Homeಮುಖಪುಟ'ಹತ್ರಾಸ್ ಕಾಲ್ತುಳಿತ ಸಂತ್ರಸ್ತರಿಗೆ ಪರಿಹಾರದ ಮೊತ್ತ ಹೆಚ್ಚಿಸಿ..'; ಸಿಎಂ ಆದಿತ್ಯನಾಥ್‌ಗೆ ರಾಹುಲ್ ಗಾಂಧಿ ಪತ್ರ

‘ಹತ್ರಾಸ್ ಕಾಲ್ತುಳಿತ ಸಂತ್ರಸ್ತರಿಗೆ ಪರಿಹಾರದ ಮೊತ್ತ ಹೆಚ್ಚಿಸಿ..’; ಸಿಎಂ ಆದಿತ್ಯನಾಥ್‌ಗೆ ರಾಹುಲ್ ಗಾಂಧಿ ಪತ್ರ

- Advertisement -
- Advertisement -

ಜುಲೈ 2 ರಂದು ಹತ್ರಾಸ್‌ನಲ್ಲಿ ನಡೆದ ‘ಸತ್ಸಂಗ’ದಲ್ಲಿ ಭಾರೀ ಕಾಲ್ತುಳಿತದಲ್ಲಿ ಸಾವನ್ನಪ್ಪಿದ ಮತ್ತು ಗಾಯಗೊಂಡವರ ಕುಟುಂಬಗಳಿಗೆ ಪರಿಹಾರ ಮೊತ್ತ ಹೆಚ್ಚಿಸುವಂತೆ ಲೋಕಸಭೆ ವಿರೋಧಪಕ್ಷ ನಾಯಕ ರಾಹುಲ್ ಗಾಂಧಿ ಅವರು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ಪತ್ರ ಬರೆದಿದ್ದಾರೆ.

ಭೋಲೆ ಬಾಬಾ ಆಯೋಜಿಸಿದ್ದ ‘ಸತ್ಸಂಗ’ದ ಸಂದರ್ಭದಲ್ಲಿ ಕಾಲ್ತುಳಿತದಲ್ಲಿ ಕನಿಷ್ಠ 121 ಜನರು ಸಾವನ್ನಪ್ಪಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ.

ಕಾಲ್ತುಳಿತದ ಸಂತ್ರಸ್ತರ ಕುಟುಂಬಗಳನ್ನು ಇತ್ತೀಚೆಗೆ ಭೇಟಿ ಮಾಡಿದ ರಾಹುಲ್ ಗಾಂಧಿ ಅವರು ಯೋಗಿ ಆದಿತ್ಯನಾಥ್ ಅವರಿಗೆ ಬರೆದ ಪತ್ರದಲ್ಲಿ, ದುರಂತದ ಬಗ್ಗೆ ನ್ಯಾಯಯುತ ಮತ್ತು ಪಾರದರ್ಶಕ ತನಿಖೆಗೆ ಒತ್ತಾಯಿಸಿದ್ದಾರೆ. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಂಡು ಕುಟುಂಬಕ್ಕೆ ನ್ಯಾಯ ದೊರಕಿಸಿಕೊಡಬೇಕು ಎಂದು ಒತ್ತಾಯಿಸಿದರು.

ಉತ್ತರ ಪ್ರದೇಶ ಸರ್ಕಾರವು ಪ್ರಸ್ತುತ ಒದಗಿಸಿರುವ ಪರಿಹಾರವು “ಅಸಮರ್ಪಕವಾಗಿದೆ” ಎಂದು ಅವರು ಹೇಳಿದರು. ಯೋಗಿ ಆದಿತ್ಯನಾಥ್ ಅವರು ಪರಿಹಾರ ಮೊತ್ತವನ್ನು ಹೆಚ್ಚಿಸಿ, ಕಾಲ್ತುಳಿತದಲ್ಲಿ ಸಾವನ್ನಪ್ಪಿದ ಅಥವಾ ಗಾಯಗೊಂಡವರ ಕುಟುಂಬಗಳಿಗೆ ಶೀಘ್ರವಾಗಿ ನೀಡಬೇಕು ಎಂದು ಒತ್ತಾಯಿಸಿದರು.

ಕಾಲ್ತುಳಿತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ತಲಾ 2 ಲಕ್ಷ ರೂಪಾಯಿ ಮತ್ತು ಗಾಯಗೊಂಡವರಿಗೆ ತಲಾ 50 ಸಾವಿರ ರೂಪಾಯಿ ಪರಿಹಾರವನ್ನು ಕೇಂದ್ರ ಮತ್ತು ಉತ್ತರ ಪ್ರದೇಶ ಸರ್ಕಾರ ಪ್ರತ್ಯೇಕವಾಗಿ ಘೋಷಿಸಿವೆ.

ಹತ್ರಾಸ್‌ನಲ್ಲಿ ಕಾಲ್ತುಳಿತ ಸಂತ್ರಸ್ತರನ್ನು ಭೇಟಿಯಾದಾಗ ಮತ್ತು ಅವರ ಕಷ್ಟಗಳನ್ನು ಆಲಿಸಿದಾಗ ಕುಟುಂಬದ ಸದಸ್ಯರ ಮಾತಿಗೆ ಕಂಗಾಲಾಗಿದ್ದೇನೆ, ಕಷ್ಟದ ಸಮಯದಲ್ಲಿ ಅವರನ್ನು ಬೆಂಬಲಿಸುವುದು ಮುಖ್ಯ ಎಂದು ರಾಹುಲ್ ಗಾಂಧಿ ತಮ್ಮ ಪತ್ರದಲ್ಲಿ ಹೇಳಿದ್ದಾರೆ.

ರಾಜ್ಯ ಸರ್ಲಾರವು ಅವರ ಮನವಿಗಳನ್ನು ಪರಿಹರಿಸಿ ಶೀಘ್ರ ಕ್ರಮಕೈಗೊಳ್ಳುವ ಭರವಸೆಯನ್ನು ಅವರು ವ್ಯಕ್ತಪಡಿಸಿದರು.

ತನಿಖೆ ಚುರುಕು

ಕಾಲ್ತುಳಿತ ದುರಂತದ ತನಿಖೆಗಾಗಿ ರಚಿಸಲಾದ ತ್ರಿಸದಸ್ಯ ನ್ಯಾಯಾಂಗ ಆಯೋಗವು ಭಾನುವಾರ ಹತ್ರಾಸ್ ತಲುಪಿದ್ದು, ‘ಸತ್ಸಂಗ’ದಲ್ಲಿ ಭಾಗಿಯಾಗಿರುವ ಅಧಿಕಾರಿಗಳು, ಪೊಲೀಸರು ಮತ್ತು ಇತರರ ಹೇಳಿಕೆಗಳನ್ನು ದಾಖಲಿಸಿಕೊಳ್ಳಲಿದೆ.

“ನಾವು ಸಂಪೂರ್ಣ ಸ್ಥಳವನ್ನು ನೋಡಿದ್ದೇವೆ. ಎಲ್ಲ ಸದಸ್ಯರು (ಸಮಿತಿಯ) ಇಲ್ಲಿದ್ದಾರೆ. ನಾವು ವಿಚಾರಣೆ ಮಾಡಬೇಕಾದ ಎಲ್ಲರನ್ನು ಪ್ರಶ್ನಿಸುತ್ತೇವೆ. ಹೌದು, ನಾವು ನಮ್ಮ ವರದಿಯನ್ನು ಎರಡು ತಿಂಗಳೊಳಗೆ ಸಲ್ಲಿಸುತ್ತೇವೆ” ಎಂದು ನ್ಯಾಯಮೂರ್ತಿ (ನಿವೃತ್ತ) ಬ್ರಿಜೇಶ್ ಕುಮಾರ್ ಶ್ರೀವಾಸ್ತವ ಹೇಳಿದರು.

ಭೋಲೆ ಬಾಬಾ ವಿರುದ್ಧ ಮೊದಲ ಪ್ರಕರಣ ದಾಖಲಾಗಿತ್ತು ಮತ್ತು ಈ ಹಿಂದೆ ಎಫ್‌ಐಆರ್‌ನಲ್ಲಿ ಆತನ ಹೆಸರಿರಲಿಲ್ಲ, ಅದರಲ್ಲಿ ಪ್ರಮುಖ ಆರೋಪಿ ದೇವಪ್ರಕಾಶ್ ಮಧುಕರ್ ಹೆಸರಿಸಲಾಗಿತ್ತು. ಶುಕ್ರವಾರ ರಾತ್ರಿ ಮಧುಕರ್ ಅವರನ್ನು ಬಂಧಿಸಲಾಗಿದೆ.

ಶನಿವಾರ ಸಂದೇಶದಲ್ಲಿ, ಭೋಲೆ ಬಾಬಾ ಅವರು ಕಾಲ್ತುಳಿತದ ಘಟನೆಯಿಂದ ಖಿನ್ನತೆಗೆ ಒಳಗಾಗಿದ್ದೇನೆ ಎಂದು ಹೇಳಿದ್ದು, ಸಂತ್ರಸ್ತ ಕುಟುಂಬಗಳು ನ್ಯಾಯಾಂಗದಲ್ಲಿ ನಂಬಿಕೆ ಇಡುವಂತೆ ಕೇಳಿಕೊಂಡರು.

ಇದನ್ನೂ ಓದಿ; ‘ನನ್ನ ಮಗ ಖಲಿಸ್ತಾನಿ ಬೆಂಬಲಿಗನಲ್ಲ’ ಎಂಬ ತಾಯಿ ಹೇಳಿಕೆಯನ್ನು ನಿರಾಕರಿಸಿದ ಅಮೃತಪಾಲ್ ಸಿಂಗ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ನಿಯೋಗದಿಂದ ಕರ್ನಾಟಕ ರಾಜ್ಯಪಾಲರ ಭೇಟಿ: ‘ದ್ವೇಷ ಭಾಷಣ ತಡೆ’ ಮಸೂದೆಗೆ ಒಪ್ಪಿಗೆ ನೀಡದಂತೆ ಮನವಿ

ಬೆಂಗಳೂರು: ದ್ವೇಷ ಭಾಷಣ ಮಸೂದೆಯನ್ನು"ವಾಕ್ ಸ್ವಾತಂತ್ರ್ಯದ ಮೇಲಿನ ನೇರ ದಾಳಿ" ಮತ್ತು "ರಾಜಕೀಯ ಸೇಡಿನ ಸಾಧನ" ಎಂದು ಕರೆದಿರುವ ಬಿಜೆಪಿ ನಾಯಕರ ನಿಯೋಗವು ಸೋಮವಾರ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರನ್ನು ಭೇಟಿ...

ಟೆಕ್ಕಿ ಶರ್ಮಿಳಾ ಕೊಲೆ ಪ್ರಕರಣ : ಪಿಯು ವಿದ್ಯಾರ್ಥಿಯನ್ನು ಬಂಧಿಸಿದ ಪೊಲೀಸರು

ಬೆಂಗಳೂರಿನ ರಾಮಮೂರ್ತಿ ನಗರದ ಸುಬ್ರಹ್ಮಣ್ಯ ಬಡಾವಣೆಯಲ್ಲಿ 2026ರ ಜನವರಿ 3ರಂದು ರಾತ್ರಿ ನಡೆದ ಮಂಗಳೂರು ಮೂಲದ ಸಾಫ್ಟ್‌ವೇರ್ ಇಂಜಿನಿಯರ್ ಶರ್ಮಿಳಾ ಕುಶಾಲಪ್ಪ (34) ಅವರ ಕೊಲೆ ಪ್ರಕರಣವನ್ನು ಪೊಲೀಸರು ಬೇಧಿಸಿದ್ದಾರೆ. ಆರಂಭದಲ್ಲಿ, ಫ್ಲ್ಯಾಟ್‌ಗೆ ಬೆಂಕಿ...

ಎಸ್‌ಎಸ್‌ಎಲ್‌ಸಿ ಪ್ರಶ್ನೆ ಪತ್ರಿಕೆ ಸೋರಿಕೆ: ಸಾಮಾಜಿಕ ಮಾಧ್ಯಮದಲ್ಲಿ 200-500 ರೂ.ಗೆ ಮಾರಾಟ: ಆರು ಶಿಕ್ಷಕರು, ಇಬ್ಬರು ಅಪ್ರಾಪ್ತ ವಿದ್ಯಾರ್ಥಿಗಳ ಬಂಧನ

ಬೆಂಗಳೂರು: ಎಸ್‌ಎಸ್‌ಎಲ್‌ಸಿ ಪೂರ್ವಸಿದ್ಧತಾ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ತನಿಖೆಯ ಸಂದರ್ಭದಲ್ಲಿ ಆಘಾತಕಾರಿ ಮಾಹಿತಿಗಳು ಹೊರಬಿದ್ದಿವೆ. ವಿದ್ಯಾರ್ಥಿಗಳು ಪ್ರಶ್ನೆಪತ್ರಿಕೆಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಬಹಿರಂಗವಾಗಿ ಜಾಹೀರಾತು ಮಾಡಿ ಖಾಸಗಿ ಸಂದೇಶಗಳ ಮೂಲಕ 200 ರಿಂದ...

ಕರೂರ್ ಕಾಲ್ತುಳಿತ : ಸಿಬಿಐ ಮುಂದೆ ವಿಚಾರಣೆಗೆ ಹಾಜರಾದ ನಟ ವಿಜಯ್

ಕರೂರ್ ಕಾಲ್ತುಳಿತ ಘಟನೆಗೆ ಸಂಬಂಧಪಟ್ಟಂತೆ ನಟ ಹಾಗೂ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಮುಖ್ಯಸ್ಥ ವಿಜಯ್ ಸೋಮವಾರ (ಜ.12) ದೆಹಲಿಯ ಕೇಂದ್ರ ತನಿಖಾ ದಳ (ಸಿಬಿಐ) ಕಚೇರಿಗೆ ವಿಚಾರಣೆಗೆ ಹಾಜರಾಗಿದ್ದಾರೆ. ಚಾರ್ಟರ್ಡ್ ವಿಮಾನದಲ್ಲಿ...

ಜೂನ್‌ ಅಂತ್ಯದೊಳಗೆ ಜಿಬಿಎ ವ್ಯಾಪ್ತಿಯ ಪಾಲಿಕೆಗಳಿಗೆ ಚುನಾವಣೆ : ಗಡುವು ವಿಧಿಸಿದ ಸುಪ್ರೀಂ ಕೋರ್ಟ್

ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಐದು ನಗರ ಪಾಲಿಕೆಗಳಿಗೆ ಜೂನ್ ಅಂತ್ಯದೊಳಗೆ ಚುನಾವಣೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೋಮವಾರ (ಜ.12) ನಿರ್ದೇಶನ ನೀಡಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಸುಪ್ರೀಂ ಕೋರ್ಟ್ ನಲ್ಲಿ ಮಮತಾ ವಿರುದ್ಧ ಎಫ್‌ಐಆರ್ ದಾಖಲಿಸಲು ನಿರ್ದೇಶನ ಕೋರಿ ಅರ್ಜಿ ಸಲ್ಲಿಸಿದ ಇಡಿ

ನವದೆಹಲಿ: ಐ-ಪಿಎಸಿ ವಿರುದ್ಧದ ಬಹು-ರಾಜ್ಯ ಹಣ ವರ್ಗಾವಣೆ ಪ್ರಕರಣದಲ್ಲಿ ತನಿಖೆಗೆ ಅಡ್ಡಿಪಡಿಸಿದ, ಸಾಕ್ಷ್ಯಗಳನ್ನು ತಿರುಚಿದ ಮತ್ತು ನಾಶಪಡಿಸಿದ ಆರೋಪದ ಮೇಲೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಡಿಜಿಪಿ ಮತ್ತು ಕೋಲ್ಕತ್ತಾ ಪೊಲೀಸ್...

ಭಾರತಕ್ಕಿಂತ ಯಾವುದೇ ಪಾಲುದಾರ ದೇಶ ಮುಖ್ಯವಲ್ಲ, ವ್ಯಾಪಾರ ಮಾತುಕತೆ ಪುನರಾರಂಭ: ಅಮೆರಿಕ ರಾಯಭಾರಿ ಸೆರ್ಗಿಯೊ ಗೋರ್

"ವಾಷಿಂಗ್ಟನ್‌ಗೆ ಭಾರತಕ್ಕಿಂತ ಅಗತ್ಯವಾದ ದೇಶ ಇನ್ನೊಂದಿಲ್ಲ ಮತ್ತು ಎರಡೂ ಕಡೆಯವರು ವ್ಯಾಪಾರ ಒಪ್ಪಂದವನ್ನು ದೃಢೀಕರಿಸುವಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ" ಎಂದು ಅಮೆರಿಕದ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್ ಸೋಮವಾರ ಹೇಳಿದ್ದಾರೆ. ಅಮೆರಿಕ ರಾಯಭಾರ ಕಚೇರಿಯ ನೌಕರರು...

ಬಿಷಪ್ ಫ್ರಾಂಕೊ ಮುಲಕ್ಕಲ್ ಅತ್ಯಾಚಾರ ಪ್ರಕರಣ : ಒಂಬತ್ತು ವರ್ಷಗಳ ಬಳಿಕ ಮೌನ ಮುರಿದ ಸಂತ್ರಸ್ತೆ, ಕಾನೂನು ಹೋರಾಟ ಮುಂದುವರಿಸುವುದಾಗಿ ಹೇಳಿಕೆ

ಬಿಷಪ್ ಫ್ರಾಂಕೊ ಮುಲಕ್ಕಲ್ ವಿರುದ್ದದ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಕ್ರೈಸ್ತ ಸನ್ಯಾಸಿನಿ ಒಂಬತ್ತು ವರ್ಷಗಳ ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಮಾತನಾಡಿದ್ದು, ಫ್ರಾಂಕೊ ಮುಲಕ್ಕಲ್ ಅವರನ್ನು ನ್ಯಾಯಾಲಯ ಖುಲಾಸೆಗೊಳಿಸಿದ್ದಕ್ಕೆ ನಾನು ದಂಗಾಗಿದ್ದೇನೆ. ನ್ಯಾಯಕ್ಕಾಗಿ...

‘ವೆನೆಜುವೆಲಾದ ಹಂಗಾಮಿ ಅಧ್ಯಕ್ಷ’ ಎಂದು ಘೋಷಿಸಿಕೊಂಡ ಡೊನಾಲ್ಡ್ ಟ್ರಂಪ್ 

ಸೋಮವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ರುತ್ ಸೋಶಿಯಲ್‌ನಲ್ಲಿ ತಮ್ಮದೇ ಆದ ವಿಕಿಪೀಡಿಯಾ ಪುಟದ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ, ಅದರಲ್ಲಿ "ವೆನೆಜುವೆಲಾದ ಹಂಗಾಮಿ ಅಧ್ಯಕ್ಷ" ಎಂಬ ಹುದ್ದೆಯನ್ನು ಹೊಂದಿರುವ ಅವರ ಚಿತ್ರವಿದೆ. ಪೋಸ್ಟ್‌ನಲ್ಲಿ ಟ್ರಂಪ್...

ಪೊಲೀಸ್ ತುರ್ತು ವಾಹನದ ಚಾಲಕ ಸೇರಿ ಐವರಿಂದ ಯುವತಿ ಮೇಲೆ ಅತ್ಯಾಚಾರ!

ಪೊಲೀಸ್ ತುರ್ತು ಸೇವೆ (112) ವಾಹನದ ಚಾಲಕ ಸೇರಿದಂತೆ ಐವರು ಪುರುಷರು 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‌ಗಢದ ಕೋರ್ಬಾ ಜಿಲ್ಲೆಯ ಬಂಕಿಮೊಂಗ್ರ ಪ್ರದೇಶದಲ್ಲಿ ನಡೆದಿದೆ. ಜನವರಿ...