Homeಎಕಾನಮಿನೋಟು ಅಮಾನ್ಯೀಕರಣದಿಂದ ತೆರಿಗೆ ಸಂಗ್ರಹ ಹೆಚ್ಚಳ- ನಿರ್ಮಲ ಸೀತಾರಾಮನ್

ನೋಟು ಅಮಾನ್ಯೀಕರಣದಿಂದ ತೆರಿಗೆ ಸಂಗ್ರಹ ಹೆಚ್ಚಳ- ನಿರ್ಮಲ ಸೀತಾರಾಮನ್

ನೋಟು ಅಮಾನ್ಯೀಕರಣ ಕ್ರಮದಿಂದಾಗಿ ಜಿಡಿಪಿ ಬೆಳವಣಿಗೆಯ ದರವು ಶೇಕಡಾ 2.2 ರಷ್ಟು ಕಡಿಮೆಯಾಗಿದೆ. ಉದ್ಯೋಗವು ಶೇಕಡಾ 3ರಷ್ಟು ಕಡಿಮೆಯಾಗಿದೆ ಎಂದು ಕಾಂಗ್ರೆಸ್ ಪಕ್ಷ ಹೇಳಿದೆ

- Advertisement -
- Advertisement -

ನೋಟು ಅಮಾನ್ಯೀಕರಣದ ಉತ್ತಮ ತೆರಿಗೆ ಸಂಗ್ರಹ ಮತ್ತು ಡಿಜಿಟಲ್ ಆರ್ಥಿಕತೆಯತ್ತ ಸಾಗಲು ಕಾರಣವಾಗಿದೆ ಎಂದು ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ.

ಸರಣಿ ಟ್ವೀಟ್‌ಗಳಲ್ಲಿ ನೋಟು ಅಮಾನ್ಯೀಕರಣದ ಕುರಿತು ಹೇಳಿರುವ ಅವರು “ಭಾರತವನ್ನು ಭ್ರಷ್ಟಾಚಾರದಿಂದ ಮುಕ್ತಗೊಳಿಸುವ ಭರವಸೆಯನ್ನು ಈಡೇರಿಸಲು, ಮೋದಿ ಸರ್ಕಾರವು ನಾಲ್ಕು ವರ್ಷಗಳ ಹಿಂದೆ ನವೆಂಬರ್ 8ರಂದು ನೋಟು ಅಮಾನ್ಯೀಕರಣವನ್ನು ಜಾರಿಗೆ ತಂದಿತು. ಇದರಿಂದ ಕಪ್ಪು ಹಣದ ಮೇಲೆ ಅಭೂತಪೂರ್ವ ದಾಳಿ ನಡೆದಿದೆ. ಈ ಕ್ರಮವು ಉತ್ತಮ ತೆರಿಗೆ ಸಂಗ್ರಹಣೆ ಮತ್ತು ಡಿಜಿಟಲ್ ಆರ್ಥಿಕತೆಯತ್ತ ಸಾಗುವುದಕ್ಕೆ ಕಾರಣವಾಯಿತು” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಮೋದಿ ಘೋರವಾಗಿ ಸಾಯುತ್ತಾರೆ; ಕರ್ನಾಟಕ ವಿಭಜನೆಯಾತ್ತದೆ: ಬ್ರಹ್ಮಾಂಡ ಗುರೂಜಿ

“ನೋಟು ಅಮಾನ್ಯೀಕರಣದ ನಂತರ ಮೊದಲ ನಾಲ್ಕು ತಿಂಗಳಲ್ಲಿ 900 ಕೋಟಿ ರೂಪಾಯಿ ಬಹಿರಂಗಪಡಿಸದ ಆದಾಯವನ್ನು ವಶಪಡಿಸಿಕೊಳ್ಳಲಾಗಿದೆ. ಕಳೆದ ಮೂರು ವರ್ಷಗಳಲ್ಲಿ 3,950 ಕೋಟಿ ರೂ.ಗಳ ಆಸ್ತಿ ವಶಪಡಿಸಿಕೊಳ್ಳಲಾಗಿದೆ. ನೋಟು ಅಮಾನ್ಯೀಕರಣದ ನಂತರದ ಸಮೀಕ್ಷೆಗಳು ಹಲವಾರು ಕೋಟಿ ಮೌಲ್ಯದ ಬಹಿರಂಗಪಡಿಸದ ಆದಾಯವನ್ನು ಕಂಡುಹಿಡಿಯಲು ಕಾರಣವಾದರೆ, ಆಪರೇಷನ್ ಕ್ಲೀನ್ ಮನಿ ಆರ್ಥಿಕತೆಗೆ ಸಹಕಾರಿಯಾಯಿತು” ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ‘ರಾಜ್ಯದಲ್ಲಿ ಲವ್ ಜಿಹಾದ್ ಕಾನೂನು ತರಲು ಸಾಧ್ಯವಿಲ್ಲ’- ಸಿದ್ದರಾಮಯ್ಯ

“ನೋಟು ಅಮಾನ್ಯೀಕರಣ ಪಾರದರ್ಶಕತೆಯನ್ನು ತಂದುಕೊಟ್ಟಿದೆ ಮತ್ತು ತೆರಿಗೆ ಆಧಾಯವನ್ನು ವಿಸ್ತರಿಸಿದೆ. ಇದು ನಕಲಿ ಕರೆನ್ಸಿಯನ್ನು ನಿಗ್ರಹಿದೆ” ಎಂದು ಮತ್ತೊಂದು ಟ್ವೀಟ್ ನಲ್ಲಿ ಹೇಳಿದ್ದಾರೆ.

ಈ ನಡುವೆ ಕಾಂಗ್ರೆಸ್ ಸಾಮಾಜಿಕ ಮಾಧ್ಯಮ ಅಭಿಯಾನವನ್ನು #SpeakUpAgainstDeMoDisaster ಅನ್ನು ಪ್ರಾರಂಭಿಸಿದೆ. ಪಕ್ಷದ ಸಂಸದ ರಾಹುಲ್ ಗಾಂಧಿ, “ದೊಡ್ಡ ಡೀಫಾಲ್ಟರ್ಗಳ ಸಾಲವನ್ನು ಮನ್ನಾ ಮಾಡುವುದು ನೋಟು ಅಮಾನ್ಯೀಕರಣದ ಮುಖ್ಯ ಉದ್ದೇಶವಾಗಿದೆ” ಎಂದು ಆರೋಪಿಸಿದರು.

ಇದನ್ನೂ ಓದಿ: ವಿದ್ಯುತ್ ಖರೀದಿ ಕಸರತ್ತಿನ ಹಿಂದೆ ಭ್ರಷ್ಟಾಚಾರದ ವಾಸನೆ: ಸಿದ್ದರಾಮಯ್ಯ ಆರೋಪ

ನೋಟು ಅಮಾನ್ಯೀಕರಣ ಕ್ರಮದಿಂದಾಗಿ ಜಿಡಿಪಿ ಬೆಳವಣಿಗೆಯ ದರವು ಶೇಕಡಾ 2.2 ರಷ್ಟು ಕಡಿಮೆಯಾಗಿದೆ. ಉದ್ಯೋಗವು ಶೇಕಡಾ 3 ರಷ್ಟು ಕಡಿಮೆಯಾಗಿದೆ ಎಂದು ಕಾಂಗ್ರೆಸ್ ಪಕ್ಷ ಹೇಳಿದೆ.

2016 ರ ನವೆಂಬರ್ 8ರಂದು ನರೇಂದ್ರ ಮೋದಿ ನೇತೃತ್ವದ ಸರ್ಕಾರವು 500 ಮತ್ತು 1,000 ರೂ.ಗಳ ನೋಟುಗಳ ಕಾನೂನು ಸ್ಥಿತಿಯನ್ನು ರದ್ದುಗೊಳಿಸಿತು. ಇದು ಪ್ರತಿಪಕ್ಷಗಳಿಂದ ತೀವ್ರ ಟೀಕೆಗೆ ಗುರಿಯಾಗಿತ್ತು. ಈ ಕ್ರಮವು ದೇಶದ ಆರ್ಥಿಕತೆಯನ್ನು ಕೆಳಕ್ಕೆ ಇಳಿಸಿತು ಎಂದು ಹೇಳಿದರು.


ಇದನ್ನೂ ಓದಿ: ಕೊರೊನಾ ನಿಯಮ ಉಲ್ಲಂಘಿಸಿದ ರಾಜಕಾರಣಿಗಳ ಬಂಧನ ಯಾಕಿಲ್ಲ?- ರಾಜ್ಯವನ್ನು ತರಾಟೆ ಪಡೆದ ಹೈಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...