HomeಮುಖಪುಟUAPA ಪ್ರಕರಣಗಳಲ್ಲಿ ತೀವ್ರ ಹೆಚ್ಚಳ: ಐದು ವರ್ಷಗಳಲ್ಲಿ 5,128 ಪ್ರಕರಣ- 7,050 ಜನರ ಬಂಧನ!

UAPA ಪ್ರಕರಣಗಳಲ್ಲಿ ತೀವ್ರ ಹೆಚ್ಚಳ: ಐದು ವರ್ಷಗಳಲ್ಲಿ 5,128 ಪ್ರಕರಣ- 7,050 ಜನರ ಬಂಧನ!

- Advertisement -
- Advertisement -

ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬಂದ ನಂತರ 2015ರಿಂದ 5 ವರ್ಷಗಳಲ್ಲಿ ಕಾನೂನುಬಾಹಿರ ಚಟುವಟಿಕೆಗಳ ತಡೆಗಟ್ಟುವಿಕೆ ಕಾಯ್ದೆ (ಯುಎಪಿಎ) ಪ್ರಕರಣಗಳ ಸಂಖ್ಯೆಯಲ್ಲಿ ತೀವ್ರ ಹೆಚ್ಚಳವಾಗಿದೆ. 2015-2019ರ ಅವಧಿಯಲ್ಲಿ UAPA ಅಡಿಯಲ್ಲಿ 5,128 ಪ್ರಕರಣಗಳು ದಾಖಲಾಗಿದ್ದು, 7,050 ಜನರನ್ನು ಬಂಧಿಸಲಾಗಿದೆ ಎಂದು ಗೃಹ ಸಚಿವಾಲಯದ ರಾಜ್ಯ ಸಚಿವ ಜಿ.ಕಿಶನ್ ರೆಡ್ಡಿ ಸಂಸತ್ತಿನಲ್ಲಿ ಮಾಹಿತಿ ನೀಡಿದ್ದಾರೆ.

ರಾಜ್ಯಸಭಾ ಸದಸ್ಯ ಅಬ್ದುಲ್ ವಹಾಬ್‌ ಕೇಳಿದ ಪ್ರಶ್ನೆಗೆ ಕೇಂದ್ರ ಸಚಿವರು ಲಿಖಿತ ಉತ್ತರ ನೀಡಿದ್ದು, ಅದರಲ್ಲಿ 2019ರಲ್ಲಿ 1,226 ಪ್ರಕರಣಗಳಲ್ಲಿ 1,948 ಜನರನ್ನು ಬಂಧಿಸಲಾಗಿದೆ. ಅದೇ ವರ್ಷ ಕೇಂದ್ರ ಸರ್ಕಾರದ ಸಿಎಎ-ಎನ್‌ಆರ್‌ಸಿ ಯನ್ನು ವಿರೋಧಿಸಿ ದೇಶಾದ್ಯಂತ ಬೃಹತ್ ಪ್ರತಿಭಟನೆಗಳು ಭುಗಿಲೆದ್ದಿದ್ದನ್ನು ಗಮನಿಸಬಹುದಾಗಿದೆ.

2019ರವರೆಗೆ ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ (NCRB) ಸಂಪೂರ್ಣ ವರದಿ ಮಾಡಿದೆ. ಅದರಂತೆ 2015ರಿಂದ 2019ರವರೆಗೆ ಕ್ರಮವಾಗಿ 897, 922, 901, 1,182 1,226 ಪ್ರಕರಣಗಳು (ಒಟ್ಟು 5,128) ದಾಖಲಾಗಿವೆ. ಅದೇ ರೀತಿ 1,128, 999, 1,554, 1,421, 1,948 ಬಂಧನಗಳಾಗಿವೆ (ಒಟ್ಟು7,050).

ಈ ಪ್ರಕರಣಗಳಲ್ಲಿ ಅತಿ ಹೆಚ್ಚಿನವು 2019ರಲ್ಲಿ ದಾಖಲಾಗಿರುವುದು ಗಮನಿಸಬೇಕಾದ ಅಂಶವಾಗಿದೆ. ಆ ವರ್ಷ ಮಣಿಪುರದಲ್ಲಿ 306, ತಮಿಳುನಾಡಿನಲ್ಲಿ 270, ಜಮ್ಮು ಮತ್ತು ಕಾಶ್ಮಿರದಲ್ಲಿ 255, ಜಾರ್ಖಂಡ್‌ನಲ್ಲಿ 105 ಮತ್ತು ಅಸ್ಸಾಂನಲ್ಲಿ 87 ಪ್ರಕರಣಗಳು ವರದಿಯಾಗಿವೆ. ಇದೇ 5 ವರ್ಷಗಳ ಅವಧಿಯಲ್ಲಿ 229 ದೇಶದ್ರೋಹ ಪ್ರಕರಣಗಳು ದಾಖಲಾಗಿವೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.

ಕಾನೂನುಬಾಹಿರ ಚಟುವಟಿಕೆಗಳು (ತಡೆಗಟ್ಟುವಿಕೆ) ಕಾಯ್ದೆ ಅಡಿಯಲ್ಲಿ ಬಂಧನವಾದವರು ಜಾಮೀನು ಪಡೆಯುವುದು ಕಠಿಣವಾಗಿದೆ. ಅಲ್ಲದೇ ವಿಚಾರಣಾ ಸಂಸ್ಥೆಗಳು ಆರು ತಿಂಗಳವರೆಗೂ ಜಾರ್ಜ್ ಶೀಟ್‌ ಸಲ್ಲಿಸದೇ ಬಂಧನದಲ್ಲಿಟ್ಟುಕೊಳ್ಳಬಹುದಾಗಿದೆ.


ಇದನ್ನೂ ಓದಿ: ಮೋದಿ-ಆದಿತ್ಯನಾಥ್ ವಿರುದ್ದ ಟೀಕೆ: 293 ಭಾರತೀಯರ ವಿರುದ್ಧ ದೇಶದ್ರೋಹ ಪ್ರಕರಣ ದಾಖಲು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...