Homeಮುಖಪುಟ'ಹತ್ರಾಸ್ ಕಾಲ್ತುಳಿತ ಸಂತ್ರಸ್ತರಿಗೆ ಪರಿಹಾರದ ಮೊತ್ತ ಹೆಚ್ಚಿಸಿ..'; ಸಿಎಂ ಆದಿತ್ಯನಾಥ್‌ಗೆ ರಾಹುಲ್ ಗಾಂಧಿ ಪತ್ರ

‘ಹತ್ರಾಸ್ ಕಾಲ್ತುಳಿತ ಸಂತ್ರಸ್ತರಿಗೆ ಪರಿಹಾರದ ಮೊತ್ತ ಹೆಚ್ಚಿಸಿ..’; ಸಿಎಂ ಆದಿತ್ಯನಾಥ್‌ಗೆ ರಾಹುಲ್ ಗಾಂಧಿ ಪತ್ರ

- Advertisement -
- Advertisement -

ಜುಲೈ 2 ರಂದು ಹತ್ರಾಸ್‌ನಲ್ಲಿ ನಡೆದ ‘ಸತ್ಸಂಗ’ದಲ್ಲಿ ಭಾರೀ ಕಾಲ್ತುಳಿತದಲ್ಲಿ ಸಾವನ್ನಪ್ಪಿದ ಮತ್ತು ಗಾಯಗೊಂಡವರ ಕುಟುಂಬಗಳಿಗೆ ಪರಿಹಾರ ಮೊತ್ತ ಹೆಚ್ಚಿಸುವಂತೆ ಲೋಕಸಭೆ ವಿರೋಧಪಕ್ಷ ನಾಯಕ ರಾಹುಲ್ ಗಾಂಧಿ ಅವರು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ಪತ್ರ ಬರೆದಿದ್ದಾರೆ.

ಭೋಲೆ ಬಾಬಾ ಆಯೋಜಿಸಿದ್ದ ‘ಸತ್ಸಂಗ’ದ ಸಂದರ್ಭದಲ್ಲಿ ಕಾಲ್ತುಳಿತದಲ್ಲಿ ಕನಿಷ್ಠ 121 ಜನರು ಸಾವನ್ನಪ್ಪಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ.

ಕಾಲ್ತುಳಿತದ ಸಂತ್ರಸ್ತರ ಕುಟುಂಬಗಳನ್ನು ಇತ್ತೀಚೆಗೆ ಭೇಟಿ ಮಾಡಿದ ರಾಹುಲ್ ಗಾಂಧಿ ಅವರು ಯೋಗಿ ಆದಿತ್ಯನಾಥ್ ಅವರಿಗೆ ಬರೆದ ಪತ್ರದಲ್ಲಿ, ದುರಂತದ ಬಗ್ಗೆ ನ್ಯಾಯಯುತ ಮತ್ತು ಪಾರದರ್ಶಕ ತನಿಖೆಗೆ ಒತ್ತಾಯಿಸಿದ್ದಾರೆ. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಂಡು ಕುಟುಂಬಕ್ಕೆ ನ್ಯಾಯ ದೊರಕಿಸಿಕೊಡಬೇಕು ಎಂದು ಒತ್ತಾಯಿಸಿದರು.

ಉತ್ತರ ಪ್ರದೇಶ ಸರ್ಕಾರವು ಪ್ರಸ್ತುತ ಒದಗಿಸಿರುವ ಪರಿಹಾರವು “ಅಸಮರ್ಪಕವಾಗಿದೆ” ಎಂದು ಅವರು ಹೇಳಿದರು. ಯೋಗಿ ಆದಿತ್ಯನಾಥ್ ಅವರು ಪರಿಹಾರ ಮೊತ್ತವನ್ನು ಹೆಚ್ಚಿಸಿ, ಕಾಲ್ತುಳಿತದಲ್ಲಿ ಸಾವನ್ನಪ್ಪಿದ ಅಥವಾ ಗಾಯಗೊಂಡವರ ಕುಟುಂಬಗಳಿಗೆ ಶೀಘ್ರವಾಗಿ ನೀಡಬೇಕು ಎಂದು ಒತ್ತಾಯಿಸಿದರು.

ಕಾಲ್ತುಳಿತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ತಲಾ 2 ಲಕ್ಷ ರೂಪಾಯಿ ಮತ್ತು ಗಾಯಗೊಂಡವರಿಗೆ ತಲಾ 50 ಸಾವಿರ ರೂಪಾಯಿ ಪರಿಹಾರವನ್ನು ಕೇಂದ್ರ ಮತ್ತು ಉತ್ತರ ಪ್ರದೇಶ ಸರ್ಕಾರ ಪ್ರತ್ಯೇಕವಾಗಿ ಘೋಷಿಸಿವೆ.

ಹತ್ರಾಸ್‌ನಲ್ಲಿ ಕಾಲ್ತುಳಿತ ಸಂತ್ರಸ್ತರನ್ನು ಭೇಟಿಯಾದಾಗ ಮತ್ತು ಅವರ ಕಷ್ಟಗಳನ್ನು ಆಲಿಸಿದಾಗ ಕುಟುಂಬದ ಸದಸ್ಯರ ಮಾತಿಗೆ ಕಂಗಾಲಾಗಿದ್ದೇನೆ, ಕಷ್ಟದ ಸಮಯದಲ್ಲಿ ಅವರನ್ನು ಬೆಂಬಲಿಸುವುದು ಮುಖ್ಯ ಎಂದು ರಾಹುಲ್ ಗಾಂಧಿ ತಮ್ಮ ಪತ್ರದಲ್ಲಿ ಹೇಳಿದ್ದಾರೆ.

ರಾಜ್ಯ ಸರ್ಲಾರವು ಅವರ ಮನವಿಗಳನ್ನು ಪರಿಹರಿಸಿ ಶೀಘ್ರ ಕ್ರಮಕೈಗೊಳ್ಳುವ ಭರವಸೆಯನ್ನು ಅವರು ವ್ಯಕ್ತಪಡಿಸಿದರು.

ತನಿಖೆ ಚುರುಕು

ಕಾಲ್ತುಳಿತ ದುರಂತದ ತನಿಖೆಗಾಗಿ ರಚಿಸಲಾದ ತ್ರಿಸದಸ್ಯ ನ್ಯಾಯಾಂಗ ಆಯೋಗವು ಭಾನುವಾರ ಹತ್ರಾಸ್ ತಲುಪಿದ್ದು, ‘ಸತ್ಸಂಗ’ದಲ್ಲಿ ಭಾಗಿಯಾಗಿರುವ ಅಧಿಕಾರಿಗಳು, ಪೊಲೀಸರು ಮತ್ತು ಇತರರ ಹೇಳಿಕೆಗಳನ್ನು ದಾಖಲಿಸಿಕೊಳ್ಳಲಿದೆ.

“ನಾವು ಸಂಪೂರ್ಣ ಸ್ಥಳವನ್ನು ನೋಡಿದ್ದೇವೆ. ಎಲ್ಲ ಸದಸ್ಯರು (ಸಮಿತಿಯ) ಇಲ್ಲಿದ್ದಾರೆ. ನಾವು ವಿಚಾರಣೆ ಮಾಡಬೇಕಾದ ಎಲ್ಲರನ್ನು ಪ್ರಶ್ನಿಸುತ್ತೇವೆ. ಹೌದು, ನಾವು ನಮ್ಮ ವರದಿಯನ್ನು ಎರಡು ತಿಂಗಳೊಳಗೆ ಸಲ್ಲಿಸುತ್ತೇವೆ” ಎಂದು ನ್ಯಾಯಮೂರ್ತಿ (ನಿವೃತ್ತ) ಬ್ರಿಜೇಶ್ ಕುಮಾರ್ ಶ್ರೀವಾಸ್ತವ ಹೇಳಿದರು.

ಭೋಲೆ ಬಾಬಾ ವಿರುದ್ಧ ಮೊದಲ ಪ್ರಕರಣ ದಾಖಲಾಗಿತ್ತು ಮತ್ತು ಈ ಹಿಂದೆ ಎಫ್‌ಐಆರ್‌ನಲ್ಲಿ ಆತನ ಹೆಸರಿರಲಿಲ್ಲ, ಅದರಲ್ಲಿ ಪ್ರಮುಖ ಆರೋಪಿ ದೇವಪ್ರಕಾಶ್ ಮಧುಕರ್ ಹೆಸರಿಸಲಾಗಿತ್ತು. ಶುಕ್ರವಾರ ರಾತ್ರಿ ಮಧುಕರ್ ಅವರನ್ನು ಬಂಧಿಸಲಾಗಿದೆ.

ಶನಿವಾರ ಸಂದೇಶದಲ್ಲಿ, ಭೋಲೆ ಬಾಬಾ ಅವರು ಕಾಲ್ತುಳಿತದ ಘಟನೆಯಿಂದ ಖಿನ್ನತೆಗೆ ಒಳಗಾಗಿದ್ದೇನೆ ಎಂದು ಹೇಳಿದ್ದು, ಸಂತ್ರಸ್ತ ಕುಟುಂಬಗಳು ನ್ಯಾಯಾಂಗದಲ್ಲಿ ನಂಬಿಕೆ ಇಡುವಂತೆ ಕೇಳಿಕೊಂಡರು.

ಇದನ್ನೂ ಓದಿ; ‘ನನ್ನ ಮಗ ಖಲಿಸ್ತಾನಿ ಬೆಂಬಲಿಗನಲ್ಲ’ ಎಂಬ ತಾಯಿ ಹೇಳಿಕೆಯನ್ನು ನಿರಾಕರಿಸಿದ ಅಮೃತಪಾಲ್ ಸಿಂಗ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...

ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆಗೆ ಗ್ರೇಡ್: ನಿರ್ಧಾರ ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ ರಾಜ್ಯಪಾಲ ಗೆಹ್ಲೋಟ್ 

ಬೆಂಗಳೂರು: 10ನೇ ತರಗತಿ ಪರೀಕ್ಷೆಯಲ್ಲಿ ತೃತೀಯ ಭಾಷೆಯ ವಿಷಯಕ್ಕೆ ಅಂಕಗಳನ್ನು ಬದಲಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರವನ್ನು ಕೇಳಿದ್ದಾರೆ. ಸರ್ಕಾರವು ಈ ನಿರ್ಧಾರವನ್ನು "ಸಮಗ್ರವಾಗಿ ಪರಿಶೀಲಿಸಬೇಕು" ಎಂದು ಲೋಕಭವನವು...

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...