Homeಮುಖಪುಟಜಗತ್ತಿನ ಹಲವೆಡೆ ಹೆಚ್ಚಿದ ಕೊರೊನಾ ಪ್ರಕರಣಗಳು: ಲಾಕ್‌ಡೌನ್‌ ಘೋಷಿಸಿದ ದೇಶಗಳಿವು

ಜಗತ್ತಿನ ಹಲವೆಡೆ ಹೆಚ್ಚಿದ ಕೊರೊನಾ ಪ್ರಕರಣಗಳು: ಲಾಕ್‌ಡೌನ್‌ ಘೋಷಿಸಿದ ದೇಶಗಳಿವು

- Advertisement -
- Advertisement -

ಕೋವಿಡ್‌ ಎರಡನೇ ಅಲೆ ಸೃಷ್ಠಿಸಿದ್ದ ತಲ್ಲಣದಿಂದ ಭಾರತ ಇನ್ನೂ ಚೇತರಿಸಿಕೊಳ್ಳುತ್ತಿದೆ. ದೇಶದೆಲ್ಲೆಡೆ ದಿನದಿಂದ ದಿನಕ್ಕೆ ಕೋವಿಡ್ ಪ್ರಕರಣಗಳ ಸಂಖ್ಯೆ ಇಳಿಮುಖವಾಗುತ್ತಿದ್ದು, ಕಳೆದ 24 ಗಂಟೆಗಳಲ್ಲಿ ದೇಶದಾದ್ಯಂತ 8,865 ಕೋವಿಡ್‌ ಹೊಸ ಪ್ರಕರಣಗಳು ದಾಖಲಾಗಿವೆ. ಇದು 287 ದಿನಗಳಲ್ಲಿಯೇ ದಾಖಲಾದ ಅತೀ ಕಡಿಮೆ ಪ್ರಕರಣಗಳಾಗಿವೆ. ಆದರೆ ಪ್ರಪಂಚದ ಇತರ ಭಾಗಗಳಲ್ಲಿ ಕೊರೊನಾ ಹೆಚ್ಚಾಗುತ್ತಿದೆ. ಇದನ್ನು ನಿಭಾಯಿಸಲು ಹಲವು ರಾಷ್ಟ್ರಗಳು ಮತ್ತೆ ಲಾಕ್‌ಡೌನ್‌ ಮೊರೆಹೋಗುತ್ತಿವೆ. ಇದು 3ನೇ ಅಲೆಯ ಮುನ್ಸೂಚನೆ ಎಂಬ ಅಭಿಪ್ರಾಯ ವ್ಯಕ್ತವಾಗುತ್ತಿದೆ.

ಐರೋಪ್ಯ ರಾಷ್ಟ್ರಗಳಲ್ಲಿ ಕೊರೊನಾ ಸೋಂಕು ಗಣನೀಯವಾಗಿ ಹೆಚ್ಚುತ್ತಿದ್ದು, ಆಸ್ಟ್ರೀಯಾ, ನೆದರ್ಲೆಂಡ್, ಡೆನ್ಮಾರ್ಕ್‌, ಜರ್ಮನಿ, ನಾರ್ವೆ, ಲ್ಯಾಟ್ವಿಯಾ ಮತ್ತು ರಷ್ಯಾದಲ್ಲಿ ಭಾಗಶಃ ಲಾಕ್‌ಡೌನ್‌ ಜಾರಿಯಾಗಿದೆ. ಕೊರೊನಾ ವಿರುದ್ದ ನೀಡಲಾಗುವ ಎರಡು ಡೋಸ್‌ಗಳ ವ್ಯಾಕ್ಸಿನ್‌ ಅನ್ನು ಪಡೆಯದೇ ಇರುವವರಿಗೆ ಮಾತ್ರ ನಿರ್ಬಂಧಗಳನ್ನು ಹೇರುವ ಮೂಲಕ ಭಾಗಶಃ ಲಾಕ್‌ಡೌನ್‌ ಮಾಡಲು ಮುಂದಾಗಿವೆ. ಈ ರೀತಿಯಲ್ಲಿ, ಕೊರೊನಾ ಲಸಿಕೆ ಹಾಕಿಸಿಕೊಳ್ಳದವರು ತ್ವರಿತವಾಗಿ ವ್ಯಾಕ್ಸಿನ್‌ ಹಾಕಿಸಿಕೊಳ್ಳಲು ಅಲ್ಲಿನ ಸರ್ಕಾರಗಳು ಜನರನ್ನು ಒತ್ತಾಯಿಸುತ್ತಿವೆ.

ಯಾವ ದೇಶದಲ್ಲಿ ಯಾವ ರೀತಿಯ ಲಾಕ್‌ಡೌನ್‌ ಇವೆ ಎಂಬ ಮಾಹಿತಿ ಇಲ್ಲಿದೆ.

ನೆದರ್ಲೆಂಡ್: ನೆದರ್ಲೆಂಡ್‌ನಲ್ಲಿ ದಿನಕ್ಕೆ 16,000 ಪ್ರಕರಣಗಳು ದಾಖಲಾಗಿತ್ತಿವೆ. ಹೀಗಾಗಿ, ಶನಿವಾರದಿಂದ ಲಾಕ್‌ಡೌನ್ ಜಾರಿಗೊಳಿಸಲಾಗಿದೆ. ಅಲ್ಲಿ ಕ್ರೀಡಾ ಚಟುವಟಿಕೆಗಳಿಗೆ ಸಂಪೂರ್ಣವಾಗಿ ನಿರ್ಬಂಧ ಹೇರಲಾಗಿದೆ. ಅಂಗಡಿಗಳು, ಶಾಂಪಿಂಗ್ ಮಾಲ್‌ಗಳನ್ನು ಮುಚ್ಚಲಾಗಿದೆ. ಸೂಪರ್‌ ಮಾರ್ಕೆಟ್‌ ಹಾಗೂ ಅವಶ್ಯಕವಲ್ಲದ ಸಾಮಗ್ರಿಗಳನ್ನು ಮಾರಾಟ ಮಾಡುವ ಅಂಗಡಿಗಳಿಗೆ ಈ ನಿಯಮಗಳು ಅನ್ವಯವಾಗುತ್ತವೆ ಎಂದು ಅಲ್ಲಿನ ಹಂಗಾಮಿ ಪ್ರಧಾನಿ ಮಾರ್ಕ್‌ ರಟ್ಟೆ ಹೇಳಿದ್ದಾರೆ. ರಾತ್ರಿ 08 ಗಂಟೆವರೆಗೆ ಮಾತ್ರ ಕೆಫೆಗಳು, ಹೋಟೆಲ್‌ಗಳನ್ನು ತೆರೆಯಲು ಅವಕಾಶ ನೀಡಲಾಗಿದೆ.

ಆಸ್ಟ್ರಿಯಾ: ಆಸ್ಟ್ರೀಯಾದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿದ್ದು, ಭಾನುವಾರದಿಂದಲೇ ಲಾಕ್‌ಡೌನ್‌ ಜಾರಿಯಾಗಿದೆ. ಲಸಿಕೆ ಹಾಕಿಸಿಕೊಳ್ಳದೇ ಇರುವವರಿಗೆ ಹೆಚ್ಚಾಗಿ ಸೋಂಕು ಭಾದಿಸುವುದರಿಂದ, ಲಸಿಕೆ ಹಾಕಿಸಿಕೊಳ್ಳದೇ ಇರುವವರು ಸಾರ್ವಜನಿಕ ಸ್ಥಳಗಳಿಗೆ ತೆರಳುವಂತಿಲ್ಲ ಎಂದು ನಿರ್ಬಂಧ ವಿಧಿಸಲಾಗಿದೆ.

ವೃತ್ತಿ ಸಂಬಂಧಿತ ಓಡಾಟ, ದಿನಸಿ ಖರೀದಿ, ವ್ಯಾಯಾಮದ ಉದ್ದೇಶದ ವಾಕಿಂಗ್, ಲಸಿಕೆ ಪಡೆಯುವವರಿಗೆ, ಆರೋಗ್ಯ ತಪಾಸಣೆಗೆ ತೆರಳುವವರಿಗೆ ಮಾತ್ರ ಹೊರಹೋಗಲು ಅವಕಾಶವಿದ್ದು, ಉಳಿದ ಎಲ್ಲಾ ರೀತಿಯ ಓಡಾಟಗಳನ್ನು ನಿರ್ಬಂಧಿಸಲಾಗಿದೆ. ನ.24ರ ವರೆಗೆ ಲಾಕ್‌ಡೌನ್‌ ಜಾರಿಯಲ್ಲಿರಲಿದೆ.

ನಾರ್ವೆ: ನಾರ್ವೆಯಲ್ಲಿಯೂ ಕೊರೊನಾ ಪ್ರಕರಣಗಳು ಗಣನೀಯವಾಗಿ ಹೆಚ್ಚುತ್ತಿವೆ. ಆದರೆ, ಅಲ್ಲಿನ ಸರ್ಕಾರ ಲಾಕ್‌ಡೌನ್‌ ಜಾರಿ ಮಾಡಲು ನಿರಾಕರಿಸುತ್ತಿದ್ದು, ಲಾಕ್‌ಡೌನ್‌ಗೆ ಬದಲಾಗಿ ಪರ್ಯಾಯ ಕ್ರಮಗಳನ್ನು ಜಾರಿಗೊಳಿಸಲು ಆಲೋಚಿಸುತ್ತಿದೆ. ಅದಕ್ಕಾಗಿ, ಪರ್ಯಾಯಗಳನ್ನು ಯಾವುದು ಎಂದು ಹುಡುಕಾಟ ನಡೆಸುತ್ತಿದೆ. ಲಾಕ್‌ಡೌನ್ ಬದಲು, ದೇಶದ ಎಲ್ಲರಿಗೂ 3ನೇ ಡೋಸ್‌ ಲಸಿಕೆ ನೀಡುವ ಬಗ್ಗೆ ನಾರ್ವೆ ಪ್ರಧಾನಿ ಜೋನಾಸ್‌ ಜೋಹರ್‌ ಚಿಂತನೆ ನಡೆಸಿದ್ದು, ಲಸಿಕೆ ಪಡೆದ ಎಲ್ಲರಿಗೂ ಕರೋನಾ ಪಾಸ್‌ಗಳನ್ನು ವಿತರಿಸುವಂತೆ ಸ್ಥಳೀಯ ಸರ್ಕಾರಗಳಿಗೆ ಸೂಚಿಸಲು ತೀರ್ಮಾನಿಸಲಾಗಿದೆ. ಅಂತಹ ಪಾಸ್‌ಗಳನ್ನು ಪಡೆದವರಿಗೆ ಮಾತ್ರ ಮನೆಗಳಿಂದ ಹೊರಬರಲು ಅವಕಾಶ ಸಿಗಲಿದೆ.

ಡೆನ್ಮಾರ್ಕ್: ಡೆನ್ಮಾರ್ಕ್‌ನಲ್ಲಿ ಕೊರೊನಾ ಲಸಿಕೆ ಅಭಿಯಾನ ಭರದಿಂದ ಸಾಗುತ್ತಿದೆ. ಇದೇ ಹೊತ್ತಿನಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆಯೂ ಹೆಚ್ಚುತ್ತಿದೆ. ಇದನ್ನು ಗಂಭೀರವಾಗಿ ಪರಿಗಣಿಸಿರುವ ಸರ್ಕಾರ, ಕಳೆದ ಬಾರಿ ವಿಧಿಸಿದ್ದ ನಿರ್ಬಂಧಗಳನ್ನು ಮತ್ತೆ ಜಾರಿಗೊಳಿಸಲು ಮುಂದಾಗಿದೆ. ಲಸಿಕೆ ಪಡೆದವರಿಗೆ ಅಥವಾ ಕೊರೊನಾ ನೆಗೆಟಿವ್‌ ಟೆಸ್ಟ್‌ ಪ್ರಮಾಣಪತ್ರ ಹೊಂದಿರುವವರಿಗೆ ಮಾತ್ರ ಬಾರ್‌ ಮತ್ತು ಕ್ಲಬ್‌ಗಳಿಗೆ ಪ್ರವೇಶ ಕಲ್ಪಿಸಲು ಚಿಂತನೆ ನಡೆಸಲಾಗಿದೆ. ಜೊತೆಗೆ ಎರಡು ಡೋಸ್ ಪಡೆದವರಿಗೆ ಹಾಗೂ ಕೊರೊನಾದಿಂದ ಗುಣಮುಖರಾದವರಿಗೆ ಸಾರ್ವಜನಿಕ ಸ್ಥಳಗಳನ್ನು ಬಳಸಲು ಕೊರೊನಾ ಪಾಸ್‌ಗಳನ್ನು ನೀಡಲು ನಿರ್ಧರಿಸಲಾಗಿದೆ.

ಜರ್ಮನಿ: ಜರ್ಮನಿಯಲ್ಲಿ ಈಗಾಗಲೇ ಕೊರೊನಾ 4ನೇ ಅಲೆ ಆವರಿಸಿಕೊಂಡಿದೆ. ಕೊರೊನಾ ಪ್ರಕರಣಗಳ ಸಂಖ್ಯೆ ಪ್ರತಿದಿನ 50,000 ದಾಟುತ್ತಿದೆ ಎಂದು ಹೇಳಲಾಗಿದೆ. ಹೀಗಾಗಿ, ಹಲವು ನಿರ್ಬಂಧಗಳನ್ನು ಜಾರಿಗೆ ತರಲಾಗಿದ್ದು, ಸಾರ್ವಜನಿಕ ಸ್ಥಳಗಳಿಗೆ ಎರಡು ಡೋಸ್ ಲಸಿಕೆ ಪಡೆಯದವರಿಗೆ ಪ್ರವೇಶವನ್ನು ನಿರ್ಬಂಧಿಸಲಾಗಿದೆ. ಎರಡು ಡೋಸ್ ಪಡೆದವರು ಮತ್ತು ಕೊರೊನಾದಿಂದ ಗುಣಮುಖರಾದವರಿಗೆ ಮಾತ್ರ ರೆಸ್ಟೋರೆಂಟ್‌ಗಳಲ್ಲಿ, ಬಾರ್‌ ಮತ್ತು ಕ್ಲಬ್‌ಗಳಿಗೆ ಪ್ರವೇಶವನ್ನು ಸೂಚಿಸಲಾಗಿದೆ. ವೈದ್ಯಕೀಯ ಕಾರಣಗಳಿಗಾಗಿ ಮನೆಗಳಿಂದ ಹೊರ ಬರುವವರಿಗೆ ಹಾಗೂ ಮಕ್ಕಳಿಗೆ ಈ ನಿರ್ಬಂಧದಿಂದ ವಿನಾಯಿತಿ ನೀಡಲಾಗಿದೆ.

ಲ್ಯಾಟ್ವಿಯಾ: ಯೂರೋಪ್‌ ರಾಷ್ಟ್ರಗಳ ಪೈಕಿ, ಅತೀ ಕಡಿಮೆ ಜನರಿಗೆ ಲಸಿಕೆ ನೀಡಿದ ರಾಷ್ಟ್ರ ಎಂಬ ಕುಖ್ಯಾತಿಗೆ ಲ್ಯಾಟ್ವಿಯಾ ಗುರಿಯಾಗಿದೆ. ಈ ದೇಶದಲ್ಲಿ ಲಸಿಕೆ ಅಭಿಯಾನ ಕುಂಟುತ್ತಾ ಸಾಗಿದೆ. ಹೀಗಾಗಿ, ಕಳೆದ ಅಕ್ಟೋಬರ್‌ನಲ್ಲಿಯೇ ಇಲ್ಲಿ ನಾಲ್ಕು ವಾರಗಳ ಲಾಕ್‌ಡೌನ್ ಹೇರಲಾಗಿತ್ತು. ಇದೀಗ, ನವೆಂಬರ್‌ನಿಂದ ಕೆಲವು ನಿರ್ಬಂಧಗಳನ್ನು ಸಡಿಲಿಸಲಾಗಿದೆ. ಆದರೆ, ಕೊರೊನಾ ಅಬ್ಬರ ಲ್ಯಾಟ್ವಿಯಾದಲ್ಲಿ ಏರಿಳಿತ ಕಾಣುತ್ತಿದ್ದು, ಮತ್ತೆ ಸಂಪೂರ್ಣ ಲಾಕ್‌ಡೌನ್ ಮೊರೆ ಹೋಗುವ ಸಾಧ್ಯತೆ ಇದ್ದು, ಸರ್ಕಾರ ಹಲವು ಹಂತಗಳಲ್ಲಿ ಸಭೆ ನಡೆಸುತ್ತಿದೆ.

ರಷ್ಯಾ: ಭಾನುವಾರ ರಷ್ಯಾದಲ್ಲಿ 38,000ಕ್ಕೂ ಅಧಿಕ ಕೊರೊನಾ ಪ್ರಕರಣಗಳು ದಾಖಲಾಗಿವೆ. ಅಲ್ಲದೆ, ಅಂದು ಒಂದೇ ದಿನ 1,219 ಸಾವುಗಳಾಗಿವೆ. ಹೀಗಾಗಿ, ಅಲ್ಲಿಯೂ ಸಹ ಹಲವು ನಿರ್ಬಂಧಗಳನ್ನು ಜಾರಿಗೊಳಿಸಲು ಸರ್ಕಾರ ಮುಂದಾಗಿದ್ದು, ಈ ಕುರಿತಂತೆ ಸರ್ಕಾರವು ಸಂಸತ್ತಿನಲ್ಲಿ ಎರಡು ಮಸೂದೆಗಳನ್ನು ಮಂಡಿಸಿದೆ. ಅವುಗಳ ಪ್ರಕಾರ,  ಅಂತರ್‌ ರಾಷ್ಟ್ರ ರೈಲು ಮತ್ತು ವಿಮಾನ ಪ್ರಯಾಣಕ್ಕೆ ನಿರ್ಬಂಧ, ಸಾರ್ವಜನಿಕ ಸ್ಥಳಗಳಲ್ಲಿ ಕೊರೊನಾ ಲಸಿಕೆ ಪಡೆಯುವವರಿಗೆ ನಿರ್ಬಂಧ ಹೇರುವ ಅಂಶಗಳಿವೆ. ಸಂಸತ್ತು ಇದಕ್ಕೆ ಅನುಮೋದಿಸಿದರೆ, 2022 ಫೆಬ್ರವರಿಯಲ್ಲಿ ರಷ್ಯಾದಲ್ಲಿ ಲಾಕ್‌ಡೌನ್ ಜಾರಿಯಾಗುವ ಸಾಧ್ಯತೆಗಳಿವೆ ಎಂದು ರಷ್ಯಾದ ಕೊರೊನಾ ಟಾಸ್ಕ್ಫೋರ್ಸ್‌ನ ಮುಖ್ಯಸ್ಥರು ಆಗಿರುವ ಉಪಪ್ರಧಾನಿ ತಾತ್ಯಾನಾ ಗೊಲಿಕೊವಾ ತಿಳಿಸಿದ್ದಾರೆ.

ಈ ರಾಷ್ಟ್ರಗಳ ಹೊರತಾಗಿಯೂ ಚೀನಾ ಸೇರಿದಂತೆ ವಿವಿಧ ರಾಷ್ಟ್ರಗಳಲ್ಲಿ ಕೊರೊನಾ ಸೋಂಕಿತ ಪ್ರಕರಣಗಳು ಹೆಚ್ಚುತ್ತಿವೆ. ಅಮೆರಿಕಾದಲ್ಲಿ ವ್ಯಾಕ್ಸಿನೇಷನ್‌ ಪ್ರಕ್ರಿಯೆ ಗಣನೀಯವಾಗಿ ನಡೆದ ಬಳಿಕ ಅಲ್ಲಿನ ಜನರಿಗೆ ಮಾಸ್ಕ್‌ ಹಾಕುವುದರಿಂದ ವಿನಾಯತಿ ನೀಡಲಾಗಿತ್ತು. ಆದರೆ, ಇದೀಗ ಕೊರೊನಾ ರೂಪಾಂತರಿಗಳು ಕಾಣಿಸಿಕೊಳ್ಳುತ್ತಿದ್ದು, ಅಮೆರಿಕಾ ಮತ್ತೆ ಮಾಸ್ಕ್‌ ಕಡ್ಡಾಯಗೊಳಿಸಲು ಚಿಂತಿಸುತ್ತಿದೆ ಎಂದು ವರದಿಯಾಗಿದೆ.


ಇದನ್ನೂ ಓದಿ: ದಿನದಲ್ಲಿ 8,865 ಹೊಸ ಕೋವಿಡ್‌ ಪ್ರಕರಣ: 9 ತಿಂಗಳಿನಲ್ಲಿಯೇ ಅತ್ಯಂತ ಕಡಿಮೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...