Homeಮುಖಪುಟರಾಜೌರಿ-ಪೂಂಚ್‌ನಲ್ಲಿ ಭಯೋತ್ಪಾದನೆ ಹೆಚ್ಚಳ; ಕಳವಳ ವ್ಯಕ್ತಪಡಿಸಿದ ಸೇನಾ ಮುಖ್ಯಸ್ಥ

ರಾಜೌರಿ-ಪೂಂಚ್‌ನಲ್ಲಿ ಭಯೋತ್ಪಾದನೆ ಹೆಚ್ಚಳ; ಕಳವಳ ವ್ಯಕ್ತಪಡಿಸಿದ ಸೇನಾ ಮುಖ್ಯಸ್ಥ

- Advertisement -
- Advertisement -

ಭಾರತ-ಮ್ಯಾನ್ಮಾರ್ ಗಡಿಯಲ್ಲಿನ ಪರಿಸ್ಥಿತಿ ಮತ್ತು ಜಮ್ಮು-ಕಾಶ್ಮೀರದ ರಾಜೌರಿ-ಪೂಂಚ್ ಸೆಕ್ಟರ್‌ನಲ್ಲಿನ ಭಯೋತ್ಪಾದಕ ಚಟುವಟಿಕೆಗಳ ಬಗ್ಗೆ ಸೇನಾ ಮುಖ್ಯಸ್ಥ (COAS) ಜನರಲ್ ಮನೋಜ್ ಪಾಂಡೆ ಗುರುವಾರ ಕಳವಳ ವ್ಯಕ್ತಪಡಿಸಿದ್ದಾರೆ.

ಸೇನಾ ವಾರ್ಷಿಕ ದಿನದ ಪ್ರಯುಕ್ತ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಪಾಂಡೆ, ಭಾರತದ ಗಡಿಗಳಲ್ಲಿ ಚಾಲ್ತಿಯಲ್ಲಿರುವ ಭದ್ರತಾ ಸನ್ನಿವೇಶಗಳ ಬಗ್ಗೆ ವಿವರಣೆ ನೀಡಿದರು. ಉತ್ತರದ ಗಡಿಯಲ್ಲಿ, ವಿಶೇಷವಾಗಿ ಲಡಾಖ್‌ನಲ್ಲಿ ಪರಿಸ್ಥಿತಿ ಸ್ಥಿರವಾಗಿದೆ; ಆದರೆ ಸೂಕ್ಷ್ಮವಾಗಿದೆ’ ಎಂದು ಹೇಳಿದರು.

‘ನಾವು ಮಿಲಿಟರಿ ಮತ್ತು ರಾಜತಾಂತ್ರಿಕ ಮಟ್ಟದಲ್ಲಿ ಮಾತನಾಡುವುದನ್ನು ಮುಂದುವರಿಸುತ್ತೇವೆ, ಜಾರಿಯಲ್ಲಿರುವ ಪ್ರೋಟೋಕಾಲ್‌ಗಳು ಮತ್ತು ಕಾರ್ಯವಿಧಾನಗಳ ಪ್ರಕಾರ ಉಳಿದಿರುವ ಸಮಸ್ಯೆಗಳಿಗೆ ಸಮತೋಲನ ಪರಿಹಾರವನ್ನು ಕಂಡುಹಿಡಿಯುತ್ತೇವೆ’ ಎಂದು ಅವರು ಹೇಳಿದರು.

ವ್ಯಾಪಕವಾದ ರಾಜತಾಂತ್ರಿಕ ಮತ್ತು ಮಿಲಿಟರಿ ಮಾತುಕತೆಗಳ ನಂತರವೂ ಚೀನಾ ಮತ್ತು ಭಾರತದ ದೇಶಗಳ ನಡುವೆ ಪೂರ್ವ ಲಡಾಖ್‌ನಲ್ಲಿ ಕೆಲವು ಘರ್ಷಣೆ ಮುಂದುವರಿದಿದೆ. ‘ಸೇನಾ ಪಡೆಗಳ ದೃಢ, ಸಮತೋಲಿತ ನಿಯೋಜನೆಯೊಂದಿಗೆ ಕಾರ್ಯಾಚರಣೆಯ ಸನ್ನದ್ಧತೆಯು ಉನ್ನತ ಮಟ್ಟದಲ್ಲಿ ಮುಂದುವರಿಯುತ್ತದೆ’ ಎಂದು ಪಾಂಡೆ ಭರವಸೆ ನೀಡಿದ್ದಾರೆ.

ಜಮ್ಮು ಮತ್ತು ಕಾಶ್ಮೀರದ ಪರಿಸ್ಥಿತಿಯ ಬಗ್ಗೆ ಮಾತನಾಡಿದ ಜನರಲ್ ಪಾಂಡೆ, ಗಡಿ ನಿಯಂತ್ರಣ ರೇಖೆಯ ಉದ್ದಕ್ಕೂ ಕದನ ವಿರಾಮ ಉಲ್ಲಂಘೆನಯಾಗುತ್ತಿರುವ ಬಗ್ಗೆ ಗಮನ ಸೆಳೆದರು. ‘ಒಳನುಸುಳುವಿಕೆ ಯತ್ನಗಳ ಹೊರತಾಗಿಯೂ, ಭಾರತೀಯ ಸೇನೆಯು ಅಂತಹ ಪ್ರಯತ್ನಗಳನ್ನು ಯಶಸ್ವಿಯಾಗಿ ವಿಫಲಗೊಳಿಸಿದೆ. ಶಸ್ತ್ರಾಸ್ತ್ರಗಳು ಮತ್ತು ಮಾದಕವಸ್ತುಗಳ ಕಳ್ಳಸಾಗಣೆಯನ್ನು ತಡೆಯಲು ಪ್ರಬಲವಾದ ಡ್ರೋನ್ ಕಾರ್ಯವಿಧಾನವು ಸೇನಾ ಯಶಸ್ಸಿಗೆ ಕಾರಣವಾಗಿದೆ’ ಎಂದು ಹೇಳಿದರು.

‘ಜಮ್ಮು ಮತ್ತು ಕಾಶ್ಮೀರದಲ್ಲಿ ಒಟ್ಟಾರೆ ಹಿಂಸಾಚಾರದ ಘಟನೆಗಳು ಕಡಿಮೆಯಾಗಿವೆ. ಆದರೆ, ರಜೌರಿ-ಪೂಂಚ್ ವಲಯದಲ್ಲಿ ಇಂತಹ ಘಟನೆಗಳು ಹೆಚ್ಚಿವೆ’ ಎಂದು ಜನರಲ್ ಪಾಂಡೆ ಹೇಳಿದರು.

ಕಳೆದ 5-6 ತಿಂಗಳುಗಳಲ್ಲಿ ರಾಜೌರಿ ಮತ್ತು ಪೂಂಚ್‌ನಲ್ಲಿನ ಪರಿಸ್ಥಿತಿ ಮತ್ತು ಭಯೋತ್ಪಾದಕ ಚಟುವಟಿಕೆಗಳು ನಮಗೆ ಕಳವಳಕಾರಿ ವಿಷಯವಾಗಿದೆ. 2003ರ ಹೊತ್ತಿಗೆ, ಈ ಪ್ರದೇಶದಲ್ಲಿ ಭಯೋತ್ಪಾದನೆ ಸಂಪೂರ್ಣವಾಗಿ ಹರಡಿತು. 2017-18 ರವರೆಗೆ ಅಲ್ಲಿ ಶಾಂತಿ ಸ್ಥಾಪಿಸಲಾಯಿತು. ಕಣಿವೆಯಲ್ಲಿ ಶಾಂತಿ ನೆಲೆಸಿರುವ ಕಾರಣ, ನಮ್ಮ ವಿರೋಧಿಗಳು ಈ ಪ್ರದೇಶದಲ್ಲಿ ಭಯೋತ್ಪಾದನೆಯನ್ನು ಪ್ರೋತ್ಸಾಹಿಸುತ್ತಿದ್ದಾರೆ’ ಎಂದು ಜನರಲ್ ಪಾಂಡೆ ಹೇಳಿದರು.

ಇಂಡೋ-ಮ್ಯಾನ್ಮಾರ್ ಗಡಿಯಲ್ಲಿನ ಪರಿಸ್ಥಿತಿಯ ಬಗ್ಗೆ ಕಳವಳ ವ್ಯಕ್ತಪಡಿಸಿದ ಜನರಲ್ ಪಾಂಡೆ, ಮ್ಯಾನ್ಮಾರ್ ಸೇನೆ ಮತ್ತು ಜನಾಂಗೀಯ ಸಶಸ್ತ್ರ ಸಂಘಟನೆಗಳ ಚಟುವಟಿಕೆಗಳ ಪ್ರಭಾವವನ್ನು ಎತ್ತಿ ತೋರಿಸಿದರು. ಮ್ಯಾನ್ಮಾರ್ ಸೇನೆಯ ಸಿಬ್ಬಂದಿ ಮತ್ತು ಭೂತಾನ್ ನಾಗರಿಕರು ಭಾರತೀಯ ಪ್ರದೇಶಗಳಲ್ಲಿ ಆಶ್ರಯ ಪಡೆಯುವ ನಿದರ್ಶನಗಳನ್ನು ಅವರು ಗುರುತಿಸಿದ್ದಾರೆ.

‘ನಮ್ಮಲ್ಲಿ ಕೆಲವು ಬಂಡುಕೋರ ಗುಂಪುಗಳಿವೆ, ಅವರು ಒತ್ತಡವನ್ನು ಅನುಭವಿಸುತ್ತಿದ್ದಾರೆ ಮತ್ತು ಅವರು ಈಗ ಮಣಿಪುರ ರಾಜ್ಯದ ಗಡಿಯ ನಮ್ಮ ಭಾಗಕ್ಕೆ ಬರಲು ಪ್ರಯತ್ನಿಸಿದ್ದಾರೆ. ಅದು ಮಣಿಪುರದ ಪರಿಸ್ಥಿತಿಯೊಂದಿಗೆ ಸೇರಿಕೊಳ್ಳುವುದನ್ನು ನಾವು ಸೂಕ್ಷ್ಮವಾಗಿ ಗಮನಿಸುತ್ತಿದ್ದೇವೆ. ನಾವು ಸುಮಾರು 20 ಅಸ್ಸಾಂ ರೈಫಲ್ ಬೆಟಾಲಿಯನ್‌ಗಳನ್ನು ಹೊಂದಿದ್ದೇವೆ. ಇವುಗಳನ್ನು ಇಂಡೋ-ಮ್ಯಾನ್ಮಾರ್ ಗಡಿಯಲ್ಲಿ ನಿಯೋಜಿಸಲಾಗಿದೆ. ಗಡಿಯಲ್ಲಿ ನಮ್ಮ ಬೇಲಿಯನ್ನು ಮತ್ತಷ್ಟು ಬಲಪಡಿಸುವ ಬಗ್ಗೆಯೂ ಚರ್ಚೆ ನಡೆಯುತ್ತಿದೆ’ ಎಂದು ವಿವರಿಸಿದರು.

‘ತುರ್ತು ನಿಬಂಧನೆಗಳ ಭಾಗವಾಗಿ, ನಾವು ಕೆಲವು ಹೊಸ ತಂತ್ರಜ್ಞಾನಗಳನ್ನು ಸೇರಿಸಲು ಮತ್ತು ಯುದ್ಧದ ಡೊಮೇನ್‌ಗಳನ್ನು ಪರಿಹರಿಸಲು ಸಮರ್ಥರಾಗಿದ್ದೇವೆ. ನಾವು ಉತ್ತಮ ವಾಹನಗಳು, ಡ್ರೋನ್‌ಗಳು ಮತ್ತು ಕೌಂಟರ್-ಡ್ರೋನ್ ವ್ಯವಸ್ಥೆಗಳನ್ನು ಸಿದ್ದಪಡಿಸಿಕೊಂಡಿದ್ದೇವೆ. ನಾವು ಭೂಪ್ರದೇಶ-ನಿರ್ದಿಷ್ಟ ಎಲೆಕ್ಟ್ರಾನಿಕ್ ವಾರ್ಫೇರ್ ಸಿಸ್ಟಮ್‌ಗಳನ್ನು ಹೊಂದಿದ್ದೇವೆ’ ಎಂದು ಜನರಲ್ ಪಾಂಡೆ ಹೇಳಿದರು.

‘ನಾವು ನಮ್ಮ ಫಿರಂಗಿ ಘಟಕಗಳನ್ನು ಪುನರ್ ರಚಿಸಿದ್ದೇವೆ. ಎಲೆಕ್ಟ್ರಾನಿಕ್ ವಾರ್ ಫೇರ್ ಮತ್ತು ಎಲೆಕ್ಟ್ರಾನಿಕ್ ಇಂಟೆಲಿಜೆನ್ಸ್‌ನ್ನು ಪುನರ್ ರಚಿಸಿದ ಘಟಕಗಳನ್ನು ಸಹ ಹೊಂದಿದ್ದೇವೆ. ನಮ್ಮ ಪ್ರಾಣಿ ಘಟಕಗಳಲ್ಲಿ ಪ್ರಾಣಿಗಳನ್ನು ಕಡಿಮೆ ಮಾಡುವ ಪ್ರಕ್ರಿಯೆಯನ್ನು ಪ್ರಾರಂಭಿಸಿದ್ದೇವೆ; ಅವುಗಳನ್ನು ಡ್ರೋನ್‌ಗಳಾಗಿ ಬದಲಾಯಿಸಲಾಗುತ್ತಿದೆ. ನಾವು ಹಲವು ಯೋಜನೆಯನ್ನು ಮಾಡಿದ್ದು, ಗಮನಾರ್ಹವಾಗಿ ನಮ್ಮ ಶಕ್ತಿಯನ್ನು ಉತ್ತಮಗೊಳಿಸಿದ್ದೇವೆ. 2027ರ ವೇಳೆಗೆ ನಾವು 1 ಲಕ್ಷ ಸಂಖ್ಯೆಗಳ ಆಪ್ಟಿಮೈಸೇಶನ್ ಅನ್ನು ಸಾಧಿಸುತ್ತೇವೆ. ಈ ಪ್ರಸ್ತಾವನೆಯನ್ನು ಸರ್ಕಾರಕ್ಕೆ ನೀಡಿದ್ದೇವೆ’ ಎಂದರು.

ಇದನ್ನೂ ಓದಿ; ಪ್ರಜಾಪ್ರಭುತ್ವಕ್ಕೆ ‘ಶ್ರದ್ಧಾಂಜಲಿ’ ಸಲ್ಲಿಸಿದ ಶಿವಸೇನೆ ಸಂಸದ ಸಂಜಯ್ ರಾವತ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ರಾಜಭವನ’ಗಳನ್ನು ‘ಲೋಕಭವನ’ಗಳೆಂದು ಮರುನಾಮಕರಣ; ಇದು ಒಕ್ಕೂಟ ವ್ಯವಸ್ಥೆ ಮತ್ತು ಭಾಷಾ ಸಮಾನತೆಯ ಮೇಲಿನ ಆಕ್ರಮಣ: ಜಾಗೃತ ಕರ್ನಾಟಕ

ದೇಶಾದಾದ್ಯಂತ ಇರುವ ರಾಜಭವನಗಳ ಹೆಸರನ್ನು ಲೋಕಭವನ ಎಂದು ಮರುನಾಮಕರಣ ಮಾಡುವುದಾಗಿ ಕೇಂದ್ರ ಗೃಹಸಚಿವಾಲಯ ತೀರ್ಮಾನಿಸಿದೆ. ಕೇಂದ್ರದ  ಈ ನೀತಿಯನ್ನು ವಿರೋಧಿಸಿರುವ ಜಾಗೃತ ಕರ್ನಾಟಕ ದೇಶದ ಎಲ್ಲಾ ಹಿಂದಿಯೇತರ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದೆ....

ಯುಜಿಸಿ ಈಕ್ವಿಟಿ ನಿಯಮಗಳ ಮೇಲಿನ ಸುಪ್ರೀಂ ಕೋರ್ಟ್ ತಡೆಗೆ ವಿದ್ಯಾರ್ಥಿಗಳ ಪ್ರತಿಭಟನೆ, ರೋಹಿತ್ ಕಾಯ್ದೆಗೆ ಒತ್ತಾಯ

ಯುಜಿಸಿ ಇಕ್ವಿಟಿ ನಿಯಮಗಳಿಗೆ ಸುಪ್ರೀಂ ಕೋರ್ಟ್ ನೀಡಿದ ತಡೆಯಾಜ್ಞೆಯ ವಿರುದ್ಧ ಮತ್ತು ವಿಶ್ವವಿದ್ಯಾಲಯಗಳಲ್ಲಿ ಜಾತಿ ತಾರತಮ್ಯವನ್ನು ಎದುರಿಸಲು ಶಾಸನಬದ್ಧ ರೋಹಿತ್ ಕಾಯ್ದೆಯನ್ನು ಜಾರಿಗೆ ತರುವಂತೆ ಒತ್ತಾಯಿಸಿ ಅಖಿಲ ಭಾರತ ವಿದ್ಯಾರ್ಥಿ ಸಂಘ (ಎಐಎಸ್ಎ)...

ನರವಾಣೆ ಅಪ್ರಕಟಿತ ಪುಸ್ತಕ ಗದ್ದಲ | ಸತ್ಯ ಹೊರಬಂದರೆ ಮೋದಿ, ರಾಜನಾಥ್ ಸಿಂಗ್ ಮುಖವಾಡ ಬಯಲಾಗಲಿದೆ : ರಾಹುಲ್ ಗಾಂಧಿ

ಮಾಜಿ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆ ಕುರಿತು ರಾಹುಲ್ ಗಾಂಧಿ ಸೋಮವಾರ (ಫೆ.2) ಲೋಕಸಭೆಯಲ್ಲಿ ಉಲ್ಲೇಖಿಸಿದ್ದು, ಈ ವೇಳೆ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ...

ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ಘರ್ಷಣೆ : ಮೂವರ ಬಂಧನ

ಗುಜರಾತ್‌ನ ಪಠಾಣ್ ತಾಲೂಕಿನ ಚದ್ರುಮಣ ಗ್ರಾಮದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದು, ಇನ್ನೂ ಐವರ ಬಂಧನಕ್ಕೆ ಬಲೆ ಬೀಸಿದ್ದಾರೆ. ಆರೋಪಿಗಳ ವಿರುದ್ದ ಎಸ್‌ಸಿ/ಎಸ್‌ಟಿ...

ಲೋಕಸಭೆಯಲ್ಲಿ ಲಡಾಖ್ ಬಿಕ್ಕಟ್ಟಿನ ಬಗ್ಗೆ ಮಾಜಿ ಸೇನಾ ಮುಖ್ಯಸ್ಥರ ಅಪ್ರಕಟಿತ ಆತ್ಮಚರಿತ್ರೆ ಉಲ್ಲೇಖಿಸಿದ ರಾಹುಲ್ ಗಾಂಧಿ: ಸಭೆಯಲ್ಲಿ ತೀವ್ರ ಗದ್ದಲ

ಸೋಮವಾರ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮಾಜಿ ಸೇನಾ ಮುಖ್ಯಸ್ಥ ಎಂಎಂ ನರವಾಣೆ ಅವರ ಆತ್ಮಚರಿತ್ರೆಯಿಂದ ಉಲ್ಲೇಖಿಸಲು ಪ್ರಯತ್ನಿಸಿದ ನಂತರ ಗದ್ದಲ ಭುಗಿಲೆದ್ದಿತು. ರಾಹುಲ್ ಮಾತನಾಡಲು ಪ್ರಾರಂಭಿಸುತ್ತಿದ್ದಂತೆ, ರಕ್ಷಣಾ ಸಚಿವ...

ಪಂಜಾಬ್ ನಿರೀಕ್ಷೆಗಳನ್ನು ಪೂರೈಸುವಲ್ಲಿ ಕೇಂದ್ರ ಬಜೆಟ್ ಮತ್ತೊಮ್ಮೆ ವಿಫಲವಾಗಿದೆ: ಸಿಎಂ ಭಗವಂತ್ ಮಾನ್

ಕೇಂದ್ರ ಬಜೆಟ್ ಮತ್ತೊಮ್ಮೆ ಪಂಜಾಬ್‌ನ ನಿರೀಕ್ಷೆಗಳನ್ನು ಪೂರೈಸುವಲ್ಲಿ ವಿಫಲವಾಗಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮತ್ತು ಆಡಳಿತಾರೂಢ ಆಮ್ ಆದ್ಮಿ ಪಕ್ಷದ (ಎಎಪಿ) ಸರ್ಕಾರದ ಸಚಿವರು ಭಾನುವಾರ ಅಭಿಪ್ರಾಯಪಟ್ಟಿದ್ದಾರೆ. ಬಜೆಟ್ ರೈತರಿಗೆ ಯಾವುದೇ...

ರಾಜ್ಯಪಾಲರು ಪೂರ್ಣ ಭಾಷಣ ಓದಿಲ್ಲ, ‘ಜೈ ಸಂವಿಧಾನ’ ಎನ್ನುವುದನ್ನು ಉಲ್ಲೇಖಿಸದೆ ಹೋದರು : ಸಿಎಂ ಸಿದ್ದರಾಮಯ್ಯ

ರಾಜ್ಯಪಾಲರು ಪೂರ್ತಿ ಭಾಷಣ ಓದದೆ ತರಾತುರಿಯಲ್ಲಿ ಹೋದರು. ಭಾಷಣದಲ್ಲಿದ್ದ "ಜೈ ಸಂವಿಧಾನ" ಎನ್ನುವುದನ್ನೂ ಉಲ್ಲೇಖಿಸದೆ ತೆರಳಿದರು. ರಾಷ್ಟ್ರಗೀತೆ ಮುಗಿಯುವವರೆಗೂ ಕಾಯದೆ ಹೋಗಿಬಿಟ್ಟರು. ಇದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬಿಜೆಪಿ ಶಾಸಕ...

ಉತ್ತರಾಖಂಡ| ಹಿಂದುತ್ವ ಗುಂಪಿನ ಕಿರುಕುಳದಿಂದ ಮುಸ್ಲಿಂ ಅಂಗಡಿ ಮಾಲೀಕನನ್ನು ರಕ್ಷಿಸಿದ ದೀಪಕ್ ಕುಮಾರ್

ಸ್ಥಳೀಯ ಮುಸ್ಲಿಂ ಅಂಗಡಿ ಮಾಲೀಕನ ವಿರುದ್ಧ ಬಜರಂಗದಳ ಸದಸ್ಯರು ನೀಡುತ್ತಿದ್ದ ಕಿರುಕುಳವನ್ನು ಜಿಮ್ ಮಾಲೀಕ ದೀಪಕ್ ಕುಮಾರ್ ಸ್ಥಳದಲ್ಲೇ ಎದುರಿಸಿದ್ದಾರೆ. ಆಕ್ರೋಶಿತರಾದ ಹಿಂದುತ್ವ ಗುಂಪಿನ ಸದಸ್ಯರು ದೀಪಕ್ ವಿರುದ್ಧವೇ ಪ್ರತಿಭಟನೆ ನಡೆಸಿದ್ದು, ಹಲವಾರ...

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ನಡೆಸುವ ಭಾರತೀಯ ಚುನಾವಣಾ ಆಯೋಗದ (ಇಸಿಐ) ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ...

ದಕ್ಷಿಣ ಪಿನಾಕಿನಿ ಜಲವಿವಾದ : ನ್ಯಾಯಮಂಡಳಿ ಸ್ಥಾಪಿಸಲು ಸುಪ್ರೀಂ ಕೋರ್ಟ್ ಆದೇಶ

ದಕ್ಷಿಣ ಪಿನಾಕಿನಿ (ಪೆನ್ನೈಯಾರ್) ನದಿ ನೀರಿನ ಹಂಚಿಕೆಗೆ ಸಂಬಂಧಿಸಿದಂತೆ ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳ ನಡುವೆ ಬಾಕಿ ಇರುವ ವಿವಾದಗಳನ್ನು ಪರಿಹರಿಸಲು ನ್ಯಾಯಮಂಡಳಿ ಸ್ಥಾಪಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.2) ನಿರ್ದೇಶನ ನೀಡಿದೆ. ಕೇಂದ್ರ...