲಿಗೆ ಈಡಾಗಿದೆ, ಅನೈತಿಕತೆಯಿಂದ ಕೂಡಿದೆ. ಇದು ಜಗಜ್ಜಾಹೀರಾಗಿದೆ – ಶ್ರೀಪಾದ್‌ ಭಟ್

ತಮ್ಮ ಸ್ಥಳೀಯ ಮತಬ್ಯಾಂಕ್ ರಾಜಕಾರಣದ ಜೊತೆಗೆ ವಿದೇಶಿ ನೀತಿಯನ್ನು ತಳುಕು ಹಾಕುವುದು. ಉದಾಹರಣೆಗೆ ಅಮೆರಿಕ-ಇಸ್ರೇಲ್ ಜಂಟಿಯಾಗಿ ನಡೆಸುತ್ತಿರುವ ಇರಾನ್ ಮೇಲಿನ ಯುದ್ಧದ ಸಮಯದಲ್ಲಿ ಮೋದಿ ನೇತೃತ್ವದ ಸರ್ಕಾರವು ತಾನು ಇರಾನ್ ಪರ ನಿಲುವು ತಾಳಿದರೆ...

ದೆಹಲಿ ಪೊಲೀಸರಿಂದ 10 ಮಂದಿ ಹೋರಾಟಗಾರರ ಅಪಹರಣ ಆರೋಪ : ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ

ಸಿವಿಲ್ ಸೊಸೈಟಿಯ ಹತ್ತು ಮಂದಿ ಹೋರಾಟಗಾರರನ್ನು ದೆಹಲಿ ಪೊಲೀಸರು ಅಪಹರಿಸಿದ್ದಾರೆ ಅಥವಾ ಅಕ್ರಮವಾಗಿ ಬಂಧಿಸಿದ್ದಾರೆ ಎಂದು ಮಾನವ ಹಕ್ಕುಗಳ ಗುಂಪುಗಳು ಆರೋಪಿಸಿವೆ. ಹತ್ತು ಮಂದಿಯನ್ನು ದೆಹಲಿ ಪೊಲೀಸರು ಮತ್ತು ಇತರ ರಾಜ್ಯಗಳ ಏಜೆನ್ಸಿಗಳು ಅಪಹರಿಸಿವೆ...

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...