Homeಮುಖಪುಟಆದಾಯ ಹೆಚ್ಚಿಸುವ ಬದಲು ಭ್ರಷ್ಟಾಚಾರ ಹೆಚ್ಚಿಸುತ್ತಿದೆ - ಬಿಜೆಪಿ ವಿರುದ್ಧ ಅಖಿಲೇಶ್ ಯಾದವ್ ವಾಗ್ದಾಳಿ

ಆದಾಯ ಹೆಚ್ಚಿಸುವ ಬದಲು ಭ್ರಷ್ಟಾಚಾರ ಹೆಚ್ಚಿಸುತ್ತಿದೆ – ಬಿಜೆಪಿ ವಿರುದ್ಧ ಅಖಿಲೇಶ್ ಯಾದವ್ ವಾಗ್ದಾಳಿ

- Advertisement -
- Advertisement -

ಕೇಂದ್ರದ ಬಿಜೆಪಿ ಸರ್ಕಾರದ ಹಲವಾರು ವಸ್ತುಗಳ ಮೇಲಿನ ಜಿಎಸ್‌ಟಿಯನ್ನು ಹೆಚ್ಚಿಸಲಿದೆ ಎಂಬ ವರದಿಗಳ ಕುರಿತು ಪ್ರತಿಕ್ರಿಯಿಸಿರುವ ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್, ಆದಾಯವನ್ನು ಹೆಚ್ಚಿಸುವ ಬದಲು “ಭ್ರಷ್ಟಾಚಾರವನ್ನು ಹೆಚ್ಚಿಸಲು” ಬಿಜೆಪಿ ಯೋಜಿಸುತ್ತಿದೆ ಎಂದು ಗುರುವಾರ ವಾಗ್ದಾಳಿ ನಡೆಸಿದ್ದಾರೆ. ಆದಾಯ ಹೆಚ್ಚಿಸುವ ಬದಲು

ಈ ಬಗ್ಗೆ ಎಕ್ಸ್‌ನಲ್ಲಿ ಬರೆದಿರುವ ಅವರು, “ಬಿಜೆಪಿ ‘ಒಂದು ದೇಶ, ಒಂದು ತೆರಿಗೆ’ ಎಂದು ಹೇಳುತ್ತಿದೆ. ಆದರೆ ಅವರ ಈ ಹೇಳಿಕೆಯು ‘ಜುಮ್ಲಾಯಿ ಜೂಟ್’ (ಸುಳ್ಳು) ಆಗಿ ಮಾರ್ಪಟ್ಟಿದೆ. ಏಕೆಂದರೆ ಈಗ ಅವರು ಹೊಸದಾಗಿ ತೆರಿಗೆ ಸ್ಪಾಬ್‌ಗಳನ್ನು ತರುತ್ತಿದ್ದಾರೆ.” ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಆದಾಯ ಹೆಚ್ಚಿಸುವ ಬದಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

‘ಒಂದು ತೆರಿಗೆ, ಹಲವು ಸ್ಲ್ಯಾಬ್‌ಗಳು’ ಎಂದಾಗ ‘ಒಂದು ತೆರಿಗೆ’ ಎಂಬ ಘೋಷಣೆಯು ನಿಜವಾದ ಅರ್ಥದಲ್ಲಿ ಸುಳ್ಳು ಎಂದು ಸಾಬೀತಾಗಿದೆ. ವಾಸ್ತವವಾಗಿ, ತೆರಿಗೆ ದರಗಳನ್ನು ಹೆಚ್ಚಿಸುವುದರ ಹಿಂದೆ ದೊಡ್ಡ ಆಟವಿದೆ. ಭ್ರಷ್ಟಾಚಾರ ಹೆಚ್ಚಿಸುವ ಬಿಜೆಪಿಯ ಪ್ಲಾನ್ ಇದಾಗಿದ್ದು, ಅಧಿಕಾರಿಗಳ ಮೂಲಕ ಅಂಗಡಿಕಾರರು ಮತ್ತು ವ್ಯಾಪಾರಸ್ಥರ ಮೇಲೆ ಹೆಚ್ಚಿನ ಒತ್ತಡ ಹೇರುವ ಮೂಲಕ ಆದಾಯ ಹೆಚ್ಚಿಸಿ ‘ವಸೂಲಿ’ ಮಾಡುತ್ತಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.

ಹಾನಿಕಾರಕ ಸರಕುಗಳಾದ ಕಾರ್ಬೋನೇಟೆಡ್ ಪಾನೀಯಗಳು, ಸಿಗರೇಟ್, ತಂಬಾಕು ಮತ್ತು ಸಂಬಂಧಿತ ಉತ್ಪನ್ನಗಳ ಮೇಲಿನ ತೆರಿಗೆ ದರವನ್ನು ಪ್ರಸ್ತುತ ಶೇಕಡಾ 28 ರಿಂದ ಶೇಕಡಾ 35 ಕ್ಕೆ ಹೆಚ್ಚಿಸಲಾಗುವುದು ಎಂಬ ಕೇಂದ್ರದ ಸಚಿವಾಲಯಗಳ ವರದಿಗಳ ಹಿನ್ನಲೆಯಲ್ಲಿ ಅವರು ಈ ಹೇಳಿಕೆ ನೀಡಿದ್ದಾರೆ.

ಆದಾಗ್ಯೂ, ಮಂಗಳವಾರ ಕೇಂದ್ರೀಯ ಪರೋಕ್ಷ ತೆರಿಗೆಗಳ ಮಂಡಳಿಯು ಜಿಎಸ್‌ಟಿ ದರಗಳ ತರ್ಕಬದ್ಧಗೊಳಿಸುವಿಕೆಗೆ ಸಂಬಂಧಿಸಿ ಕೇಂದ್ರದ ಸಚಿವಾಲಯಗಳ ಶಿಫಾರಸುಗಳನ್ನು ಜಿಎಸ್‌ಟಿ ಕೌನ್ಸಿಲ್‌ಗೆ ಸಲ್ಲಿಸಬೇಕಿದೆ. ಜಿಎಸ್‌ಟಿ ಕೌನ್ಸಿಲ್ ತೆರಿಗೆ ದರಗಳನ್ನು ನಿಗದಿಪಡಿಸುವಲ್ಲಿ ಅಂತಿಮ ನಿರ್ಧಾರ ತೆಗೆದುಕೊಳ್ಳುತ್ತದೆ.

ತೆರಿಗೆ ದರ ಹೆಚ್ಚಿದಷ್ಟೂ ತೆರಿಗೆ ವಂಚನೆ ನಡೆಯುತ್ತದೆ ಎಂಬುದು ಜಗತ್ತಿನ ನಿಯಮ ಎಂದು ಅಖಿಲೇಶ್ ಯಾದವ್ ಹೇಳಿದ್ದಾರೆ. ಹೆಚ್ಚು ತೆರಿಗೆ ವಂಚಿಸಿದಾಗ ಭ್ರಷ್ಟ ಆಡಳಿತರೂಢ ಪಕ್ಷ ಹೆಚ್ಚು ಆದಾಯ ಗಳಿಸುತ್ತದೆ ಎಂದು ಅವರು ಪ್ರತಿಪಾದಿಸಿದ್ದಾರೆ.

ಬಿಜೆಪಿ ಸರ್ಕಾರದಲ್ಲಿ, ತೆರಿಗೆ ವಂಚಿಸಲು ಮತ್ತು ಅದನ್ನು ಸಂಗ್ರಹಿಸಲು ಹಿಂಬಾಗಿಲಿನ ಮಾರ್ಗಗಳನ್ನು ಮೊದಲು ಸಿದ್ಧಪಡಿಸಲಾಗಿದೆ. ಅದರ ನಂತರ ಯಾವುದೇ ಹೊಸ ತೆರಿಗೆ ಯೋಜನೆಯು ಮುಂಭಾಗದ ಬಾಗಿಲಿನಿಂದ ಹೊರಬರುತ್ತದೆ ಎಂದು ಅವರು ಆರೋಪಿಸಿದ್ದಾರೆ. ಕೊನೆಯಲ್ಲಿ ಪ್ರತಿ ತೆರಿಗೆ ಕಟ್ಟುವ ಹೊರೆ ಸಾರ್ವಜನಿಕರ ಮೇಲೆ ಬೀಳುತ್ತದೆ, ಹೀಗಾಗಿಯೇ ತೆರಿಗೆಯ ಗಿರಣಿಯಲ್ಲಿ ನಲುಗಿ ಹೋಗುವುದು ಸಾರ್ವಜನಿಕರೇ ಆಗಿದ್ದು, ಹೊಡೆತ ಬೀಳುವುದು ಸಾರ್ವಜನಿಕರಿಗೆ ಆಗಿದೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಸರ್ಕಾರಿ ಆಸ್ಪತ್ರೆಗಳಲ್ಲಿ ಆತ್ಮಹತ್ಯೆ ಮಾಡಿಕೊಂಡ ವೈದ್ಯಕೀಯ ಇಂಟರ್ನ್‌ಗಳ ಬಗ್ಗೆ ಯಾವುದೇ ಮಾಹಿತಿ ಇಲ್ಲ – ಕೇಂದ್ರ ಸರ್ಕಾರ

ಸರ್ಕಾರಿ ಆಸ್ಪತ್ರೆಗಳಲ್ಲಿ ಆತ್ಮಹತ್ಯೆ ಮಾಡಿಕೊಂಡ ವೈದ್ಯಕೀಯ ಇಂಟರ್ನ್‌ಗಳ ಬಗ್ಗೆ ಯಾವುದೇ ಮಾಹಿತಿ ಇಲ್ಲ – ಕೇಂದ್ರ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...